ದೆಹಲಿ ಕರ್ನಾಟಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಆರ್. ರೇಣುಕುಮಾರ್,ಪ್ರಧಾನ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಕುಂದಾಪುರ ಆಯ್ಕೆದೇಶದ ಪ್ರತಿಷ್ಠಿತ ದೆಹಲಿ ಕರ್ನಾಟಕ ಸಂಘದ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಆರ್. ರೇಣುಕುಮಾರ್, ಉಪಾಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ ,ಶೋಭಾ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಕುಂದಾಪುರ ಬೈಂದೂರು, ಖಜಾಂಚಿಯಾಗಿ ಎಂ.ಆಶಾಲತಾ,ಜಂಟಿ ಕಾರ್ಯದರ್ಶಿಯಾಗಿ ಜೆ. ಸಂತೋಷ, ಬಿ. ಎಸ್.ಅಶ್ವಿನಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪೂಜಾ ಪಿ.ರಾವ್, ಎಂ.ಶಿವಪ್ಪ, ಡಾ. ವೆಂಕಟಾಚಲ ಜಿ.ಹೆಗಡೆ, ಡಾ. ಎಂ. ಎಸ್. ಶಶಿಕುಮಾರ್, ಬಿ. ನಾರಾಯಣ, ಎಂ. ಕೃಷ್ಣಪ್ಪ,…

Read More

ಶಿವ-ಶಕ್ತಿಯರ ದಿವ್ಯ ಸಂಗಮ: ಪುತ್ತೂರು ಸೀಮೆಯ ಪರಮ ಪಾವನ ಪರ್ವ

​ಪುತ್ತೂರಿನ ಪುಣ್ಯ ಮಣ್ಣಿನಲ್ಲಿ ಪ್ರತಿವರ್ಷದ ಚೈತ್ರ ಮಾಸದ ಸಂಭ್ರಮಕ್ಕೆ ಒಂದು ದಿವ್ಯವಾದ ಮೆರುಗು ಇರುತ್ತದೆ. ಇಲ್ಲಿನ ಗಾಳಿಯಲ್ಲಿ ‘ಮಹಾಲಿಂಗೇಶ್ವರ’ ಎಂಬ ನಾಮದ ಝೇಂಕಾರವಿದ್ದರೆ, ಅಂತರಂಗದಲ್ಲಿ ಬಲ್ನಾಡಿನ ಆರಾಧ್ಯಶಕ್ತಿ ಶ್ರೀ ಉಳ್ಳಾಲ್ತಿ ಅಮ್ಮನವರ ದಿವ್ಯ ಸಾನಿಧ್ಯದ ಹಂಬಲವಿರುತ್ತದೆ. ಜಗದೊಡೆಯ ಮತ್ತು ಜಗನ್ಮಾತೆಯರು ಮುಖಾಮುಖಿಯಾಗುವ ಆ ಅನಿರ್ವಚನೀಯ ಮಿಲನದ ಕ್ಷಣವಿದೆಯಲ್ಲ, ಅದು ಪುತ್ತೂರು ಸೀಮೆಯ ಆಸ್ತಿಕರ ಪಾಲಿಗೆ ಕೇವಲ ಒಂದು ಧಾರ್ಮಿಕ ವಿಧಿಯಲ್ಲ; ಅದು ಅಧ್ಯಾತ್ಮದ ಪರಮೋಚ್ಚ ಆನಂದವನ್ನು ಧಾರೆ ಎರೆಯುವ ದಿವ್ಯ ಚೇತನ.​ನನ್ನ ಆಪ್ತವಲಯದ ಹಿತೈಷಿಗಳಾದ ಶ್ರೀಮತಿ ಪರಿಣಿತಾ…

