ಮುಲ್ಕಿ: ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಪವಾಡ ಸದೃಶ ಪಾರು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಹೆದ್ದಾರಿ ಜಂಕ್ಷನ್ ಬಳಿ ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಪಾರಾಗಿದ್ದಾರೆ. ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಬರುತ್ತಿದ್ದ ಕಾರು ಮೂಲಕ ರಾಷ್ಟ್ರೀಯ ಹೆದ್ದಾರಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗ ಹಾನಿಯಾಗಿದ್ದು ಕಾರಿನ ಚಾಲಕ ಮುಲ್ಕಿ ಕೊಳಚಿ ಕಂಬಳ ನಿವಾಸಿ ಅಲ್ತಾಫ್ ಮತ್ತೋರ್ವ ಮಹಿಳೆ…

Read More

ಧರ್ಮಸ್ಥಳ ಕೊಲೆಗಳ ತನಿಖೆಗೆ ನೇಮಕವಾದ SIT ಮುಂದಾಳತ್ವ ವಹಿಸಿರುವ ಐಪಿಎಸ್ ಅಧಿಕಾರಿ ಮೊಹಾಂತಿಯನ್ನು ಕೈಬಿಡುವಂತೆ ಮಾಜಿ ಡಿ ವೈ ಎಸ್ ಸ್ಪಿ ಅನುಪಮ ಶೆಣೈ ಆಗ್ರಹ

ಮಂಗಳೂರು : ಧರ್ಮಸ್ಥಳ ಕೊಲೆಗಳ ತನಿಖೆಗೆ ನೇಮಕವಾದ SIT ತಂಡದ ಮುಂದಾಳತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರನಬ್ ಮೊಹಾಂತಿಯವರ ಬದಲು ಇದರ ಮುಂದಾಳತ್ವವನ್ನು ಡಾ.ಕೆ. ರಾಮಚಂದ್ರ ರಾವ್ ಅಥವಾ ದಯಾನಂದರಂತಹ ಐಪಿಎಸ್ ಅಧಿಕಾರಿಗಳಿಗೆ ನೀಡಬೇಕೆಂದು ಆಗ್ರಹಿಸಿ ಮಾಜಿ ಡಿ ವೈ ಎಸ್ ಸ್ಪಿ ಅನುಪಮ ಶೆಣೈ ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸರಕಾರಕ್ಕೆ ಆಗ್ರಹಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು , ”ಪ್ರನಬ್ ಮೊಹಾಂತಿಯವರನ್ನು SITಯ ಮುಖ್ಯಸ್ಥರಾಗಿ ನೇಮಿಸುವ ಕುರಿತು ಮಾನ್ಯ ಘನ ಉಚ್ಚ ನ್ಯಾಯಾಲಯದ ರಿಟ್…

Read More

ಕಾವ್ಯದ ಮಾತು ಧ್ವನಿಯಾಗಬೇಕು- ಡಾ ಪುರುಷೋತ್ತಮ ಬಿಳಿಮಲೆ

ಭಾವನೆಗಳಿಗೆ ಅನುಗುಣವಾಗಿ ಭಾಷೆಯನ್ನು ಹೊಸತುಗೊಳಿಸಿ. ಕಾಲದ ಓಗಕ್ಕೆ ಅನುಗುಣವಾಗಿ ಬರವಣಿಗೆಗಳು ಬದಲಾಗಬೇಕು. ಕವನಗಳು ಓದುವಾಗ ಪ್ರಶ್ನೆಗಳು ಮೂಡಬೇಕು.ಕಾವ್ಯದ ಮಾತು ಧ್ವನಿ ಯಾಗಬೇಕು. ಪ್ರತಿಯೊಬ್ಬರೂ ತಮ್ಮದೇ ಆದ ಭಾಷೆಯನ್ನು ಅನುಸರಿಸಿದಾಗ ಆಶಯಗಳು ಪ್ರತಿಧ್ವನಿಸಲು ಸಾಧ್ಯವಾಗುತ್ತದೆ ಎಂದು ಬೆಂಗಳೂರು ರಂಗಮಂಡಲ ಹಾಗೂ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈಗಳ ಸ್ಮಾರಕ ಗಿಳಿವಿಂಡು ಸಮಿತಿ ಆಶ್ರಯದಲ್ಲಿ ನಡೆದ ಕಾವ್ಯ ಸಂಸ್ಕೃತಿ ಯಾನ ಜನರೆಡೆಗೆ ಕಾವ್ಯ ಹನ್ನೊಂದನೆಯ ಕವಿಗೋಷ್ಠಿಯ ಉದ್ಘಾಟನಾ ಸಮಾರಂಭದ ಸರ್ವಾಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ಸರಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ…

