ಗ್ಯಾಸ್ ವಿತರಣೆಯಲ್ಲಿ ಅಕ್ರಮ ಆರೋಪ: ಡಿವೈಎಫ್‌ಐ ಆಕ್ರೋಶ

ಮಂಗಳೂರು: ಗ್ಯಾಸ್ ವಿತರಣೆಯಲ್ಲಿ ಉದ್ದೇಶಪೂರ್ವಕ ವಿಳಂಬ ಮಾಡಲಾಗುತ್ತಿದ್ದು, ಏಜನ್ಸಿಗಳು ಅಕ್ರಮ ದಂಧೆಯಲ್ಲಿ ತೊಡಗಿವೆ ಎಂದು ಆರೋಪಿಸಿ ಡಿವೈಎಫ್‌ಐ ವತಿಯಿಂದ ಮಂಗಳವಾರ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಬಿ.ಕೆ. ಇಮ್ತಿಯಾಝ್, ಅಮೇರಿಕಾ–ಇರಾನ್ ಯುದ್ಧ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಗ್ಯಾಸ್ ಮಾಫಿಯಾ ಸಕ್ರಿಯವಾಗಿದ್ದು, ಇದನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಗ್ಯಾಸ್ ಕೊರತೆ ಇದ್ದರೂ ಮಂಗಳೂರಿನ ಎಚ್‌ಪಿಸಿಎಲ್ ಸ್ಥಾವರಗಳಿಂದ ಪ್ರತಿದಿನ ಸುಮಾರು 300ಕ್ಕೂ ಹೆಚ್ಚು ಬುಲೆಟ್ ಟ್ಯಾಂಕರ್‌ಗಳಲ್ಲಿ ಗ್ಯಾಸ್ ಮಹಾರಾಷ್ಟ್ರಕ್ಕೆ ಸಾಗುತ್ತಿದೆ…

Read More

ಉಡುಪಿ: ಹಿರಿಯ ಜಾನಪದ ಕಲಾವಿದ, ಗಾಯಕ ಡಾ.ಗಣೇಶ್ ಗಂಗೊಳ್ಳಿ ನಿಧನ

ಉಡುಪಿ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ (64) ಅವರು ಮಂಗಳವಾರ ನಿಧನರಾದರು.ಕಳೆದ ರಾತ್ರಿ ಸಮಾರಂಭವೊಂದರಲ್ಲಿ ಗಾಯಕರಾಗಿ ಭಾಗವಹಿಸಿ ಮನೆಗೆ ಹಿಂದಿರುಗಿದ್ದ ಗಣೇಶ ಗಂಗೊಳ್ಳಿ ಅವರು ಏಕಾಏಕಿಯಾಗಿ ಕುಸಿದು ಬಿದ್ದಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಬ್ರೈನ್ ಹೆಮರೇಜ್ ತುತ್ತಾಗಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.ಮೃತರು ಪತ್ನಿ, ಇಬ್ನರು ಮಕ್ಕಳನ್ನು ‌ಅಗಲಿದ್ದಾರೆ.

Read More

ತೆಕ್ಕಟ್ಟೆ : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆ ಮೃತ್ಯು

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ. ​ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಉಂಙಾಕ ಅವರ ಪತ್ನಿ ಅಲಿಮಾಬಿ (62) ಮೃತಪಟ್ಟ ದುರ್ದೈವಿ.ಸೋಮವಾರ ರಾತ್ರಿ ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಅಲಿಮಾಬಿ ಪಾಲ್ಗೊಂಡಿದ್ದರು. ಸಮಾರಂಭ ಮುಗಿಸಿ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮನೆಗೆ ಮರಳಲು ಇತರ ಮೂವರು ಮಹಿಳೆಯರೊಂದಿಗೆ ರಸ್ತೆ…

Read More

ಕಾರು ವೀಲಿಂಗ್‌ಗೆ ಬ್ರೇಕ್: ಆರೋಪಿ ಸಹಿತ ವಾಹನ ವಶಕ್ಕೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ವೀಲಿಂಗ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ, ಆರೋಪಿ ಸಹಿತ ಕಾರನ್ನು ಪೋಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ವೀಲಿಂಗ್ ಮಾಡಿದ ಸರ್ಫುದ್ದೀನ್ ಎಂಬಾತನನ್ನು ಬಂಟ್ವಾಳ ಟ್ರಾಫಿಕ್ ಎಸ್‌ಐ ಆದರ್ಶ್ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದ್ದು, ಭಾರತೀಯ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವೈರಲ್ ಆಗಿದ್ದ ವಿಡಿಯೋದಲ್ಲಿ KL-09-R-6971 ಸಂಖ್ಯೆಯ ಕಪ್ಪು ಬಣ್ಣದ ಕಾರು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಪ್ರದೇಶದಲ್ಲಿ ವೀಲಿಂಗ್ ಮಾಡುವ…

