ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯುವತಿಯರು ಠಾಣೆಗೆ ಹೋಗಲು ಹೆದರುತ್ತಿದ್ದಾರೆ : ಸತೀಶ್‌ ಕುಂಪಲ

ಉಳ್ಳಾಲ: ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪುತ್ತೂರಿನ ಯುವತಿ ಪ್ರಕರಣದಲ್ಲಿ ಮನೆಯವರ ಮೇಲೆಯೇ ಪ್ರಕರಣ ದಾಖಲಿಸಲಾಗಿದೆ. ಯುವತಿಯರು ಪೊಲೀಸ್‌ ಠಾಣೆಗೆ ಹೋಗುವ ಧೈರ್ಯವನ್ನೇ ಕಳೆದುಕೊಂಡಿದ್ದಾರೆ. ಪ್ರಿಯಾಂಕ್‌ ಖರ್ಗೆ ರಾಜ್ಯದ ಗೃಹಖಾತೆಯನ್ನು ಸರಿಯಾಗಿ ನಿಭಾಯಿಸುವ ಅವಶ್ಯಕತೆಯಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೇಳಿದ್ದಾರೆ.ಬಂಟ್ವಾಳದ ಬಿ.ಸಿ.ರೋಡಿನಲ್ಲಿ ಹತ್ಯೆಯಾದ ಲಾವಣ್ಯಳ ಶೌಮಹಜರು ನಡೆಯುತ್ತಿದ್ದ ದೇರಳಕಟ್ಟೆಯ ಕೆ.ಎಸ್‌ ಹೆಗ್ಡೆ ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮದ ಜತೆಗೆ ಮಾತನಾಡಿದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಉಂಟಾ ಅನ್ನುವ ಅನುಮಾನ ವ್ಯಕ್ತವಾಗುತ್ತಿದೆ. ತಿಂಗಳ…

Read More

ಇರಾನ್ ಮೇಲೆ ಅಮೆರಿಕ ದಾಳಿ ತೀವ್ರ: ಸೇತುವೆ, ರೈಲು ನಿಲ್ದಾಣಗಳ ಧ್ವಂಸ

ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿರುವ ವೈಮಾನಿಕ ದಾಳಿಗಳು ಮತ್ತಷ್ಟು ತೀವ್ರಗೊಂಡಿದ್ದು, ಸತತ ಆರು ದಿನಗಳಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಗುರುವಾರ ರಾತ್ರಿ ಸೇತುವೆಗಳು, ರೈಲು ನಿಲ್ದಾಣಗಳು, ವಿದ್ಯುತ್ ಘಟಕಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. ಆಗ್ನೇಯ ಇರಾನ್‌ನ ಖಮೀರ್ ಕೌಂಟಿಯಲ್ಲಿ ಬಂದರ್ ಅಬ್ಬಾಸ್–ಶಿರಾಜ್ ಸಂಪರ್ಕ ಕಲ್ಪಿಸುವ ಗೆಬೈಲ್ ಹಾಗೂ ಕಪೂರೆಸ್ತಾನ್ ಸೇತುವೆಗಳು ದಾಳಿಯಲ್ಲಿ ಧ್ವಂಸಗೊಂಡಿವೆ ಎನ್ನಲಾಗಿದೆ. ಇದೇ ವೇಳೆ ರಸ್ತೆ, ರೈಲು ಮಾರ್ಗಗಳು ಹಾಗೂ ವಿದ್ಯುತ್ ಉತ್ಪಾದನಾ ಘಟಕಗಳ ಮೇಲೂ ಅಮೆರಿಕ…

Read More

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ನಡೆಯಿತು. ಲಯನ್ಸ್ ಜಿಲ್ಲೆ 317 ಡಿ ಜಿಇಟಿ (GET) ಸಂಯೋಜಕರಾದ ಲಯನ್ ಜಗದೀಶ್ ಎಡಪಡಿತಾಯ ಅವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ, ನೂತನ ಅಧ್ಯಕ್ಷೆ ಶ್ವೇತಾ ರವಿಕುಮಾರ್ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ನೂತನ ತಂಡಕ್ಕೆ ಶುಭ ಹಾರೈಸಿ, ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಚಾರ್ಟರ್…

Read More

ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿಯ ಮಾಸಿಕ ಸಭೆ ರಾಜ್ಯ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್ ಭಾಗಿ – ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ರಹಿಮಾನ್ ಬೋಳಿಯಾರ್‌ಗೆ ಸನ್ಮಾನ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ನಗರ ಜಿಲ್ಲಾ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಎಸ್.ಡಿ.ಟಿ.ಯು ಕರ್ನಾಟಕ ರಾಜ್ಯ ಉಪಾಧ್ಯಕ್ಷರು ಹಾಗೂ ನೂತನ ಜಿಲ್ಲಾ ಉಸ್ತುವಾರಿಯಾದ ವಿಕ್ಟರ್ ಮಾರ್ಟಿಸ್ ಅವರು ವೀಕ್ಷಕರಾಗಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ವತಿಯಿಂದ ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಮಾತನಾಡಿದ ವಿಕ್ಟರ್ ಮಾರ್ಟಿಸ್, ಸಂಘಟನೆಯ ಬಲವರ್ಧನೆ, ಅಸಂಘಟಿತ ಕಾರ್ಮಿಕರ ಹಕ್ಕುಗಳ ರಕ್ಷಣೆ,…

Read More

ವಿಜಯನಗರದ ಕೆ. ಎಸ್. ವೀರಭದ್ರಪ್ಪರಿಗೆ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’

ಕಾಸರಗೋಡು,: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಸಮಾಜಸೇವಕರು ಹಾಗೂ ಸಾಹಿತ್ಯ ಪರಿಪೋಷಕರಾದ ಶ್ರೀ ಕೆ. ಎಸ್. ವೀರಭದ್ರಪ್ಪ ಅವರಿಗೆ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಪ್ರದಾನ ಮಾಡಲಾಗುತ್ತಿದೆ. ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪ ಅಂಗವಾಗಿ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ…

Read More

ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳೊಂದಿಗೆ ಮಾಜಿ ಐಎಎಸ್ ಅಧಿಕಾರಿ ಸೋಮಶೇಖರ ಸಮಾಲೋಚನೆ ಜುಲೈ 20ರಂದು

ಬೆಳಗಾವಿ: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ರೀ ಸೋಮಶೇಖರ ಅವರು ಜುಲೈ 20ರಂದು (ಸೋಮವಾರ) ಬೆಳಗಾವಿಗೆ ಆಗಮಿಸಲಿದ್ದು, ಕನ್ನಡ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಸಮಾಲೋಚನಾ ಸಭೆ ನಡೆಸಲಿದ್ದಾರೆ. ನಗರದ ರಾಮದೇವ ಹೋಟೆಲ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಸಮಾನ ಮನಸ್ಕ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳೊಂದಿಗೆ ಗಡಿ ಭಾಗದ ಅಭಿವೃದ್ಧಿ, ಕನ್ನಡದ ಹಿತಾಸಕ್ತಿ ಸೇರಿದಂತೆ ವಿವಿಧ ಸಮಕಾಲೀನ ವಿಷಯಗಳ ಕುರಿತು ಚರ್ಚೆ ನಡೆಯಲಿದೆ….

Read More

ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಎಡವಟ್ಟು: ಬಾಲಕನ ನಿಗೂಢ ಸಾವು: ರಾಜ್ಯ ಮಟ್ಟದ ವಿಶೇಷ ತಂಡದಿಂದ ತನಿಖೆಗೆ ಚಾಲನೆ

​ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ನಂತರ ಬೇಡಡ್ಕ ತಲೆಕುನ್ನಿನ 9 ವರ್ಷದ ಬಾಲಕ ಮುಹಮ್ಮದ್ ಇಯಾಸ್ ಸಾವನ್ನಪ್ಪಿದ ಪ್ರಕರಣ ವೈದ್ಯಕೀಯ ಲೋಪದ ಅನುಮಾನಗಳನ್ನು ಹುಟ್ಟುಹಾಕಿದ್ದು, ಇದೀಗ ರಾಜ್ಯ ಆರೋಗ್ಯ ಇಲಾಖೆಯ ವಿಶೇಷ ತಂಡ ತನಿಖೆಗೆ ಚಾಲನೆ ನೀಡಿದೆ. ​ ಪೆರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಿಖರ ಕಾರಣ ತಿಳಿಯಲು ಆಂತರಿಕ ಅವಯವಗಳನ್ನು ಕಲ್ಲಿಕೋಟೆ ವೈದ್ಯಕೀಯ ಕಾಲೇಜಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಪೊಲೀಸರು ಸದ್ಯ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು, ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಹಾಗೂ…

