ಅವ್ಯವಸ್ಥೆಯ ಆಗರವಾದ ಬೇಕೂರು ರುದ್ರಭೂಮಿ ಈ ಶೋಚನೀಯಾವಸ್ಥೆಗೆ ಶಾಶ್ವತ ಪರಿಹಾರ ಎಂದು ?

ಉಪ್ಪಳ : ಮಂಗಲ್ಪಾಡಿ ಗ್ರಾಮ ಪಂಚಾಯತಿನ ಎಂಟನೇ ವಾರ್ಡಿನಲ್ಲಿರುವ ಬೇಕೂರು ರುದ್ರಭೂಮಿ ಅವ್ಯವಸ್ಥೆಯ ಆಗರವಾಗಿದ್ದು ,ತೀರಾ ಶೋಚನೀಯವಾದ ಸ್ಥಿತಿಯಲ್ಲಿದೆ.ಪರಿಶಿಷ್ಟ ಜಾತಿಯ ವಿಭಾಗಕ್ಕೆ ಮೀಸಲಾದ ಈ ಸ್ಮಶಾನ ಇದೀಗ ಸಂಪೂರ್ಣ ಕಾಡು, ಪೊದೆಗಳಿಂದ ಆವೃತವಾಗಿದೆ. ಪರಿಣಾಮ ಶವದ ಅಂತ್ಯ ಸಂಸ್ಕಾರ ಮಾಡಲು ಹರ ಸಾಹಸ ಪಡಬೇಕಾಗುತ್ತದೆ.ಸಂಸ್ಕಾರ ಮಾಡುವ ಶೆಡ್ ತೀವ್ರ ರೂಪದಲ್ಲಿ ಬಿರುಕು ಬಿಟ್ಟಿದ್ದು ಮಳೆಗಾಲದಲ್ಲಿ ಇಲ್ಲಿ ಶವ ಸಂಸ್ಕಾರ ಮಾಡಲು ಬಹಳ ಕಷ್ಟವಾಗುತ್ತದೆ ಎಂಬುವುದು ಸಾರ್ವಜನಿಕರ ಅಭಿಪ್ರಾಯ . 2008 ರಲ್ಲಿ ಅಲ್ಪ ಮೊತ್ತದ ಅನುದಾನದಲ್ಲಿ ಇಲ್ಲಿ…

Read More

ಉಪ್ಪಳ ಬಳಿಯ ದಡ್ಡಂಗಡಿ ಕಂಚಿಲ ನಿವಾಸಿ, (35) ರ ಹರೆಯದ ಇಲೆಕ್ಟಿಶಿಯನ್ ಶರಣ್ ರಾಜ್ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆ

ಮಂಜೇಶ್ವರ: ಉಪ್ಪಳ ಬಳಿಯ ದಡ್ಡಂಗಡಿ ಕಂಚಿಲ ನಿವಾಸಿ, ಟೈಲ‌ರ್ ದೂಮಣ್ಣ ಶೆಟ್ಟಿಗಾರ್ ರ ಪುತ್ರ ಇಲೆಕ್ಟಿಶಿಯನ್ ವೃತ್ತಿಯಲ್ಲಿ ತೊಡಗಿಕೊಂಡಿರುವ ಶರಣ್ ರಾಜ್ (35) ಇಂದು ಬೆಳಗ್ಗೆ ಮನೆಯೊಳಗೆ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಕೂಡಲೇ ಮನೆಯವರು ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ಶರಣ್ ರಾಜ್ ರನ್ನು ಕುಣಿಕೆಯಿಂದ ಕೆಳಗಿಳಿಸಿ ಉಪ್ಪಳದ ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಶರಣ್ ರಾಜ್ ಮೃತಪಟ್ಟಿದ್ದಾನೆ. ಇದೀಗ ಮೃತದೇಹವನ್ನು ಮಂಗಲ್ಪಾಡಿಯ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ನೇಣು ಬಿಗಿಯಲು…

Read More

ಶೀಘ್ರ ಕಲ್ಯಾಣ ಪ್ರಾಪ್ತಿ ಗೆ ಸ್ವಯಂವರ ಪಾರ್ವತಿ ಯಾಗ.ಜುಲೈ 5 ರಂದು ಅಂಬಾರು ಸದಾಶಿವ ಕ್ಷೇತ್ರ ದಲ್ಲಿ.

