ವಿನೂತನ ಕಾರ್ಯಯೋಜನೆ ಯೊಂದಿಗೆ ನೂತನ ಶೈಕ್ಷಣಿಕ ವರ್ಷ.

2025-26 ನೇ ಸಾಲಿನ ನೂತನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ನೈತಿಕತೆ ಮತ್ತು ಸನ್ನಡತೆಯ ಶಿಕ್ಷಣಕ್ಕೆ ಸರಕಾರ ಮುಂದಾಗಿದ್ದು ನೂತನ ಕಾರ್ಯ ಯೋಜನೆ ಯನ್ನು ಜಾರಿಗೆ ತರಲಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಾಗಿ ಶಾಲಾ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಡ್ರಗ್ಸ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳಿಗೆ ಹೆಚ್ಚಾಗಿ ಬಲಿಯಾಗಿ ಆದರ್ಶವಾಗಿರಬೇಕಾದ ವಯಸ್ಸಿನಲ್ಲಿ ತನ್ನ ಜೀವನವನ್ನೇ ಬಲಿ ಕೊಟ್ಟ ಅದೆಷ್ಟೋ ಪ್ರಸಂಗಗಳು ನಡೆದಿದೆ.ಈ ನಿಟ್ಟಿನಲ್ಲಿ 2025 -26 ನೇ ಸಾಲಿನ ನೂತನ ಶೈಕ್ಷಣಿಕ ವರ್ಷದಲ್ಲಿ ಕೇರಳ ಶಿಕ್ಷಣ ಇಲಾಖೆಯೂ ಇದೆ…

Read More

ಪೆಟ್ರೋಲ್ ಬಂಕ್ ಟ್ಯಾಂಕ್ ನಿರ್ಮಾಣಕ್ಕೆ ಅಗೆದ ಹೊಂಡದಲ್ಲಿ ಜೀರ್ಣಾವಸ್ಥೆಯಲ್ಲಿ ಪುರುಷ ಶವ ಪತ್ತೆ

ಮಂಜೇಶ್ವರ : ಪೆರಿಯ ನವೋದಯ ನಗರದಲ್ಲಿ ನಿರ್ಮಾಣದಲ್ಲಿರುವ ಪೆಟ್ರೋಲ್ ಬಂಕ್ ನ ಟ್ಯಾಂಕ್ ನಿರ್ಮಿಸಲು ಅಗೆದ ಹೊಂಡದಲ್ಲಿ ಜೀರ್ಣಾವಸ್ಥೆಯಲ್ಲಿರುವ ಪುರುಷನ ಶವವೊಂದು ಪತ್ತೆಯಾಗಿದೆ. ಶವದ ಗುರುತು ಪತ್ತೆಯಾಗಿಲ್ಲ. ಗುರುವಾರ ಮಧ್ಯಾಹ್ನದ ಸುಮಾರಿಗೆ ಆಳವಿರುವ ಹೊಂಡದಲ್ಲಿ ಶವ ಮಣ್ಣಿನಲ್ಲಿ ಕೊಳೆತು ಜೀರ್ಣಾವಸ್ಥೆಯಲ್ಲಿ ಪತ್ತೆಯಾಗಿದೆ.ಪೆಟ್ರೋಲ್ ಬಂಕ್ ಪರಿಸರದಲ್ಲಿ ದುರ್ಗಂಧ ಭೀರಿದ ಹಿನ್ನೆಲೆಯಲ್ಲಿ ಪರಿಸರದ ಮನೆಯವರು ಆಗಮಿಸಿ ನಡೆಸಿದ ಶೋಧದಲ್ಲಿ ಶವ ಪತ್ತೆಯಾಗಿದೆ. ಶವ 3 ದಿನ ಹಳೆಯದಾಗಿರಬಹುದಾಗಿ ಶಂಕಿಸಲಾಗಿದೆ. ಮಾಹಿತಿ ಅರಿತು ಊರವರು ಹಾಗೂ ಬೇಕಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Read More

ಕರ್ನಲ್ ಸೋಫಿಯಾ ಖುರೇಷಿ ಕುರಿತಾಗಿ ವಿವಾದಾತ್ಮಕ ಹೇಳಿಕೆ: ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲಿ ಎಫ್ ಐ ಆರ್?

