ಹಿರಿಯಡಕ: ಟಿಪ್ಪರ್ ಡಿಕ್ಕಿ ಹೊಡೆದು ಗರ್ಭಿಣಿ ಹಸು ಮೃತ್ಯು

ಉಡುಪಿ: ಟಿಪ್ಪರ್ ವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಗರ್ಭಿಣಿ ಹಸುವೊಂದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಕಾಲೇಜು ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಹಸು ಕಾರೊಂದನ್ನು ಕಂಡು ಹಿಂದಕ್ಕೆ ಸರಿದು ಬಂದಿದೆ. ಈ ವೇಳೆ ಅತೀ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಗರ್ಭಿಣಿ ಹಸು ಸ್ಥಳದಲ್ಲೇ ಮೃತಪಟ್ಟಿದೆ.

Read More

ನಾಲ್ಕು ದಿನಗಳ ಬಳಿಕ ಕಾಡಿನೊಳಗೆ ಕಾಣೆಯಾಗಿದ್ದ ಯುವತಿ ಸುರಕ್ಷಿತವಾಗಿ ಪತ್ತೆ: ರೋಚಕ ರಕ್ಷಣಾ ಕಾರ್ಯಾಚರಣೆ

ವಿರಾಜಪೇಟೆ: ಕೇರಳದ ಶರಣ್ಯ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ , ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಾಸಕ ಎ . ಎಸ್ . ಪೊನ್ನಣ್ಣ ಅವರ ಮಾರ್ಗದರ್ಶನದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಯಿತು. ಸ್ಥಳೀಯರ ಸಹಕಾರ ಮತ್ತು ಅತ್ಯಾಧುನಿಕ ಉಪಕರಣಗಳ ನೆರವಿನಿಂದ ನಡೆದ ಶೋಧ ಕಾರ್ಯಾಚರಣೆಯ ನಡುವೆ, ಕುಡಿಯ ಜನಾಂಗದವರು ತಮ್ಮ ಕುಲದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದರು. ಅಂತಿಮವಾಗಿ ಭಾನುವಾರ ನಾಲ್ಕು ದಿನಗಳ ಬಳಿಕ ಶರಣ್ಯ ಜೀವಂತವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರು ಹಾಗೂ…

Read More

ಅಮಾಸೆಬೈಲು: ಗೂಡ್ಸ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ- ಮೂವರ ಬಂಧನ

ಉಡುಪಿ: ಬೆಂಗಾವಲು ಕಾರಿನೊಂದಿಗೆ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮಂದಿಯನ್ನ್ನು ಅಮಾಸೆಬೈಲು ಪೊಲೀಸರು ಎ.5ರಂದು ಬೆಳಗಿನ ಜಾವಾ ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಬಂಧಿಸಿದ್ದಾರೆ.ಬೆಳಗಾಂ ಜಿಲ್ಲೆಯ ರಾಮದುರ್ಗಾದ ಮುಸ್ತಾಕ್ ಹುಸೇನ್(29), ಸಲೀಂ ಹುಸೇನ್ ಸಾಬ್ ನದಾಫ್(33), ಕಂಡ್ಲೂರಿನ ನದೀಂ ಅಬ್ದುಲ್ ಖಾದರ್(34) ಬಂಧಿತ ಆರೋಪಿಗಳು. ಹುಲಿಕಲ್ ಘಾಟಿ ಕಡೆಯಿಂದ ಹೊಸಂಗಡಿ ಚೆಕ್ ಪೋಸ್ಟ್ ಕಡೆಗೆ ಬರುತ್ತಿದ್ದ ವಾಹನವನ್ನು ತಡೆದು ತಾಪಸಣೆ ಮಾಡಿದಾಗ ಮೂರು ಎತ್ತು ಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಇದರಲ್ಲಿದ್ದ ಒಂದು ಲಕ್ಷ…

