ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ : ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್.
ಮಂಗಳೂರು: ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ ಎಂಬುದನ್ನು ಸಮಾಜದ ಜನರಿಗೆ ಮತ್ತು ಚರ್ಚ್, ಮಸೀದಿ ಮಂದಿರಗಳ ಮುಖ್ಯಸ್ಥರಿಗೆ ಮನದಟ್ಟು ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಗರದ ನೆಹರೂ ಮೈದಾನದಲ್ಲಿ ನಡೆದ ಪಥಸಂಚಲನದೊಂದಿಗೆ 79ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸಂದೇಶ ಭಾಷಣದಲ್ಲಿ ಅವರು ಕರೆ ನೀಡಿದರು. ಕಲೆ, ನಾಟಕ, ಯಕ್ಷಗಾನ ಕ್ಷೇತ್ರಗಳಲ್ಲೂ ಸಹ ಸಾಮರಸ್ಯ ಸಂದೇಶ ಸಾರುವತ್ತ ಕಲಾವಿದರು ಹೆಚ್ಚಿನ ಗಮನ ಹರಿಸಬೇಕು. ಹಿಂಸೆಗೆ ಅವಕಾಶ ನೀಡದೇ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈ…