Headlines

ಪಯ್ಯನ್ನೂರು: ಬಾಲಕನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ; ಮರಣೋತ್ತರ ವರದಿ ಬಹಿರಂಗ

ಕಾಸರಗೋಡು/​ಕಣ್ಣೂರು: ಪಯ್ಯನ್ನೂರಿನಲ್ಲಿ ಒಂದೂವರೆ ವರ್ಷದ ಬಾಲಕ ದೇವಾಂಶ ಶೌರ್ಯ ಚಿಕಿತ್ಸೆ ವೇಳೆ ಮೃತಪಟ್ಟ ಪ್ರಕರಣದಲ್ಲಿ ವೈದ್ಯರ ಗಂಭೀರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ದೃಢಪಟ್ಟಿದೆ.ಅರಿವಳಿಕೆ ನೀಡಿದ ತಕ್ಷಣ ಬಾಲಕನ ಮೆದುಳಿಗೆ ಆಮ್ಲಜನಕದ ಪೂರೈಕೆ ಸ್ಥಗಿತಗೊಂಡಿದ್ದೇ ಸಾವಿಗೆ ಕಾರಣ ಎಂದು ವರದಿ ತಿಳಿಸಿದೆ. ​ಆಟವಾಡುವಾಗ ಬಿದ್ದಿದ್ದ ಬಾಲಕನಿಗೆ ಹೊಲಿಗೆ ಹಾಕುವ ಉದ್ದೇಶದಿಂದ ನೀಡಿದ ಅರಿವಳಿಕೆ ಪ್ರಕ್ರಿಯೆಯಲ್ಲಿ ವೈದ್ಯಕೀಯ ಲೋಪವಾಗಿದೆ. ಮಗುವಿಗೆ ಸಾಮಾನ್ಯ ಅರಿವಳಿಕೆ ನೀಡುವ ಅಗತ್ಯವಿರಲಿಲ್ಲ ಎಂದು ವೈದ್ಯಕೀಯ ಮಂಡಳಿ ಅಭಿಪ್ರಾಯಪಟ್ಟಿದೆ.ಈ ಪ್ರಕರಣದಲ್ಲಿ ಯಾವುದೇ…

Read More

ಹಸು ಮೇಯಿಸುವ ವೇಳೆ ದುರಂತ:ಕಾಲು ಜಾರಿ ಹಳ್ಳಕ್ಕೆ ಬಿದ್ದು ವೃದ್ಧೆ ಸಾವು

​ಕಾಸರಗೋಡು: ಹಸುವನ್ನು ಮೇಯಿಸಲು ತೆರಳಿದ್ದ ವೃದ್ಧೆಯೊಬ್ಬರು ಕಾಲು ಜಾರಿ ಹಳ್ಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ.ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಿಯ, ಮಿನ್ನಂಕುಳಂ, ಪುಳಿಕಾಲ್, ಕಾರ್ಯಮೊಟ್ಟೆಯ ನಿವಾಸಿ ದಿವಂಗತ ದಾಮೋದರ ಅವರ ಪತ್ನಿ ರುಕ್ಮಿಣಿ (71) ಸಾವನ್ನಪ್ಪಿದ ದುರ್ದೈವಿ. ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ​ಈ ಸಂಬಂಧ ಬೇಕಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

Read More

ಕಳವಿನ ವೇಳೆ ಕಬ್ಬಿಣದ ತಂತಿ ಕುತ್ತಿಗೆಗೆ ಸಿಲುಕಿ ಸಾವು: ಓರ್ವ ಆರೋಪಿ ಬಂಧನ

ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಯುಡಿಆರ್: 35/2026 ಕಲಂ: 194 (3)(iv)ಬಿ.ಎನ್. ಎಸ್ ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿ, ಸದ್ರಿ ಮುಶ್ತಕ್ ಮೃತಪಟ್ಟ ಸ್ಥಳದಲ್ಲಿ ಕಳವು ಕೃತ್ಯ ನಡೆದಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 73/2026, ಕಲಂ 331(4),305 ಜೊತೆಗೆ 3(5) ಬಿಎನ್ ಎಸ್-2023 ಪ್ರಕರಣ ದಾಖಲಾಗಿದ್ದು, ಕಳವು ಕೃತ್ಯದ ತನಿಖೆ ನಡೆಸಲಾಗಿ ಆರೋಪಿ ಬೆಳ್ತಂಗಡಿ ಕಾಶಿಪಟ್ನ ನಿವಾಸಿ ಪಿ ಇಬ್ರಾಹಿಂ ಲತೀಫ್ (36) ಎಂಬಾತನನ್ನು ದಿನಾಂಕ: 14.07.2026 ರಂದು ಬೆಳ್ತಂಗಡಿ…

