ಮೂಡುಬಾಳಿಕೆ ಪ್ರದೇಶದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಇರುವ ಏಕೈಕ ರಸ್ತೆಯನ್ನು ಹೊರತುಪಡಿಸಿ ಕೋಸ್ಟ್ ಗಾರ್ಡ್ ಕಂಪೌಂಡ್ ನಿರ್ಮಾಣ ಮಾಡುವಂತೆ ಆಗ್ರಹ

ಮಂಗಳೂರು:ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಂಜಾರು 3ನೇ ವಾರ್ಡ್ ಮೂಡುಬಾಳಿಕೆ ಪ್ರದೇಶದಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿಯ 10 ಕುಟುಂಬಗಳ ಏಕೈಕ ರಸ್ತೆ ಸಂಪರ್ಕವನ್ನು ಭಾರತೀಯ ಕೋಸ್ಟ್ ಗಾರ್ಡ್ ಕಂಪೌಂಡ್ ನಿರ್ಮಾಣದಿಂದ ಸಂಪರ್ಕ ಕಡಿತವಾಗುವ ಭೀತಿಯಲಿದ್ದು ಇದರಿಂದ ಆ ಭಾಗದಲ್ಲಿ ವಾಸಿಸುವ ಜನರ ಪರಿಸ್ಥಿತಿ ಅತಂತ್ರವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.)ಯ ಜಿಲ್ಲಾ ಸಂಘಟನಾ ಸಂಚಾಲಕ ರಘು ಕೆ. ಎಕ್ಕಾರು ಆರೋಪಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಕಿಡಿಕಾರಿದ ಅವರು , ಸುಮಾರು…

Read More

ಪುತ್ತೂರಿನಲ್ಲಿ ಭಾರಿ ಗಾಂಜಾ ವಶ: 106 ಕಿಲೋ ಗಾಂಜಾ ಜಪ್ತಿ, ಇಬ್ಬರ ಬಂಧನ

ದಿನಾಂಕ:19-01-2026 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಸದ್ರಿ ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ನಿಲ್ಲಿಸಲಾಗಿರುತ್ತದೆ. ಕಾರಿನ ಚಾಲಕನಲ್ಲಿ ವಿಚಾರಿಸಲಾಗಿ ಆತನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಪಿ(37) ಎಂಬುದಾಗಿ ತಿಳಿಸಿದ್ದು ಆತನ ವರ್ತನೆಯಿಂದ ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ…

Read More

ಕಲೋತ್ಸವದ 60 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ, ಅನಾರೋಗ್ಯ ಕಾರಣದಿಂದ ವಿದ್ಯಾರ್ಥಿನಿಗೆ ಆನ್‌ಲೈನ್ ಮೂಲಕ ಸ್ಪರ್ಧಿಸಲು ಅವಕಾಶ

ಕೇರಳದ ಕಾಸರಗೋಡು ಜಿಲ್ಲೆಯ ಪದ್ನಾ ಗ್ರಾಮದ ಸಿಯಾ ಫಾತಿಮಾ ಎಂಬ 10ನೇ ತರಗತಿ ವಿದ್ಯಾರ್ಥಿನಿ, ಅಪರೂಪದ ರೋಗದಿಂದ ಬಳಲುತ್ತಿದ್ದರೂ ಸಹ 64ನೇ ಕೇರಳ ಶಾಲಾ ಕಲೋತ್ಸವದಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಿ ‘ಎ’ ಗ್ರೇಡ್ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಸಿಯಾ ಫಾತಿಮಾ ಅವರು ಅರಬಿಕ್ ಪೋಸ್ಟರ್ ವಿನ್ಯಾಸ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆರೋಗ್ಯ ಸಮಸ್ಯೆಗಳ ಕಾರಣದಿಂದಾಗಿ ಅವರು ತ್ರಿಶೂರಿನಲ್ಲಿ ನಡೆದ ಕಲೋತ್ಸವ ಸ್ಥಳಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ಆದರೂ ವಿಶೇಷ ಅನುಮತಿಯೊಂದಿಗೆ ತಮ್ಮ ಮನೆಯಲ್ಲಿಯೇ ಲೈವ್ ವಿಡಿಯೋ ಸಂಪರ್ಕದ ಮೂಲಕ ಸ್ಪರ್ಧಿಸಿದರು.ಕಲೋತ್ಸವದ…

