ಮಾರ್ಚ್ 20ರಂದು ತುಳು ಭವನದಲ್ಲಿ ‘ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನ’

ಮಂಗಳೂರು: ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡುವ ಉದ್ದೇಶದಿಂದ ತುಳು ಪರಿಷತ್ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿಯಾಗಿ ಮಾರ್ಚ್ 20ರಂದು ನಗರದ ತುಳು ಭವನದಲ್ಲಿ ‘ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನ’ವನ್ನು ಆಯೋಜಿಸಿವೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತುಳು ಪರಿಷತ್ ಅಧ್ಯಕ್ಷ ಶುಭೋದಯ್ ಆಳ್ವ, ಈ ಸಮ್ಮೇಳನ ಸಂಪೂರ್ಣವಾಗಿ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡಿದ್ದು, ಕಾರ್ಯಕ್ರಮದ ವಿವಿಧ ಭಾಗಗಳನ್ನು ವಿದ್ಯಾರ್ಥಿಗಳೇ ಮುನ್ನಡೆಸಲಿದ್ದಾರೆ ಎಂದು ಹೇಳಿದರು. ಈ ಬಾರಿ ಪ್ರತಿಭಾವಂತ ವಿದ್ಯಾರ್ಥಿಗಳೇ ಉದ್ಘಾಟಕರಾಗಿ…

Read More

ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯ ನಿರ್ಲಕ್ಷ್ಯ ಆರೋಪ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಉಡುಪಿ: ಈ ಬಾರಿಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಅನುದಾನ ಒದಗಿಸದೇ ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು, ರಾಜ್ಯ ಸರಕಾರ 1.32ಲಕ್ಷ ಕೋಟಿ ಸಾಲ ಮಾಡಿ, ಗ್ಯಾರಂಟಿಯೇ ಅಭಿವೃದ್ಧಿ ಎಂಬ ಭ್ರಮೆಯಲ್ಲಿ ಕಾಲ ಕಳೆಯುತ್ತಿದೆ. ಜಿಲ್ಲೆಯ ಐದು ಮಂದಿ ಶಾಸಕರು, ಇಲ್ಲಿನ ಬೇಡಿಕೆಗಳು,…

Read More

ರಾಮಕೃಷ್ಣ ಮಿಷನ್‌ನಿಂದ ಧಾರ್ಮಿಕ ವಸ್ತುಗಳ ಗೌರವಯುತ ವಿಲೇವಾರಿಗೆ ‘ವಿಸರ್ಜನೆ’ ಅಭಿಯಾನಕ್ಕೆ ಚಾಲನೆ

ಮಂಗಳೂರು ನಗರದ ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿರುವ ರಾಮಕೃಷ್ಣ ಮಿಷನ್ ‘ಸ್ವಚ್ಛ ಮಂಗಳೂರು’ ಅಭಿಯಾನದ ಅಡಿಯಲ್ಲಿ ಧಾರ್ಮಿಕ ತ್ಯಾಜ್ಯಗಳ ಸಮರ್ಪಕ ಹಾಗೂ ಗೌರವಯುತ ವಿಲೇವಾರಿಗಾಗಿ ‘ವಿಸರ್ಜನೆ’ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದ್ದು ಈ ಅಭಿಯಾನವು ಮಾರ್ಚ್ 16 ರಿಂದ 26 ರವರೆಗೆ ಮಂಗಳೂರಿನ ಆಯ್ದ ಆರು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ತಿಳಿಸಿದರು . ನಗರದ ರಾಮಕೃಷ್ಣ ಮಠದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿ ಮತ್ತು ‘ವಿಸರ್ಜನೆ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…

Read More

ಹೊರ್ಮುಜ್ ಜಲಸಂಧಿ ವಿವಾದ ತೀವ್ರ: ಮಿತ್ರಕೂಟ ರಚನೆಗೆ ಟ್ರಂಪ್ ಕರೆ

ಅಂತಾರಾಷ್ಟ್ರೀಯ: ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕಾ ಕೈಗೊಂಡಿರುವ ಯುದ್ಧವು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಈ ನಡುವೆ ಹೊರ್ಮುಜ್ ಜಲಸಂಧಿಯನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿರುವ ಇರಾನ್, ಈ ಜಲಸಂಧಿಯ ಮೂಲಕ ಸಂಚರಿಸುವ ಹಡಗುಗಳ ಮೇಲೆ ದಾಳಿ ನಡೆಸುವ ಹಾಗೂ ಅವುಗಳನ್ನು ಮುಳುಗಿಸುವ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿಯನ್ನು ಇರಾನ್ ಹಿಡಿತದಿಂದ ಮುಕ್ತಗೊಳಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತರ ರಾಷ್ಟ್ರಗಳನ್ನು ಒಳಗೊಂಡ ಮಿತ್ರಕೂಟವನ್ನು ರಚಿಸಬೇಕೆಂದು ಕರೆ ನೀಡಿದ್ದಾರೆ….