Read More

ರುಂಡವಿಲ್ಲದ ಶ*ವದ ಸುತ್ತ ಅನುಮಾನದ ಹುತ್ತ: ಪೊಲೀಸರ ತನಿಖೆಗೆ ಸವಾಲಾದ ಮರಣೋತ್ತರ ವರದಿ

​ಕಾಸರಗೋಡು: ನೆಲ್ಲಿಕುನ್ನು ಕಸಬಾ ಕಡಲತೀರದಲ್ಲಿ ಪತ್ತೆಯಾಗಿದ್ದ ರುಂಡವಿಲ್ಲದ ಅನಾಮಧೇಯ ಶವದ ಸುತ್ತಲಿನ ನಿಗೂಢತೆ ಇದೀಗ ಮತ್ತಷ್ಟು ಬಿಗಿಯಾಗಿದೆ. ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ನಡೆಸಲಾದ ಮರಣೋತ್ತರ ಪರೀಕ್ಷೆಯಲ್ಲಿ, ಈ ಮೃತದೇಹವನ್ನು ಈ ಹಿಂದೆಯೇ ಬೇರೊಂದು ಕಡೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂಬ ಅಚ್ಚರಿಯ ಸತ್ಯವನ್ನು ಫೋರೆನ್ಸಿಕ್ ವೈದ್ಯರು ದೃಢಪಡಿಸಿದ್ದಾರೆ. ​ಕೇರಳದ ಹೊರಗಡೆ, ಅಂದರೆ ಕರ್ನಾಟಕ ಅಥವಾ ಗೋವಾದ ಆಸ್ಪತ್ರೆಯೊಂದರಲ್ಲಿ ಮೊದಲ ಮರಣೋತ್ತರ ಪರೀಕ್ಷೆ ನಡೆದಿರಬಹುದೆಂದು ಶಂಕಿಸಲಾಗಿದೆ. ಅನಾಮಧೇಯ ಶವ ಶರೀರ ನಿಯಮಾನುಸಾರ ಮಣ್ಣುಮಾಡಿದ ಬಳಿಕ, ಅದು ಸಮುದ್ರದ ಪಾಲಾಗಿ…

Read More

ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ರ‍್ಯಾಗಿಂಗ್ ಪಿಡುಗು: 13 ಹಿರಿಯ ವಿದ್ಯಾರ್ಥಿಗಳ ಅಮಾನತು

​ಕಾಸರಗೋಡು: ಇಲ್ಲಿನ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ಮೇಲೆ ರ‍್ಯಾಗಿಂಗ್ ನಡೆಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ದ್ವಿತೀಯ ಹಾಗೂ ತೃತೀಯ ವರ್ಷದ 13 ಮಂದಿ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ವಿ.ಎಸ್. ಅನಿಲ್ ಕುಮಾರ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. ​ಜುಲೈ 13ರಂದು ಕ್ಯಾಂಪಸ್‌ನಲ್ಲಿ ಈ ದುಷ್ಕೃತ್ಯ ನಡೆದಿದ್ದು, ನವವಿದ್ಯಾರ್ಥಿಯನ್ನು ಅಡ್ಡಗಟ್ಟಿ ದೈಹಿಕ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಲಾಗಿದೆ. ಸಂತ್ರಸ್ತನ ದೂರಿನ ಅನ್ವಯ ಸಭೆ ಸೇರಿದ ‘ರ‍್ಯಾಗಿಂಗ್ ನಿಗ್ರಹ ಕೋಶ’ವು ಕಠಿಣ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದೆ. ಈ ಅಮಾನುಷ ಕೃತ್ಯದಲ್ಲಿ ಈ…

Read More

ಕೆರೆಯಲ್ಲಿ ಗೃಹಿಣಿಯ ಶವ ಪತ್ತೆ: ಸಾವಿನಲ್ಲಿ ನಿಗೂಢತೆ : ತೀವ್ರಗೊಂಡ ತನಿಖೆ

​ ಕುಂಬಳೆ : ಸೀತಾಂಗೋಳಿ ಎಡನಾಡು ನಿವಾಸಿ ಸುನಿತ (48) ಎಂಬವರು ಮುಜುಂಗಾವು ಶ್ರೀ ಪಾರ್ಥಸಾರಥಿ ಕ್ಷೇತ್ರದ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ​ಮೃತರು ರಾಮಕೃಷ್ಣ ಎಂಬವರ ಪತ್ನಿಯಾಗಿದ್ದು, ಎರಡು ದಿವಸಕ್ಕೆ ಮೊದಲು ರಾತ್ರಿ ಮನೆಯಲ್ಲೇ ಇದ್ದವರು ಮರುದಿನ ಬೆಳಿಗ್ಗೆ ನಾಪತ್ತೆಯಾಗಿದ್ದರು. ಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ಶೋಧ ನಡೆಸುತ್ತಿದ್ದಾಗ, ಇದೀಗ ಸಂಜೆ ಕೆರೆಯಲ್ಲಿ ಶವ ಪತ್ತೆಯಾಗಿದೆ. ಕುಂಬಳೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ…

Read More
error: Content is protected !!