ಬೇಟೆಗಾರರ ತಂಡದವರನ್ನು ಬೆದರಿಸಿ ರೈಫಲ್, ಸ್ಕೂಟರ್, ಫೋನ್ ಗಳನ್ನು ದೋಚಿ ಗಂಭೀರ ಹಲ್ಲೆ : ನಾಲ್ಕು ಮಂದಿ ಬಂಧನ
ಮಂಜೇಶ್ವರ : ಕುತ್ತಿಕೋಲ್ ನಿಂದ ಮಂಜೇಶ್ವರಕ್ಕೆ ಪ್ರಾಣಿಗಳ ಬೇಟೆಗಾಗಿ ಬಂದಿಳಿದ ಯುವಕರನ್ನು ಬೆದರಿಸಿ ಅವರಿಂದ ರೈಫಲ್, ಸ್ಕೂಟರ್ ಹಾಗೂ ಮೊಬೈಲ್ ಫೋನ್ ದೋಚಿದ ಪ್ರಕರಣದಲ್ಲಿ, ಕಾಪಾ ಪ್ರಕರಣದ ಆರೋಪಿ ಸೇರಿದಂತೆ ನಾಲ್ಕು ಮಂದಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ರಾಶಿಕ್ ಎಂಬಾತ ಪರಾರಿಯಾಗಿದ್ದಾನೆ. ಹೊಸಂಗಡಿ ಅಂಗಡಿಪದವಿನ ಸೈಫುದ್ದೀನ್ ಆಲಿಯಾಸ್ ಪೂಚ ಸೈಫು (30), ಹಿದಾಯತ್ ನಗರ ಮುಟ್ಟತೋಡಿಯ ಮೊಯಿದಿನ್ ಆಲಿಯಾಸ್ ಚರಮುರು ಮೊಯ್ದು (29), ನ್ಯಾಷನಲ್ ನಗರ ಉಳಿಯತ್ತಡ್ಕದ ಮೊಹಮ್ಮದ್ ಸುಹೈಲ್ (27), ಬಿಲಾಲ್ ನಗರದ…