Read More

ಆರಿಕ್ಕಾಡಿ ಶ್ರೀ ಧೂಮಾವತಿ ದೇವಸ್ಥಾನದಲ್ಲಿ ಕಾಲಾವಧಿ ವಾರ್ಷಿಕ ನೇಮೋತ್ಸವ

ಕಾಸರಗೋಡು ಜಿಲ್ಲೆಯ ಆರಿಕ್ಕಾಡಿ ಗ್ರಾಮದ ಶ್ರೀ ಧೂಮಾವತಿ ದೇವಸ್ಥಾನದಲ್ಲಿ ಕಾಲಾವಧಿ ವಾರ್ಷಿಕ ನೇಮೋತ್ಸವವು ಮಾರ್ಚ್ 26 ಮತ್ತು 27, 2026 ರಂದು ಭಕ್ತಿಭಾವದಿಂದ ನಡೆಯಲಿದೆ. ದೇವಸ್ಥಾನದ ಪ್ರಕಟಣೆಯ ಪ್ರಕಾರ, ಮಾರ್ಚ್ 26ರಂದು ಗುರುವಾರ ಬೆಳಗ್ಗೆ ಗಣಹೋಮ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಆರಂಭವಾಗಲಿದ್ದು, ಸಂಜೆ ವೇಳೆಯಲ್ಲಿ ಅಲಂಕಾರ ಪೂಜೆ, ಭಜನೆ ಹಾಗೂ ಇತರ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಬಳಿಕ ಬಂಡಾರ ಏರುವುದು , ರಾತ್ರಿ 8: 30ಕ್ಕೆ ಉಳ್ಳಲ್ತಿ ದೈವದ ನೇಮ ಬಳಿಕ ರಾತ್ರಿ 10:00ಗೆ ಮೈಸಂದಾಯ…

Read More

ಯುದ್ಧದ ಬೆಂಕಿ

ಕೆಟ್ಟು ಪಟ್ಟಣ ಸೇರು ಎಂಬ ಗಾದೆ ಮಾತಿದೆ, ಆದರೆ ಈಗಿನ ಸ್ಥಿತಿಯನ್ನು ನೋಡಿದರೆ ನಾನು ಪಟ್ಟಣ ಸೇರಿ ಕೆಟ್ಟೆನೇನೋ ಎಂದು ಅನಿಸುತ್ತಿದೆ. ಒಂದು ವರ್ಷದ ಹಿಂದೆ ಕೆಲಸಕ್ಕೆ ಎಂದು ಬೆಂಗಳೂರು ಸೇರಿದೆ.ಸಿಟಿಗೆ ಬಂದ ನನಗೆ ಮೊದ-ಮೊದಲು ಪಿಜಿಯು ಆಶ್ರವನ್ನೇನೋ ಕೊಟ್ಟಿತ್ತು, ಅಲ್ಲಿಯ ಕಾಲಮಿತಿ, ಆಹಾರ ಪದ್ಧತಿ ಸರಿಹೋಗದೆ ಹೇಗೋ ಕಷ್ಟಪಟ್ಟು ಚಿಕ್ಕದಾದಂತಹ ಒಂದು ಮನೆ ನೋಡಿಕೊಂಡೆ. ಮನೆಯಾದರೆ ಸಾಕೆ ಅಡುಗೆ ಮಾಡಬೇಕು,ಪಾತ್ರೆ, ಬಟ್ಟೆ ತೊಳೆಯಬೇಕು……ಇಂತಹ ಹಲವಾರು ಕೆಲಸಗಳನ್ನು ಖುದ್ದು ಮಾಡಬೇಕು.ನಾನು 5 ಕೆಜಿಯ ಚಿಕ್ಕ lpg ಸಿಲಿಂಡರ್…