Read More

ಪೊಳಲಿ ದೇವಸ್ಥಾನಕ್ಕೆ ಭಾರೀ ಪಾದಯಾತ್ರೆ: ಸಾವಿರಾರು ಭಕ್ತರ ಬೇಡಿಕೆಗಳೊಂದಿಗೆ ಭಕ್ತರ ಮೆರವಣಿಗೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಪಾದಯಾತ್ರೆ ಭಕ್ತಿಭಾವದಿಂದ ನಡೆಯಿತು. ಬೆಳಿಗ್ಗೆ 5 ಗಂಟೆಗೆ ಕೈಕಂಬ ಪೊಳಲಿ ದ್ವಾರದಿಂದ ಆರಂಭವಾದ ಪಾದಯಾತ್ರೆ ಸುಮಾರು 8:30ಕ್ಕೆ ದೇವಸ್ಥಾನ ತಲುಪಿತು. ಈ ಪಾದಯಾತ್ರೆ 7ನೇ ವರ್ಷದದ್ದು ಆಗಿದ್ದು, ಸುಮಾರು ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಿದ್ದರು. ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವುದು, ಗೋಶಾಲೆ ನಿರ್ಮಾಣ, ಹಾಗೂ ಅನ್ಯಮತೀಯರಿಗೆ ವ್ಯಾಪಾರ ಅವಕಾಶ ನೀಡಬಾರದು ಎಂಬ ಬೇಡಿಕೆಗಳನ್ನು ಮುಂದಿರಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ…

Read More

ಶಿರ್ಲಾಲಿನಲ್ಲಿ ಬಾಲಕನ ದೈವ ನರ್ತನ ವೈರಲ್

ಅಜೆಕಾರು:ಅಜೆಕಾರು ಸಮೀಪದ ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮಮುಗೇರಕಲ ಕ್ಷೇತ್ರದಲ್ಲಿ ನಡೆದ ತನ್ನಿಮಾನಿಗ ನೇಮದಲ್ಲಿ ಏಳನೇ ತರಗತಿಯ ವಿದ್ಯಾರ್ಥಿಯೊಬ್ಬ ಹೆಣ್ಣು ದೈವದ ಕೋಲ ನಿರ್ವಹಿಸಿ ಎಲ್ಲರ ಗಮನ ಸೆಳೆದಿದ್ದಾನೆ. ಬಾಲಕನ ದೈವ ನರ್ತನ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಿರ್ಲಾಲು ಶಾಲೆಯ ಸಮರ್ಥ್ ಎಂಬ ಬಾಲಕ, ತನ್ನ ಅಜ್ಜ ಹಾಗೂ ತಂದೆಯವರಿಂದ ಬಂದಿರುವ ಪರಂಪರಾಗತ ಕಲೆಯನ್ನು ಸಣ್ಣ ವಯಸ್ಸಿನಲ್ಲೇ ಅಳವಡಿಸಿಕೊಂಡು ದೈವ ಕುಣಿತ ಪ್ರದರ್ಶಿಸಿದ್ದಾನೆ. ತಂದೆ ಹರೀಶ ಅವರ ಮಾರ್ಗದರ್ಶನದಲ್ಲಿ ಸಮರ್ಥ್ ತನ್ನಿಮಾನಿಗ ಹೆಣ್ಣು ದೈವದ ಬಣ್ಣ…

Read More

ಬೆಜ್ಜ ಮೂಡಂಬೈಲು ಧೂಮಾವತಿ ಬಂಟ ದೈವಗಳ ಉತ್ಸವಕ್ಕೆ ಸಜ್ಜು: ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಹೋತ್ಸವ

ಬೆಜ್ಜ ಮೂಡಂಬೈಲು: ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ಏಪ್ರಿಲ್ 1ರಂದು ಉತ್ಸವದ ಗೊನೆ ಮುಹೂರ್ತ , ಕೋಳಿಗೂಟ ಮತ್ತು ಉತ್ಸವದ ಚೆಂಡು ಆರಂಭಗೊಂಡು 6 ರಿಂದ 9 ರವರೆಗೆ ಭಕ್ತಿಭಾವದಿಂದ ದೈವಗಳ ಉತ್ಸವ ನಡೆಯಲಿದೆ. ಉತ್ಸವವು ಬುಧವಾರ ಬೆಳಗ್ಗೆ 9 ಗಂಟೆಯಿಂದ ಆರಂಭಗೊಂಡು ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಗ್ರಾಮಸ್ಥರು ಹಾಗೂ ಕ್ಷೇತ್ರ ಸೇವಾ ಸಮಿತಿಯವರ ಸಹಕಾರದಲ್ಲಿ ಮಹೋತ್ಸವವನ್ನು ಆಯೋಜಿಸಲಾಗಿದೆ. ಭಕ್ತರು ತಮ್ಮ ಬಂಧು-ಮಿತ್ರರೊಂದಿಗೆ ಆಗಮಿಸಿ ತನು-ಮನ-ಧನಗಳಿಂದ ಸಹಕರಿಸಿ, ಗಂಧ ಪ್ರಸಾದವನ್ನು…