Read More

ಧರ್ಮಸ್ಥಳ ಹತ್ಯಾ ಪ್ರಕರಣ. ಸಮಗ್ರ ತನಿಖೆಗೆ ವಿಮನ್ ಇಂಡ್ಯಾ ಮೂಮೆಂಟ್ ಆಗ್ರಹ

ಮಂಜೇಶ್ವರ: ಕರ್ನಾಟಕದ ಧರ್ಮಸ್ಥಳದಲ್ಲಿ ಮಲಯಾಳಿಗಳು ಸೇರಿದಂತೆ ನೂರಾರು ಮಹಿಳೆಯರ ಹತ್ಯೆಯಾಗಿರುವ ಬಗ್ಗೆ ಶುಚೀಕರಣ ಕಾರ್ಮಿಕರೊಬ್ಬರು ಬಹಿರಂಗಪಡಿಸಿದ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ವಿಮನ್ ಇಂಡ್ಯಾ ಮೂಮೆಂಟ್ ರಾಜ್ಯ ಖಜಾಂಚಿ ಮಂಜುಷಾ ಮಾವಿಲಾಡಂ ಆಗ್ರಹಿಸಿದರು. ಧರ್ಮಸ್ಥಳದ ಶುಚೀಕರಣ ಕಾರ್ಮಿಕರೊಬ್ಬರು ಹೇಳುವಂತೆ ಬಾಲಕಿಯರು ಹಾಗೂ ಯುವತಿಯರು ಸೇರಿದಂತೆ 450 ಕ್ಕೂ ಹೆಚ್ಚು ಮಂದಿಯನ್ನು ಕೆಲವು ಜನರ ಸೂಚನೆಯ ಮೇರೆಗೆ ಸಮಾಧಿ ಮಾಡಲಾಗಿದೆ ಎಂದು ಬಹಿರಂಗಪಡಿಸಿರುವುದು ಆಘಾತಕಾರಿ ಸಂಗತಿ . ಕಳೆದ ಕೆಲವು ವರ್ಷಗಳಲ್ಲಿ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸೀತಾಂಗೋಳಿ ಕಾರ್ಯ ಕ್ಷೇತ್ರದ ಒಕ್ಕೂಟ ಸಭೆಯು ಭಾನುವಾರ ಸೀತಾಂಗೋಳಿ ಸಮೀಪದ ಪೆರಡಾನಮೂಲೆ ಕಮ್ಯುನಿಟಿ ಹಾಲ್’ನಲ್ಲಿ ನಡೆಯಿತು . ಒಕ್ಕೂಟದ ಅಧಕ್ಷರಾದ ಶ್ರೀಮತಿ ಸುಕೇಶಿನಿ ದೀಪ ಬೆಳಗಿಸಿ ಉದ್ಘಾಟಿಸಿದರು . ಈ ಒಕ್ಕೂಟ ಸಭೆಯಲ್ಲಿ ವಲಯದ ಮೇಲ್ವಿಚಾರಕರದ ಶ್ರೀ ಗೋಪಾಲಕೃಷ್ಣ , ಕೃಷಿ ಮೇಲ್ವಿಚಾರಕರದ ಶ್ರೀ ಜಯರಾಮ , ಸೀತಾಂಗೋಳಿ ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಸರಿತಾ ಸೀತಾಂಗೋಳಿ , ಹಾಗೂ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಪೆರಡಾನಮೂಲೆ ,…

Read More

ಉಪ್ಪಳ : ಮೊಸರುಕುಡಿಕೆ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಳ ಪಚ್ಲಂಪಾರೆಯ ಮೊಸರು ಕುಡಿಕೆ ಉತ್ಸವದ ಆಶ್ರಯದಲ್ಲಿ ನಡೆಯಲಿರುವ 40 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಉಮಾ ಭಗವತಿ ಭಜನಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು. ಅಗೋಸ್ಟ್ 17 ರ ಆದಿತ್ಯವಾರ ಪಚ್ಲಂಪರೆ ಉಮಾ ಭಗವತಿ ಭಜನಾ ಮಂದಿರ ವಠಾರದಲ್ಲಿ ಮೊಸರುಕುಡಿಕೆ ಉತ್ಸವ ನಡೆಯಲಿದೆ. ಮಂದಿರದ ಅರ್ಚಕರಾದ ರಾಮಚಂದ್ರ ಐತಾಳ್ ನೇತೃತ್ವದಲ್ಲಿ ನಡೆದ ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಮಂದಿರದ ಪದಾಧಿಕಾರಿಗಳು, ಸ್ಥಳೀಯರು ಹಾಜರಿದ್ದರು.

