ಗ್ಯಾಸ್ ವಿತರಣೆಯಲ್ಲಿ ಅಕ್ರಮ ಆರೋಪ: ಡಿವೈಎಫ್ಐ ಆಕ್ರೋಶ
ಮಂಗಳೂರು: ಗ್ಯಾಸ್ ವಿತರಣೆಯಲ್ಲಿ ಉದ್ದೇಶಪೂರ್ವಕ ವಿಳಂಬ ಮಾಡಲಾಗುತ್ತಿದ್ದು, ಏಜನ್ಸಿಗಳು ಅಕ್ರಮ ದಂಧೆಯಲ್ಲಿ ತೊಡಗಿವೆ ಎಂದು ಆರೋಪಿಸಿ ಡಿವೈಎಫ್ಐ ವತಿಯಿಂದ ಮಂಗಳವಾರ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಬಿ.ಕೆ. ಇಮ್ತಿಯಾಝ್, ಅಮೇರಿಕಾ–ಇರಾನ್ ಯುದ್ಧ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಗ್ಯಾಸ್ ಮಾಫಿಯಾ ಸಕ್ರಿಯವಾಗಿದ್ದು, ಇದನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಗ್ಯಾಸ್ ಕೊರತೆ ಇದ್ದರೂ ಮಂಗಳೂರಿನ ಎಚ್ಪಿಸಿಎಲ್ ಸ್ಥಾವರಗಳಿಂದ ಪ್ರತಿದಿನ ಸುಮಾರು 300ಕ್ಕೂ ಹೆಚ್ಚು ಬುಲೆಟ್ ಟ್ಯಾಂಕರ್ಗಳಲ್ಲಿ ಗ್ಯಾಸ್ ಮಹಾರಾಷ್ಟ್ರಕ್ಕೆ ಸಾಗುತ್ತಿದೆ…