Read More

ಕಯ್ಯಾರು ಉಳ್ಳಾಲ್ತಿ ಕಾಳಿಚಾಮುಂಡಿ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಯ್ಯಾರು (ಮೇರ್ಲ): ಶ್ರೀ ಉಳ್ಳಾಲ್ತಿ ಕಾಳಿಚಾಮುಂಡಿ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ನೇಮೋತ್ಸವವು ಏಪ್ರಿಲ್ 28ರಿಂದ 30ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ನಡೆಯಲಿರುವ ಈ ಮಹೋತ್ಸವವು ಊರ-ಪರವೂರ ಹಾಗೂ ಹತ್ತು ಸಮಸ್ತರು ಮತ್ತು ಕುಟುಂಬಸ್ಥರ ಸಹಕಾರದಿಂದ ಜರುಗಲಿದೆ. ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಶಂಕರನಾರಾಯಣ ಕಡಮಣ್ಣಾಯ (ಬಂಬ್ರಾಣ ಬೂಡು, ಕರ್ಕುಳ) ಅವರ ದಿವ್ಯ ಹಸ್ತದಿಂದ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ಈ ನಡುವೆ…

Read More

ಕುಂಬಳೆಯಲ್ಲಿ 159 ಲೀಟರ್ ಕರ್ಣಾಟಕ ಮದ್ಯ ವಶ : ಓರ್ವ ಬಂಧನ, ಮತ್ತೊಬ್ಬ ಪರಾರಿ

ಕುಂಬಳೆ: ಕೇರಳದಲ್ಲಿ ಮಾರಾಟ ನಿಷೇಧಿತವಾಗಿರುವ ಕರ್ಣಾಟಕ ನಿರ್ಮಿತ ಮದ್ಯವನ್ನು ಸಾಗಿಸುತ್ತಿದ್ದ ಇಬ್ಬರನ್ನು ಎಕ್ಸೈಸ್ ಇಲಾಖೆ ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿ ಮತ್ತೊಬ್ಬರು ಪರಾರಿಯಾಗಿದ್ದಾರೆ. ತಲಪಾಡಿ ತಚ್ಚನಿ ನಿವಾಸಿ ನಿಖಿಲ್ ಬಂಧಿತ ಆರೋಪಿಯಾಗಿದ್ದು, ವಿಧಾನಸಭಾ ಚುನಾವಣೆಯ ಹಿನ್ನೆಲೆ ನಡೆಯುತ್ತಿದ್ದ ತಪಾಸಣೆ ವೇಳೆ ಅವರಿಂದ ಸುಮಾರು 159 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದೇ ವೇಳೆ, ಎರಡನೇ ಆರೋಪಿಯಾದ ಕುಂಟಾಂಗಿರಡ್ಕ ನಿವಾಸಿ ಪ್ರಭಾಕರನ್ ಅಲಿಯಾಸ್ ಅನ್ನಿ ಪ್ರಭಾಕರನ್ ಪರಾರಿಯಾಗಿದ್ದಾನೆ. ಪರಾರಿಯಾಗುವ ಸಂದರ್ಭದಲ್ಲಿ ಮದ್ರಸದಿಂದ ಬರುತ್ತಿದ್ದ ಸುಮಾರು 15 ಬಾಲಕಿಯರ…

