ಮಂಗಳೂರಿನ ಪುರಭವನದಲ್ಲಿ ಇಷ್ಕೆ ರಸೂಲ್ ಕಾರ್ಯಕ್ರಮ ಹಾಗೂ ಗ್ರಾಂಡ್ ಮೀಲಾದ್ ಜಾಥಾ ಸೆಪ್ಟೆಂಬರ್ 09 ರಂದು.

ಮಂಗಳೂರು: ಸಮಸ್ತ ಕರ್ನಾಟಕ ಮಶಾವರ, ಎಸ್.ವೈ.ಎಸ್, ಎಸೈ.ಎಸ್.ಎಸ್.ಎಫ್ , ಸಮಸ್ತ ಜಂಇಯ್ಯತುಲ್ ಮುಅಲ್ಲಿಮೀನ್, ಮದರಸ ಮೇನೇಜೆಂಟ್, ಜಂಇಯ್ಯತುಲ್ ಖುತ್ಬಾ , ಜಂಇಯ್ಯತುಲ್ ಮುದ್ರಾಸಿನ್ , ಸಮಸ್ತ ಬಾಲ ವೇದಿ ಸಂಯುಕ್ತ ಆಶ್ರಯದಲ್ಲಿ ಇಷ್ಕೆ ರಸೂಲ್ ಕಾರ್ಯಕ್ರಮ ಹಾಗೂ ಗ್ರಾಂಡ್ ಮೀಲಾದ್ ಜಾಥಾವು ಸೆಪ್ಟೆಂಬರ್ 09 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಇಷ್ಕೆ ರಸೂಲ್ ಮೀಲಾದ್ ಸ್ವಾಗತ ಸಮಿತಿಯ ಸಂಚಾಲಕರಾದ ಯು ಕೆ ಅಬ್ದುಲ್ ಅಝೀಝ್ ದಾರಿಮಿ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More

ಹನಿಟ್ರ್ಯಾಪ್‌ ಜಾಲವನ್ನು ಬೇಧಿಸಿದ ಕುಂದಾಪುರ ಪೊಲೀಸರು.

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ನಡೆದ ಬಗ್ಗೆ ವರದಿಯಾಗಿದ್ದು, ಹನಿಟ್ರ್ಯಾಪ್‌ ಜಾಲವನ್ನು ಬೇಧಿಸಿದ ಕುಂದಾಪುರ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧೀ ಕಟ್ಟೆಯ ಸೈಪುಲ್ಲಾ(38), ಹ0ಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26), ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು. ಆರೋಪಿಗಳಿಂದ…

Read More

25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ಶ್ರೀಮತಿ ಪ್ರೇಮಲತಾ ಟೀಚರ್ ಗೆ ಗೌರವ ಸನ್ಮಾನ

ಮಂಜೇಶ್ವರ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಿ.ಎಲ್. ಪಿ.ಯಸ್ ವಾಮಂಜೂರು ಶಾಲಾ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸೇರಿದಂತೆ ಶಾಲೆಯಲ್ಲಿ ಸುದೀರ್ಘ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ಶ್ರೀಮತಿ ಪ್ರೇಮಲತಾ ಟೀಚರ್ ಇವರನ್ನು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು.

Read More

ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ, ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಗಾಂಧಿನಗರದ ಶಾಲೆಯ ಹತ್ತಿರ, ಮರೋಳಿಯ ಬಸ್…

Read More

ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರುನಲ್ಲಿ-ಈದ್ ಮೀಲಾದುನ್ನೆಬಿ ಸಡಗರ.

ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಮಂಗಳೂರು ಇದರ ಅದೀನದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ) ತಂಗಳ್ ರವರ 1500ನೇ ಈದ್ ಮೀಲಾದುನ್ನೆಬಿ ಸಡಗರ ಸಂಭ್ರಮದಿಂದ ದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಮಾಅತ್ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಧ್ವಜಾರೋಹಣ ಗೈದು ಪ್ರಸ್ತುತ ರ್ಯಾಲಿಗೆ ಚಾಲನೆ ನೀಡಿದರು.ಕಾರ್ಯಕ್ರಮನ್ನು ಜಮಾಅತ್ ಖತೀಬರಾದ ಅಬ್ದುಲ್ ನಾಸಿರ್ ಸಅದಿಯವರು ದುಆ ಮಾಡಿ ಉದ್ಘಾಟನೆ ಮಾಡಿದರು.ತನ್ನ ಭಾಷಣದಲ್ಲಿ ಈ ಮೀಲಾದ್ ರ್ಯಾಲಿ ಶಾಂತಿ ಸಮಾಧಾನ ಸೌಹಾರ್ದತೆಯನ್ನು ಸಾರುವುದಾಗಿದೆ.ಪರಸ್ಪರ ಸೌಹಾರ್ದತೆಯೊಂದಿಗೆ ಬಾಳೋಣ…

Read More

ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿ ವತಿಯಿಂದ ಓಣಂ ಆಚರಣೆ.

ದೇಶದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ ನಮ್ಮ ಸಮಾಜದ ಮಹಿಳೆಯರು ಕೂಡ ಉನ್ನತಮಟ್ಟದಲ್ಲಿ ಗುರುತಿಸಿಕೊಳ್ಳಬೇಕು: ಭಾಗೀರಥಿ ರಾಮ ಚಕ್ಕಿಗುಡ್ಡೆ , ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿ ವತಿಯಿಂದ ಓಣಂ ಆಚರಣೆ : ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿಯ ಸಹಯೋಗದೊಂದಿಗೆ ವಾಮಂಜೂರು ಶಾಲೆಯಲ್ಲಿ ಓಣಂ ಆಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಶ್ರೀಮತಿ ಭಾಗೀರಥಿ ರಾಮ ಚಕ್ಕಿಗುಡ್ಡೆ ಉದ್ಘಾಟಿಸಿದರು. ಇಡೀ ನಮ್ಮ ದೇಶದಲ್ಲಿ ಮಹಿಳೆಯರು ಎಲ್ಲಾ…

Read More

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತ ಗುಂಡಿಮಯ.

