ಚಿತ್ರರಂಗದಲ್ಲಿ ಹೊಸ ಸಂಚಲನದೊಂದಿಗೆ “ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ.

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ನಿರ್ಮಾಪಕ ಲಂಚುಲಾಲ್ ಮಾಹಿತಿ ನೀಡಿದರು. ನೆತ್ತೆರೆಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ. ನೆತ್ತರೆಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕಾತರ, ಕುತೂಹಲ ಹೆಚ್ಚಿದೆ. ಸಿನಿಮಾಕ್ಕೆ ಚೇಳಾರ್, ಮುಲ್ಕಿ,ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ.ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ ,…

Read More

ಶ್ರೀ ಅಯ್ಯಂಗಾಳಿ (1863 – 1941 )

ಕೇರಳದ ನವೋತ್ಥಾನ ನಾಯಕರಲ್ಲಿ ಒಬ್ಬರಾದ , ಅಗ್ರಗಣ್ಯ ಧೀಮಂತ ನಾಯಕರು ಆಗಿರುವ ದಲಿತರ ಸಾಮಾಜಿಕ ರಾಜಕೀಯ ಶಿಕ್ಷಣಕ್ಕಾಗಿ ಹಗಲಿರುಳು ದುಡಿದ ಕೇರಳದ ಅಂಬೇಡ್ಕರ್ ಎಂದು ವಿಶೇಷಣವನ್ನು ಪಡೆದಿರುವ ಕೇರಳದ ಮಹಾನ್ ಪುತ್ರನಾಗಿರುವ ಶ್ರೀ ಅಯ್ಯಂಕಾಲಿ ಅವರ ಜನ್ಮದಿನವನ್ನು ಅಗಸ್ಟ್ 28ರಂದು ಎಲ್ಲಾ ವರ್ಷ ಅಯಂಕಾಲಿ ದಿನವನ್ನಾಗಿ ಆಚರಿಸಲಾಗುವುದು. ಶ್ರೀ ಅಯ್ಯಂಗಾಳಿಯವರು ತಿರುವನಂತಪುರದ ವೆಂಗನೂರು ಎಂಬಲ್ಲಿ ಶ್ರೀ ಅಯ್ಯನ್ ಮತ್ತು ಶ್ರೀಮತಿ ಮಾಲ ದಂಪತಿಗಳಿಗೆ 1863 ಅಗಸ್ಟ್ 28ರಂದು ಜನಿಸಿದರು. ಕೇರಳದ ದಲಿತ ಸಮುದಾಯದ ಸಾಮಾಜಿಕ ರಾಜಕೀಯ ಶೈಕ್ಷಣಿಕ…

Read More

ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡಿದ 8 ರ ಹರೆಯದ ರುಷಬ್ ರಾವ್ ಕರಾವಳಿಗೆ ಹೆಮ್ಮೆ.

ಮಂಗಳೂರು: ಆಗಸ್ಟ್ 13 ರಿಂದ 17 ರ ವರೆಗೆ ವಿಯೆಟ್ನಾಂ ನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿಭಾರತವನ್ನು ಪ್ರತಿನಿಧಿಸಿ Prince Category ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ “ಸೂಪರ್ ಟ್ಯಾಲೆಂಟ್ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡು ಭಾರತವನ್ನು ಜಾಗತಿಕ ಮಟ್ಟದಲ್ಲಿ ಗಮನಸೆಳೆಯುವಂತೆ ಮಾಡಿದ 8 ರ ಹರೆಯದ ರುಷಬ್ ರಾವ್ ಕರಾವಳಿಗೆ ಹೆಮ್ಮೆ ತಂದಿದ್ದಾನೆ ಎಂದು ವಿಜೇತನ ಆಪ್ತರಾದ ರಾಹುಲ್ ಅಮೀನ್ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ಮಾತನಾಡಿ, ರುಶಬ್ ಪ್ರತಿಭೆಯನ್ನು ಅತೀ ಹತ್ತಿರದಲ್ಲಿ ಕಂಡವನು ನಾನು,…

Read More

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಾಜ್ಯ ಸರಕಾರಿ ನೌಕರರ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ದಕ್ಷಿಣ ಕನ್ನಡ ಜಿಲ್ಲೆಯ 133 ಎಸೆಸೆಲ್ಸಿ, 102 ಪಿಯುಸಿ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲೆಯ 115 ಮಂದಿ ಎಸೆಸೆಲ್ಸಿ ಮತ್ತು 88 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಂಸದ…

Read More

ವಸಂತ್ ಗಿಳಿಯಾರ್ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಖಂಡನೆ.

ಪವಿತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕರು ಆಧಾರ ರಹಿತ ಆರೋಪ ಮಾಡುತ್ತಿರುವುದು ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ಸುದ್ದಿಯಾಗಿದೆ. ಬುರುಡೆ ಪ್ರಕರಣವನ್ನು ಸರ್ಕಾರ ಎಸ್ಐಟಿ ತನಿಖೆಗೆ ಒಳಪಡಿಸಿದೆ. ಧರ್ಮಾಧಿಕಾರಿಗಳು, ಕ್ಷೇತ್ರದ ಸಿಬ್ಬಂದಿ ರಾಜ್ಯಾದ್ಯಂತ ಎಲ್ಲರೂ ಸ್ವಾಗತಿಸಿದ್ದಾರೆ. ನಿಷ್ಪಕ್ಷಪಾತ ತನಿಖೆಯೂ ನಡೆಯುತ್ತಿದೆ. ಅನಾಮಿಕ ತೋರಿಸಿದ ಎಲ್ಲಾ ಸ್ಥಳಗಳಲ್ಲಿ ಅಗೆದು ತಪಾಸಣೆ ನಡೆಸಲಾಗಿದೆ. ಈ ಕುರಿತಾಗಿ ಯೂಟುಬರ್ ಗಳು, ಸೋಶಿಯಲ್ ಮೀಡಿಯಾ ತಮ್ಮದೇ ಆದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ತಮ್ಮದೇ ತೀರ್ಪುಗಳನ್ನು ನೀಡುತ್ತಿದ್ದಾರೆ. ತನಿಖೆ ಆದೇಶಿಸಿ 2 ವಾರಗಳ…

Read More

ಎಸ್ಯಾಸಾಫ್ಟ್ ಯುವಕರಿಗೆ ಉದ್ಯೋಗ ಅವಕಾಶವನ್ನು ಕಲ್ಪಿಸಿಕೊಡಲಿದೆ. -ಶಾಸಕ ಉಮಾನಾಥ್ ಕೋಟ್ಯಾನ್

ಮಂಗಳೂರು: ಎಸ್ಯಾಸಾಫ್ಟ್ ಅತ್ಯಾಧುನಿಕ ಕಲಿಕೆ ಮತ್ತು ಅಭಿವೃದ್ಧಿ ಸಾಮರ್ಥ್ಯ ಕೇಂದ್ರ ಮಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಲಿದ್ದು ಇದು ಸ್ಥಳೀಯ ಯುವಕರಿಗೆ ಉದ್ಯೋಗ ಅವಕಾಶವನ್ನು ಕಲ್ಪಿಸಿಕೊಡಲಿದೆ ಎಂದು ಮೂಡಬಿದರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್ ಹೇಳಿದರು ಬಜ್ಪೆಯ ಎಸ್ಯಾಸಾಫ್ಟ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತೀ ಹಳ್ಳಿಯೂ ಬೆಳೆದಾಗ ದೇಶ ಬೆಳೆಯುತ್ತದೆ. ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ನೀಡುವುದರಿಂದ ನಿರುದ್ಯೋಗ ನಿವಾರಣೆಯ ಜೊತೆಗೆ ಅವರ ಆರ್ಥಿಕ ಸ್ಥಿತಿಯು ಉತ್ತಮವಾಗುತ್ತದೆ. ಇಂಜಿನಿಯರಿನ್, ಸಿ ಎ, ಮೆಡಿಕಲ್ ಕ್ಷೇತ್ರದತ್ತ…

Read More

ಕಾಸರಗೋಡಿನಲ್ಲಿ ಧರ್ಮಸ್ಥಳ ಕ್ಷೇತ್ರ ಭಕ್ತವೃಂದದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಸಂಪನ್ನ.

ಕಾಸರಗೋಡು : ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ವಿಧ್ವಂಸಕ ಚಟುವಟಿಕೆಗಳ ವಿರುದ್ಧವಾಗಿ ಧರ್ಮಸ್ಥಳ ಕ್ಷೇತ್ರ ಭಕ್ತವೃಂದ, ಕಾಸರಗೋಡು ಇವರ ನೇತೃತ್ವದಲ್ಲಿ ನಿನ್ನೆ ಸಂಜೆ 7 : OO ಗಂಟೆಗೆ ಭವ್ಯವಾದ ಪಂಜಿನ ಮೆರವಣಿಗೆ ಕಾಸರಗೋಡು ಪಟ್ಟಣದಲ್ಲಿ ಜರಗಿತು . ಮೆರವಣಿಗೆ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದಿಂದ ಪ್ರಾರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗಿತು. ನೂರಾರು ಭಕ್ತರು, ಯುವಕರು ಹಾಗೂ ಸಾರ್ವಜನಿಕರು ದೀಪಗಳೊಂದಿಗೆ ಭಾಗವಹಿಸಿ ಸಮಗ್ರ ಏಕತೆ ಹಾಗೂ ಭಕ್ತಿ ಭಾವವನ್ನು ತೋರಿಸಿದರು. ನಗರದ ಬೀದಿಗಳಲ್ಲಿ ಮೆರವಣಿಗೆ…