Read More

“ಕೇರಳ ದಿವಾಳಿಯ ದಿಕ್ಕಿಗೆ” – ಎಲ್‌ಡಿಎಫ್ ವಿರುದ್ಧ ಸಿದ್ದರಾಮಯ್ಯ ಕಿಡಿ : ಕರ್ನಾಟಕ ಮಾದರಿ ಕೇರಳಕ್ಕೆ? ಸಿದ್ದರಾಮಯ್ಯ ದೊಡ್ಡ ಸಂದೇಶ

ಮಂಜೇಶ್ವರ: ಹತ್ತು ವರ್ಷಗಳ ಎಲ್‌ಡಿಎಫ್ ಆಡಳಿತವು ಕೇರಳವನ್ನು ಆರ್ಥಿಕ ದಿವಾಳಿಯತ್ತ ಕೊಂಡೊಯುತ್ತಿದ್ದು ನಿರುದ್ಯೋಗ ಮತ್ತು ಬೆಲೆ ಏರಿಕೆಯಿಂದ ಜನತೆ ಸಂಕಷ್ಟದಲ್ಲಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಮಂಜೇಶ್ವರ ಸಮೀಪದ ವರ್ಕಾಡಿ ಮಜೀರ್‌ಪಳ್ಳದಲ್ಲಿ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಪರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಆಡಳಿತ ಮತ್ತು ಪ್ರಸ್ತುತ ಎಲ್‌ಡಿಎಫ್ ಸರ್ಕಾರದ ನಡುವೆ ಇರುವ ವ್ಯತ್ಯಾಸವನ್ನು ಅಂಕಿ-ಅಂಶಗಳೊಂದಿಗೆ ವಿವರಿಸಿದರು. “ಕೇರಳ ಇಂದು ಸಾಲದ ಸುಳಿಯಲ್ಲಿ ಸಿಲುಕಿದೆ. ಭ್ರಷ್ಟಾಚಾರ ಮತ್ತು…

Read More

ಮಂಜೇಶ್ವರ ಚುನಾವಣೆಗೆ ಸಸ್ಪೆನ್ಸ್: ಲವಿನಾ ಎಂಟ್ರಿಯಿಂದ ಹೈ-ವೋಲ್ಟೇಜ್ ಫೈಟ್, ತ್ರಿಕೋನ ಕಾದಾಟಕ್ಕೆ ಹೊಸ ಟ್ವಿಸ್ಟ್ – ಸ್ವತಂತ್ರ ಅಭ್ಯರ್ಥಿಯಿಂದ ಶಾಕ್!

ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಮಂಜೇಶ್ವರ ಕ್ಷೇತ್ರದಲ್ಲಿ ಹೊಸ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಮಂಜೇಶ್ವರ ಪಂಚಾಯತ್ ಮಾಜಿ ಅಧ್ಯಕ್ಷೆ ಜೀನ್ ಲವಿನಾ ಮಾಂತೆರೋ ಅವರು ಅಂತಿಮ ಕ್ಷಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ತ್ರಿಕೋನ ಸ್ಪರ್ಧೆಗೆ ಹೊಸ ತಿರುವು ನೀಡಿದೆ. ಈ ಬೆಳವಣಿಗೆ ಪ್ರಮುಖ ರಾಜಕೀಯ ಪಕ್ಷಗಳ ಲೆಕ್ಕಾಚಾರವನ್ನು ಬದಲಾಯಿಸುವ ಸಾಧ್ಯತೆಯಿದ್ದು, ವಿಶೇಷವಾಗಿ ಬಿಜೆಪಿಗೆ ಇದು ಅನುಕೂಲಕರವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇನ್ನೊಂದೆಡೆ, ತಮ್ಮ ಸಾಂಪ್ರದಾಯಿಕ ಮತಬ್ಯಾಂಕ್‌ಗೆ ಧಕ್ಕೆಯಾಗುವ ಭೀತಿಯಲ್ಲಿ ಯುಡಿಎಫ್ ಪಾಳೆಯದಲ್ಲಿ ಆತಂಕ ಮನೆಮಾಡಿದೆ. ಮಂಜೇಶ್ವರ ಕ್ಷೇತ್ರದಲ್ಲಿ…

Read More
error: Content is protected !!