ಚುನಾವಣಾ ಆಯೋಗದಲ್ಲಿ ಬಿಜೆಪಿ ಪುಡಾರಿಗಳು ಸೇರಿಕೊಂಡಿದ್ದಾರೆಯೇ…? -ದಿನೇಶ್ ಮೂಳೂರು

2014 ರಿಂದ ಈಚೆಗೆ ದೇಶದಲ್ಲಿ ಚುನಾವಣಾ ಆಯೋಗದ ಸ್ವಾಭಿಮಾನದ ಅಸ್ತಿತ್ವವನ್ನು ಕಳೆದುಕೊಂಡಿದೆ ಎಂಬುದನ್ನು ಪ್ರತಿಯೊಂದು ವಿಧಾನಸಭಾ ಚುನಾವಣೆಗಳಲ್ಲಿ, ಲೋಕಸಭಾ ಚುನಾವಣೆಗಳಲ್ಲಿ ಕಾಣಬಹುದಾಗಿದೆ, ಇದಕ್ಕೆ ಕಾರಣ ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಚುನಾವಣಾ ಆಯೋಗ ತಮ್ಮ ಸ್ವಾಭಿಮಾನದ ಅಸ್ತಿತ್ವವನ್ನು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಮಾರಿಕೊಂಡಿದೆ ಎಂಬುದನ್ನು ಚುನಾವಣೆಯ ಫಲಿತಾಂಶಗಳನ್ನು ನೋಡಿದಾಗ ಗೊತ್ತಾಗುತ್ತದೆ, ಕಳೆದ 10 ವರ್ಷಗಳ ಹಿಂದೆ ಇಂದಿನ ವಿರೋಧ ಪಕ್ಷದ ನಾಯಕರಾದ ಶ್ರೀಯುತ ರಾಹುಲ್ ಗಾಂಧಿಯವರು ಅನೇಕ ಸಾರ್ವಜನಿಕ ಸಮಾವೇಶಗಳಲ್ಲಿ ಹಾಗೂ ಸಂಸತ್ತಿನ ಸದನದಲ್ಲಿ…

Read More

ಹಿರಿಯರ ತ್ಯಾಗಮಯ ಜೀವನವೇ ಕಾಂಗ್ರೆಸಿಗರಿಗೆ ಸ್ಪೂರ್ತಿ- ಶ್ರೀ ಸೋಮಶೇಖರ್ ಜೆ ಎಸ್.ವರ್ಕಾಡಿ ಕಾಂಗ್ರೆಸ್ ಕಚೇರಿ ಕೆಕೆ ಜಾಯಿರನ್ ಸ್ಮೃತಿ ಭವನ ಉದ್ಘಾಟನೆ

ಸ್ವತಂತ್ರ ಭಾರತದ ರೂವಾರಿಗಳಾದ ಹಿರಿಯರ ತ್ಯಾಗಮಯ ಜೀವನವೇ ಕಾಂಗ್ರೆಸಿಗರಿಗೆ ಸ್ಪೂರ್ತಿಯಾಗಿದೆ. “ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು” ಎಂಬ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ಕಾಂಗ್ರೆಸ್ ಎಂದೆಂದಿಗೂ ಜನ ಹೃದಯಗಳಲ್ಲಿ ಸ್ಥಾಯಿಯಾಗಿ ನಿಲ್ಲಲಿದೆ. ಕಾಂಗ್ರೆಸ್ ಪಕ್ಷದ ಉಲ್ಲೇಖವಿಲ್ಲದೆ ಆಧುನಿಕ ಭಾರತದ ಇತಿಹಾಸ ಪೂರ್ಣವಾಗದು ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ್ ಜೆ. ಎಸ್ ಹೇಳಿದ್ದಾರೆ.ಅವರು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿಯ ನೂತನ ಕಚೇರಿ “ಶ್ರೀ ಕೆ.ಕೆ. ಜಾಯಿರನ್ ಸ್ಮೃತಿ ಭವನ ಉದ್ಘಾಟಿಸಿ ಮಾತನಾಡಿದರು.ಕಾಂಗ್ರೆಸ್ ಸಮಿತಿಯ ಮಜಿರ್ಪಳ್ಳದಲ್ಲಿ ಕಾರ್ಯಕ್ರಮ…

