ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ ಮುಸುಕುಧಾರಿಯ ಬಂಧನ..!

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಎಸ್‌ಐಟಿ ಅಧಿಕಾರಿಗಳು ದೂರುದಾರ ‘ಮಾಸ್ಕ್‌ಮ್ಯಾನ್’ ಅವರನ್ನು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ. ಆಗಸ್ಟ್ 23 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಮೂಲಗಳ ಪ್ರಕಾರ, ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಆಗಸ್ಟ್ 22 ರಂದು ಬೆಳಿಗ್ಗೆ 10 ರಿಂದ ಆಗಸ್ಟ್ 23 ರಂದು ಬೆಳಿಗ್ಗೆ 5 ಗಂಟೆಯವರೆಗೆ ದೂರುದಾರರನ್ನು…

Read More

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕೃಷ್ಣಮಯ ಮಕ್ಕಳ ಫೋಟೋ ಸ್ಪರ್ಧೆ 2025 .ಫೋಟೋ ಸಲ್ಲಿಕೆಗೆ ಕೊನೆಯ ದಿನಾಂಕ 25 ಆಗಸ್ಟ್ 2025.

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕೃಷ್ಣಮಯ ಮಕ್ಕಳ ಫೋಟೋ ಸ್ಪರ್ಧೆ 2025 ಆಯೋಜಿಸಲಾಗಿದೆ.ಭಾಗವಹಿಸುವವರು 1 – 10 ವರ್ಷ ದೊಳಗಿನ ಮಕ್ಕಳಾಗಿರಬೇಕು.ಛಾಯಾಚಿತ್ರ ಸ್ಪಷ್ಟವಾಗಿರಬೇಕು ಹಾಗೂ ಇತ್ತೀಚೆಗಿನದ್ದಾಗಿರಬೇಕು .ಛಾಯಾಚಿತ್ರದ ಹಿಂಭಾಗದಲ್ಲಿ ಮಗುವಿನ ಹೆಸರು ಮತ್ತು ಪೋಷಕರ ಸಂಪರ್ಕ ಸಂಖ್ಯೆ ಇರಬೇಕು .ಭಾಗವಹಿಸಲು ನಿಮ್ಮ ಮಗುವಿನ ಅತ್ಯುತ್ತಮ 1 ಚಿತ್ರವನ್ನು ಕಳುಹಿಸಿ ಒಂದು ಮುದ್ರಿತ ಹಾರ್ಡ್‌ ಕಾಪಿ ಛಾಯಾಚಿತ್ರವನ್ನು (ಗಾತ್ರ: 12X8 ಅಥವಾ 6X9 ಇಂಚು) ಸಲ್ಲಿಸಬೇಕು. ಎಲ್ಲಾ ಫೋಟೋಗಳನ್ನು ಸೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಪ್ರದರ್ಶಿಸಲಾಗುತ್ತದೆ….

Read More

ಪ್ರತಾಪನಗರ 42 ನೇ ಸಾರ್ವಜನಿಕ ಗೌರಿ ಗಣೇಶೋತ್ಸವ ,8 ನೇ ವರ್ಷದ ಭಜನೋತ್ಸವ , ಸಾಮೂಹಿಕ ಶ್ರೀ ಶನೈಶ್ಚರ ಕಲ್ಪೋಕ್ತ ಪೂಜೆ . ಆಗಸ್ಟ್ 24 ರಿಂದ.

ಉಪ್ಪಳ :ಪ್ರತಾಪನಗರ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಮಂದಿರದಲ್ಲಿ 42 ನೇ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಹಾಗೂ ಸಾಮೂಹಿಕ ಶ್ರೀ ಶನೈಶ್ಚರ ಕಲ್ಪೋಕ್ತ ಪೂಜೆ ಮತ್ತು 8 ನೇ ವರ್ಷದ ಭಜನೋತ್ಸವ ಆಗಸ್ಟ್ 24 ರಿಂದ 28 ರ ವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ದಿನಾಂಕ 24 ರಂದು ಬೆಳಿಗ್ಗೆ 7 ರಿಂದ ಸಾಮೂಹಿಕ ಪ್ರಾರ್ಥನೆ ,ಗಣಹೋಮ .ಸಾಯಂಕಾಲ 3 30 ರಿಂದ ಬಜೆ ಹರಿನಾರಾಯಣ ಮಯ್ಯ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ…

Read More

ಕಾರ್ಯನಿರ್ವಹಣಾ ಶ್ರೇಷ್ಠತೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಕುಂಬಳೆ.