“‘ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು” ಎಂಬ ಮಾತಿನಂತೆ ಯಾವುದೇ ತಂದೆ ತಾಯಿಗಳಿಗೆ ತನ್ನ ಮಕ್ಕಳನ್ನು ಉನ್ನತ ಭವಿಷ್ಯಕ್ಕೆ ಹೊಂದಿಕೊಳ್ಳುವಂತೆ ಯೋಗ್ಯವಾದ ವಧು ವರರನ್ನು ತನ್ನ ಮಕ್ಕಳಿಗೆ ಅನ್ವೇಶಿಸಿ ಮದುವೆಯ ಭಾಗ್ಯವನ್ನು ಕಣ್ತುಂಬಿಸಿಕೊಳ್ಳುತ್ತಾರೆ.ಅದರಲ್ಲೂ ಹೆಣ್ಣು ಮಕ್ಕಳಿಗೆ ಶೀಘ್ರವಾಗಿ ಯೋಗ್ಯವಾದ ಸಂಬಂಧಗಳನ್ನು ಅನ್ವೇಷಣೆ ಮಾಡಿ ಬದುಕು ಕಟ್ಟಿಕೊಳ್ಳುವಂತೆ ಹೆತ್ತವರು ಅದೆಷ್ಟು ಕನಸುಗಳನ್ನು ಕಾಣುತ್ತಾರೆ. ಆದರೆ ಸ್ತ್ರೀಯರಿಗೆ ವಿವಾಹ ಭಾಗ್ಯವು ಮಂದಗತಿಯಲ್ಲಿ ಸಾಗುತ್ತಿದ್ದರೆ, ತಾನು ಅಂದುಕೊಂಡಂತಹ ವರ ಲಭಿಸದೆ ವಿವಾಹ ಭಾಗ್ಯವು ಮಟಕುಗೊಳ್ಳುತ್ತಿದ್ದರೆ ಶೀಘ್ರ ಕಲ್ಯಾಣ ಪ್ರಾಪ್ತಿಯಾಗಲು ಸ್ವಯಂವರ…

Read More

ಧಾರಾಕಾರ ಮಳೆಗೆ ಮೀಯಪದವುನಲ್ಲಿ ಗುಡ್ಡೆ ಕುಸಿದು ಆವರಣಗೋಡೆ ಹಾನಿ,ಮನೆ ಅಪಾಯದಂಚಿನಲ್ಲಿ ಆತಂಕದ ಸ್ಥಿತಿ

ಮಂಜೇಶ್ವರ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮೀಂಜ ಪಂಚಾಯತ್‌ನ ಮೀಯಪದವು ವಿದ್ಯಾವರ್ಧಕ ಹೈಸ್ಕೂಲ್‌ನ ಹಿಂಭಾಗದಲ್ಲಿರುವ ಕೃಷಿಕ ಬಾಬು ಎಂಬವರ ಮನೆ ಬಳಿಯಲ್ಲಿನ ಕೆಳಭಾಗದಲ್ಲಿ ಗುಡ್ಡೆ ಕುಸಿದು ಯಾವುದೇ ಕ್ಷಣದಲ್ಲಿ ಮನೆ ಧಾರಾಶಾಹಿಗೊಳ್ಳು ಭೀತಿ ಉಂಟಾಗಿದೆ. ಸೋಮವಾರದಂದು ಈ ಘಟನೆ ನಡೆದಿದೆ. ಇದರಿಂದ ಮನೆಯ ಸುತ್ತು ಕಲ್ಲಿನ ಆವರಣಗೋಡೆ ಸಂಪೂರ್ಣ ಕುಸಿದು ಹೋಗಿ ಮನೆ ಅಡಿಪಾಯ ಬಳಿ ತನಕ ತಲುಪಿದ್ದು, ಇದೀಗ ಕುಟುಂಬ ಸ್ಥಳಾಂತರಗೊಂಡಿದ್ದಾರೆ. ಇದೇ ವೇಳೆ ತೋಟದಲ್ಲಿರುವ ಬಾವಿ, ಮೋಟಾರ್ ಪಂಪು ಸಹಿತ ಅಡಿಕೆ,ತೆಂಗು,…