Read More

ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುಳ್ಯ: ಸುಳ್ಯದ ಕುಲ್ಕುಂದದಲ್ಲಿ ಇಂದು ಮಧ್ಯಾಹ್ನ ಇಬ್ಬರು ಯುವಕರು ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ.ಮೃತರನ್ನು ಸುಬ್ರಹ್ಮಣ್ಯ ಮೂಲದ ಉದ್ಯಮಿ ಹರಿಪ್ರಸಾದ್ ಕೊಲ್ಲಮೊಗರು ಮತ್ತು ಮತ್ತೊಬ್ಬ ಯುವಕ ಸುಜೀತ್ ಕೊಲ್ಲಮೊಗರು ಎಂದು ಗುರುತಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, “ಇಬ್ಬರು ಈಜಲು ನದಿಗೆ ಹೋಗಿದ್ದಾಗ ಇದ್ದಕ್ಕಿದ್ದಂತೆ ನೀರಿನಲ್ಲಿ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ.”ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ ಬಗ್ಗೆ ತನಿಖೆ ಆರಂಭಿಸಿದ್ದಾರೆ. ನದಿ ದಂಡೆಗಳ ಬಳಿ,…

Read More

ಚಟ್ಟಂಚಾಲ್ ಬಳಿ ಬಿಎಂಡಬ್ಲ್ಯು–ಲಾರಿ ಡಿಕ್ಕಿ: ಮಂಗಳೂರು ಮೂಲದ ಇಬ್ಬರು ಮೃತ್ಯು

ಮಂಜೇಶ್ವರ: ರಾ. ಹೆದ್ದಾರಿಯ ಕಾಸರಗೋಡು ಚಟ್ಟಂಚಾಲ್ ನಲ್ಲಿ ಸೋಮವಾರ ರಾತ್ರಿ ಬಿಎಂಡಬ್ಲ್ಯು ಕಾರು ಮತ್ತು ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.ಮಂಗಳೂರು ಸಜಿಪ ಪರಿಸರವಾಸಿಗಳಾದ ಆಸಿಫ್ ಹಾಗೂ ಲತೀಫ್ ಮೃತ ವ್ಯಕ್ತಿಗಳೆಂದು ಗುರುತಿಸಲಾಗಿದೆ. ಚಟ್ಟಂಚಾಲ್ ಬಳಿಯ 55ನೇ ಮೃಲ್ ಎಂಬಲ್ಲಿ ಸೋಮವಾರ ರಾತ್ರಿ ಅಪಘಾತ ನಡೆದಿದ್ದು, ಮಂಜೇಶ್ವರ ಗೇರು ಕಟ್ಟೆ ನಿವಾಸಿಗಳಾದ ರಿಯಾಝ್ ಹಾಗೂ ಹಾಶಿಂ ಗಾಯಗೊಂಡಿದ್ದಾರೆ. ವಯನಾಡಿಗೆ ಪ್ರವಾಸ ಹೋಗಿದ್ದ ಗೆಳೆಯರು ಮರಳಿ ಊರಿಗೆ ಬರುವಾಗ ಈ ದುರ್ಘಟನೆ ನಡೆದಿದೆ. ಮೃತರು…