Read More

ಮೂಲ್ಕಿ-ಹೆಜಮಾಡಿಯಲ್ಲಿ ಜಿಪಿಎಲ್ ಉತ್ಸವ ದಶಮಾನೋತ್ಸವ ಸಂಭ್ರಮ

ಮೂಲ್ಕಿ-ಹೆಜಮಾಡಿಯ ಶ್ಯಾನುಭೋಗ್ ಕುದ್ರುವಿನಲ್ಲಿ ಏಪ್ರಿಲ್ 10ರಿಂದ 12ರವರೆಗೆ ಜಿಪಿಎಲ್ ಉತ್ಸವನ್ನು ದಶಮಾನೋತ್ಸವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಪಿಎಲ್ ಉತ್ಸವ ಸಮಿತಿಯ ಸದಸ್ಯರಾದ ಕಿರಣ್ ಶೆಣೈ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , 2017ರಲ್ಲಿ ಆರಂಭವಾದ ಈ ಉತ್ಸವ ಗೌಡ ಸಾರಸ್ವತ ಬ್ರಾಹ್ಮಣ ಸಮಾಜವನ್ನು ಒಗ್ಗೂಡಿಸುವ ಉದ್ದೇಶ ಹೊಂದಿದ್ದು, ಈ ಬಾರಿ ಮೂರು ದಿನಗಳ ಕಾಲ ಕ್ರಿಕೆಟ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದರು . ಕರ್ನಾಟಕ, ಕೇರಳ, ಮಹಾರಾಷ್ಟ್ರ, ತೆಲಂಗಾಣ…

Read More

6000 ಗಾಯಕರು, 5000 ಹಾಡುಗಳು: ಕೊಂಕಣಿ ಸಂಗೀತದ ಮಹಾಸಂಭ್ರಮ

ನಲ್ವತ್ತರ ಸಂವತ್ಸರ ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವನ್ನು ನವೆಂಬರ್ 3 ರಿಂದ 15 ರವರೆಗೆ ನಡೆಸಲು ತೀರ್ಮಾನಿಸಿದೆ . ಇದರ ಪೂರ್ವಭಾವಿಯಾಗಿ ಕಾರ್ಯಕ್ರಮದ ಮುಹೂರ್ತ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು ನವೆಂಬರ್ 10 ರಂದು ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 4.00 ಗಂಟೆಗೆ ನೆರವೇರಲಿದೆ ಎಂದು ಮಾಂಡ್ ಸೊಭಾಣ್ ಇದರ ಅಧ್ಯಕ್ಷರಾದ ಲುವಿ ಜೆ ಪಿಂಟೊ ತಿಳಿಸಿದರು . ಅವರು ನಗರದ…

Read More

“ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ.ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ ಯೋಜನೆಯನ್ನು…

Read More

ಮಂಜೇಶ್ವರದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ: ಅಂತಿಮ ಹಂತಕ್ಕೆ ಚುನಾವಣೆ ಸಿದ್ಧತೆ

