ಮಂಗಳೂರು ಶಾಂತವಾಗಿಸಿದ ಅಧಿಕಾರಿಗಳ ವರ್ಗಾವಣೆ ಸಂಚು: ರಾಜಕೀಯ ಹಸ್ತಕ್ಷೇಪಕ್ಕೆ ಎಸ್ಡಿಪಿಐ ತೀವ್ರ ಖಂಡನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಕ್ರಿಯರಾಗಿರುವ ನೂತನ ಪೊಲೀಸ್ ಅಧೀಕ್ಷಕರು (SP) ಹಾಗೂ ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಲು ನಡೆಯುತ್ತಿರುವ ರಾಜಕೀಯ ತೆರೆಮರೆಯ ಪ್ರಯತ್ನಗಳನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕದಡುವ ಶಕ್ತಿಗಳನ್ನು ಹತ್ತಿಕ್ಕುವಲ್ಲಿ ಈ ಅಧಿಕಾರಿಗಳು ಪ್ರಶಂಸನೀಯ ಕೆಲಸ ಮಾಡಿದ್ದಾರೆ. ಸುದೀರ್ಘ ಕಾಲದ ನಂತರ…