Read More

”ಬೇಕಲ ರಾಮನಾಯಕ ಸಾಹಿತ್ಯ ಪ್ರಶಸ್ತಿ 2026 ಮುಡೇರಿಸಿಕೊಂಡ ಗಿರೀಶ್ ಪಿಎಂ

ಕಾಸರಗೋಡು:ಕನ್ನಡ ಭವನ ಮತ್ತು ಗ್ರಂಥಾಲಯಕನ್ನಡ ಭವನ ಪ್ರಕಾಶನ ಕಾಸರಗೋಡು. ಕನ್ನಡ ಭವನದ ರಜತ ಸಂಭ್ರಮ ನಾಡು ನುಡಿ ಹಬ್ಬ 2026 ಪ್ರಯುಕ್ತ ನೀಡಲಾಗುವ ಮಹಾನ್ ಇತಿಹಾಸಗಾರ ಮತ್ತು ಕರಾವಳಿ ಭಾಗದ ಸಂಸ್ಕೃತಿ, ಸಾಹಿತ್ಯ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡಿದ ಮಹನೀಯರಾದ ಬೇಕಲ ರಾಮನಾಯಕರ ಹೆಸರಿನಲ್ಲಿ ಕೊಡಮಾಡುವ ಪ್ರತಿಷ್ಠಿತ ”ಬೇಕಲ ರಾಮನಾಯಕ ಸಾಹಿತ್ಯ ಪ್ರಶಸ್ತಿ 2026 ” ನ್ನು ಯುವ ಪತ್ರಕರ್ತ, ಸಾಹಿತಿ ಗಿರೀಶ್ ಪಿಎಂ ಇವರಿಗೆ ಜ.18ರಂದು ಕಾಸರಗೋಡು ಕನ್ನಡ ಭವನ ಶ್ರೀ ಕೃಷ್ಣ ದೇವರಾಯ…

Read More

ಜೋಡಿ ಕೊಲೆ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆಜೋಡಿ ಕೊಲೆ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು ಹೊರವಲಯದ ಮೂಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬುವವರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ 29-04-2020ರಂದು ಆರೋಪಿ ಆಲ್ಫೋನ್ಸ್ ಸಲ್ದಾಣ, ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿನ್ಸಿ ಯಾನೆ…

Read More

ದುರ್ಗಿಪಳ್ಳ ತಿರುವಿನಲ್ಲಿ ತ್ಯಾಜ್ಯ ಮಾಲಿನ್ಯ ವಿರುದ್ಧ ಟೀಮ್ ಕಲ್ಕಿ ಮಂಜೇಶ್ವರ ಶ್ರಮದಾನ; ಶುಚಿತ್ವ ಅಭಿಯಾನ ಹಾಗೂ ಸೂಚನಾ ಫಲಕ ಅಳವಡಿಕೆ

ಮಂಜೇಶ್ವರ – ಸುಬ್ರಹ್ಮಣ್ಯ ಅಂತರ್ ರಾಜ್ಯ ರಸ್ತೆ ಪೈಕಿ ಹೊಸಂಗಡಿ ಬಳಿಯ ದುರ್ಗಿಪಳ್ಳ ತಿರುವಿನಲ್ಲಿ ವ್ಯಾಪಕವಾಗಿ ತ್ಯಾಜ್ಯ ಮಾಲಿನ್ಯಗಳನ್ನು ರಸ್ತೆ ಬಳಿ ನಿಕ್ಷೇಪಿಸಿದ್ದು, ಈ ಬಗ್ಗೆ ಪಂಚಾಯತ್ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಳ್ಳದ ಕಾರಣ ಟೀಮ್ ಕಲ್ಕಿ ಮಂಜೇಶ್ವರ ವತಿಯಿಂದ ಇಂದು ಶ್ರಮದಾನ ನಡೆಸುವ ಮೂಲಕ ಸಂಪೂರ್ಣ ಶುಚಿತ್ವ ಅಭಿಯಾನ ನಡೆಸಿದರು. ಈ ಒಂದು ಸಮಸ್ಯೆಯನ್ನು ಆದಷ್ಟು ಬೇಗನೆ 2 ಪಂಚಾಯತಿನ ಸಂಬಂಧ ಪಟ್ಟ ಅಧಿಕಾರಿಗಳು ಪರಿಹರಿಸಬೇಕು.. ಹಾಗೂ ಮುಂದಿನ ದಿನಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ತ್ಯಾಜ್ಯ…