Read More

ಮುಗುಳಿಗುಡ್ಡೆ ಕ್ಷೇತ್ರದಲ್ಲಿ ಅಷ್ಟಮಂಗಲ ಪ್ರಶ್ನೆ: ಮೇ 21ರಿಂದ ಮಹತ್ವದ ಧಾರ್ಮಿಕ ಕಾರ್ಯಕ್ರಮ

ಕನ್ಯಾನ ಗ್ರಾಮದ ಶ್ರೀ ಕ್ಷೇತ್ರ ಮುಗುಳಿಗುಡ್ಡೆಯ ದಿವ್ಯ ಸಾನಿಧ್ಯದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸುವ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಟ್ಲ ಅರಮನೆಯ ಶ್ರೀ ಬಂಗಾರು ಅರಸರ ನೇತೃತ್ವದ ಪ್ರಶ್ನಾ ಚಿಂತನಾ ಸಮಿತಿಯ ವತಿಯಿಂದ ಮೇ 21.05.2026 ಗುರುವಾರದಿಂದ ಮೂರರಿಂದ ಐದು ದಿನಗಳ ಕಾಲ ಈ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದು ಇತ್ತೀಚೆಗೆ ನಡೆದ ಸಾರ್ವಜನಿಕ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳೆದ ಮಹಾಶಿವರಾತ್ರಿಯಂದು ಮಹಾ ಸನ್ನಿಧಿಯಲ್ಲಿ ಕೈಗೊಂಡ ನಿರ್ಣಯದಂತೆ, ಈ ಅಷ್ಟಮಂಗಲ ಪ್ರಶ್ನೆ ಕಾರ್ಯವು ಕಾರಿಂಜದ ಶ್ರೀ ರಾಘವೇಂದ್ರ…

Read More

ಹಸಿರು ವಲಯ ಭೂಸ್ವಾಧೀನ ವಿಳಂಬಕ್ಕೆ ಆಕ್ರೋಶ: ಮೇ 1ರಿಂದ ಧರಣಿ ಎಚ್ಚರಿಕೆ

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಹಸಿರು ವಲಯ ನಿರ್ಮಾಣಕ್ಕೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯನ್ನು ಹಿಂದಿನ ತೀರ್ಮಾನದಂತೆ ಜಿಲ್ಲಾಡಳಿತದ ಮೂಲಕವೇ ತಕ್ಷಣ ಆರಂಭಿಸಬೇಕು. ಒಂದು ವಾರದೊಳಗೆ ಸ್ಪಷ್ಟ ನಿರ್ಧಾರ ಪ್ರಕಟಿಸದಿದ್ದಲ್ಲಿ ಮೇ 1ರಿಂದ ಎಂಆರ್‌ಪಿಎಲ್ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ. ಬುಧವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ, ಎಂಆರ್‌ಪಿಎಲ್ ಮೂರನೇ ಹಂತದ ಕೋಕ್ ಸಲ್ಪರ್ ಘಟಕದಿಂದ ಉಂಟಾಗುತ್ತಿರುವ ಮಾಲಿನ್ಯ ತಡೆಗೆ…

Read More

ಕುಕ್ಕಾಜೆಯಲ್ಲಿ ಭೀಕರ ಅಪಘಾತ: ಬೈಕ್ ಸಹಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ ತಾಲ್ಲೂಕಿನ ಕುಕ್ಕಾಜೆ ಪ್ರದೇಶದಲ್ಲಿ ಗೂಡ್ಸ್ ರಿಕ್ಷಾ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರನು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನು ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ (23) ಎಂದು ಗುರುತಿಸಲಾಗಿದೆ. ಅವರು ಸ್ನೇಹಿತ ಉದಯ ಅವರೊಂದಿಗೆ ಮೆಲ್ಕಾರ್ ಕಡೆಯಿಂದ ಕುಕ್ಕಾಜೆಯ ತಮ್ಮ ಮನೆಯತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ವೇಳೆ ಮನೀಶ್ ರಸ್ತೆ ಮೇಲೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಬೈಕ್…

Read More

ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗಳಿಗೆ “ಗಡಿನಾಡು ಕನ್ನಡ ಪೋಷಕ “ಪ್ರಶಸ್ತಿ