Read More

ಪಿಆರ್‌ಸಿ ಅಧಿಸೂಚನೆ ಹಿಂಪಡೆಯಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು: ರಾಜ್ಯ ಸರ್ಕಾರ ಜೂನ್ 26, 2026ರಂದು ಹೊರಡಿಸಿರುವ ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ನೀಡುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಎನ್. ರವಿಕುಮಾರ್ ನೇತೃತ್ವದ ನಿಯೋಗವು ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ‘ಶಾಶ್ವತ ನಿವಾಸಿ’ ಎಂಬ ಹೊಸ ವರ್ಗವನ್ನು ಸೃಷ್ಟಿಸುವ ಅಧಿಕಾರ…

Read More

ಆಗುಂಬೆ ಘಾಟಿ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ

ಉಡುಪಿ: ಆಗುಂಬೆ ಘಾಟಿಯಲ್ಲಿ ಸುರಂಗ (ಟನಲ್) ನಿರ್ಮಾಣದ ಕುರಿತು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಆಗುಂಬೆ ಘಾಟಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಆಗುಂಬೆ ಸೂರ್ಯಾಸ್ತ ವೀಕ್ಷಣಾ ಸ್ಥಳದಿಂದ ಘಾಟಿಯ ಭೌಗೋಳಿಕ ಪರಿಸ್ಥಿತಿ ಹಾಗೂ ರಸ್ತೆ ಸ್ಥಿತಿಯನ್ನು ಅವಲೋಕಿಸಿದ ಸಚಿವರು, ಘಾಟಿಯ ಧಾರಣಾ ಸಾಮರ್ಥ್ಯ ಕುಸಿತ ಹಾಗೂ ಸುರಕ್ಷತೆ ಕುರಿತಂತೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿದರು. ಸಚಿವರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ…

Read More

ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಹೃದಯಾಘಾತದಿಂದ ನಿಧನ

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ನಾಗೇಶ್ ಗಾಣಿಗ ಅವರು, ಕಳೆದ ಹಲವಾರು ವರ್ಷಗಳಿಂದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿದ್ದರು. ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದಲ್ಲದೇ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು. ಕರ್ತವ್ಯದಲ್ಲಿರುವಾಗ ತೀವ್ರ ಹೃದಯಾಘಾತಕ್ಕೊಳಗಾಗಿದ್ದು, ಅವರನ್ನು ಕುಂದಾಪುರದ ಖಾಸಗೀ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು…

Read More

ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ಎನ್‌ಎಂಸಿ ಅನುಮೋದನೆ; 150 ಎಂಬಿಬಿಎಸ್ ಸೀಟುಗಳಿಗೆ ಹಸಿರು ನಿಶಾನೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ ವೈದ್ಯಕೀಯ ಶಿಕ್ಷಣ ಯೋಜನೆಗೆ ಮಹತ್ವದ ಯಶಸ್ಸು ದೊರೆತಿದ್ದು, 2026-27ನೇ ಶೈಕ್ಷಣಿಕ ಸಾಲಿನಿಂದ ಮಿಜಾರಿನ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಧಿಕೃತ ಅನುಮೋದನೆ ನೀಡಿದೆ. ಅತ್ಯಾಧುನಿಕ ಮೂಲಸೌಕರ್ಯ, ಸುಸಜ್ಜಿತ ಪ್ರಯೋಗಾಲಯಗಳು, ಬೋಧನಾ ಆಸ್ಪತ್ರೆ ಹಾಗೂ ಅನುಭವಿ ಬೋಧಕ ವೃಂದದೊಂದಿಗೆ ಗುಣಮಟ್ಟದ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ ಮತ್ತು ಸಂಶೋಧನೆಯನ್ನು ಸಮನ್ವಯಗೊಳಿಸುವ ಉದ್ದೇಶದಿಂದ ಕಾಲೇಜು ಕಾರ್ಯನಿರ್ವಹಿಸಲಿದೆ. ಈ ಅನುಮೋದನೆಯೊಂದಿಗೆ…

