ತೀವ್ರ ಕಾಲುನೋವಿನಿಂದ ನೊಂದ ಮಹಿಳೆ ಆತ್ಮಹತ್ಯೆಗೆ ಶರಣು : ಕಾಸರಗೋಡಿನಲ್ಲಿ ದಾರುಣ ಘಟನೆ

ಕಾಸರಗೋಡು: ಕೂಡ್ಲು ಮೀಪುಗುರಿ ಕಾಳ್ಯಂಗಾಡಿನಲ್ಲಿ ದೀರ್ಘಕಾಲದ ಕಾಲುನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನನೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಡ್ಲು ದೇವಿಕೃಪ ನಿವಾಸಿ ಸೂರ್ಯ ಅವರ ಪತ್ನಿ ಶ್ಯಾಮಲ (50) ಸಾವನ್ನಪ್ಪಿದ ದುರ್ದೈವಿ.​ಖಾಸಗಿ ಆಸ್ಪತ್ರೆಯ ನೌಕರರಾಗಿದ್ದ ಶ್ಯಾಮಲ ಯಾರೂ ಇಲ್ಲದ ಸಮಯವನ್ನು ನೋಡಿ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಬಹಳ ದಿನಗಳಿಂದ ಕಾಲುನೋವಿನ ಬಾಧೆಯಿಂದ ತೀವ್ರ ಮಾನಸಿಕ ವೇದನೆ ಅನುಭವಿಸುತ್ತಿದ್ದರೇ, ಅದೇ ಕಾರಣದಿಂದ ಈ ಅತಿಯಾದ ನಿರ್ಧಾರಕ್ಕೆ ಬಂದಿರಬಹುದು ಎಂದು ಸಂಬಂಧಿಕರು ತಿಳಿಸಿದ್ದಾರೆ. ಕಾಸರಗೋಡು ನಗರ ಠಾಣಾ ಪೊಲೀಸರು…

Read More

ಕಲಾವಿದರಿಗೆ ಅವಕಾಶದ ವೇದಿಕೆ ಶ್ರೇಷ್ಟ ಕಾರ್ಯ – ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ

ಕೆನರಾ ಶಾಲೆಯ ನಿತ್ಯ ಕಲಾ ವೇದಿಕೆ ವಿಶಿಷ್ಟ ಕಲ್ಪನೆ ಮತ್ತು ಮಾದರಿ ಪ್ರಯೋಗ. ಬಲವಾದ ಯೋಚನೆ, ತಂಡ ಶಕ್ತಿಯಿಂದ ಮಾತ್ರ ಇಂತಹ ದೂರದೃಷ್ಟಿಯ ಚಿಂತನೆ ಸಾಧ್ಯ ಎಂದು ಖ್ಯಾತ ಭರತನಾಟ್ಯ ಗುರುಗಳಾದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂತಹ ವೇದಿಕೆ ಮಂಗಳೂರಿನಲ್ಲಿ ಅತೀ ಅಗತ್ಯವಾಗಿ ಬೇಕಾಗಿತ್ತು. ಎಷ್ಟೋ ವಿದ್ಯಾರ್ಥಿಗಳಿಗೆ ತಮ್ಮ ಕಲೆಯನ್ನು ಅಭಿವ್ಯಕ್ತಗೊಳಿಸಲು ವೇದಿಕೆಯ ಅವಶ್ಯಕತೆ ಇರುತ್ತದೆ. ದೊಡ್ಡ ಕಲಾವಿದರಾಗಿ ಬೆಳೆಯಲು ಇಂತಹ ಅವಕಾಶಗಳೇ ಪ್ರಮುಖ ಮೆಟ್ಟಿಲುಗಳಾಗಿರುತ್ತವೆ. ನಿತ್ಯ ಕಲಾ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುವ…

Read More

ಭೂಕುಸಿತ ಸಾಧ್ಯತೆ: ಜುಲೈ 17-18ರಂದು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ

ಮಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 17 ಮತ್ತು 18ರಂದು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಗುಡ್ಡ ಪ್ರದೇಶಗಳಲ್ಲಿ ವಾಸಿಸುವವರು, ರಸ್ತೆ ಸಂಚಾರ ನಡೆಸುವವರು ಹಾಗೂ ನದಿ, ಹೊಳೆಗಳ ಸಮೀಪ ಇರುವವರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.ಭೂಕುಸಿತದ ಲಕ್ಷಣಗಳು ಕಂಡುಬಂದರೆ ಅಥವಾ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಥಳೀಯ ಆಡಳಿತ ಅಥವಾ ವಿಪತ್ತು ನಿರ್ವಹಣಾ ಅಧಿಕಾರಿಗಳಿಗೆ ಮಾಹಿತಿ…

Read More

ಸರ್ಕಾರ ಜನರ ಸಮಸ್ಯೆಗಳತ್ತ ಗಮನ ಹರಿಸಲಿ: ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ : ರಾಜ್ಯ ಹಾಗೂ ರಾಷ್ಟ್ರದ ವಿವಿಧ ಸಮಕಾಲೀನ ವಿಚಾರಗಳ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು. ಸೋನಂ ವಾಂಗ್ಚು ಉಪವಾಸ ವಿಚಾರ ಕುರಿತು ಮಾತನಾಡಿದ ಅವರು, ಕೆಲ ಅತಿರೇಕ ಬುದ್ಧಿಜೀವಿಗಳು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವುದನ್ನೇ ತಮ್ಮ ಕಾರ್ಯವಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಯಾರೇ ಉಪವಾಸ ನಡೆಸಿದರೂ ಅವರ ಸಮಸ್ಯೆಯನ್ನು ಸ್ಪಷ್ಟವಾಗಿ ತಿಳಿಸಬೇಕು. ಪ್ರಜಾಪ್ರಭುತ್ವದಲ್ಲಿ ಸಾರ್ವಜನಿಕ ಹಿತಾಸಕ್ತಿ…

Read More

ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಜಾನಪದ ರತ್ನ’ ಪ್ರಶಸ್ತಿಗೆ ಡಾ. ನಾಗರಾಜ್ ಎಂ. ಹಟ್ಟಿ ಆಯ್ಕೆ

ಬಾದಾಮಿ:ಬಾದಾಮಿಯ ಖ್ಯಾತ ಜನಪದ ವಿದ್ವಾಂಸರು ಹಾಗೂ ಕೆರೂರಿನ ಶ್ರೀ ಕಾಳಿದಾಸ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಗರಾಜ್ ಎಂ. ಹಟ್ಟಿ ಅವರು ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ “ಅಂತರ್ ರಾಜ್ಯ ಕನ್ನಡ ಪಯಸ್ವಿನಿ ಜಾನಪದ ರತ್ನ – ಅಚೀವ್‌ಮೆಂಟ್ ಅವಾರ್ಡ್–2026” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗಡಿನಾಡು ಕಾಸರಗೋಡಿನ ಕನ್ನಡ ಭವನದಲ್ಲಿ ಜುಲೈ 26ರಂದು ನಡೆಯಲಿರುವ ರಜತ ಸಂಭ್ರಮ ಸಮಾರೋಪ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ….

Read More

ಇರಾನ್ ಮೇಲೆ ಅಮೆರಿಕ ದಾಳಿ ತೀವ್ರ; ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಳ

ವಾಷಿಂಗ್ಟನ್ : ಇರಾನ್ ವಿರುದ್ಧ ಅಮೆರಿಕ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಸತತ ಆರನೇ ದಿನವೂ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್, ಕತಾರ್ ಸೇರಿದಂತೆ ಅಮೆರಿಕದ ಮಿತ್ರ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತಷ್ಟು ಹೆಚ್ಚಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದಂತೆ ಇರಾನ್‌ನ ಸೇತುವೆಗಳು ಹಾಗೂ ಪ್ರಮುಖ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಹಲವು ಸೇತುವೆಗಳು ಹಾನಿಗೊಳಗಾಗಿದ್ದು,…

Read More

ಸಾಮಾಜಿಕ ಜಾಲತಾಣ ಪೋಸ್ಟ್ ವಿವಾದ: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪೊಲೀಸ್ ದೂರು

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ಶಾಸಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿ, ರಾಜ್ಯ ಸರಕಾರ ಮತ್ತು ಗೃಹ ಸಚಿವರ ಬಗ್ಗೆ ತಪ್ಪು ಗ್ರಹಿಕೆ ಮೂಡಿಸುವ ರೀತಿಯಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ಆರಕ್ಷಕ ಠಾಣೆಗೆ ದೂರು ದಾಖಲಾಗಿದೆ.ಪುತ್ತೂರು ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರು ಸುಪ್ರೀತ್ ಕಣ್ಣಾರಾಯ ಅವರು ಈ ದೂರು ನೀಡಿದ್ದಾರೆ. ದೂರಿನಲ್ಲಿ ಬಂಟ್ವಾಳದಲ್ಲಿ ನಡೆದ ಹೇಯ ಕೃತ್ಯಕ್ಕೆ ಪುತ್ತೂರು ಶಾಸಕರ ಕುಮ್ಮಕ್ಕು…

Read More

ಉಡುಪಿಯಲ್ಲಿ ಧಾರಾಕಾರ ಮಳೆ; ಬಿಸಿಲಿನ ಬೇಗೆಯಿಂದ ಜನರಿಗೆ ನಿರಾಳತೆ

ಉಡುಪಿ, ಜು. 17: ಹಲವು ದಿನಗಳ ವಿರಾಮದ ಬಳಿಕ ಉಡುಪಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಆರಂಭವಾದ ಧಾರಾಕಾರ ಮಳೆ ಶುಕ್ರವಾರವೂ ಮುಂದುವರಿದಿದ್ದು, ಕಳೆದ ಹಲವು ದಿನಗಳಿಂದ ತೀವ್ರ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನರಿಗೆ ನಿರಾಳತೆ ನೀಡಿದೆ. ಕಳೆದ ಸುಮಾರು ಹತ್ತು ದಿನಗಳಿಂದ ಜಿಲ್ಲೆಯಾದ್ಯಂತ ಉಷ್ಣಾಂಶ ಹೆಚ್ಚಾಗಿ ಬೇಸಿಗೆ ವಾತಾವರಣ ನಿರ್ಮಾಣವಾಗಿತ್ತು. ತೀವ್ರ ಬಿಸಿಲಿನಿಂದ ಜನಜೀವನ ಅಸ್ತವ್ಯಸ್ತವಾಗಿದ್ದರೆ, ಕೃಷಿಕರು ಮಳೆಯ ನಿರೀಕ್ಷೆಯಲ್ಲಿದ್ದರು.ಗುರುವಾರ ರಾತ್ರಿ ಸುರಿದ ಉತ್ತಮ ಮಳೆಯಿಂದ ವಾತಾವರಣ ತಂಪಾಗಿದ್ದು, ಭತ್ತ ನಾಟಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಹೊಸ…

Read More

ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿ

ಮಂಗಳೂರು:ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿಯಾಗಿದೆ.ನಾಡ ದೋಣಿಯಲ್ಲಿ ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಅಲೆಗಳ ರಭಸಕ್ಕೆ ದೋಣಿ ಅಡಿ ಮೇಲಾಯಿತು. ಈ ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ 6 ಮಂದಿ ಮೀನುಗಾರರು ಇದ್ದರು.ಅವರನ್ನು ರಕ್ಷಿಸಲಾಗಿದೆ.ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಮಗುಚಿದಾಗ ಅದರಲ್ಲಿದ್ದ ಆಂಧ್ರಪ್ರದೇಶದ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದರು. ಅವರನ್ನುಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

Read More

ತಲಪಾಡಿಯಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಆರಂಭ

ತಲಪಾಡಿ : ಬಂಟರ ಸಂಘ ತಲಪಾಡಿ ಗ್ರಾಮ ಸಮಿತಿ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್‌ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 133ನೇ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ಇಂದು ಬಂಟರ ಸಂಘದ ಸಭಾಭವನದಲ್ಲಿ ಆರಂಭಗೊಂಡಿತು. ಶಿಬಿರವನ್ನು ಶ್ರೀ ಸುಧಾಕರ ಅಡ್ಯಂತಾಯ ತಲಪಾಡಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಮೇಶ್ ಆಳ್ವ ದೇವಿಪುರ ವಹಿಸಿದ್ದರು. ಮಾಹಿತಿ ನೀಡುವವರು ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ,ಮುಖ್ಯ ಅತಿಥಿಗಳಾಗಿ ಶ್ರೀ ವಿನಯ್ ಕುಮಾರ್ ಶೆಟ್ಟಿ ನಾರ್ಲಾ ಹಾಗೂ ಶ್ರೀ…

Read More
error: Content is protected !!