ಕಾಸರಗೋಡು : ಮಂಗಳೂರಿನ ಖ್ಯಾತ ಕನ್ನಡ ಸಂಘಟಕಿಯಾದ ರಾಣಿ ಪುಷ್ಪಲತಾ ದೇವಿ ಅಧ್ಯಕ್ಷೆಯಾದ, ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ (ರಿ.)25.4.2026.ಶನಿವಾರ ಸಂಜೆ ಗಂಟೆ 5.30 ರಿಂದ ಮಂಗಳೂರಿನ ಪುರಭವನದ ಎದುರಿನ ರಾಜಾಜಿ ಪಾರ್ಕ್ ನಲ್ಲಿ ನಡೆಯುವ “ಕನ್ನಡ ಜೇಂಕಾರ “ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಉಚಿತ ಸಾರ್ವಜನಿಕ ವಾಚನಾಲಯ, ಕನ್ನಡ ಭವನ “ಉಚಿತ ವಸತಿ ಸೌಕರ್ಯ “, ಕನ್ನಡ ಭವನ…

Read More

ಮಂಜೇಶ್ವರ : ಕುಂಡು ಕೊಳಕೆ ಸಮುದ್ರ ಕಿನಾರೆಯಲ್ಲಿ ಕೊಚ್ಚಿ ಹೋದ ಯುವಕ : ಮುಂದುವರಿದ ತೀವ್ರ ಶೋಧ

ಮಂಜೇಶ್ವರ: ಇಲ್ಲಿನ ಕುಂಡುಕೊಳಕೆ ಸಮುದ್ರ ಕಿನಾರೆಯಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದ್ದು, 18 ವರ್ಷದ ಯುವಕನೊಬ್ಬ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದಾನೆ. ​ಮಂಜೇಶ್ವರ ಚೌಕಿ ನಿವಾಸಿಗಳಾದ ಉಮರುಲ್ ಫಾರೂಕ್ ಮತ್ತು ರಝೀನಾ ದಂಪತಿಗಳ ಪುತ್ರ ಮೊಹಮ್ಮದ್ ಝೈನುಲ್ ಹಾಬಿದ್ ಸಮುದ್ರದಲ್ಲಿ ನಾಪತ್ತೆಯಾದ ದುರ್ದೈವಿ. ಸ್ವಲ್ಪ ಅನಾರೋಗ್ಯದಿಂದ ಬಳಲುತ್ತಿದ್ದ ಝೈನುಲ್ ಹಾಬಿದ್, ಬುಧವಾರ ಸಂಜೆ ತನ್ನ ಕುಟುಂಬದವರೊಂದಿಗೆ ಮನಃಶಾಂತಿಗಾಗಿ ಮತ್ತು ವಿಹಾರಕ್ಕಾಗಿ ಸಮುದ್ರ ಕಿನಾರೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಲೆಗಳ ಸುಳಿಗೆ ಸಿಲುಕಿದ ಯುವಕ…

Read More

ಗೋವಾದ ಪಣಜಿಯಲ್ಲಿ ರಾಷ್ಟ್ರೀಯ ಕನ್ನಡ ಸಮ್ಮೇಳನ: ನಾಡು-ನುಡಿಗೆ ಸೇವೆ ಶ್ರೇಷ್ಠ ಕಾರ್ಯ – ಡಾ. ಸುಬ್ರಮಣಿ

ಪಣಜಿ: ಗೋವಾದ ಪಣಜಿಯಲ್ಲಿ ನಡೆದ 21ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಯಶಸ್ವಿಯಾಗಿ ನೆರವೇರಿದ್ದು, ನಾಡು-ನುಡಿಗೆ ಸೇವೆ ಸಲ್ಲಿಸುವ ಮಹತ್ವವನ್ನು ಮತ್ತೊಮ್ಮೆ ನೆನಪಿಸಿದೆ.ವಿಷ್ಣು ನಾಯ್ಕ್ ವೇದಿಕೆ – ಗೋವಾದ ಪಣಜಿಯಲ್ಲಿ ಆಯೋಜಿಸಿದ್ದ 21ನೇ ರಾಷ್ಟ್ರೀಯ ಕನ್ನಡ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ ಸುಬ್ರಮಣಿ (ಪಲ್ಲವಿ ಮಣಿ) ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ನಾಡು-ನುಡಿಗೆ ಸೇವೆ ಸಲ್ಲಿಸುವುದು ಒಂದು ಶ್ರೇಷ್ಠ ಕಾರ್ಯ ಹಾಗೆ ನಡೆದುಕೊಂಡಾಗ ಒಬ್ಬ ವ್ಯಕ್ತಿ ಪರಿಪೂರ್ಣನಾಗಲು ಸಾಧ್ಯ. ನಾಡು ನುಡಿ ಮತ್ತು ಸಂಸ್ಕೃತಿಗಳಿಗೆ ಶ್ರದ್ಧೆ ಮತ್ತು ಭಕ್ತಿಯಿಂದ ಸೇವೆ…

