ವಿಧವೆಯರನ್ನು ಮರುಮದುವೆಯಾಗುವುದೆಂದು ನಂಬಿಸಿ ವಂಚಿಸಿದಆರೋಪಿಯ ಬಂಧನ
ಕಾಸರಗೋಡು: ಮರು ಮದುವೆಗೆ ಬಯಸುತ್ತಿದ್ದ ವಿಧವೆ ಮಹಿಳೆಯರನ್ನು ಮದುವೆಯಾಗುವ ಭರವಸೆಯಿಂದ ಬಲೆಗೆ ಬೀಳಿಸಿ , ಅವರ ಜೊತೆ ಸುತ್ತಾಡಿ ಲೈಂಗಿಕವಾಗಿ ಬಳಸಿಕೊಂಡು ವಿಲಾಸಿ ಜೀವನ ನಡೆಸಿ ವಂಚಿಸುತ್ತಿದ್ದ ವ್ಯಕ್ತಿಯನ್ನು ಕಾಸರಗೋಡು ವನಿತಾ ಪೋಲೀಸರು ಬಂಧಿಸಿದ್ದಾರೆ. ಕೇರಳದ ತೃಶ್ಶೂರು ಜಿಲ್ಲೆಯ ಕೈಪಮಂಗಲಂ ಕೂರಿಕಳ ನಿವಾಸಿ ಶೋಭಿ ಯಾನೆ ಪ್ರಶೋಬ್ (36)ಬಂಧಿತ ವ್ಯಕ್ತಿಯಾಗಿದ್ದಾನೆ. ಕಾಸರಗೋಡು ವನಿತಾ ಪೋಲೀಸ್ ಠಾಣಾ ವ್ಯಾಪ್ತಿಯ ಓರ್ವ ಮಹಿಳೆ ಜಿಲ್ಲಾ ಪೋಲೀಸ್ ವರಿಷ್ಠರಿಗೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಈತನ ಕುರಿತು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ….