Headlines

ರಾಮ ಮಂದಿರ ಕಾಣಿಕೆ ಹಗರಣದ ಸಮಗ್ರ ತನಿಖೆಗೆ ಆಗ್ರಹ: ವಿನಯ್ ಕುಮಾರ್ ಸೊರಕೆ

ಮಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿರುವ ಎನ್ನಲಾದ ಕಾಣಿಕೆ ಕಳ್ಳತನ ಪ್ರಕರಣವು ದೇಶದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಆಗ್ರಹಿಸಿದರು. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ಟ್ರಸ್ಟ್‌ನಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಹಿನ್ನೆಲೆಯವರನ್ನು ನೇಮಕ ಮಾಡಲಾಗಿದ್ದು, ಭಕ್ತರು ಸಮರ್ಪಿಸಿದ ಬಂಗಾರ, ಬೆಳ್ಳಿ ಹಾಗೂ ಕಾಣಿಕೆಗಳ ದುರುಪಯೋಗ ನಡೆದಿದೆ ಎಂಬ…

Read More

ಶಸ್ತ್ರಚಿಕಿತ್ಸೆಯ ವೇಳೆ 9 ವರ್ಷದ ಬಾಲಕನ ದಾರುಣ ಅಂತ್ಯ

​ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ವೇಳೆ 9 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಬೇಡಕಂ ತಲೇಕುನ್ನಿನ ಅಶ್ರಫ್ ಮುಸ್ಲಿಯಾರ್ ಅವರ ಪುತ್ರ ಮುಹಮ್ಮದ್ ಇಯಾಸ್ ಮೃತ ಬಾಲಕ.ಈತ ಕುಂಡಂಕುಳಿ ಸರ್ಕಾರಿ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.

Read More

ವ್ಯಕ್ತಿಯನ್ನು ಹುಡುಕುವ ನೆಪದಲ್ಲಿ ಬಂದ ದುಷ್ಕರ್ಮಿಯಿಂದ ವೃದ್ಧೆಯ ಕುತ್ತಿಗೆಯಿಂದ ಸರ ಕಳವು

​ ಕಾಸರಗೋಡು/ಕಣ್ಣೂರು: ಕಣ್ಣೂರಿನ ತಳಿಪರಂಬಿನ ಪೂಮಂಗಲಂನಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರವನ್ನು ಕಿತ್ತುಕೊಂಡು ದುಷ್ಕರ್ಮಿಯೊಬ್ಬ ಪರಾರಿಯಾದ ಘಟನೆ ನಡೆದಿದೆ. ಸಿಪಿಎಂ ತಳಿಪರಂಬು ಏರಿಯಾ ಸಮಿತಿ ಸದಸ್ಯ ಕೆ. ನಾರಾಯಣನ್ ಅವರ ಸಹೋದರಿ ಕಲ್ಯಾಣಿ (80) ಹಲ್ಲೆಗೊಳಗಾದವರು. ​ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಕಲ್ಯಾಣಿಯವರ ಮನೆಯ ಪಕ್ಕದಲ್ಲಿ ವಾಸವಿರುವ, ಚಿತ್ರಮಂದಿರದಲ್ಲಿ ಕೆಲಸ ಮಾಡುವ ಕಾಸರಗೋಡು ಮೂಲದ ವ್ಯಕ್ತಿಯನ್ನು ಹುಡುಕಿಕೊಂಡು ಬಂದವನಂತೆ ಮುಖಗವಸು ಧರಿಸಿದ ವ್ಯಕ್ತಿ ನಟಿಸಿದ್ದಾನೆ. ಆತನಿಗೆ ಕೂಲಿ ಕೊಡಬೇಕಿದೆ, ಆದರೆ ಕರೆ ಮಾಡಿದರೂ ಬಾಗಿಲು ತೆರೆಯುತ್ತಿಲ್ಲ…

Read More

“ಟಾರ್ಗೆಟ್ ಒತ್ತಡ, ಖಾಸಗೀಕರಣ ವಿರೋಧಿಸಿ ಅಂಚೆ ನೌಕರರ ರಾಷ್ಟ್ರವ್ಯಾಪಿ ಹೋರಾಟ”

