ಶಬರಿಮಲೆ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ವಿಚಾರಣೆ ಆರಂಭ

ಹೊಸದಿಲ್ಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಒಂಬತ್ತು ನ್ಯಾಯಾಧೀಶರ ಸಂವಿಧಾನ ಪೀಠವು ಈ ಮಹತ್ವದ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ವಿಚಾರಣೆಯ ಮೊದಲ ದಿನ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಧಾರ್ಮಿಕ ನಂಬಿಕೆಗಳು ಮತ್ತು ಸಂಪ್ರದಾಯಗಳ ಪರವಾಗಿ ವಾದ ಮಂಡಿಸಿದರು. “ಭಾರತದಂತಹ…

Read More

ಹನುಮಗಿರಿಯಲ್ಲಿ ಏಪ್ರಿಲ್ 9ರಿಂದ 12ರವರೆಗೆ ಬ್ರಹ್ಮಕಲಶೋತ್ಸವ: ನಳೀನ್ ಕುಮಾರ್ ಕಟೀಲ್ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹನುಮಗಿರಿಯ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಎಪ್ರಿಲ್ 9 ರಿಂದ 12 ರವರೆಗೆ ‘ಹನುಮಗಿರಿ‌ ಬ್ರಹ್ಮಕಲಶೋತ್ಸವ’ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಮಂಗಳವಾರ ಹನುಮಗಿರಿಯಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದರು. ನನ್ನದೆಲ್ಲವನ್ನು ಅರ್ಪಿಸುತ್ತೇನೆ ಎನ್ನುವುದು ಭಕ್ತಿ. ರಾಮನಿಗೆ ಜಪದ ಅರ್ಪಣೆ, ರಾಮ ಹನುಮನಿಗೆ ನಾರಿಕೇಳ ಅರ್ಪಣೆಗೆ ಅವಕಾಶ ಮಾಡಿಕೊಡಲಿದೆ. ರಾಮಜ್ಯೋತಿ ನಂತರ ಬ್ರಹ್ಮಕಲಶ ನಡೆಯಲಿದೆ ಎಂದರು….

Read More

ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಸುಬ್ರಹ್ಮಣ್ಯ ಏಪ್ರಿಲ್ 6: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಇಂದು ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದರು. ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ತಾಯಿ ರತ್ನಾವತಿ ಹಾಗೂ ಕುಟುಂಬದವರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದ ಅಧಿಕಾರಿಗಳು ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದು ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಂಡರು. ಶ್ರೀ ದೇವಳದ ಮುಖ್ಯ ಅರ್ಚಕರು ತೀರ್ಥ ಪ್ರಸಾದ…

Read More

ಸಾವಿರ ಸೀಮೆಯ ಒಡತಿ ಪೊಳಲಿ ಜಾತ್ರೆ: ಕೊಡಿ ಚೆಂಡಿನ ಉತ್ಸವಕ್ಕೆ ಭಕ್ತರ ಸಾಕ್ಷಿ

ಬಂಟ್ವಾಳ: ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ದೇವಸ್ಥಾನದ ಒಂದು ತಿಂಗಳ ಕಾಲದ ವಾರ್ಷಿಕ ಜಾತ್ರೆಯಲ್ಲಿ ಪುರಲ್ಲ ಚೆಂಡ್ ಎಂದೇ ಪ್ರಸಿದ್ದಿ ಪಡೆದಿರುವ 5 ದಿನಗಳ ಚೆಂಡಿನ ಉತ್ಸವ ವಿಶೇಷವಾಗಿದ್ದು, ಸಂಪ್ರದಾಯದಂತೆ ಎ.6 ರಂದು ಸೋಮವಾರ ಸಂಜೆ ಕೊಡಿ ಚೆಂಡಿನ (ಮೊದಲ ಚೆಂಡು) ಉತ್ಸವ ನಡೆಯಿತು. ಮೊದಲ ದಿನದ ಚೆಂಡಿನ ಉತ್ಸವದಲ್ಲಿ ದೇಗುಲದ ತಂತ್ರಿಗಳು, ಅರ್ಚಕರು, ಆಡಳಿತ ಮಂಡಳಿಯ ಮೊಕ್ತೇಸರರು ಹಾಗೂ ದೇವಳದ ಪ್ರಮುಖರು ಪಾಲ್ಗೊಂಡಿದ್ದು, ದೇವಿಯಲ್ಲಿ ಪ್ರಾರ್ಥಿಸಿ ಬಳಿಕ ಕೊಂಬು, ವಾದ್ಯ ಬಿರುದಾವಳಿಯೊಂದಿಗೆ…