ಮಂಗಳೂರಿನ ಪ್ರತಿಷ್ಠಿತ ವೃತ್ತಗಳಲ್ಲಿ ಒಂದಾದ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗವು ಗುಂಡಿಗಳಿಂದ ತುಂಬಿದ್ದು ದುರಸ್ತಿ ಮರೀಚಿಕೆಯಾಗಿದೆ. ದಿನ ನಿತ್ಯವೂ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳು ಗು0ಡಿಗೆ ಬಿದ್ದು ಏಳುತ್ತಿವೆ. ಮಳೆ‌ ಬಂದರೆ ವಾಹನಗಳು ದೌಡಾಯಿಸುವಾಗ ಹೊಂಡದ ನೀರು ಪಾದಚಾರಿಗಳಿಗೆ ಕೆಸರು ನೀರಿನ ಅಭಿಷೇಕ ಮಾಡುತ್ತದೆ. ಮಾರ್ಗದ ತಿರುವಿನಲ್ಲಿ ಉಂಟಾದ ಗುಂಡಿಯಂತೂ‌ ಅಪಾಯಕ್ಕೆ ಆಸ್ಪದವನ್ನು ನೀಡುತ್ತಿದೆ. ಚರಂಡಿಗೆ ಹೊದಿಸಲಾದ ಸ್ಲಾಬ್ ನ ಸಿಮೆಂಟ್ ಎದ್ದು‌ ಹೋಗಿದ್ದು ಕಬ್ಬಿಣದ ಕಂಬಿ ಹೊರಗೆ ಬಂದಿದೆ. ಅದರ ದುರಸ್ತಿ ಕಾರ್ಯಗಳು…

Read More

ಮಕ್ಕಳನ್ನು ಸಮಾಜ, ದೇಶದ ಸಂಪತ್ತನ್ನಾಗಿ ರೂಪಿಸಿ: ಖಾದರ್

ಮಂಗಳೂರು: ವಿದ್ಯಾರ್ಥಿಗಳು ದೇಶದ ಪರಂಪರೆ ಉಳಿಸಿಕೊಂಡು ಹೋಗುವಂತೆ ಮಾಡುವಲ್ಲಿ ಶಿಕ್ಷಕರ ಶ್ರಮ ಅಗತ್ಯ. ಮಕ್ಕಳನ್ನು ತಂದೆ, ತಾಯಂದಿರ ಮಾತ್ರವಲ್ಲದೆ ಸಮಾಜ, ದೇಶದ ಸಂಪತ್ತನ್ನಾಗಿ ರೂಪಿಸಬೇಕಿದೆ ಎಂದು ವಿದಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ…

Read More

ಆನ್‌ಲೈನ್ ಟ್ರೇಡಿಂಗ್ ವಂಚನೆ: 6 ಮಂದಿ ಬಂಧನ

ಮಂಗಳೂರು: ಲೈನ್ ವಂಚನೆ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿ, ಒಟ್ಟು ೬ಲಕ್ಷ ರೂ. ನಗದು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್(೫೪), ಎಂಬವರಿಗೆ ಹೂಡಿಕೆ ಹೆಸರಿನಲ್ಲಿ ಒಟ್ಟು ೭೫,೦೦,೦೦೦ರೂ. ಹಣವನ್ನು ಆನ್‌ಲೈನ್ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸೆನ್ ಪೊಲೀಸರು, ಸುರತ್ಕಲ್ ಕೋಡಿಕೆರೆಯ ಮೊಹಮದ್ ಕೈಸ್(೨೦), ಹೆಜಮಾಡಿ ಕನ್ನಂಗಾರಿನ ಅಹಮದ್ ಅನ್ವೀಜ್ (೨೦), ಬಂಟ್ವಾಳ ಜೋಡುಮಾರ್ಗದ ಸಫ್ವಾನ್(೩೦), ತಾಸೀರ್(೩೧) ಎಂಬವರನ್ನು ಬಂಧಿಸಿ, ಮೊಬೈಲ್ ಫೋನ್‌ಗಳನ್ನು…

Read More

ಬಾವಿಯಲ್ಲಿ ಮಹಿಳೆಯ ಶವ ಪತ್ತೆ.

ಮಂಜೇಶ್ವರ:ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಮಂಜೇಶ್ವರ ಸಮೀಪದ ಮೀಯಪದವು ಅಡ್ಕದಗುರಿ ಎಂಬಲ್ಲಿ ನಡೆದಿದೆ.ಅಡ್ಕದಗುರಿಯ ಐರಿನ್ ಡಿಸೋಜ (60) ಮೃತಪಟ್ಟವರು. ಬುಧವಾರ ರಾತ್ರಿ ಮಲಗಿದ್ದ ಐರಿನ್ ಬೆಳಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು. ಶೋಧ ನಡೆಸಿದಾಗ ಮೃತದೇಹ ಮನೆ ಅಂಗಳದ ಬಾವಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದರು. ಮಂಜೇಶ್ವರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು.

Read More
error: Content is protected !!