ಕುಂಬಳೆ: ಕಾರ್ಯನಿರ್ವಹಣಾ ಶ್ರೇಷ್ಠತೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆಯ ಕುಂಬಳೆ ಶಾಖೆ ಪೌರ ಸ್ವಾಗತ ಕಾರ್ಯಕ್ರಮ ನಡೆಯಿತು . ರಾಜ್ಯ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗ ,ಹಿಂದುಳಿದ ವರ್ಗ ಖಾತೆ ಸಚಿವ ಓ .ಆರ್. ಕೇಳು ಉಧ್ಘಾಟಿಸಿದರು.ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ತಾಯಿರ ಯೂಸುಫ್ , ಸಂಸದ ರಾಜಮೋಹನ್ ಉಣ್ಣಿತಾನ್ ,ತ್ರಿಕರಿಪುರ ಶಾಸಕ ಎಂ ರಾಜಗೋಪಾಲನ್ , ಶಾಸಕ ಇ…

Read More

ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್.

ಬೆಂಗಳೂರು: “ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ” ಎಂದು ತಿಳಿಸಿದರು. “ಕರಾವಳಿ ಭಾಗದ ಜನಪ್ರತಿನಿಧಿಗಳು…

Read More

ಹದಗೆಟ್ಟ ರಸ್ತೆ ಸಂಚಾರ ಶೀಘ್ರ ಪುನರ್ ನಿರ್ಮಾಣಕ್ಕೆ ಶಾಸಕ ವೇದವ್ಯಾಸ್ ಕಾಮತ್ ಒತ್ತಾಯ

ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ, ಚರಂಡಿ, ರಾಜಕಾಲುವೆ, ತಡೆಗೋಡೆಗಳು ಹಾಳಾಗಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಇವೆಲ್ಲದರ ಪುನರ್ ನಿರ್ಮಾಣಕ್ಕಾಗಿ ತುರ್ತು ಕಾಮಗಾರಿ ಅಗತ್ಯವಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು. ಪ್ರಾಕೃತಿಕ ವಿಕೋಪದಿಂದಾಗಿರುವ ಹಾನಿಗೆ ಕಳೆದೆರಡು ವರ್ಷಗಳಿಂದ ರಾಜ್ಯ ಸರ್ಕಾರ ಯಾವುದೇ ವಿಶೇಷ ಅನುದಾನ ಬಿಡುಗಡೆಗೊಳಿಸಿಲ್ಲ. ಎಲ್ಲವೂ ಕೇವಲ ಹಾಳೆಗಳಲ್ಲಿವೆ ವಿನಃ ಕಾರ್ಯರೂಪಕ್ಕೆ ಬಂದಿಲ್ಲ. ಇದೊಂತರಾ ಕನ್ನಡಿಯೊಳಗಿನ…

Read More

ಉಪ್ಪಳದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಭಾರೀ ಅಗ್ನಿ ಅವಘಡ : ಲಕ್ಷಾಂತರ ರೂ. ಮೌಲ್ಯದ ಸಾಮಾಗ್ರಿಗಳು ಸುಟ್ಟು ಭಸ್ಮ.

ಮಂಜೇಶ್ವರ : ಉಪ್ಪಳ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಹುಮಹಡಿ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಮಾಸ್ಟರ್ ಕಂಪ್ಯೂಟರ್ಸ್” ಎಂಬ ಸಂಸ್ಥೆಯಲ್ಲಿ ಬೆಂಕಿ ತಗುಲಿದ್ದು ಲಕ್ಷಾಂತರ ಮೌಲ್ಯದ ಸಾಮಾಗ್ರಿಗಳು ಹೊತ್ತಿ ನಾಶಗೊಂಡಿದೆ.ಮಾಹಿತಿ ಅರಿತು ಸ್ಥಳಕ್ಕೆ ಉಪ್ಪಳ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿ ವ್ಯಾಪಕವಾಗಿ ಹಬ್ಬಿದ ಪರಿಣಾಮ ಸ್ಥಳೀಯರಲ್ಲೂ ಆತಂಕ ಉಂಟಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ರೈಲ್ವೆ…

Read More

ಬೀದಿ ನಾಯಿಗಳ ಅಟ್ಟಹಾಸಕ್ಕೆ ನಾಗರಿಕರ ಮುಗಿಲು ಮುಟ್ಟಿದ ಆಕ್ರಂಧನ: ಅಧಿಕಾರಸ್ಥರ ಮಡುಗಟ್ಟಿದ ಮೌನದ ವಿರುದ್ಧ ಮುಸ್ಲಿಂ ಲೀಗ್ ನಿಂದ ಬೃಹತ್ ಪ್ರತಿಭಟನೆ.

