Headlines

ಭಾರೀ ಮಳೆಗೆ ಮಂಜೇಶ್ವರದಲ್ಲಿ ಗುಡ್ಡ ಕುಸಿತ; ಬಾವಿ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಳ

ಮಂಜೇಶ್ವರ: ನಿನ್ನೆ ಸುರಿದ ಭಾರೀ ಮಳೆಯ ಪರಿಣಾಮ ಮಂಜೇಶ್ವರದ ಪೊಯ್ಯೆ ಕಂಡ ಪ್ರದೇಶದಲ್ಲಿ ಗುಡ್ಡ ಕುಸಿದ ಘಟನೆ ನಡೆದಿದೆ.ಗುಡ್ಡದಿಂದ ಜರಿದು ಬಂದ ಅಪಾರ ಪ್ರಮಾಣದ ಮಣ್ಣು ಪುರುಷೋತ್ತಮ ಎಂಬವರ ಮನೆಯ ಬಾವಿಯೊಳಗೆ ನುಗ್ಗಿ, ಬಾವಿ ಸಂಪೂರ್ಣ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಬಾವಿಗೆ ಭಾರೀ ಹಾನಿಯಾಗಿದ್ದು, ಬಳಕೆಗೆ ಅಸಾಧ್ಯವಾಗಿದೆ. ಗುಡ್ಡ ಕುಸಿತ ಸಂಭವಿಸಿದ ಸ್ಥಳದ ಪಕ್ಕದಲ್ಲೇ ಮನೆ ಇದ್ದರೂ, ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

Read More

ಇರಾನ್‌ ವಿರುದ್ಧ ಅಮೆರಿಕದ ನೌಕಾ ನಿರ್ಬಂಧ; ಮೂರು ವಾಣಿಜ್ಯ ಹಡಗುಗಳ ತಡೆ

ವಾಷಿಂಗ್ಟನ್: ಇರಾನ್ ವಿರುದ್ಧ ಜಾರಿಯಲ್ಲಿರುವ ನೌಕಾ ನಿರ್ಬಂಧವನ್ನು ಉಲ್ಲಂಘಿಸಿ ಸಂಚರಿಸಲು ಯತ್ನಿಸಿದ್ದ ಮೂರು ವಾಣಿಜ್ಯ ಹಡಗುಗಳನ್ನು ಅಮೆರಿಕದ ಪಡೆಗಳು ತಡೆದಿವೆ ಎಂದು ಅಮೆರಿಕದ ಕೇಂದ್ರೀಯ ಕಮಾಂಡ್ (CENTCOM) ತಿಳಿಸಿದೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರಕಟಣೆ ನೀಡಿರುವ ಸೆಂಟ್‌ಕಾಮ್, ಎರಡು ಹಡಗುಗಳ ಮಾರ್ಗವನ್ನು ಬದಲಾಯಿಸಲಾಗಿದ್ದು, ಆದೇಶ ಪಾಲಿಸದ ಒಂದು ಹಡಗನ್ನು ನಿಷ್ಕ್ರಿಯಗೊಳಿಸಲಾಗಿದೆ. ಮತ್ತೊಂದು ಹಡಗನ್ನು ಪರಿಶೀಲನೆಗಾಗಿ ವಶಕ್ಕೆ ಪಡೆದು ನಿಯಮ ಪಾಲನೆ ಖಚಿತಪಡಿಸಲಾಗಿದೆ ಎಂದು ತಿಳಿಸಿದೆ. ಸೆಂಟ್‌ಕಾಮ್ ಮಾಹಿತಿ ಪ್ರಕಾರ, ಜುಲೈ 16ರಂದು ಒಮಾನ್ ಕೊಲ್ಲಿಯಲ್ಲಿ…

Read More

ಬಿ.ಸಿ.ರೋಡ್ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಬಂಧನ……?!!!

