ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ, ಅಭಿವೃದ್ಧಿಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡೋಣ, ಉಳಿದ ಸಂದರ್ಭದಲ್ಲಿ ಅಭಿವೃದ್ಧಿ ಕಡೆಗಷ್ಟೆ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಬೈಂದೂರು ಉತ್ಸವದಲ್ಲಿ ಮಾತನಾಡಿದ ಸಚಿವರು, ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ, ಅಭಿವೃದ್ಧಿಗಷ್ಟೇ ಆದ್ಯತೆ ನೀಡುತ್ತೇನೆ ಎಂದರು. ಮಹಾತ್ಮ ಗಾಂಧಿಯವರ ಅವರ ಪರಿಕಲ್ಪನೆಯಂತೆ ಶಾಸಕ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಸ್ವರಾಜ್,…