ವಯನಾಡು ಚೂರುಲ್ ಮಲೆಯಲ್ಲಿ ಮತ್ತೆ ವರುಣನ ರುದ್ರ ನರ್ತನ.ಶಾಶ್ವತ ಪರಿಹಾರಕ್ಕೆ ನಾಗರಿಕರ ಆಗ್ರಹ
ತಿರುವನಂತಪುರಂ : ಕಳೆದ ಬಾರಿ ಸುರಿದ ಕುಂಭ ದ್ರೋಣ ಮಳೆಗೆ ಇಡೀ ಮನುಕುಲವನ್ನೇ ಹೃದಯ ವಿದ್ರಾವಾಹಕ ಸನ್ನಿವೇಶಕ್ಕೆ ತಂದೊಡ್ಡಿದ್ದ ವಯನಾಡು ಜಿಲ್ಲೆಯ ಚೂರುಲ್ ಪೇಟೆಯ ಗುಡ್ಡ ಜರಿತ ಪ್ರದೇಶದಲ್ಲಿ ನಿನ್ನೆಯಿಂದ ನಿರಂತರವಾಗಿ ಸುರಿದ ಭಾರಿ ಮಳೆಯಿಂದ ಮತ್ತೆ ಅದೇ ಸ್ಥಿತಿ ಉಂಟಾಗಿದ್ದು ,ಶಾಶ್ವತ ಪರಿಹಾರಕ್ಕೆ ನಾಗರಿಕರು ಸರಕಾರಕ್ಕೆ ಒತ್ತಾಯ ಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ಎಡೆಬಿಡದೆ ಸುರಿದ ಮಳೆಯಿಂದ ಅಪಾರವಾದ ನಾಶ ನಷ್ಟ ಉಂಟಾಗಿದ್ದು ,ಸ್ಥಳೀಯರನ್ನು ಸೂಕ್ತವಾದ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.ಸ್ಥಳಕ್ಕಾಗಮಿಸಿದ ದುರಂತ ಪರಿಹಾರ ಸ್ಪೆಷಲ್ ಆಫೀಸರ್ ಹಾಗೂ ಜಿಲ್ಲಾಧಿಕಾರಿಯವರಲ್ಲಿ…