ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ – ದ.ಕ.ಜಿಲ್ಲೆಯಾದ್ಯಂತ ವ್ಯಾಪಕ ರಸ್ತೆತಡೆ ಹಾಗೂ ಪ್ರತಿಭಟನಾ ಸಭೆ
ಮಂಗಳೂರು: 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ, ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳ ವಿರುದ್ಧ, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ವಿರುದ್ಧ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಂದ ತಿದ್ದುಪಡಿ ವಿರೋಧಿಸಿ ರೈತ ಕಾರ್ಮಿಕರ ನೇತೃತ್ವದಲ್ಲಿ ನಾಳೆ(ಫೆಬ್ರವರಿ 12) ಅಖಿಲ ಭಾರತ ಮಹಾಮುಷ್ಕರ ನಡೆಯಲಿದ್ದು,ದ.ಕ.ಜಿಲ್ಲೆಯಾದ್ಯಂತ ವ್ಯಾಪಕ ರಸ್ತೆತಡೆ,ಮೆರವಣಿಗೆ ಹಾಗೂ ಪ್ರತಿಭಟನಾ ಸಭೆಗಳನ್ನು ನಡೆಸುವ ಮೂಲಕ ರೈತ ಕಾರ್ಮಿಕರು ಬೀದಿಗಿಳಿದು ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟಿಸಲಿದ್ದಾರೆ…
