ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕರ್ ಕಲ್ಯಾಣಿ ಇನ್ನಿಲ್ಲ
ಉಡುಪಿ: ಕಾಂತಾರ ಚಿತ್ರದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ನಿಧನರಾದರು.ಪೆರ್ಡೂರಿನ ಮೂಲದವರು ಮತ್ತು ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಅಧಿಕಾರಿಯಾಗಿದ್ದ ಪ್ರಭಾಕರ್, ‘ಕಾಂತಾರ’ದಲ್ಲಿ ವಕೀಲರ ಪಾತ್ರವನ್ನು ನಿರ್ವಹಿಸುವ ಮೂಲಕ ಪ್ರಸಿದ್ದರಾಗಿದ್ದರು. ಕುಟುಂಬದ ಮೂಲಗಳ ಪ್ರಕಾರ, ಅವರು ಎರಡು ದಿನಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.