ಕರ್ನಲ್ ಸೋಫಿಯಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಳಗಾವಿ ಎಸ್‌ಪಿಗೆ ಗೃಹ ಸಚಿವ ಪರಮೇಶ್ವರ್ ಸೂಚಿಸಿದ್ದಾರೆ. ಇದು ಕರ್ನಲ್ ಖುರೇಷಿ ಅವರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೇನಾ ಮಾಹಿತಿಯನ್ನು ಹಂಚಿಕೊಂಡಿದ್ದ ಕರ್ನಲ್ ಸೋಫಿಯಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಮಧ್ಯಪ್ರದೇಶದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ…

Read More

‘ಕೊತ್ತಲವಾಡಿ ಚಿತ್ರದ ಪ್ರಚಾರಕ್ಕೆ ಯಶ್ ಸಾತ್ ‘; ‘ರಾಕಿ ಭಾಯ್’ ಅಮ್ಮ ಚಿತ್ರದ ನಿರ್ಮಾಪಕಿ

ಪೃಥ್ವಿ ಅಂಬಾರ್ ಅಭಿನಯದ ‘ಕೊತ್ತಲವಾಡಿ’ ಸಿನಿಮಾದಲ್ಲಿ ಮಂಡ್ಯ ಸೊಗಡಿನ ಕಥೆ ಇದ್ದು, ಪೃಥ್ವಿ ಮೊದಲ ಬಾರಿಗೆ ಆಕ್ಷನ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ಈ ಚಿತ್ರವನ್ನು ಶ್ರೀರಾಜ್ ನಿರ್ದೇಶಿಸಿದ್ದಾರೆ. ಈ ಸಿನಿಮಾವು ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕೊತ್ತಲವಾಡಿ…ಚಾಮರಾಜನಗರ ಜಿಲ್ಲೆಯ ಒಂದು ಸಣ್ಣ ಹಳ್ಳಿ. ಹಳ್ಳಿಯ ಯುವಕ, ಹಳ್ಳಿಯ ಲವ್‌ ಸ್ಟೋರಿ, ಹಳ್ಳಿ ರಾಜಕೀಯ, ಹಳ್ಳಿಯ ಹಾಡು ಹಸೆ ಕುರಿತ ಸಾಕಷ್ಟು ಸಿನಿಮಾಗಳು ಬಂದಿವೆ. ಅದರೆ ‘ಕೊತ್ತಲವಾಡಿ’ ಅದಲ್ಲ….

Read More

ತುಳುಮಣ್ಣಿನ ಸಂಸ್ಕೃತಿಯ ಜೀವಾಳ.ಪತ್ತನಾಜೆ.

ಬೆಮ್ಮೆರೆ ಸೃಷ್ಟಿಯ ತುಳು ನಾಡಿನ ಕೆಲವು ಸಂಪ್ರದಾಯ ಆಚರಣೆಗಳು ಈ ಮಣ್ಣಿನ ಸತ್ಯವನ್ನು ಸತ್ವವನ್ನು ಇನ್ನೂ ಜೀವಂತವಾಗಿರಿಸಿದೆ ಎಂದರೆ ತಪ್ಪಾಗಲಾರದು ಇಂತಹ ಆಚರಣೆಗಳು ನಮ್ಮ ಶ್ರೀಮಂತಿಕೆಯನ್ನು ಮುಂದಿನ ತಲೆಮಾರಿಗೆ ತಿಳಿಸುವುದರಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.ಇಂತಹ ಆಚರಣೆಯಲ್ಲಿ ಕೆಲವು ವೈಜ್ಞಾನಿಕ ಸತ್ಯವೂ ಅಡಗಿರುತ್ತದೆ.ಆಟಿಡೊಂಜಿ ಕೂಟ, ಪತ್ತನಾಜೆ, ಕೇಡ್ಡಸ, ಕುರಲ್ ಪರ್ಬ. ಮುಂತಾದ ಆಚರಣೆಗಳು ಸಂಪ್ರದಾಯದ ತಲಹದಿಯಲ್ಲಿ ಹಾದಿ ತಪ್ಪದೇ ಆಚರಿಸಲ್ಪಡುವ ಅಗತ್ಯವಿದೆ. ಇಂತಹ ಸಂಪ್ರದಾಯದ ಆಚರಣೆಯಲ್ಲಿ ಪ್ರಮುಖವಾದ ಒಂದು ಆಚರಣೆಯೇ ‘ ಪತ್ತನಾಜೆ’. ಈ ಆಚರಣೆಯು ತುಳುವಿನ ಬೆಷ್ಯ…

Read More

ವರ್ಕಾಡಿ ದೇವಂದಪಡ್ದ್ಪು ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸಮಾಪ್ತಿ

ದೇವಂದಪಡ್ದ್ಪು ಶ್ರೀ ಮಹಾವಿಷ್ಣು ದೇವಸ್ಥಾನ ಇದರ ವಾರ್ಷಿಕ ಜಾತ್ರೋತ್ಸವ ಇತ್ತೀಚೆಗೆ ನಡೆಯಿತು ಜಾತ್ರೋತ್ಸವದ ಪೂರ್ವಭಾವಿಯಾಗಿ ಸಂಧ್ಯಾ ಭಜನೆಯನ್ನು ಹಮ್ಮಿಕೊಳ್ಳಲಾಗಿತ್ತು ಎಳನೇ ದಿವಸದ ಸಂಧ್ಯಾ ಭಜನೆಯನ್ನು ಮುಂಬಯಿ ಉದ್ಯಮಿ ಬಾಸ್ಕರ ಪೂಜಾರಿ ದೊಡುಗುರಿ, ಕನಿಲ ಭಗವತಿ ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ರಾದ ಗಣೇಶ್ ಪಾವೂರು , ಶ್ರೀಮತಿ ವಿದ್ಯಾ ಹರೀಶ್ ಸುವರ್ಣ ಮುಡಿಮಾರ್, ಆನಂದ ಬಲ್ಲೂರು, ಶ್ರೀಮತಿ ದೀಪ ರಂಜನ್ ತಲಪಾಡಿ,ಕೋರಿಮುಗೇರ್ ನವೀನ್ ಕುಮಾರ್ ದಂಪತಿ ಯರು, ದೀಪ ಬೆಳಗಿಸಿ ಉದ್ಘಾಟಿಸಿದರು. ಭಜನಾ ಸಂಕೀರ್ತನೆಯಲ್ಲಿ ನಾಗಮೂಲ ಭಜನಾ…