ಮಂಜೇಶ್ವರ, ಆಗಸ್ಟ್ 22 – ಬೀದಿ ನಾಯಿಗಳ ಅಟ್ಟಹಾಸದಿಂದ ತತ್ತರಿಸಿರುವ ಮಂಜೇಶ್ವರ ಗ್ರಾಮಸ್ಥರ ಮುಗಿಲು ಮುಟ್ಟಿದ ಆಕ್ರಂಧನಕ್ಕೆ ಕಿಂಚತ್ತೂ ಬೆಲೆ ಕಲ್ಪಿಸಿದ ಮಂಜೇಶ್ವರ ಗ್ರಾಮ ಪಂಚಾಯತು ಅಧಿಕಾರಸ್ಥರ ಮಡುಗಟ್ಟಿದ ಮೌನದ ವಿರುದ್ಧ ನಾಗರಿಕರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಿನ ರೀತಿಯಲ್ಲಿ ಸ್ಪೋಟಕಗೊಳ್ಳುತ್ತಿರುವ ದೃಶ್ಯ ಕಂಡು ಬರುತ್ತಿದೆ.ಶುಕ್ರವಾರದಂದು ಪಂಚಾಯತು ಅಧಿಕಾರಸ್ಥರ ವಿರುದ್ಧ ಅವರ ನಿರ್ಲಕ್ಷ್ಯವನ್ನು ವಿರೋಧಿಸಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮಂಜೇಶ್ವರ ಪಂಚಾಯತು ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಯಿತು. ಪಕ್ಷದ…

Read More

ತಿಮರೋಡಿ ಬಂಧನ ಓಕೆ , ಪೂಂಜಾ ಇಲ್ಲ ಯಾಕೆ ?ಇಷ್ಟೇ ಸಾಕೇ ? ಸಾರ್ವಜನಿಕರ ಪ್ರಶ್ನೆ .ಕಾಂಗ್ರೆಸ್ ನ ಮೃದು ನೀತಿಯೇ ?

ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರವರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ಸಾರ್ವಜನಿಕವಾಗಿ ನಿಂದಿಸಿ ಅವಮಾನಿಸಿದರೆಂಬ ಆರೋಪದ ಹಿನ್ನಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸರು ಉಜಿರೆಯ ಅವರ ನಿವಾಸದಿಂದ ಬಂಧಿಸಿದರು .ನಂತರ ಕಾನೂನಿನಂತೆ ವೈದ್ಯಕೀಯ ಪರೀಕ್ಷೆಯ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.ವ್ಯಕ್ತಿಯೊಬ್ಬರ ಬಗ್ಗೆ ಸಾರ್ವಜನಿಕವಾಗಿಯೋ ಸಾಮಾಜಿಕ ಜಾಲತಾಣಗಳ ಮೂಲಕವೋ ನಿಂದಿಸಿ ಅಪಮಾನ ಮಾಡಿದರೆ ಈ ರೀತಿಯ ಕ್ರಮಗೊಳ್ಳುವುದು ಉಚಿತ .ಆದರೆ ಸರಕಾರವು ಕೈಗೊಳ್ಳುವ ಕಾನೂನು…

Read More

ಮಂಜೇಶ್ವರ ಠಾಣಾ ಎ ಎಸ್ಸೈ ಆತ್ಮಹತ್ಯೆ ಗೈದ ಸ್ಥಿತಿಯಲ್ಲಿ ಪತ್ತೆ : ಡೆತ್ ನೋಟ್ ಲಭಿಸಿರುವುದಾಗಿ ಸೂಚನೆ

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣಾ ಎಎಸ್ಟೈ ಯೊಬ್ಬರು ಪೊಲೀಸ್ ಕ್ಟಾರ್ಟರ್ಸ್ ನೊಳಗೆ ಆತ್ಮಹತ್ಯೆಗೈದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಕುತ್ತಿಕೋಲ್ ನಿವಾಸಿ ಮಧು (50) ಸಾವನ್ನಪ್ಪಿದ ದುರ್ದೈವಿ. ಶುಕ್ರವಾರ ಬೆಳಿಗ್ಗೆ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಅವರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಮಾಹಿತಿ ಅರಿತು ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಒಂದು ಡೆತ್ ನೋಟ್ ಕ್ವಾರ್ಟರ್ಸ್‌ನಿಂದ ಪತ್ತೆಯಾಗಿದೆ ಎಂಬ ಮಾಹಿತಿ ಇದೆ. ಮಧು ಅವಿವಾಹಿತರಾಗಿದ್ದರು. ಠಾಣೆಗೆ ಬರುವ ನಾಗರಿಕರೊಡನೆ ಉತ್ತಮ ಸಂಬಂಧ…

Read More
error: Content is protected !!