ಮಂಜೇಶ್ವರ:ವಿಧಾನಸಭಾ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ಮಂಗಳವಾರ ಸಂಜೆ 6 ಗಂಟೆಗೆ ಅಧಿಕೃತವಾಗಿ ತೆರೆ ಬಿದ್ದಿದೆ. ಇದರೊಂದಿಗೆ ಮಂಜೇಶ್ವರ ಕ್ಷೇತ್ರದಲ್ಲಿ ಕಳೆದ ಕೆಲವು ದಿನಗಳಿಂದ ಜೋರಾಗಿ ನಡೆದ ರೋಡ್ ಶೋಗಳು, ಸಾರ್ವಜನಿಕ ಸಭೆಗಳು ಹಾಗೂ ಮೈಕ್ ಅನೌನ್ಸ್‌ಮೆಂಟ್‌ಗಳು ಅಂತ್ಯಗೊಂಡಿವೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಿಸಿರುವ ಯುಡಿಎಫ್, ಎಲ್‌ಡಿಎಫ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಮಂಗಳವಾರ ಬೆಳಿಗ್ಗೆಯಿಂದಲೇ ಮತದಾರರನ್ನು ಸೆಳೆಯಲು ಅಂತಿಮ ಕಸರತ್ತು ನಡೆಸಿದರು.ಪ್ರಮುಖ ನಾಯಕರು ಮತ್ತು ಕಾರ್ಯಕರ್ತರ ದಂಡಿನೊಂದಿಗೆ ನಡೆದ ಈ ಅಂತಿಮ ಹಂತದ ಪ್ರಚಾರದಲ್ಲಿ ಅಭ್ಯರ್ಥಿಗಳು ತಮ್ಮ…

Read More

ಚುನಾವಣಾ ಸಿದ್ಧತೆ ಪರಿಶೀಲನೆ: ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಭೇಟಿ

ಮಂಜೇಶ್ವರ:ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಇವಿಎಂ ಮತ್ತು ವಿವಿಪ್ಯಾಟ್ ಭದ್ರತಾ ಕೊಠಡಿಗಳನ್ನು ಪರಿಶೀಲಿಸಿದ ಅವರು, ಭದ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ರಾಜ್ಯದ ಪ್ರಥಮ ಸಂಖ್ಯೆಯ ಬೂತ್ ಆಗಿರುವ ಕುಂಜತ್ತೂರು ಸರ್ಕಾರಿ ಶಾಲೆ ಹಾಗೂ ಸೂಕ್ಷ್ಮ ಮತಗಟ್ಟೆಗಳಾದ ಕಣ್ವತೀರ್ಥ, ಆಲಂಪಾಡಿ ಮತ್ತು ಚೆರ್ಕಳ ಶಾಲೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಅವಲೋಕಿಸಿದರು. ಭಾಷಾ ಅಲ್ಪಸಂಖ್ಯಾತ…

Read More

ಆದಿಶಕ್ತಿ ಶ್ರೀ ಮಹಮ್ಮಾಯಿ ದೇವಸ್ಥಾನ, ಪರಂಬಳ: ಮಹಮ್ಮಾಯಿ ದೇವಿಯ ವಾರ್ಷಿಕ ಮಹಾಪೂಜೆ ಹಾಗೂ ಗೋಂದೋಳು ಪೂಜೆ

ಮಂಜೇಶ್ವರ (ಕಯ್ಯಾರು):ಆದಿಶಕ್ತಿ ಶ್ರೀ ಮಹಮ್ಮಾಯಿ ದೇವಸ್ಥಾನ, ಪರಂಬಳ, ಕಯ್ಯಾರುವಿನಲ್ಲಿ ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಮಹಾಪೂಜೆ ಹಾಗೂ ಗೋಂದೋಳು ಪೂಜಾ ಮಹೋತ್ಸವವನ್ನು ಏಪ್ರಿಲ್ 9 ಮತ್ತು 10ರಂದು ಭಕ್ತಿಭಾವದಿಂದ ನಡೆಸಲು ನಿರ್ಧರಿಸಲಾಗಿದೆ. ಏಪ್ರಿಲ್ 9ರಂದು ಗಣಹೋಮ, ನಾಗಾರಾಧನೆ ಹಾಗೂ ಪರಿವಾರ ದೈವಗಳ ಆರಾಧನೆ ನಡೆಯಲಿದ್ದು, ಏಪ್ರಿಲ್ 10ರಂದು ಮಹಮ್ಮಾಯಿ ದೇವಿಯ ವಾರ್ಷಿಕ ಮಹಾಪೂಜೆ ಮತ್ತು ಗೋಂದೋಳು ಪೂಜಾ ಮಹೋತ್ಸವವು ವಿಧಿವತ್ತಾಗಿ ಜರುಗಲಿದೆ. ಈ ಮಹೋತ್ಸವವನ್ನು ಊರ ಮತ್ತು ಪರವೂರ ಸಮಾಜ ಬಾಂಧವರು ಹಾಗೂ ಭಕ್ತರ ಸಹಕಾರದೊಂದಿಗೆ ವರ್ಷಂಪ್ರತಿಯಂತೆ…

Read More
error: Content is protected !!