ಮಂಗಳೂರು, ಜು.17:* ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳನ್ನು ತಲ್ವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ಶುಕ್ರವಾರ ಬೆಳಿಗ್ಗೆ ಮಂಗಳೂರು ಸಮೀಪ ಬಂಧಿಸಿರುವುದಾಗಿ ತಿಳಿದುಬಂದಿದೆ. ಬಂಧಿತ ಆರೋಪಿ ಚೇತನ್ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿಯಾಗಿದ್ದು, ಮೃತ ಲಾವಣ್ಯ (ಕಕ್ಯಪದವು ನಿವಾಸಿ) ಅವರನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಲಾವಣ್ಯ ಆತನ ಪ್ರೀತಿಯನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುರುವಾರ ಸಂಜೆ ಬಿ.ಸಿ.ರೋಡ್ ಸರ್ಕಾರಿ ಬಸ್…

Read More

ಕಲಿಯುಗದ ಉದ್ಯೋಗದಾತ ಶ್ರೀ ಕೋತ್ವಾಲ್ ಪದ್ಮನಾಭ ಶೇರುಗಾರ್‌ಗೆ ‘ಕನ್ನಡ ಪಯಸ್ವಿನಿ – ಉದ್ಯೋಗ ರತ್ನ’ ಅಚೀವ್‌ಮೆಂಟ್ ಅವಾರ್ಡ್-2026

ಕಾಸರಗೋಡು, ಜು. 17: ಉದ್ಯೋಗ ಸೃಷ್ಟಿ, ಸಮಾಜಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಬೆಳ್ಳಾರಿಯ ಖ್ಯಾತ ಉದ್ಯಮಿ, ಸಮಾಜಸೇವಕ ಹಾಗೂ ವರ್ಷಿಣಿ ಎಂಟರ್‌ಪ್ರೈಸಸ್‌ನ ಸಂಸ್ಥಾಪಕರಾದ ಶ್ರೀ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಯಾದ ಕನ್ನಡ ಭವನ ನೀಡುವ ಅಂತರ್‌ರಾಜ್ಯ ‘ಕನ್ನಡ ಪಯಸ್ವಿನಿ – ಉದ್ಯೋಗ ರತ್ನ’ ಅಚೀವ್‌ಮೆಂಟ್ ಅವಾರ್ಡ್-2026ಕ್ಕೆ ಆಯ್ಕೆ ಮಾಡಲಾಗಿದೆ. ವರ್ಷಿಣಿ ಎಂಟರ್‌ಪ್ರೈಸಸ್ ಮೂಲಕ 3 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಶ್ರೀ ಶೇರುಗಾರ್…

Read More

ವರ್ಕಾಡಿ : ಪೆರ್ಮನಂಜಿ – ಮುಡಿಮಾರು ರಸ್ತೆ ಕಾಮಗಾರಿಗೆ ಚಾಲನೆ

ಜಿಲ್ಲಾ ಪಂಚಾಯತಿನಿಂದ 20 ಲಕ್ಷ ರೂ. ಮೊತ್ತದ ಕಾಮಗಾರಿ ವರ್ಕಾಡಿ ಗ್ರಾಮ ಪಂಚಾಯತಿಯ ಬಹುಕಾಲದ ಜನತೆಯ ಕನಸಾಗಿದ್ದ ಪೆರ್ಮನಂಜಿ – ಮುಡಿಮಾರು ರಸ್ತೆ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದೆ. ಕಾಸರಗೋಡು ಜಿಲ್ಲಾ ಪಂಚಾಯತಿಯಿಂದ ಈ ರಸ್ತೆ ಕಾಮಗಾರಿಗೆ 20 ಲಕ್ಷ ರೂಪಾಯಿ ಮಂಜೂರಾಗಿದ್ದು, ಕಾಮಗಾರಿಯ ಉದ್ಘಾಟನೆ ಇಂದು ನೆರವೇರಿತು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಅವರು ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಮಲಾಕ್ಷಿ ಕೆ….

Read More

ಬಿ.ಸಿ.ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ: ಆರೋಪಿಗೆ ಕಠಿಣ ಶಿಕ್ಷೆಯಾಗಲಿ – ಕೆ.ಎ. ಅಸ್ಮ ಹಸೈನಾರ್

ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ, ಕಲ್ಲಡ್ಕ ನರ್ಸಿಂಗ್ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ ಲಾವಣ್ಯ ಎಂಬ ಯುವತಿಯನ್ನು ಹಾಡುಹಗಲೇ ಸಾರ್ವಜನಿಕರ ಎದುರಲ್ಲೇ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಅಮಾನವೀಯ ಘಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ನಡೆದ ಹಲವು ಘಟನೆಗಳು ಇದಕ್ಕೆ ಸಾಕ್ಷಿಯಾಗಿವೆ…

