ಕರಾವಳಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗಾಗಿ ಶಾಸಕ ಮಂಜುನಾಥ ಭಂಡಾರಿ ಸರ್ಕಾರಕ್ಕೆ ಮನವಿ

ಮಂಗಳೂರು: ಕರ್ನಾಟಕದ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್‌ ಶಾಸಕರಾಗಿರುವ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಪ್ರವಾಸೋದ್ಯಮ ವಲಯವು ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ಸ್ಥಳೀಯ ಸಂಸ್ಕೃತಿಯ ಉತ್ತೇಜನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಇತ್ತೀಚೆಗೆ ಜ.10ರಂದು ನಡೆದ ಕರಾವಳಿ ಪ್ರವಾಸೋದ್ಯಮ…

Read More

ತೆಂಕಕಜೆಕಾರು ಕಲ್ಲುಗಣಿ ಸ್ಫೋಟಕ ಬಳಕೆ ಇಲಾಖೆ ಆದೇಶವನ್ನೇ ಉಲ್ಲಂಘಿಸಿ ಕಾರ್ಯಾಚರಿಸುತ್ತಿರುವ ಕಪ್ಪು ಕಲ್ಲು ಕ್ವಾರಿ

ಮಂಗಳೂರು: ಜನವಸತಿ ಪ್ರದೇಶದಲ್ಲಿ ಅಪಾಯಕಾರಿ ರೀತಿಯಲ್ಲಿ ಕಾರ್ಯಾಚರಿಸುತ್ತಿರುವ ಕಲ್ಲುಗಣಿಗಾರಿಕೆ ವಿರುದ್ಧ ಗ್ರಾಮಸ್ಥರು ರಾಜ್ಯ ಉಚ್ಛನ್ಯಾಯಾಲಯದಲ್ಲಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಜ. 7 ರಂದೇ ಬಂಟ್ವಾಳದ ಭೂ ಮತ್ತು ಗಣಿ ಇಲಾಖೆಗೆ ಮುಂದಿನ ತಾಂತ್ರಿಕ ವರದಿಯ ವರೆಗೂ ಕಲ್ಲುಗಣಿಗಾರಿಕೆಯನ್ನು ತಾತ್ಕಾಲಿಕ ನಿಷೇಧ ಇರಿಸುವಂತೆ ಹಿರಿಯ ಭೂವಿಜ್ಞಾನಿ ಆದೇಶ ಹೊರಡಿಸಿದರೂ, ಕಲ್ಲು ಗಣಿಗಾರಿಕೆ ನಡೆಸುವ ಧಣಿಕರು ಕಳೆದ ಒಂದು ವಾರದಿಂದ ಇಲಾಖೆಯ ಆದೇಶವನ್ನೇ ಉಲ್ಲಂಘಿಸಿ ವ್ಯಾಪಕವಾಗಿ ಗಣಿಗಾರಿಕೆಯಲ್ಲಿ ನಿರತರಾಗಿದ್ದಾರೆ. ಇಲಾಖೆಯ ಆದೇಶಕ್ಕೂ ಬೆಲೆಯನ್ನು ನೀಡದ ಕಲ್ಲುಗಣಿ ಧಣಿಗಳ ಹಿಂದೆ ಪ್ರಭಾವಿ…

Read More

ಮಲ್ಪೆ ಮಾಲ್ತಿದ್ವೀಪದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜೆ

ಉಡುಪಿ: ಉಡುಪಿಯ ಮಲ್ಪೆ ಸಮೀಪದ ಕೊಡವೂರು ಶಂಕರನಾರಾಯಣ ದೇವಸ್ಥಾನದ ವತಿಯಿಂದ ಮಲ್ಪೆ ಮಾಲ್ತಿದ್ವೀಪದಲ್ಲಿ ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ವಿಶೇಷ ಪೂಜೆ ನಡೆಯುತ್ತದೆ. ಈ ಪೂಜೆಯು ಮಲ್ಪೆ ಸಮುದ್ರ ತೀರದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಮಾಲ್ತಿದ್ವೀಪದಲ್ಲಿರುವ ಶ್ರೀ ಆದಿಪರಾಶಕ್ತಿ ಸನ್ನಿಧಾನದಲ್ಲಿ ನಡೆಯುತ್ತದೆ. ಈ ದ್ವೀಪದಲ್ಲಿರುವ ದೇವಿಯ ಸನ್ನಿಧಾನವು ಕೊಡವೂರು ಶಂಕರನಾರಾಯಣ ದೇವಸ್ಥಾನಕ್ಕೆ ಸಂಬಂಧಪಟ್ಟ ಆದಿ ದೇವಸ್ಥಾನ ಎಂದು ನಂಬಲಾಗಿದೆ. ವರ್ಷಕ್ಕೊಮ್ಮೆ ಮಕರ ಸಂಕ್ರಾಂತಿಯಂದು ಮಾತ್ರ ಇಲ್ಲಿ ದೇವಸ್ಥಾನದ ವತಿಯಿಂದ ಸಾರ್ವಜನಿಕವಾಗಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ದೇವಸ್ಥಾನದ…