Read More

ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ ಟ್ರಾಮಡೋಲ್ ಸಾಗಣೆ: ಯುವಕ ಬಂಧನ, 55 ಮಾತ್ರೆಗಳು ವಶ

ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ ನಡೆಸಿದ ವಾಹನ ತಪಾಸಣೆಯ ವೇಳೆ ಟ್ರಾಮಡೋಲ್ ಹೈಡ್ರೋಕ್ಲೋರೈಡ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಯುವಕನನ್ನು ಎಕ್ಸೈಸ್ ತಂಡವು ಬಂಧಿಸಿದೆ. ಮಂಗಳೂರು ಭಾಗದಿಂದ ಕಾಸರಗೋಡ್ ಕಡೆಗೆ ತೆರಳುತ್ತಿದ್ದ KL 58 Q 5171 ಸಂಖ್ಯೆಯ ಬಸ್ಸಿನಲ್ಲಿ ನಡೆಸಿದ ತಪಾಸಣೆಯಲ್ಲಿ ಉತ್ತರ ಪ್ರದೇಶದ ನಿವಾಸಿ ರಾಹತ್ ಜಾನ್ ಎಂಬಾತನಿಂದ 23.351 ಗ್ರಾಂ ಟ್ರಾಮಡೋಲ್ ಹೈಡ್ರೋಕ್ಲೋರೈಡ್ (55 ಮಾತ್ರೆಗಳು) ವಶಪಡಿಸಿಕೊಳ್ಳಲಾಗಿದೆ. ಎಕ್ಸೈಸ್ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಕೆ. ಶಿಜಿಲ್ ಕುಮಾರ್ ಅವರ ನೇತೃತ್ವದ ತಂಡವು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ. ಆರೋಪಿಯ…

Read More

ನರೇಗ ಬಚಾವೋ ಸಂಗ್ರಾಮ ರಾಷ್ಟ್ರವ್ಯಾಪಿ ಹೋರಾಟ: ಕೇಂದ್ರ ಸರಕಾರದ ವಿರುದ್ಧ ಬಂಟ್ವಾಳದಲ್ಲಿ ಕಾಂಗ್ರೆಸ್ ಪಾದಯಾತ್ರೆ ಘೋಷಣೆ – ರಮಾನಾಥ್ ರೈ

ಬಂಟ್ವಾಳ: ಯುಪಿಎ ಸರಕಾರದ ಅವಧಿಯಲ್ಲಿ ಜಾರಿಯಾದ ಮಹತ್ವಾಕಾಂಕ್ಷೆಯ ಕಾಯ್ದೆಯ ಮತ್ತು ಯೋಜನೆಗಳ ಹೆಸರು ಬದಲಾವಣೆ ಮಾಡಲು ಹೊರಟು ಕಾರ್ಯಕ್ರಮಗಳ ಮೂಲ ಸ್ಚರೂಪವೇ ಬದಲಾಗಿದೆ.ಅ ಕಾರಣಕ್ಕಾಗಿ ಕೇಂದ್ರ ಸರಕಾರದ ವಿರುದ್ದ ನರೇಗ ಬಚಾವೋ ಸಂಗ್ರಾಮ ಹಮ್ಮಿಕೊಂಡಿದ್ದು,ರಾಷ್ಟ್ರ ವ್ಯಾಪಿ ಸಂಗ್ರಾಮವಾಗಿದೆ. ಇದು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮಗಳನ್ಬು ಬೇರೆ ಬೇರೆ ರೀತಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಹೇಳಿದರು.ಅವರು ಪಾಣೆಮಂಗಳೂರು ಮತ್ತು ಬಂಟ್ವಾಳ ಕಾಂಗ್ರೆಸ್ ವತಿಯಿಂದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ…

Read More
error: Content is protected !!