Read More

ಬದುಕಿನ ಶಿಲ್ಪಕ್ಕೆ ಅವಮಾನವೇ ಉಳಿ, ಅನುಭವವೇ ಹದ

ಅವಮಾನ ಮತ್ತು ಅನುಭವ ಬದುಕಿನ ಎರಡು ಧ್ರುವಗಳು ​ಜೀವನವು ಕೇವಲ ಉಸಿರಾಟದ ಕ್ರಿಯೆಯಲ್ಲ, ಅದೊಂದು ನಿರಂತರ ಕಲಿಕೆಯ ಪಾಠಶಾಲೆ. ಇಲ್ಲಿ ಶಿಕ್ಷಕರಿಗಿಂತ ಹೆಚ್ಚಾಗಿ ಸನ್ನಿವೇಶಗಳೇ ನಮಗೆ ಪಾಠ ಕಲಿಸುತ್ತವೆ. “ಅವಮಾನಗಳು ಬದುಕಬೇಕೆಂಬ ಧೈರ್ಯ ಕೊಟ್ಟರೆ, ಅನುಭವಗಳು ಹೇಗೆ ಬದುಕಬೇಕೆಂಬ ಮಾರ್ಗ ತೋರಿಸುತ್ತವೆ” ಎನ್ನುವ ಸಾಲುಗಳು ಬದುಕಿನ ಕಟು ವಾಸ್ತವಕ್ಕೆ ಹಿಡಿದ ಕನ್ನಡಿಯಂತಿವೆ. ಸಾಮಾನ್ಯವಾಗಿ ಅವಮಾನವಾದಾಗ ಮನುಷ್ಯ ಕುಗ್ಗಿ ಹೋಗುತ್ತಾನೆ. ಆದರೆ ಸತ್ಪಥದಲ್ಲಿ ಸಾಗುವವನಿಗೆ ಅವಮಾನವೇ ಎತ್ತರಕ್ಕೆ ಜಿಗಿಯಲು ಬಳಸುವ ಸಾಧನವಿದ್ದಂತೆ. “ಬೆಳೆಯುವ ಸಿರಿ ಮೊಳಕೆಯಲ್ಲಿ” ಎಂಬ ಗಾದೆಯಂತೆ,…

Read More

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿಶೇಷ ಕಾರ್ಯಕ್ರಮ

ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಗರದ ಅಟಲ್ ಸೇವಾ ಕೇಂದ್ರದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಅವರು, ನಮ್ಮ ಜೀವನ ಶೈಲಿಯಲ್ಲಿ ಸಿರಿಧಾನ್ಯಗಳ ಮಹತ್ವವನ್ನು ವಿವರಿಸಿ, ಆರೋಗ್ಯಕರ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಇವು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಆರೋಗ್ಯವನ್ನು ಕಾಪಾಡಲು ಬಹಳ ಸಹಾಯಕವಾಗುತ್ತವೆ ಎಂದರು. ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ…

Read More

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆರಿಂದ ಮಂಜೇಶ್ವರ ಎನ್‌ಡಿಎ ಚುನಾವಣಾ ಕಚೇರಿ ಉದ್ಘಾಟನೆ

ಮಂಜೇಶ್ವರ: ಮಂಜೇಶ್ವರ ಮಂಡಲದ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಮಂಗಲ್ಪಾಡಿ ಪಂಚಾಯತಿನ ಸೊಂಕಲ್ ನಲ್ಲಿ ಕೇಂದ್ರ ಸಚಿವೆ ಕೇರಳ ರಾಜ್ಯ ವಿಧಾನಸಭಾ ಚುನಾವಣೆಯ ಸಹ ಪ್ರಭಾರಿ, ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎನ್‌ಡಿಎ (NDA) ಚುನಾವಣಾ ಸಮಿತಿ ಕಚೇರಿಯನ್ನು, ವಿಧಾನಸಭಾ ಚುನಾವಣೆಯ ರಾಜ್ಯ ಸಹ-ಪ್ರಭಾರಿಯೂ ಆಗಿರುವ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಿದರು ಕೇರಳ ಬಿಜೆಪಿ ರಾಜ್ಯ ಮಾಜಿ ರಾಜ್ಯಾಧ್ಯಕ್ಷರಾದ ಶ್ರೀ ಕೆ ಸುರೇಂದ್ರನ್, ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಪ್ರಭಾರಿ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಸಮಾಜ ಕಲ್ಯಾಣ ಯೋಜನೆಯಡಿ ಸಹಾಯಧನ ವಿತರಣೆ

ಮಂಗಳೂರು: ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ನೀಡುತ್ತಾ ಬಂದಿರುವ ಪಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಒಕ್ಕೂಟದ…

Read More
error: Content is protected !!