Read More

ಮಂಜೇಶ್ವರವನ್ನು ತ್ಯಾಜ್ಯ ಮುಕ್ತಗೊಳಿಸುವ ನಡುವೆ ವಿಕೃತ ಮೆರೆಯುವಕೆಲವು ಅವಿವೇಕಿಗಳ ದುಸ್ಸಾಹಸಕ್ಕೆ ತ್ಯಾಜ್ಯವು ಅಸಹ್ಯಪಡುವಂತಾಗಿದೆ

ಮಂಜೇಶ್ವರ : ಮಂಜೇಶ್ವರವನ್ನು ಸಂಪೂರ್ಣವಾಗಿ ತ್ಯಾಜ್ಯ ಮುಕ್ತವನ್ನಾಗಿಸಲು ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ನಾಗರಿಕರು ಹರ ಸಾಹಸ ಪಡುತ್ತಿರುವ ಮಧ್ಯೆ ಕೆಲವು ವಿಕೃತ ಮನಸ್ಸುಗಳು ಸಾರ್ವಜನಿಕ ವಲಯದಲ್ಲಿ ತ್ಯಾಜ್ಯಗಳನ್ನು ಬಿಸಾಡುತ್ತಿರುವ ಕೃತ್ಯವನ್ನು ಮುಂದುವರಿಸುತ್ತಲೇ ಇದೆ.ಸಾರ್ವಜನಿಕ ವಲಯಗಳಲ್ಲಿ ನಿಯಮ ವಿರೋಧಿಯಾಗಿ ತ್ಯಾಜ್ಯ ಬಿಸಾಡುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಅದರಲ್ಲಿ ಹೊಸದಾಗಿ ಉದ್ಯಾವರ-ಮಾಡ ಅಂಗನವಾಡಿ ಪ್ರದೇಶದ ಘಟನೆಯೊಂದು ಖಂಡನಾರ್ಹ ಬೆಳವಣಿಗೆಯಾಗಿದೆ. ಇದೀಗ ಉದ್ಯಾವರ ಮಾಡ ಅಂಗನವಾಡಿ ಪರಿಸರದಲ್ಲಿ ಅಗೋಸ್ಟ್ 3 ರಂದು ಸಂಜೆ 5 ಗಂಟೆಯ ಸುಮಾರಿಗೆ ಕಾರಿನ ನಂಬ್ರ ಪ್ಲೇಟಿಗೆ…

Read More

ದೀನ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನಕ್ಕೆ ಚಾಲನೆ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ದ. ಕ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಬಂಟ್ವಾಳ ಕೃಷಿ ಇಲಾಖೆ ಬಂಟ್ವಾಳ ಗ್ರಾಮ ಪಂಚಾಯತ್ ಗೋಳ್ತಾಮಜಲು ಅಶ್ರಿವಾದ ಸಂಜೀವಿನಿ ಒಕ್ಕೂಟ ಗೊಳ್ತಾಮಾಜಲ್ ಇದರ ಸಹಯೋಗದಲ್ಲಿ ಹಡಿಲು ಬಿದ್ದ ಗದ್ದೆಯ ನೆಜಿ ನಾಟಿ ಕಾರ್ಯಕ್ರಮ ಗೊಳ್ತಾಮಜಲು ಗ್ರಾಮದ ಬಲ್ಕಟ್ಟ ಕೊಗ್ಗು ಪೂಜಾರಿಯವರ ಮನೆಯಲ್ಲಿ ನಡೆಯಿತು ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹನ ಅಧಿಕಾರಿ ಸಚಿನ್ ಕುಮಾರ್ ಹಾಗೂ ಜಿಲ್ಲಾ ಕೃಷಿ ಸಹಾಯಕ ನಿರ್ದೇಶಕರಾದ ಕುಮುದ ತೆ0ಗಿನ ಹೂ ಅರಳಿಸುವ ಮೂಲಕ…

