ಉಪ್ಪೂರಿನ ನಂದಿನಿ ಡೇರಿಗೆ ಸಂಪರ್ಕಿಸುವ ರಸ್ತೆಯಲ್ಲಿ ಬಿರುಕು; ತಕ್ಷಣ ದುರಸ್ತಿಗೆ ಸಾರ್ವಜನಿಕರ ಆಗ್ರಹ
ಬ್ರಹ್ಮಾವರ: ಉಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಎಂಎಫ್ ನಂದಿನಿ ಡೇರಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯ ಮಧ್ಯಭಾಗದಲ್ಲಿ ದೊಡ್ಡ ಬಿರುಕು ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಭಾರಿ ಅನಾಹುತ ಸಂಭವಿಸುವ ಆತಂಕ ಎದುರಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ರಸ್ತೆಯ ಎರಡೂ ಬದಿಗಳಲ್ಲಿ ಆಳವಾದ ಕಂದಕಗಳಿದ್ದು, ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಮುಂದುವರಿದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಮಾಜಸೇವಕ ಸತೀಶ್ ಪೂಜಾರಿ ಕೀಳಂಜೆ ದೂರಿದ್ದಾರೆ. ಪ್ರತಿದಿನ ನಂದಿನಿ ಡೇರಿಗೆ ಹಾಲು ಸಾಗಿಸುವ ಟ್ಯಾಂಕರ್ಗಳು, ಕಂಟೇನರ್ಗಳು ಸೇರಿದಂತೆ ಭಾರೀ…