Read More

ಬಸ್ ಟೈಮಿಂಗ್ಸ್ ಜಗಳ: ಕಬ್ಬಿಣದ ರಾಡ್‌ನಿಂದ ಕಂಡಕ್ಟರ್‌ಗಳ ಮಾರಾಮಾರಿ

ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಉಂಟಾದ ವಾಗ್ವಾದ ಹಾಡಹಗಲೇ ಕಬ್ಬಿಣದ ರಾಡ್‍ನೊಂದಿಗೆ ಪ್ರಯಾಣಿಕರ ಸಮ್ಮುಖದಲ್ಲೇ ಮಾರಾಮಾರಿ ನಡೆಸಿದ ಇಬ್ಬರು ಬಸ್ ಕಂಡಕ್ಟರ್ ಮೇಲೆ ಉಪ್ಪಿನಂಗಡಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು-ಉಪ್ಪಿನಂಗಡಿ ಮಧ್ಯೆ ಸಂಚರಿಸುವ ಅರಫಾ ಬಸ್ ನ ಕಂಡಕ್ಟರ್ ನೌಶಾದ್ ಹಾಗೂ ಅದೇ ಮಾರ್ಗದಲ್ಲಿ ಸಂಚರಿಸುವ ‘ಲಕ್ಷ್ಮೀ’ ಬಸ್ ನ ಕಂಡಕ್ಟರ್ ಖಲಂದರ ಯಾನೆ ಶಾಹೀದ್ ಎಂಬುವವರ ನಡುವೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಟೈಮಿಂಗ್ಸ್ ವಿಚಾರವಾಗಿ ಪರಸ್ಪರ ಜಗಳ ನಡೆದಿದೆ ಅಲ್ಲದೇ ಬಸ್ ನಿಲ್ದಾಣದಲ್ಲಿದ್ದ…

Read More

ಧರ್ಮಸ್ಥಳ ಪ್ರಕರಣ: 7,005 ಪುಟಗಳ ಅಂತಿಮ ವರದಿ ಬೆಳ್ತಂಗಡಿ ಕೋರ್ಟ್‌ಗೆ ಸಲ್ಲಿಸಿದ ಎಸ್‌ಐಟಿ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ವಿರುದ್ಧ 3,923 ಪುಟಗಳ ‘ಸುಳ್ಳು ಸಾಕ್ಷ್ಯ’ (Perjury Report) ವರದಿಯನ್ನು ಸಲ್ಲಿಕೆ ಮಾಡಿದ್ದರು. ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ…

Read More

ಕೊಲೆ ಆರೋಪಿಯ ಬಾಯಲ್ಲಿ ಕಾನೂನು ಪಾಠ; ಪೊಲೀಸ್ ಇಲಾಖೆಗೆ ಬಹಿರಂಗ ಸವಾಲ್ – ಸಮುದಾಯದ ವಿರುದ್ಧ ದ್ವೇಷ ಹರಡುವ ಹೇಳಿಕೆ ಎಸ್.ಡಿ.ಪಿ.ಐ ಖಂಡನೆ.

ಮಂಗಳೂರು: ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಪ್ರಜೆಗಳ ಅಕ್ರಮ ವಾಸದ ಹೆಸರಿನಲ್ಲಿ, “ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಬೆಂಗಳೂರಿನ ಮಾದರಿಯಲ್ಲೇ ನಾವು ಕಾರ್ಯಾಚರಣೆ ನಡೆಸುತ್ತೇವೆ” ಎಂದು ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ಬಹಿರಂಗವಾಗಿ ನೀಡಿರುವ ಹೇಳಿಕೆ ಕಾನೂನಿನ ಆಡಳಿತಕ್ಕೆ ಎಸೆದ ಸವಾಲು ಮಾತ್ರವಲ್ಲ, ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷ ಮತ್ತು ಉದ್ವಿಗ್ನತೆ ಸೃಷ್ಟಿಸುವ ಅತ್ಯಂತ ಅಪಾಯಕಾರಿ ಹೇಳಿಕೆಯಾಗಿದೆ ಎಂದು ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕೊಲೆ…

Read More
error: Content is protected !!