Read More

ಬಂಟ್ವಾಳದಲ್ಲಿ ಬೈಕ್ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ವಸತಿ ಗೃಹ ವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ.ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬವರನ್ನು ಬಂಧಿಸಲಾಗಿದೆ. 2026 ರ ಮಾ.21 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ :37/2026, ಕಲಂ:303(2) BNS 2023…

Read More

ಪಾಲ್ತಾಜೆ ಪರಿಶಿಷ್ಟ ಜಾತಿ ಕಾಲೋನಿಗೆ ಕುಡಿಯುವ ನೀರಿನ ಯೋಜನೆ ಉದ್ಘಾಟನೆ

ಬಂಟ್ವಾಳ: ಪಾಲ್ತಾಜೆ ಸಾಲೆತ್ತೂರು ಮಾರಿಗುಡಿ ಬಳಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಕೊಳವೆಬಾವಿ ಹಾಗೂ ವಿದ್ಯುತ್ ಸಂಪರ್ಕ ಸಹಿತ ಕಾಲೋನಿಗೆ ಕುಡಿಯುವ ನೀರಿನ ಯೋಜನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಉಳಿಪಾಡಿಗುತ್ತು ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರಾದ ಮಾಧವ ಮಾವೆ ಪ್ರಾಸ್ತಾವಿಕ ಭಾಷಣ ಮಾಡಿದರು, ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಕೃಷ್ಣಪ್ರಸಾದ್ ಶೆಟ್ಟಿ ಮಲಾರಬೀಡು, ಆನಂದ ಪೂಜಾರಿ ಮಾವೆ , ಪ್ರಶಾಂತ್ ಶೆಟ್ಟಿ ಅಗರಿ, ಬೂತ್ ಸಮಿತಿ ಅಧ್ಯಕ್ಷೆ ಸುನೀತಾ ಯು ರೈ, ಕಾರ್ಯದರ್ಶಿ ಸಂದೇಶ್…

Read More

ಮಂಗಳೂರಿನಲ್ಲಿ ಏಪ್ರಿಲ್ 9ರಂದು “ಶ್ರೀರಾಮ್ ಸಾರಥಿ ಸಂಗಮ” — ಸಾರಿಗೆ ಕ್ಷೇತ್ರದ ಕಾರ್ಮಿಕರು, ಮಾಲಕರಿಗೆ ವಿಶೇಷ ಕಾರ್ಯಕ್ರಮ

ಮಂಗಳೂರು: ಸಾರಿಗೆ ಕ್ಷೇತ್ರದ ಕಾರ್ಮಿಕರು ಮತ್ತು ಮಾಲೀಕರಿಗಾಗಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಏಪ್ರಿಲ್ 9 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ “ಶ್ರೀರಾಮ್ ಸಾರಥಿ ಸಂಗಮ” ಎಂಬ ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಮಂಗಳೂರು ವಲಯದ ಅಧ್ಯಕ್ಷ ಶರಶ್ಚಂದ್ರ ಭಟ್ ಕಾಕುಂಜೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮದಲ್ಲಿ ಪ್ರಮುಖ ಬ್ಯಾಂಡ್ ಗಳ ಹೊಸ ವಾಹನಗಳು ಮತ್ತು ಯಂತ್ರಗಳ ಪ್ರದರ್ಶನ ನಡೆಯಲಿದ್ದು, ಅಂದು ಬುಕ್ಕಿಂಗ್ ಮಾಡುವ ವಾಹನಗಳ ಮೇಲೆ ವಿಶೇಷ…