Read More

ಹೊಸಂಗಡಿ ಮಜಿಬೈಲ್ ನಿವಾಸಿ ವ್ಯಾಪಾರಿ ಅರುಣ್ (48) ವಿಧಿವಶ

ಮಂಜೇಶ್ವರ: ಬಂಗ್ರ ಮಂಜೇಶ್ವರ ಪೊಯ್ಯಕಂಡ ಪರಿಸರದಲ್ಲಿ ಕಳೆದೆ ಕೆಲವು ವರ್ಷಗಳಿಂದ ವ್ಯಾಪಾರಿಯಾಗಿದ್ದ ಮಜಿಬೈಲ್ ನಿವಾಸಿ ಅರುಣ್ (48) ನಿಧನ ಹೊಂದಿದ್ದಾರೆ.ಅಸೌಖ್ಯ ನಿಮ್ಮಿತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕಿತ್ಸೆಗೆ ಸ್ಪಂಧಿಸಿದ ಹಿನ್ನೆಲೆಯಲ್ಲಿ ಸಾವು ಸಂಭವಿಸಿದೆ.ಅಂತ್ಯ ಸಂಸ್ಕಾರ ಅಪರಾಹ್ನ 1 ಗಂಟೆಗೆ ರಾಮತ್ತಮಜಾಲ್‌ ಸಾರ್ವಜನಿಕ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಮೃತರು ಪತ್ನಿ, ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಧಾರಾಕಾರ ಮಳೆಗೆ ಮೀಯಪದವುನಲ್ಲಿ ಗುಡ್ಡೆ ಕುಸಿದು ಆವರಣಗೋಡೆ ಹಾನಿ: ಮನೆ ಅಪಾಯದಂಚಿನಲ್ಲಿ ಆತಂಕದ ಸ್ಥಿತಿ

ಧಾರಾಕಾರ ಮಳೆಗೆ ಮೀಯಪದವುನಲ್ಲಿ ಗುಡ್ಡೆ ಕುಸಿದು ಆವರಣಗೋಡೆ ಹಾನಿ, ಮನೆ ಅಪಾಯದಂಚಿನಲ್ಲಿ ಆತಂಕದ ಸ್ಥಿತಿ. ಮಂಜೇಶ್ವರ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮೀಂಜ ಪಂಚಾಯತ್‌ನ ಮೀಯಪದವು ವಿದ್ಯಾವರ್ಧಕ ಹೈಸ್ಕೂಲ್‌ನ ಹಿಂಭಾಗದಲ್ಲಿರುವ ಕೃಷಿಕ ಬಾಬು ಎಂಬವರ ಮನೆ ಬಳಿಯಲ್ಲಿನ ಕೆಳಭಾಗದಲ್ಲಿ ಗುಡ್ಡೆ ಕುಸಿದು ಯಾವುದೇ ಕ್ಷಣದಲ್ಲಿ ಮನೆ ಧಾರಾಶಾಹಿಗೊಳ್ಳು ಭೀತಿ ಉಂಟಾಗಿದೆ. ಸೋಮವಾರದಂದು ಈ ಘಟನೆ ನಡೆದಿದೆ. ಇದರಿಂದ ಮನೆಯ ಸುತ್ತು ಕಲ್ಲಿನ ಆವರಣಗೋಡೆ ಸಂಪೂರ್ಣ ಕುಸಿದು ಹೋಗಿ ಮನೆ ಅಡಿಪಾಯ ಬಳಿ ತನಕ ತಲುಪಿದ್ದು,…

Read More

ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ವರ್ಗ,ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿಕೆ

ಉಡುಪಿ: ಜಿಲ್ಲೆಯ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ವರ್ಗ ಮಾಡಿ ರಾಜ್ಯ ಸರಕಾರ ಇದೀಗ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.ಮೇಡಂ ಸ್ವರೂಪ ಟಿ.ಕೆ ರವರು ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ಸೂಚಿಸಿಲ್ಲ ಎಂದು ತಿಳಿದು ಬಂದಿದೆ.

Read More

ದಕ್ಷಿಣಕನ್ನಡದ ಜಿಲ್ಲಾಧಿಕಾರಿ, ಮಕ್ಕಳ ‘ರಜೆ ಕೊಡುವ ಡಿಸಿ’ ಮುಲೈ ಮುಗಿಲನ್ ವರ್ಗಾವಣೆ, ನೂತನ ಡಿಸಿ ದರ್ಶನ್!