Read More

ಉಡುಪಿಯ ಕೃಷ್ಣ ಮಠದ ನೂತನ ಯಾಳಿ ಲೋಕಾರ್ಪಣೆ

ಉಡುಪಿ: ಸುಮಾರು ಎಂಟು ಶತಮಾನಗಳ ಹಿಂದೆ ಆಚಾರ್ಯ ಮಧ್ವರು ಶ್ರೀಕೃಷ್ಣನಿಗಾಗಿ ಉಡುಪಿಯಲ್ಲಿ ನಿರ್ಮಿಸಿದರೆನ್ನಲಾದ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ಪ್ರದರ್ಶಿಸಲು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮುಂದಾಗಿದ್ದಾರೆ. ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತು ಪೌಳಿ)ಯನ್ನು ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಿಸಲಾಗಿದೆ.ಕನಕ ಗೋಪುರಕ್ಕೆ ಹೊಂದಿಕೊಂಡಿರುವ ಚಂದ್ರಶಾಲೆ ಸಹಿತ ಮಧ್ವ ಸರೋವರದವರೆಗೆ ಶ್ರೀಕೃಷ್ಣ ಆಲಯದ ಮೇಲ್ಛಾವಣಿಗೆ ಪ್ರಾಚೀನ ವಾಸ್ತುಶೈಲಿಯ ರೂಪ ನೀಡಲಾಗಿದೆ. ಆ ಮೂಲಕ ಕೃಷ್ಣಮಠದ ದಿವ್ಯ…

Read More

ಪುತ್ತೂರು ತಾಲೂಕಿನ ಕೆದಂಬಾಡಿ MRF ಘಟಕಕ್ಕೆ ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರ ಪರಿಶೀಲನಾ ಮತ್ತು ಅಧ್ಯಯನ ತಂಡ ಭೇಟಿ

ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತಿಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF – Material Recovery Facility) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ, ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು MRF ಘಟಕಕ್ಕೆ ಭೇಟಿ…

Read More

ಬ್ರಹ್ಮಾವರ: ಪಿಗ್ಮಿ ಸಂಗ್ರಹಕನ ಹಣ ಕಳವು ಪ್ರಕರಣ: ಅಂತರ್ ರಾಜ್ಯ ಕಳ್ಳನ ಅಂಧರ್

ಉಡುಪಿ: ಬೈಕಿನ ಸೈಡ್ ಬಾಕ್ಸ್ ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳ್ಳನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಂತೋಷ್‌ ಹನುಮಂತ ಕಟ್ಟಿಮನಿ (39) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ 32000ರೂ. ನಗದು ಹಾಗೂ ಮೊಬೈಲ್‌ನ್ನು ವಶಪಡಿಸಕೊಳ್ಳಲಾಗಿದೆ. ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕರು ಆ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಟೆಲ್‌ ಎದುರುಗಡೆ ಕರ್ನಾಟಕ ಬ್ಯಾಂಕ್‌ ಎಟಿಎಮ್‌ ಬಳಿ ಪಿಗ್ಮಿ ಕಲೆಕ್ಷನ್‌ ಮಾಡಿದ ನಗದನ್ನು ಬೈಕ್ ನ ಸೈಡ್‌ ಬಾಕ್ಸ್‌ನಲ್ಲಿ…

Read More

ಬದಿಯಡ್ಕ : ಲೈಂಗಿಕ ಸಂಬಂಧ ಬೆಳೆಸಿ ಅಪ್ರಾಪ್ತೆಗೆ ಹುಟ್ಟಿದ ಮಗುವನ್ನು ಅನಾಥ ಮಂದಿರಕ್ಕೆ ಹಸ್ತಾಂತರಿಸುವ ಯತ್ನದ ನಡುವೆ-ಆರೋಪಿಯ ಬಂಧನ

