ಕಾಸರಗೋಡಿನಲ್ಲಿ ಭೀಕರ ಕಾರು–ಆಟೋ ಅಪಘಾತ

​ಕಾಸರಗೋಡು : ಇಲ್ಲಿಯ ಕಲ್ಲಕಟ್ಟ ಬಳಿ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಟೋದಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ​ಚೆಂಗಳ ಬಾರಿಕ್ಕಾಡಿನ ಆಟೋ ಚಾಲಕ ಪಿ.ಬಿ. ದಾಮೋದರನ್ (63) ರಕ್ಷಣೆಗೊಳಗಾದವರು. ಪ್ರಯಾಣಿಕರಾದ ಕಲ್ಲಕಟ್ಟ ನಿವಾಸಿ ರಾಜೇಶ್ವರಿ (48) ಮತ್ತು ಅವರ ಎಂಡೋಸಲ್ಫಾನ್ ಸಂತ್ರಸ್ತೆ ಪುತ್ರಿ ಅಂಜಲಿ (23) ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ​ಅಣಂಗೂರಿನಿಂದ ಮನೆಗೆ ಮರಳುತ್ತಿದ್ದಾಗ ಎದುರಿನಿಂದ ಬಂದ ಕಾರು ರಿಕ್ಷಾಗೆ…

Read More

ಮಂಗಳೂರಿನಲ್ಲಿ 21ನೇ ಸಚಿವ ಸಂಪುಟ ಸಭೆ

ಮಂಗಳೂರು: ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ 21ನೇ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್ ಹಾಗೂ ವಿಜಯಾನಂದ ಕಾಶಪ್ಪನವರ್ ಉಪಸ್ಥಿತರಿದ್ದರು. ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

Read More

ಖ್ಯಾತ ಕವಿ, ಗಝಲ್ ಕವಿ ಡಾ. ಸುರೇಶ್ ನೆಗಳಗುಳಿ ಯವರು ” ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಆಯ್ಕೆ

ಕಾಸರಗೋಡು : ಅಕ್ಟೋಬರಿನ 11.ಭಾನುವಾರದಿಂದ 20.10.2026ರ ವರೆಗೆ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಸಾರತ್ಯದಲ್ಲಿ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ “2026.ರ ಅಂಗವಾಗಿ 18.10.2026 ಭಾನುವಾರ ಬೆಳಿಗ್ಗಿನ 11 ಗಂಟೆಯಿಂದ ಉದ್ಘಾಟನೆ ಗೊಳ್ಳುವ “ಕಾಸರಗೋಡು ದಸರಾ ಕವಿ ಸಮ್ಮೇಳನ “ದಲ್ಲಿ ಡಾ. ಸುರೇಶ್ ನೆಗಳಗುಳಿ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ “ನೀಡಿ ಗೌರವಿಸಲಾಗುವುದು. ಸಾಹಿತ್ಯ ಸಂಘಟಕ, ಬಿ. ಶ್ರೀನಿವಾಸ್ ಬಹಾದ್ದೂರ್…

Read More

ಕೃಷಿಹೊಂಡದಲ್ಲಿ ದಂಪತಿಯ ಮೃತದೇಹ ಪತ್ತೆ; ನಿಗೂಢತೆಗೆ ತನಿಖೆ

​ಕಾಸರಗೋಡು : ವೆಳ್ಳರಿಕುಂಡ್ ಮಾಲೋಂ ಸಮೀಪದ ಕ್ಯಾರಿಯೋಟ್ ಚಾಲ್ ಎಂಬಲ್ಲಿ ತಡತ್ತಿಲ್ ನಿವಾಸಿ ಸಾಬು (56) ಹಾಗೂ ಅವರ ಪತ್ನಿ ಸಜಿ ಸಾಬು (52) ಎಂಬವರು ತಮ್ಮದೇ ಮನೆಯ ತೋಟದ ಕೃಷಿಹೊಂಡದಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆಯ ಸುಮಾರಿಗೆ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ​ಹೊಂಡದಲ್ಲಿ ಮೃತದೇಹಗಳನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವೆಳ್ಳರಿಕ್ಕುಂಡ್ ಪೊಲೀಸರು ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ. ​ಸಾವು ಸಂಭವಿಸಲು ನಿಖರ ಕಾರಣ ಏನೆಂಬುದು ಸದ್ಯಕ್ಕೆ…