ಮಂಗಳೂರು: ಕರಾವಳಿಯ ಪ್ರೀತಿಯ ಮಕ್ಕಳ ರಜೆ ಕೊಡುವ ಡಿಸಿಯ ವರ್ಗಾವಣೆಯಾಗಿದೆ. ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅದರಲ್ಲಿ ಕಳೆದ 2 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ಕೂಡಾ ದಿಢೀರ್ ಆಗಿ ವರ್ಗಾಯಿಸಿದೆ. ಅವರನ್ನು ಬೆಂಗಳೂರಿನ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನ‌ರ್ ಆಗಿ ವರ್ಗಾಯಿಸಲಾಗಿದೆ. ರಾಜ್ಯದಲ್ಲಿ ಒಟ್ಟು 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ…

Read More

ದುಬಾಯಿಯಲ್ಲಿ ಜೂನ್ 29 ರಂದು ಸಾಧಕರಿಗೆ ಸನ್ಮಾನದ ಜೊತೆ ದಶಮಾನದ ಸಂಭ್ರಮ

ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಇದೇ ಬರುವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ನಗರದ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ಜರಗಲಿರುವುದು ಎಂದು ಯಕ್ಷಗಾನ ಅಭ್ಯಾಸ ಕೇಂದ್ರದ ಸಂಚಾಲಕರಾದ ದಿನೇಶ್ ಶೆಟ್ಟಿ ಕೊಟ್ಟಿಂಜರವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸುತ್ತ ಜೂನ್ 29 ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆಯ ವರೆಗೆ ನಡೆಯುವ ಕಾರ್ಯಕ್ರಮಗಳಲ್ಲಿ ದಶಮ ಸಂಭ್ರಮದ ಪ್ರಯುಕ್ತ ಯುಎಇಯ…

Read More

ಮಂಜೇಶ್ವರ ರಾಗಂ ಜಂಕ್ಷನ್‌ ಹಾಗೂ ಪರಿಸರದಲ್ಲಿ ಭಾರೀ,25 ಕ್ಕೂ ಮಿಕ್ಕ ಮನೆಗಳು ಜಲಾವೃತ,ಮನೆಯೊಳಗಿದ್ದ ದಾಖಲೆ ಪತ್ರಗಳು ವಿವಿಧ ಸಾಮಾಗ್ರಿಗಳು ಸೇರಿದಂತೆ ಲಕ್ಷಾಂತರ ಮೌಲ್ಯದ ಸೊತ್ತುಗಳು ನಾಶ

ಮಂಜೇಶ್ವರ ರಾಗಂ ಜಂಕ್ಷನ್‌ ಹಾಗೂ ಪರಿಸರದಲ್ಲಿ ಭಾರೀ ಮಳೆಯಿಂದ ಸುಮಾರು 25 ಕ್ಕೂ ಮಿಕ್ಕ ಮನೆಗಳು ಜಲಾವೃತಗೊಂಡು ಮನೆಯೊಳಗಿದ್ದ ದಾಖಲೆ ಪತ್ರಗಳು ವಿವಿಧ ಸಾಮಾಗ್ರಿಗಳು ಸೇರಿದಂತೆ ಲಕ್ಷಾಂತರ ಮೌಲ್ಯದ ಸೊತ್ತುಗಳು ನಾಶಗೊಂಡಿತ್ತು.ಮಂಜೇಶ್ವರ ಗ್ರಾಮ ಪಂಚಾಯತು ಅಧಿಕಾರಸ್ಕರ ಅನಾಸ್ತವೇ ಇದಕ್ಕೆ ಮೂಲ ಕಾರಣವಾಗಿತ್ತು.ಮಂಜೇಶ್ವರ ರೈಲ್ವೇ ಹಳಿಯ ಪರಿಸರದಲ್ಲಿರುವ ಸುರುಮ ತೋಡಿನಲ್ಲಿ ಭಾರೀ ಪ್ರಮಾಣದ ತ್ಯಾಜ್ಯಗಳು ತುಂಬಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಒಂದು ಗ್ರಾಮವೇ ನೆರೆ ಹಾನಿಗೊಳಗಾಗಿತ್ತು. ಇಷ್ಟೆಲ್ಲಾ ಆಗಿ ಕೂಡಾ ಪಂಚಾಯತು ಅಧಿಕಾರಸ್ಥರು…

Read More
error: Content is protected !!