ಮೂತ್ರ ವಿಸರ್ಜನೆ ವೇಳೆ ರಸ್ತೆ ಬದಿಯ ಮರದ ರೆಂಬೆ ತಲೆಗೆ ಬಿದ್ದು ಲಾರಿ ಚಾಲಕ ದಾರುಣ ಮೃತ್ಯು
ಪೆರ್ಲ: ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ಮರದಡಿಗೆ ತೆರಳಿದ ಚಾಲಕ ಮರದ ರೆಂಬೆ ಮುರಿದು ಬಿದ್ದು ಮೃತಪಟ್ಟ ದಾರುಣ ಘಟನೆ ಬೆಳಕಿಗೆ ಬಂದಿದೆ. ದ. ಕ. ಜಿಲ್ಲೆಯ ಬಂಟ್ವಾಳ ಪೆರಾಜೆ ಬಳಿಯ ಕುಡೇಲು ನಿವಾಸಿ ಕಾಂತಪ್ಪ ಗೌಡ – ಗೀತಮ್ಮ ದಂಪತಿ ಯ ಪುತ್ರ ಕೆ. ಜಗದೀಶ ಗೌಡ (50) ಮೃತ ವ್ಯಕ್ತಿಯಾಗಿದ್ದಾರೆ.ಬುಧವಾರ ಮುಂಜಾನೆ ಆರೂಕಾಲರ ವೇಳೆಗೆ ಪೆರ್ಲ- ಸೀತಾಂಗೋಳಿ ರಸ್ತೆಯ ಬೆದ್ರಂಪಳ್ಳದಲ್ಲಿ ಈ ಘಟನೆ ನಡೆಯಿತು. ಮೂಡಬಿದಿರೆಯಿಂದ ಕಾಸರಗೋಡಿಗೆ ಪಶು ಆಹಾರ ಸಾಗಿಸುತ್ತಿದ್ದ…