ಬದಿಯಡ್ಕ : ಲೈಂಗಿಕ ಸಂಬಂಧ ಬೆಳೆಸಿ 17ರ ಹರೆಯದ ಅಪ್ರಾಪ್ತೆಗೆ ಹುಟ್ಟಿದ ಮಗುವನ್ನು ಅನಾಥ ಮಂದಿರಕ್ಕೆ ಹಸ್ತಾಂಂತರಿಸುವ ಯತ್ನದ ನಡುವೆ ಆರೋಪಿಯನ್ನು ಬಂಧಿಸಲಾಗಿದೆ. ಯುವತಿ ಮತ್ತು ಯುವಕ ಇಬ್ಬರೂ ಬದಿಯಡ್ಕ ಠಾಣಾ ವ್ಯಾಪ್ತಿಗೆ ಸೇರಿದವರಾಗಿದ್ದಾರೆ. ಪ್ಲಸ್ ಟು ಶಿಕ್ಷಣ ಪಡೆದ ಬಳಿಕ ಮನೆಯಲ್ಲೇ ಇದ್ದ ಯುವತಿಯನ್ನು ತಾಯಿಯ ಸಂಬಂಧಿಕನೇ ಆದ ಮೂರು ಮಕ್ಕಳ ತಂದೆಯಾದ 40ರ ವ್ಯಕ್ತಿ ನಿರಂತರ ದೌರ್ಜನ್ಯ ನಡೆಸಿ ಗರ್ಭಿಣಿಯನ್ನಾಗಿಸಿದನೆನ್ನಲಾಗಿದೆ.ಯುವತಿ ಗರ್ಭಿಣಿ ಯಾದ ಬಳಿಕ ಶಂಕೆ ಬಾರದಿರಲು ಸುಳ್ಳು ಹೇಳಿ ಆಸ್ಪತ್ರೆ ಬದಲಾಯಿಸುತ್ತಾ ಚಿಕಿತ್ಸೆ…

Read More

ಕಾಸರಗೋಡು ಜಿಲ್ಲೆಗೆ ಬುಧವಾರ ರೆಡ್ ಅಲರ್ಟ್ – ಎಲ್ಲಾ ಶೈಕ್ಷಣಿಕ ಸಂಸ್ಥೆಗೂ ರಜೆ ಘೋಷಣೆ

ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಾಳೆ ಬಬುಧವಾರ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯಲ್ಲಿ ಶಾಲಾ ಕಾಲೇಜು ಸಹಿತ ಶೈಕ್ಷಣಿಕ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಕೇಂದ್ರ ಹವಾಮಾನ ಇಲಾಖೆ ಬಬುಧವಾರ ಕಾಸರಗೋಡು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯಾಗಲೀ ರಜೆ ಪ್ರಕಟಿಸಿದರು. ಸಾರ್ವಜನಿಕ ಸುರಕ್ಷೆಯ ಮುನ್ನೆಚ್ಚರಿಕೆ ವಹಿಸಿ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಪ್ರಕಟಿಸಲಾಗಿದೆ. ಇದರಂತೆ ಕೇಂದ್ರೀಯ ವಿದ್ಯಾಲಯ, ಮದ್ರಸ, ಟ್ಯೂಷನ್ ಸೆಂಟರ್ ಸಹಿತ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಇದು ಅನ್ವಯವಾಗಿದೆ. ಈ ಹಿಂದೆ ಘೋಷಿಸಲ್ಪಟ್ಟ…

Read More

ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸಲು ಸರ್ಕಾರಕ್ಕೆ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗ್ರಹ

ರಾಜ್ಯ ಸಾರಿಗೆ ಇಲಾಖೆಯ ನೌಕರರು ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ 38 ತಿಂಗಳ ಹಿಂಬಾಕಿ ಮತ್ತು ವೇತನ ಪರಿಷ್ಕರಣೆಗಾಗಿ ನ್ಯಾಯಯುತವಾದ ಬೇಡಿಕೆಯನ್ನು ಮುಂದಿಟ್ಟರೂ ಸರ್ಕಾರಕ್ಕೆ ಈಡೇರಿಸುವ ಕಾಳಜಿಯಾಗಲಿ, ಇಚ್ಛಾಶಕ್ತಿ ಯಾಗಲಿ ಇಲ್ಲ, ರಾಜ್ಯದಲ್ಲಿ ಸರ್ಕಾರ ನಿರ್ಜೀವವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷರಾದ ಸತೀಶ್ ಕುಂಪಲ ಸರ್ಕಾರವನ್ನು ಟೀಕಿಸಿದರು. ಶಕ್ತಿ ಗ್ಯಾರಂಟಿ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಾರೆ ಆದರೆ ಸಾರಿಗೆ ನೌಕರರ ಸಮಸ್ಯೆ ಗಳ ಬಗ್ಗೆ ತಲೆಕೆಡಿಸಿ ಕೊಳ್ಳುತ್ತಿಲ್ಲ ಇದೊಂದು ಹೃದಯ ಶೂನ್ಯ…

Read More
error: Content is protected !!