Read More

ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷೆ ಸ್ಥಾನಮಾನ: ಡಿಕೆ ಶಿವಕುಮಾರ್ ಘೋಷಣೆ

ಮಂಗಳೂರು, ಸೆ. 18: ಕರ್ನಾಟಕದಲ್ಲಿ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಹಲವು ದಶಕಗಳಿಂದ ಕೇಳಿಬರುತ್ತಿತ್ತು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಳು ಭಾಷೆಗೆ ವಿಶೇಷ ಮಾನ್ಯತೆ ನೀಡುವಂತೆ ಹಲವು ಹೋರಾಟಗಳು ನಡೆದಿದ್ದವು. ಇದೀಗ ರಾಜ್ಯ ಸರ್ಕಾರ ತುಳುವನ್ನು…

Read More

ಹೊಸಂಗಡಿಯಲ್ಲಿ ‘Spice -N -Ice’ ಶುಭಾರಂಭ

ಹೊಸಂಗಡಿ: ಭಾಸ್ಕರ್ ಕಾಂಪ್ಲೆಕ್ಸ್‌ನಲ್ಲಿ ಉದ್ಯಮಿ ಪವನ್ ಮಂಜೇಶ್ವರ ಮಾಲೀಕತ್ವದ ‘Spice N Ice’ ಹೊಸದಾಗಿ ಶುಭಾರಂಭಗೊಂಡಿದೆ. ಸರಳ ರೀತಿಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶುಭ ಹಾರೈಸುವ ಮೂಲಕ ಹೊಸ ಉದ್ಯಮಕ್ಕೆ ಚಾಲನೆ ನೀಡಲಾಯಿತು. ‘Spice N Ice’ನಲ್ಲಿ ಐಸ್‌ಕ್ರೀಂ, ಶೇಕ್ಸ್, ಫಾಲೂಡಾ, ಸ್ಯಾಂಡ್‌ವಿಚ್, ಮ್ಯಾಗಿ, ಜ್ಯೂಸ್ ಸೇರಿದಂತೆ ವಿವಿಧ ಬಗೆಯ ತಿಂಡಿ-ತಿನಿಸು ಹಾಗೂ ಪಾನೀಯಗಳು ಲಭ್ಯವಿವೆ. ಹೊಸಂಗಡಿ ಹಾಗೂ ಸುತ್ತಮುತ್ತಲಿನ ಗ್ರಾಹಕರಿಗೆ ವೈವಿಧ್ಯಮಯ ಆಹಾರ ಮತ್ತು ಪಾನೀಯಗಳ ಅನುಭವ ನೀಡುವ ಉದ್ದೇಶದಿಂದ ‘Spice N Ice’ ಆರಂಭಿಸಲಾಗಿದೆ….

Read More

ಮಂಪಾಡ್ ಕಾಲೇಜು ಶಿಕ್ಷಕ ಸೇರಿರುವ ಎಂಡಿಎಂಎ ಪ್ರಕರಣ: ಮತ್ತೆ ಮಾದಕ ವಸ್ತು ಪತ್ತೆ

ಮಲಪ್ಪುರಂ : ಮಂಪಾಡ್ ಎಂಇಎಸ್ ಕಾಲೇಜಿನ ಅಧ್ಯಾಪಕರೊಬ್ಬರು ಸೇರಿದಂತೆ ನಾಲ್ವರು ಆರೋಪಿಗಳ ಬಂಧನಕ್ಕೆ ಕಾರಣವಾದ ಎಂಡಿಎಂಎ ಪ್ರಕರಣದಲ್ಲಿ ಪೊಲೀಸರು ಮತ್ತೆ ಮಾದಕ ವಸ್ತುವನ್ನು ಪತ್ತೆಹಚ್ಚಿದ್ದಾರೆ. ಬಂಧಿತ ರೀನಾ ಅವರ ಮನೆಗೆ ತೆರಳಿದ ಪೊಲೀಸರು, ಗೋಡೆಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿದ್ದ ಕಾರಿನಲ್ಲಿ ಎಂಡಿಎಂಎ ಪತ್ತೆ ಮಾಡಿದ್ದಾರೆ. ಮಂಪಾಡ್ ಎಂಇಎಸ್ ಕಾಲೇಜಿನ ಅಧ್ಯಾಪಕ ಸುಹೈಲ್ ಪೆರಿಂಗೋಡನ್ ಹಾಗೂ ಅವರ ಮೂವರು ಸ್ನೇಹಿತರಾದ ರೀನಾ ಟಿ.ಎನ್., ವಿವೇಕ್ ವಿಜಯನ್ ಮತ್ತು ಸುಬ್ರಹ್ಮಣ್ಯನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿಲಂಬೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ…