Read More

ಅವಕಾಶಕ್ಕಾಗಿ ಹೊಂಚು ಹಾಕುತ್ತಿರುವ ಮತೀಯ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಕಾಂಗ್ರೆಸ್ ಕರೆ

ವರ್ಕಾಡಿ- ಜನತೆಗೆ ಯಾವುದೇ ಉಪಯೋಗಕಾರಿ ಕೆಲಸಗಳನ್ನು ಮಾಡದೆ ಏಕೋದರ ಸಹೋದರರಂತೆ ಬಾಳುತ್ತಿರುವ ಜನರನ್ನು ಧರ್ಮ, ಆಹಾರ, ವಸ್ತ್ರ, ಆಚರಣೆಗಳ ಹೆಸರಲ್ಲಿ ಪರಸ್ಪರ ಕಚ್ಚಾಡಿಸಿ ಅಧಿಕಾರಕ್ಕೇರಲು ಮತೀಯ ಶಕ್ತಿಗಳು ಸಂಚು ರೂಪಿಸುತ್ತಿದ್ದು, ನಾಡಿನ ಅಭಿವೃದ್ಧಿ ಮತ್ತು ನೆಮ್ಮದಿಯ ಜೀವನ ಬಯಸುವ ಸಜ್ಜನ ನಾಗರಿಕರು ಈ ಶಕ್ತಿಗಳನ್ನು ದೂರವಿಡಲು ಸಿದ್ಧರಾಗಬೇಕೆಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಕರೆ ನೀಡಿದ್ದಾರೆ. ಅವರು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿ ಸಭೆ ಉದ್ಘಾಟಿಸಿ ಮಾತನಾಡುತ್ತಿದ್ದರು.ಮಂಡಲ ಕಾಂಗ್ರೆಸ್ ಅಧ್ಯಕ್ಷ ಶ್ರೀ ಪುರುಷೋತ್ತಮ…

Read More

ಉಡುಪಿ: ಭಾರೀ ಗಾಳಿ ಮಳೆಗೆ ಮನೆ ಕುಸಿತ- ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕೆಂಜೂರು ಮತ್ತು ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಹಾಗೂ ಮರ ಬಿದ್ದು ಮನೆ ಕುಸಿತವಾಗಿರುವ ಸ್ಥಳಗಳಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆಂಜೂರು ಗ್ರಾಮದ ಗೋಪಾಲ ನಾಯ್ಕ, ದಾಮೋದರ ನಾಯ್ಕ್ ಹಾಗೂ ವಾರಂಬಳ್ಳಿ ಗ್ರಾಮದ ಕಿಣಿಯರಬೆಟ್ಟುವಿನಲ್ಲಿ ಮರಬಿದ್ದು ಹಾನಿಗೀಡಾದ ಗಿರಿಜಾ ಮತ್ತು ಯಶೋಧ ಅವರ ಮನೆಗೆ ಭೇಟಿ ನೀಡಿ ಘಟನೆಯಿಂದ ಗಾಯಗೊಂಡವರ ಆರೋಗ್ಯ ವಿಚಾರಿಸಿ ವೈಯುಕ್ತಿಕ ನೆಲೆಯಲ್ಲಿ ಪರಿಹಾರ…

Read More

ಜ್ಞಾನಿಗಳ ಗೌರವ ದೇವರಿಗೆ ಸಲ್ಲುತ್ತದೆ- ಕೃಷ್ಣಾಪುರಶ್ರೀ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ

ಉಡುಪಿ: ಜ್ಞಾನಿಗಳಿಗೆ ಪರಮಾತ್ಮ, ಪರಮಾತ್ಮನಿಗೆ ಜ್ಞಾನಿಗಳು ಪ್ರಿಯರಾಗಿದ್ದು ಜ್ಞಾನಿಗಳ ಗೌರವ ದೇವರಿಗೂ ಸಲ್ಲುತ್ತದೆ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಹೇಳಿದರು. ಅವರು ಬೆಂಗಳೂರಿನ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ವತಿಯಿಂದ ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾ ಮಂದಿರದಲ್ಲಿ ಆಯೋಜಿಸಿದ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ನಿಯಮದಲ್ಲಿ ಬದುಕಿದ ಧರ್ಮಿಷ್ಠರಿಗೆ ಆಯ್ಕೆಗಳು ಕಡಿಮೆ, ಆದರೆ ಅಧರ್ಮಿಷ್ಠರಿಗೆ ಆಯ್ಕೆಗಳು ಬಹಳವಿರುತ್ತವೆ. ಆಚಾರ್ಯ ಎನಿಸಿಕೊಂಡವರು ಆಚಾರವಂತರಾಗಿರಬೇಕು. ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ…

Read More

ಮಣಿಪಾಲ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ; ಆರೋಪಿಯ ಬಂಧನ

ಉಡುಪಿ: ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಬಂಧಿತ ಆರೋಪಿ. ಜು.26ರ ಶನಿವಾರ ಬೆಳಿಗ್ಗೆ ಸುಮಾರು 2.30 ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ‌. ಬಂಧಿತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,…

Read More
error: Content is protected !!