‘ನಿಮ್ಮ ರಾಜ್ಯಗಳಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ’: ಮುಖ್ಯಮಂತ್ರಿಗಳಿಗೆ ಗೃಹ ಸಚಿವ ಅಮಿತ್ ಶಾ ಸೂಚನೆ
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಕ್ಕ ಶಿಕ್ಷೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈ ವಿಷಯದಲ್ಲಿ ರಾಜ್ಯಗಳು ಸಮನ್ವಯ ಸಾಧಿಸಲು ಕೇಳಿಕೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತಿದ್ದು, ಆಯಾ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ಶೀಘ್ರ ಮರಳುವಂತೆ ಸೂಚಿಸಲು ಕೇಳಿಕೊಳ್ಳುತ್ತಿದ್ದಾರೆ. ಬಹುತೇಕ ಪ್ರವಾಸಿಗರು ಸೇರಿದಂತೆ 26 ಮಂದಿಯನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾದ ಕಾರಣ,…