Read More

ನಾಗೋರಿ ಭೂಕುಸಿತ, ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಎಸ್.ಎಲ್. ಭೋಜೆಗೌಡ ಭೇಟಿ

ಮಂಗಳೂರು: ಮುಂಗಾರು ಮಳೆಯಿಂದ ಹಾನಿಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಅಧ್ಯಯನ ತಂಡದ ಅಧ್ಯಕ್ಷ ಎಸ್.ಎಲ್. ಭೋಜೆಗೌಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಾಗೋರಿ ಭೂಕುಸಿತ ಪ್ರದೇಶದಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಸೂಚಿಸಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ಭೂಕುಸಿತ ತಡೆಗೆ ಶಾಶ್ವತ ಕ್ರಮ, ವೈಜ್ಞಾನಿಕ ಅಧ್ಯಯನ ಹಾಗೂ ಅಪಾಯದ ಪ್ರದೇಶಗಳ ಗುರುತಿಸುವಿಕೆ ಅಗತ್ಯವೆಂದು ಅವರು…

Read More

ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳ ಹತ್ಯೆ ಅತ್ಯಂತ ದುರದೃಷ್ಟಕರ : ಮಹಿಳೆಯರಿಗೆ ರಕ್ಷಣೆ ನೀಡಿ – ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಸೂರ್ಯವಂಶಿ

ಹಾಡು ಹಗಲೇ ಕರಾವಳಿಯನ್ನು ಬೆಚ್ಚಿ ಬಿಳಿಸುವ ಘಟನೆ ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು ಬಸ್ ಗೆ ಕಾಯುತ್ತಿದ್ದ ಲಾವಣ್ಯ ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಹತ್ಯೆ ಮಾಡಿರುವಂತದ್ದು ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಇದು ಮಹಿಳೆಯರಲ್ಲಿ ಆತಂಕ ಮೂಡಿಸುವಂತೆ ಆಗಿದ್ದು ಈ ಹಿಂದೆಯೂ ಈ ರೀತಿಯ ಘಟನೆ ನಡೆದಿದ್ದು ಕಾನೂನು ವ್ಯವಸ್ಥೆ ಸಡಿಲ ಇರುವ ಕಾರಣ ಈ ರೀತಿಯ ಘಟನೆ ಪುನರವರ್ತನೆ ಆಗುತ್ತಿದೆ ಹಾಗಾಗಿ ಯಾವುದೇ ಧರ್ಮವಾಗಲಿ ಯಾವುದೇ ಜಾತಿಯಾಗಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಆ…

Read More

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ

ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ…

Read More

ಬಿಸಿ ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ – ಸಿಪಿಐಎಂ

ಮಹಿಳೆಯರ ಮೇಲಿನ ಹಿಂಸಾಚಾರ ತಡೆಯಲು ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕುಬಿಸಿ ರೋಡಿನಲ್ಲಿ ಇಂದು ನಡೆದ ಯುವತಿಯ ಬರ್ಬರ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದ್ದು, ಈ ಅಮಾನವೀಯ ಕೃತ್ಯವನ್ನು ಸಿಪಿಐ(ಎಂ) ಮಂಗಳೂರು ನಗರ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರ ಹಿಂಸಾಚಾರವನ್ನು ಕೇವಲ ಅಪರಾದ ಕೃತ್ಯವನ್ನಾಗಿ ಮಾತ್ರ ನೋಡದೆ, ಮಹಿಳೆಯನ್ನು ಕೀಳಾಗಿ ಕಾಣುವ ಪುರುಷಪ್ರದಾನ ಸಮಾಜದ ಕೀಳು ಮನೋಭಾವ, ಸಾಮಾಜಿಕ ಅಸಮಾನತೆ ಮತ್ತು ಮಾನವೀಯ ಮೌಲ್ಯಗಳ ಕುಸಿತದ ಪರಿಣಾಮವನ್ನು ಗಂಬೀರವಾಗಿ ಪರಿಗಣಿಸಬೇಕು. ಮಹಿಳೆಯರ ಸ್ವಾತಂತ್ರ್ಯ, ಸಮಾನತೆ…

Read More
error: Content is protected !!