Read More

ಮನೆಯಲ್ಲೇ 67 ಲೀಟರ್ ಮದ್ಯ ಸಂಗ್ರಹ ಪ್ರಕರಣ: ಆಂಟೋ ಅಗಸ್ಟಿನ್ ಜಾಮೀನು ಅರ್ಜಿ ಹೈಕೋರ್ಟ್‌ಗೆ

ಕಲ್ಪೆಟ್ಟ:ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮನೆಯಲ್ಲಿ ಮದ್ಯ ಸಂಗ್ರಹಿಸಿದ್ದ ಪ್ರಕರಣದಲ್ಲಿ ಬತ್ತೇರಿ ಜುಡಿಷಿಯಲ್ ಫಸ್ಟ್ ಕ್ಲಾಸ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆಂಟೋ ಅಗಸ್ಟಿನ್ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದ ಮುಂದಿನ ಕ್ರಮಗಳನ್ನು ತಡೆಹಿಡಿಯುವಂತೆಯೂ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಮುಂದಿನ ತನಿಖೆಗೆ ತಮ್ಮ ಕಸ್ಟಡಿ ಅಗತ್ಯವಿಲ್ಲ ಎಂದು ಆಂಟೋ ಅರ್ಜಿಯಲ್ಲಿ ತಿಳಿಸಿದ್ದಾರೆ. ಬಂಧನ ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂದೂ ಅವರು ಆರೋಪಿಸಿದ್ದಾರೆ. ಮನೆಯಲ್ಲಿ ಸಂಗ್ರಹಿಸಿದ್ದ ಮದ್ಯವನ್ನು ಮಾರಾಟಕ್ಕಾಗಿ ಇಟ್ಟಿರಲಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ಅರ್ಜಿಯನ್ನು…

Read More

ಮಂಜೇಶ್ವರ ಬ್ಲಾಕ್ ಪಂ.ನಲ್ಲಿ ಏಕದಿನ ತರಬೇತಿ ಶಿಬಿರ

ಮಂಜೇಶ್ವರ ಉದ್ಯೋಗಕ್ಕಾಗಿ ಅಲೆದಾಡುವ ಬದಲು ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಯುವಕರು ಮೊದಲ ಆದ್ಯತೆ ನೀಡಬೇಕೆಂಬ ಉದ್ದೇಶದೊಂದಿಗೆ ಅದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಹೊಸ ಉದ್ಯಮಗಳನ್ನು ಆರಂಭಿಸಲು ಆಸಕ್ತಿ ಹೊಂದಿರುವವರಿಗೂ, ಈಗಾಗಲೇ ನಡೆಸುತ್ತಿರುವ ಉದ್ಯಮಗಳನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿರುವವರಿಗೂ ಸರ್ಕಾರದಿಂದ ಲಭ್ಯವಾಗುವ ವಿವಿಧ ಆರ್ಥಿಕ ನೆರವುಗಳು, ಸಾಲಗಳು, ಸಬ್ಸಿಡಿಗಳು ಹಾಗೂ ಇತರ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಲು ಮಂಜೇಶ್ವರ ಬ್ಲಾಕ್ ಪಂಚಾಯತ್ ವತಿಯಿಂದ ಏಕದಿನ ತರಬೇತಿ ಶಿಬಿರ ಆಯೋಜಿಸಲಾಯಿತು. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹನೀಫ್ ಕುಚ್ಚಿಕ್ಕಾಡ್ ರವರ…

Read More

ಆಸ್ಪತ್ರೆಯಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಆರೋಗ್ಯ ವಿಚಾರಿಸಿದ ಸಚಿವ ಯು.ಟಿ. ಖಾದರ್

ಬೆಂಗಳೂರು, ಸೆ. 18: ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬುಧವಾರ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಯು.ಟಿ….

Read More
error: Content is protected !!