Read More

ವಿದ್ಯಾರ್ಥಿಗಳ ಗುಂಪಿನಿಂದ 9ನೇ ತರಗತಿಯ ವಿದ್ಯಾರ್ಥಿಗೆ ಥಳಿತ -ವಿದ್ಯಾರ್ಥಿಗೆ ಗಂಭೀರ ಗಾಯ

ಮಂಜೇಶ್ವರ : ವಿದ್ಯಾರ್ಥಿಗಳ ಗುಂಪೊಂದು 9ನೇ ತರಗತಿಯ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆಗೈದು ಗಂಭೀರ ಗಾಯಗೊಳಿಸಿದೆ.ಉಪ್ಪಳ ಹೈಯರ್ ಸೆಕಂಡರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಕಡಂಬಾರ್ ಮೊರತ್ತಣೆ ನಿವಾಸಿ ಮೊಹಮ್ಮದ್ ನಿಶಾದ್ (14) ಗಂಭೀರ ಹಲ್ಲೆಗೊಳಗಾದ ವಿದ್ಯಾರ್ಥಿ.ಹಲ್ಲೆಯಿಂದ ತಲೆ, ಮೂಗು, ಕಣ್ಣು ಹಾಗೂ ಶರೀರದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡ ನಿಶಾದ್ ನನ್ನು ಕಾಸರಗೋಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸೋಮವಾರ ಸಂಜೆ ಶಾಲೆ ಬಿಟ್ಟು ಹೊರಗೆ ಬರುತಿದ್ದಂತೆಯೇ ವಿದ್ಯಾರ್ಥಿಗಳ ತಂಡವೊಂದು ಆಕ್ರಮಿಸಿರುವುದಾಗಿ ದೂರಲಾಗಿದೆ.ಈ ಶಾಲೆಯಲ್ಲಿ ಆಗಾಗ ಇಂತಹ ಘಟನೆಗಳು…

Read More

ಜನಹೃದಯಗಳಲ್ಲಿ ಕಾಂಗ್ರೆಸ್ ಎಂದೆಂದಿಗೂ ಅಮರ- ಸೋಮಶೇಖರ್

ಹಿರಿಯರು ಸರ್ವಸ್ವವನ್ನೂ ತ್ಯಾಗ ಮಾಡಿ ಕಟ್ಟಿ ಬೆಳೆಸಿದ ಕಾಂಗ್ರೆಸ್ ಎಂದೆಂದಿಗೂ ಜನಹೃದಯಗಳಲ್ಲಿ ಜೀವಂತವಾಗಿರುತ್ತದೆ. ಪ್ರತಿಯೋರ್ವ ಭಾರತೀಯನ ಧಮನಿಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ್ ಜೆ. ಎಸ್. ಹೇಳಿದ್ದಾರೆ. ಅವರು ಮಂಗಲ್ಪಾಡಿ ಮಂಡಲ ಹದಿಮೂರನೇ ಮಲಂದೂರು ವಾರ್ಡ್ ಕಾಂಗ್ರೆಸ್ ರೂಪೀಕರಣ ಸಭೆ ಹಾಗೂ ಮಹಾತ್ಮಾ ಗಾಂಧಿ ಕುಟುಂಬ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಮುಖ್ಯ ಭಾಷಣ ಮಾಡಿದರು.ಶ್ರೀ ಇಬ್ರಾಹಿಂ…

Read More

ನಾಗರಿಕ ಕ್ರಿಯಾ ಸಮಿತಿ ಹಾಗೂ ವ್ಯಾಪಾರಿ ವ್ಯವಸಾಯಿ ಸಮನ್ವಯ ಸಮಿತಿ ಜಂಟಿಯಾಗಿ ಟೋಲ್ ಗೇಟ್ ನಿರ್ಮಾಣ ಸ್ಥಳಕ್ಕೆ ಪ್ರತಿಭಟನಾ ಮಾರ್ಚ್

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಟೋಲ್ ಪ್ಲಾಝಾಕ್ಕೆ ದಿನದಿಂದ ದಿನಕ್ಕೆ ಅಧಿಕಾರಸ್ಕರ ನಿಲುವಿನ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.ಸೋಮವಾರದಂದು ನಾಗರಿಕ ಕ್ರಿಯಾ ಸಮಿತಿ ಹಾಗೂ ವ್ಯಾಪಾರಿ ವ್ಯವಸಾಯಿ ಸಮನ್ವಯ ಸಮಿತಿ ಜಂಟಿಯಾಗಿ ಟೋಲ್ ಗೇಟ್ ನಿರ್ಮಾಣ ಸ್ಥಳಕ್ಕೆ ಪ್ರತಿಭಟನಾ ಮಾರ್ಚ್ ನಡೆಸಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆ ಸೃಷ್ಟಿಸಿ, ಅನುಮತಿ ರಹಿತ ಪ್ರತಿಭಟನಾ ಮಾರ್ಚ್ ನಡೆಸಿದ 10ಮಂದಿ ಕ್ರಿಯಾ ಸಮಿತಿ ಕಾರ್ಯಕರ್ತರ ವಿರುದ್ಧ ಕುಂಬಳೆ ಪೋಲೀಸರು ಕೇಸು ದಾಖಲಿಸಿದ್ದಾರೆ.ಕುಂಬಳೆ ಪೇಟೆಯಿಂದ ಆರಿಕ್ಕಾಡಿ ಕಡವತ್ ಗೆ ನಡೆದ…

Read More
error: Content is protected !!