ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ’ಧರ್ಮಸ್ಥಳ’ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವ ಆಘಾತಕಾರಿ ಸಂಗತಿ
ಮಂಗಳೂರು ಹೊರ ವಲಯದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣಾ ಮಾಹಿತಿ ಆರೋಪಿಯು, ಧರ್ಮಸ್ಥಳದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಎನ್ನುವುದನ್ನು ಬೆಳಕಿಗೆ ತಂದಿದೆ.ನವೆಂಬರ್ 2022ರಲ್ಲಿ ನಡೆದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಸುತ್ತಿದೆ. ಮಂಗಳೂರಿನಲ್ಲಿ ಹಿಂದೆ ಆಟೋರಿಕ್ಷಾದಲ್ಲಿ ಕಡಿಮೆ ತೀವ್ರತೆಯ ಸ್ಪೋಟ ಸಂಭವಿಸಿತ್ತು. ಜಾರಿ ನಿರ್ದೇಶನಾಲಯವು, ಪ್ರಮುಖ ಆರೋಪಿ ಸಯ್ಯದ್ ಯಾಸಿನ್ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಮುಟ್ಟುಗೋಲು…