Read More

ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ಶೈಕ್ಷಣಿಕ ಕ್ರಾಂತಿ: ಹೊಸ ಸೌಲಭ್ಯಗಳಿಗೆ ಚಾಲನೆ

ಮಂಜೇಶ್ವರ : ಗಡಿನಾಡಿನ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿರುವ ಪೀಸ್ ಕ್ರಿಯೇಟಿವ್ ಶಾಲೆ, 2026-27ನೇ ಶೈಕ್ಷಣಿಕ ಸಾಲಿನಲ್ಲಿ ಅಭೂತಪೂರ್ವ ಬದಲಾವಣೆಗೆ ಸಾಕ್ಷಿಯಾಗುತ್ತಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡಿರುವ ಶಾಲಾ ಆಡಳಿತ ಮಂಡಳಿಯು, ಲೌಕಿಕ ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಂಸ್ಕಾರಯುತ ಶಿಕ್ಷಣಕ್ಕೆ ಭರ್ಜರಿ ತಯಾರಿಗೆ ಚಾಲನೆ ನೀಡಿದೆ. ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಕ್ರೀಡಾಸಕ್ತಿಗೆ ರೆಕ್ಕೆ ನೀಡುವ ಉದ್ದೇಶದಿಂದ ಶಾಲಾ ಆವರಣದಲ್ಲಿ ಅತ್ಯುತ್ತಮ ಮಟ್ಟದ ಫುಟ್ಬಾಲ್ ಟರ್ಫ್, ಬಾಸ್ಕೆಟ್ ಬಾಲ್, ವಾಲಿಬಾಲ್ ಸೇರಿದಂತೆ…

Read More

ಅಡುಗೆ ಅನಿಲ ಕೊರತೆ, ಬೆಲೆ ಏರಿಕೆ: ಕೇಂದ್ರ ಸರ್ಕಾರ ವಿರುದ್ಧ ರಮಾನಾಥ ರೈ ಕಿಡಿ

ಮಂಗಳೂರು :ಕೇಂದ್ರ ಸರಕಾರದ ವೈಫಲ್ಯದಿಂದ ದೇಶದಲ್ಲಿ ಅಡುಗೆ ಅನಿಲ ಸರಿಯಾಗಿ ಪೂರೈಕೆಯಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು‌ ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಗಳೂರಿನಲ್ಲಿ‌ ಕಾಂಗ್ರೆಸ್ ಆಯೋಜಿಸಿದ್ದ ಅಡುಗೆ ಅನಿಲ ದರ ಏರಿಕೆ ವಿರುದ್ದದ ಪ್ರತಿಭಟನೆಯಲ್ಲಿ‌‌ ಪಾಲ್ಗೊಂಡು ಮಾತನಾಡಿದ ರೈ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ ನೀತಿಯೇ ಇದಕ್ಕೆ ಕಾರಣ ಎಂದು ಆರೋಪಿಸಿದರು. ದೇಶದ ಆರ್ಥಿಕ ಪ್ರಸಕ್ತ ಪರಿಸ್ಥಿತಿ ಚೆನ್ನಾಗಿಲ್ಲ. ಬೆಲೆ ಏರಿಕೆಯಿಂದ ಜನರು ಕೂಡ ಕಂಗಾಲಾಗಿದ್ದಾರೆ. ಆದರೂ…

Read More
error: Content is protected !!