Read More

ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ 100% ಫಲಿತಾಂಶ

ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಸತತ 20ನೇ ಬಾರಿಗೆ 100% ಫಲಿತಾಂಶವನ್ನು ಸಾಧಿಸುವ ಮೂಲಕ ಮತ್ತೊಮ್ಮೆ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಸಾಧನೆ ಮೆರೆದಿದೆ. ಒಟ್ಟು 76 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 54 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 97% ಅಂಕಗಳೊಂದಿಗೆ ಕುಮಾರಿ ತನ್ವಿ ಶೆಟ್ಟಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.ಕನ್ನಡ ಭಾಷೆಯಲ್ಲಿ 7 ವಿದ್ಯಾರ್ಥಿಗಳು ಮತ್ತು ಗಣಿತದಲ್ಲಿ ಒಬ್ಬ ವಿದ್ಯಾರ್ಥಿ 100ಕ್ಕೆ 100 ಅಂಕ…

Read More

ಪೊಲೀಸ್ ಗುಪ್ತ ಕಾರ್ಯಾಚರಣೆ ನಕಲಿ ಸರ್ಟಿಫಿಕೇಟ್ ನಿರ್ಮಿಸುವ ಕೇಂದ್ರ ಪತ್ತೆ

ಪೊಲೀಸರು ನಡೆಸಿದ ಗುಪ್ತ ಕಾರ್ಯಾಚರಣೆಯಲ್ಲಿ ಹೊಸದುರ್ಗದಲ್ಲಿ ಕಾರ್ಯವೆಸಗುತ್ತಿದ್ದ ನಕಲಿ ಸರ್ಟಿಫಿಕೇಟ್ ಹಾಗೂ ದಾಖಲೆಪತ್ರಗಳನ್ನು ನಿರ್ಮಿಸುವ ಗುಪ್ತ ಕೇಂದ್ರಗಳನ್ನು ಪತ್ತೆಹಚ್ಚಿದ್ದಾರೆ. ಇದಕ್ಕೆ ಸಂಬಂಧಿಸಿ ಹೊಸದುರ್ಗ ಕಡಪುರದ ಶಿಹಾಬ್ (38), ಮುಳಿಕ್ಕಾಂ ಕ್ಲಾಯಿಕೋಡಿನ ಪಿ. ರವೀಂದ್ರನ್ (51) ಮತ್ತು ಹೊಸದುರ್ಗ ಕೊವ್ವಲ್‌ಪಳ್ಳಿಯ ಸಂತೋಷ್ ಕುಮಾರ್ (45) ಎಂಬವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಟಿ. ಅಖಿಲ್ ನೇತೃತ್ವದ ಪೊಲೀಸರು ನಿನ್ನೆ ಈ ಕಾರ್ಯಾಚರಣೆ ನಡೆಸಿದ್ದಾರೆ. ನೆಟ್ ಫಾರ್ ಯೂ ಕೆಫೆ ಹಾಗೂ ಬಂಧಿತರಾದ ಆರೋಪಿಗಳ ಪೈಕಿ…

Read More

ಸುಪ್ರೀಂಕೋರ್ಟ್ ನೂತನ ಸಿಜೆಐ ಆಗಿ ಬಿಆರ್ ಗವಾಯಿ ಅಧಿಕಾರ ಸ್ವೀಕಾರ, ದೇಶದ ಮೊದಲ ಬೌದ್ಧ ನ್ಯಾಯಾಧೀಶ ಎಂಬ ಹೆಗ್ಗಳಿಕೆ

ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 124(2) ನೇ ವಿಧಿಯ ಅಡಿಯಲ್ಲಿ ಬಿಆರ್ ಅವರ ನೇಮಕಾತಿಯನ್ನು ಮಾಡಿದ್ದಾರೆ. ಕಾನೂನು ಮತ್ತು ನ್ಯಾಯ ಸಚಿವಾಲಯವು ಏಪ್ರಿಲ್ 29 ರಂದು ಅವರ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿತು. ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಬಿಆರ್ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಸಿಜೆಐ ಆಗುವ ಮೂಲಕ ಭಾರತದ…

Read More
error: Content is protected !!