ಮಂಗಳೂರು: ಅಂಚೆ ಇಲಾಖೆಯಲ್ಲಿ ಸಿಬ್ಬಂದಿಯ ಮೇಲೆ ಟಾರ್ಗೆಟ್ ಹೆಸರಿನಲ್ಲಿ ಮಾನಸಿಕ ಒತ್ತಡ ಹೇರಿ, ಸ್ವಂತ ಹಣದಲ್ಲಿ ಖಾತೆ ತೆರೆಯುವಂತೆ ಒತ್ತಾಯಿಸಲಾಗುತ್ತಿದೆ. ಮೆಕಿನ್ಸಿ (McKinsey) ಸಲಹೆ ಮೇರೆಗೆ ಇಲಾಖೆಯನ್ನು ಖಾಸಗೀಕರಣದತ್ತ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಭಾರತೀಯ ಅಂಚೆ ನೌಕರರ ಒಕ್ಕೂಟ ರಾಷ್ಟ್ರವ್ಯಾಪಿ ಹೋರಾಟ ಹಾಗೂ ಮುಷ್ಕರಕ್ಕೆ ಕರೆ ನೀಡಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿ ದಯಾನಂದ ಕತ್ತಲ್ ಸಾರ್ , ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಸಿಬ್ಬಂದಿ ಶೋಷಣೆಗೆ ಒಳಗಾಗುತ್ತಿದ್ದು, ಈ ಕ್ರಮವನ್ನು…

Read More

“ಅಪಾರ್ಟ್‌ಮೆಂಟ್ ಖರೀದಿಸಿದವರೇ ಆಸ್ತಿ ಮಾಲೀಕರು: ಏಕಪಕ್ಷೀಯ ನಿರ್ಧಾರವಿಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.15: “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ‌” ಎಂದು ಸಿಎಂ‌ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನೆಹರು ತಾರಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು…

Read More

ಕರಾವಳಿಯಲ್ಲಿ SAF ಯಾಕೆ? ಉದ್ದೇಶ ಸ್ಪಷ್ಟಪಡಿಸಿ: ಅನುಪಮ ಶೆಣೈ ಆಗ್ರಹ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಪಡೆ (SAF) ಸ್ಥಾಪಿಸಿರುವ ಉದ್ದೇಶವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಸಮಾಜ ಸೇವಕಿ ಅನುಪಮ ಶೆಣೈ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ವರ್ಷ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಪಡೆ (SAF) ರಚಿಸಲಾಗಿತ್ತು. ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಗಳು ನಿಯಂತ್ರಣಕ್ಕೆ ಬಂದಿವೆ ಎಂದು ಹೇಳಿ, ಅರಣ್ಯ ನಕ್ಸಲ್ ಪಡೆ (ANF) ಸಿಬ್ಬಂದಿಯನ್ನು ಕಡಿತಗೊಳಿಸಿ SAF ರಚಿಸಿರುವ ಸರ್ಕಾರ, ಈ ಪಡೆಯ ಸ್ಥಾಪನೆಗೆ ಯಾವ ಕಾನೂನು…

Read More

ಆಪರೇಷನ್ ತೂಫಾನ್; ವಿಜಯ್ ಕೇರಳಕ್ಕೆ: ಕೊಚ್ಚಿಯಲ್ಲಿ ಮೋಹನ್‌ಲಾಲ್ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಮಾದಕವಸ್ತುಗಳ ವಿರುದ್ಧ ಕೇರಳ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಕೇರಳಕ್ಕೆ ಆಗಮಿಸಲಿದ್ದಾರೆ. ಕೊಚ್ಚಿಯಲ್ಲಿ ನಟ ಮೋಹನ್‌ಲಾಲ್ ಅವರೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಸಿ. ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ ಎಂದು ಗೃಹ ಸಚಿವ ರಮೇಶ್ ಚೆನ್ನಿತ್ತಲ ತಿಳಿಸಿದ್ದಾರೆ. ಆಪರೇಷನ್ ತೂಫಾನ್ – ದ ನಾರ್ಕೋ ಹಂಟ್ ಅಭಿಯಾನಕ್ಕೆ ಸಿ. ಜೋಸೆಫ್ ವಿಜಯ್ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಚೆನ್ನೈನಲ್ಲಿ ಸಿ. ಜೋಸೆಫ್ ವಿಜಯ್ ಅವರನ್ನು ಭೇಟಿಯಾದ ಬಳಿಕ ರಮೇಶ್ ಚೆನ್ನಿತ್ತಲ ಈ ವಿಷಯವನ್ನು…

Read More

ಕಾಸರಗೋಡು ಮಕ್ಕಳ ಹಕ್ಕುಗಳ ಆಯೋಗ ಸಿಟ್ಟಿಂಗ್: 30 ದೂರುಗಳಲ್ಲಿ 20 ಇತ್ಯರ್ಥ,10 ಪ್ರಕರಣ ಮುಂದೂಡಿಕೆ