Read More

ಎಂಸಿಸಿ ಬ್ಯಾಂಕ್ ಬೆಳವಣಿಗೆಯ ಹಾದಿಯಲ್ಲಿ: ₹13 ಕೋಟಿ ಲಾಭ, 25 ಶಾಖೆಗಳ ಗುರಿ ಘೋಷಣೆ

ಮಂಗಳೂರು: ಎಂಸಿಸಿ ಬ್ಯಾಂಕ್ 2025-26 ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭವನ್ನು ಗಳಿಸಿದೆ , ನಿವ್ವಳ ಎನ್‌ಪಿಎ ಇಳಿಕೆಗೆ ನಿರಂತರ ಪ್ರಯತ್ನ ನಡೆಸಿ, ಅದನ್ನು ಒಟ್ಟು ಮುಂಗಡಗಳ 1.25% ಮಟ್ಟಕ್ಕೆ ತಗ್ಗಿಸಲು ಯಶಸ್ವಿಯಾಗಿದೆ. ಒಟ್ಟು ವ್ಯವಹಾರ ರೂ.1525 ಕೋಟಿಗೆ ತಲುಪಿದ್ದು, 23% ವೃದ್ಧಿ ಸಾಧಿಸಿದೆ ಎಂದು ಎಂಸಿಸಿ ಬ್ಯಾಂಕ್ ಇದರ ಅಧ್ಯಕ್ಷರಾದ ಅನಿಲ್ ಲೋಬೊ ತಿಳಿಸಿದರು . ಅವರು ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಬಾರಿ ಮಂಗಳೂರಿನ ದೇರಳಕಟ್ಟೆಯಲ್ಲಿ 22ನೇ ಶಾಖೆ…

Read More

ಪೆರ್ಲ ಪೇಟೆಯಲ್ಲಿ ಬಿಜೆಪಿ ಭರ್ಜರಿ ರೋಡ್ ಶೋ: ಕೆ. ಸುರೇಂದ್ರನ್ ಪರ ಅಣ್ಣಾಮಲೈ ಪ್ರಚಾರ

ಪೆರ್ಲ (ಮಂಜೇಶ್ವರ):ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಬಹಿರಂಗ ಪ್ರಚಾರದ ಅಂತಿಮ ದಿನದ ಅಂಗವಾಗಿ ಇಂದು ಬೆಳಿಗ್ಗೆ 10 ಗಂಟೆಗೆ ಪೆರ್ಲ ಪೇಟೆಯಲ್ಲಿ ಭರ್ಜರಿ ರೋಡ್ ಶೋ ನಡೆಯಿತು. ಶ್ರೀಮಾತಾ ಆರ್ಕೇಡ್ ಚೆಕ್ ಪೋಸ್ಟ್ ಪ್ರದೇಶದಿಂದ ಆರಂಭವಾದ ಮೆರವಣಿಗೆ ಪೆರ್ಲದ ಪ್ರಮುಖ ರಾಜ ರಸ್ತೆಗಳಲ್ಲಿ ಸಂಚರಿಸಿ ಗಮನ ಸೆಳೆಯಿತು. ಈ ರೋಡ್ ಶೋಗೆ ಮುಖ್ಯ ಅತಿಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಣ್ಣಾಮಲೈ, ಬಿಜೆಪಿ ಅಭ್ಯರ್ಥಿ…

Read More

ಮಂಗಲ್ಪಾಡಿಯಲ್ಲಿ ಅಂಬೇಡ್ಕರ್ ಜಯಂತಿ ಹಾಗೂ ವಾರ್ಷಿಕೋತ್ಸವ: ಪೂರ್ವಭಾವಿ ಸ್ಪರ್ಧೆಗಳು ಆಯೋಜನೆ

ಮಂಜೇಶ್ವರ (ಮಂಗಲ್ಪಾಡಿ):ಡಾ. ಬಿ.ಆರ್ ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾವೇದಿಕೆ, ಮಂಗಲ್ಪಾಡಿ ವತಿಯಿಂದ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 137ನೇ ಜನ್ಮದಿನ ಹಾಗೂ ಕಲಾವೇದಿಕೆಯ 29ನೇ ವಾರ್ಷಿಕೋತ್ಸವವನ್ನು ಏಪ್ರಿಲ್ 11, 2026ರಂದು ಶನಿವಾರ ರಾತ್ರಿ 8 ಗಂಟೆಗೆ ವೈಭವದಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಏಪ್ರಿಲ್ 5, 2026ರಂದು ಭಾನುವಾರ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಯಿತು. ಈ ಸ್ಪರ್ಧೆಗಳಲ್ಲಿ ಸ್ಥಳೀಯರು ಉತ್ಸಾಹದಿಂದ ಭಾಗವಹಿಸಿ ಕ್ರೀಡಾತ್ಮಕ ಮನೋಭಾವವನ್ನು ತೋರಿಸಿದರು….

Read More
error: Content is protected !!