ದುರಾಡಳಿತ, ಭ್ರಷ್ಟಾಚಾರ ಆರೋಪ: ಮಂಗಳೂರು ಪಾಲಿಕೆ ಎದುರು ಬಿಜೆಪಿ ಪ್ರತಿಭಟನೆ
ಮಂಗಳೂರು: Mangaluru City Corporation ನಲ್ಲಿ ದುರಾಡಳಿತ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳು ಜಾರಿಯಲ್ಲಿವೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಾಲಿಕೆ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಬಿಜೆಪಿ, ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಮಂಡಲಗಳ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಆಕ್ರೋಶ ವ್ಯಕ್ತಪಡಿಸಿತು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಜನರ ಸಮಸ್ಯೆಗಳಿಗೆ ಪಾಲಿಕೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮೇಯರ್…