ಕಾಸರಗೋಡು: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಜಿಲ್ಲಾ ಮಟ್ಟದ ಸಿಟ್ಟಿಂಗ್ ಕಲೆಕ್ಟೇಟ್ ಕಾನ್ಸರೆನ್ಸ್ ಹಾಲ್‌ನಲ್ಲಿ ಜರಗಿತು. ಅಧ್ಯಕ್ಷ ಕೆ.ವಿ. ಮನೋಜ್ ಕುಮಾ‌ರ್ ಅಧ್ಯಕ್ಷತೆ ವಹಿಸಿದರು. ಆಯೋಗದ ಸದಸ್ಯ ಕೆ.ಬಿ. ಮೋಹನ್ ಕುಮಾರ್ ಹಿಯರಿಂಗ್ ನಡೆಸಿದರು. ಪರಿಗಣಿಸಿದ 30 ದೂರುಗಳ ಪೈಕಿ 20 ದೂರುಗಳನ್ನು ಇತ್ಯರ್ಥಗೊಳಿಸಲಾಯಿತು. 10 ಪ್ರಕರಣಗಳನ್ನು ಆಯೋಗದ ಆದೇಶ ಹಾಗೂ ನಿರ್ದೇಶಕ್ಕಾಗಿ ಮುಂದೂಡಲಾಗಿದೆ. ಚೆಂಬರಿಕ ಜಿಎಲ್‌ಪಿ ಶಾಲೆಯ ಕಂಪೌಂಡ್ ನಿರ್ಮಿಸುವಂತೆ ಹೈಕೋರ್ಟ್ ಆದೇಶದಂತೆ ಆಯೋಗ ಚೆಮ್ನಾಡ್ ಪಂ. ಕಾರ್ಯದರ್ಶಿಗೆ ನಿರ್ದೇಶ ನೀಡಿದೆ. ಅದ್ರುಕಳಿ ಜಿಎಲ್‌ಪಿ…

Read More

ಮಾನ್ಯ ವಿಷ್ಣುಮೂರ್ತಿ ನಗರದಲ್ಲಿ ಪ್ರಾಚೀನ ದೇವಾಲಯದ ಕುರುಹು ಪತ್ತೆ; ಪುನರುತ್ಥಾನಕ್ಕೆ ಸಿದ್ಧತೆ

ಬದಿಯಡ್ಕ: ನೀರ್ಚಾಲು ಸಮೀಪದ ಮಾನ್ಯ ವಿಷ್ಣುಮೂರ್ತಿ ನಗರದಲ್ಲಿ ನೂರಾರು ವರ್ಷಗಳಷ್ಟು ಪ್ರಾಚೀನವೆನ್ನಲಾದ ದೇವಾಲಯದ ಕುರುಹು ಪತ್ತೆಯಾಗಿದೆ. ವಿಷ್ಣುಮೂರ್ತಿ ನಗರದ ವಿಶಾಲ ಬಯಲಲ್ಲಿ ಎರಡು ಮರಗಳ ಎಡೆಯಲ್ಲಿ ದೇವಾಲಯ ದ್ದೆನ್ನಲಾದ ಪಾಣಿಪೀಠದ ಭಾಗಗಳು ಮತ್ತು ಬಾವಿಯ ಕುರುಹುಗಳು ಕಂಡುಬಂದಿದೆ. ಈ ಪರಿಸರದಲ್ಲಿ ವಿಷ್ಣುಮೂರ್ತಿ ದೈವದ ಆರಾಧನೆ ನಡೆದುಬರುತ್ತಿದ್ದು, ಅದೇ ಪರಿಸರದಲ್ಲಿ ದೇವಾಲಯದ ಕುರುಹುಗಳು ಪತ್ತೆಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈಗ ದೇವಾಲಯದ ಪುನರುತ್ಥಾನಕ್ಕೆ ಸಂಬAಧಿಸಿ ದೈವಜ್ಞರ ಮೂಲಕ ಪ್ರಶ್ನಾಚಿಂತನೆ ಕೈಗೆತ್ತಿಕೊಳ್ಳಲಾಗಿದೆ. ದೈವಜ್ಞರಾದ ಮಹಾಲಿಂಗೇಶ್ವರ ಶರ್ಮ ಕೊಳಚ್ಚಪ್ಪೆ ಉಣ್ಣಿಕೃಷ್ಣನ್ ನಂಬೀಶ ಸಹಕಾರದಲ್ಲಿ…

Read More

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಅಣ್ಣಾಮಲೈ ಭೇಟಿ

ಉಡುಪಿ : ತಮಿಳುನಾಡಿನ ಮುಖ್ಯಮಂತ್ರಿ ನಟ ವಿಜಯ್‌ ಮತ್ತು ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್‌ ಭೇಟಿಯ ಬಳಿಕ ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಖ್ಯಾತ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ದೇವಳದ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ಆತ್ಮೀಯವಾಗಿ…

Read More
error: Content is protected !!