Read More

ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆ ರಕ್ಷಣೆ

ಬಂಟ್ವಾಳ:ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಿನ್ಯಾಲು ಎಂಬಲ್ಲಿ ತಡೆ ಬೇಲಿಗೆ ಹಾಕಲಾದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡು ಹೋಗಲು ಸಾಧ್ಯವಾಗದೆ ಒದ್ದಾಡುತ್ತಿದ್ದ ಚಿರತೆಯ ನೋಡಿದ ಗ್ರಾಮಸ್ಥರು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಇಲಾಖೆಯ ಅಧಿಕಾರಿಗಳು ಪಿಲಿಕುಲದ ವೈದ್ಯಾಧಿಕಾರಿ ಯಶಸ್ವಿ ನಾರವಿ ಅವರು ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದ್ದು, ಬಳಿಕ…

Read More

ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಸೂರೆನ್ಸ್ ಯೋಜನೆಯಲ್ಲಿ 70 ಲಕ್ಷ ರೂ. ಮೊತ್ತದ ಆರ್ಥಿಕ ನೆರವು … !

ಮಂಗಳೂರು:ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಸೂರೆನ್ಸ್ ಯೋಜನೆಯಲ್ಲಿ 70 ಲಕ್ಷ ರೂ. ಮೊತ್ತದ ಆರ್ಥಿಕ ನೆರವು ಹಸ್ತಾಂತರವನ್ನು ಮಾಡಲಾಯಿತ್ತು . ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಮೂಲಕ ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ ಪ್ರಾದೇಶಿಕ ಮುಖ್ಯಸ್ಥ ಸಿ.ವಿ.ಎಸ್‌. ಚಂದ್ರಶೇಖ‌ರ್ ಅವರು ಈ ಚೆಕ್ ಅನ್ನು ಹರೀಶ್ ಕುಟುಂಬಕ್ಕೆ…

Read More

ನ್ಯೂ ಇಂಡಿಯಾ ಲಕ್ಕಿ ಸ್ಕಿಮ್ ಹೆಸರಲ್ಲಿ ನೂರಾರು ಕೋಟಿ ವಂಚಿಸಿದ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ…. !

ಮಂಗಳೂರು:ನ್ಯೂ ಇಂಡಿಯಾ ಲಕ್ಕಿ ಸ್ಕಿಮ್ ಹೆಸರಲ್ಲಿ ನೂರಾರು ಕೋಟಿ ವಂಚಿಸಿದ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ವಂಚನೆಗೊಳಗಾದ ಸಂತ್ರಸ್ತರ ಲಕ್ಕಿ ಸ್ಕೀಮ್ ಸಂತ್ರಸ್ತರ ವೇದಿಕೆ ಮಂಗಳೂರು ವತಿಯಿಂದ ನ್ಯಾಯಕ್ಕಾಗಿ ಪ್ರತಿಭಟನೆ ನಗರದ ಕ್ಲಾಕ್ ಟವರ್ ಬಳಿ ಇಂದು ನಡೆಯಿತು . ಈ ಸಂದರ್ಭದಲ್ಲಿ ಸಂತ್ರಸ್ತರು ಪ್ಲಕಾರ್ಡ್‌ಗಳನ್ನು ಹಿಡಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು . ನಗರದಲ್ಲಿ ಕಾರ್ಯಾಚರಿಸುತ್ತಿರುವ ಬ್ಲಡ್ ಕಂಪೆನಿಗಳಿಂದ ಜನರನ್ನು ರಕ್ಷಿಸುವಂತೆ ಒತ್ತಾಯಿಸಿದರು . ಈ ಸಂದರ್ಭದಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ , ಸಿಪಿಐಎಂ…

Read More

ಒಂಟಿ ವಾಸದ ವೃದ್ಧ ಮಹಿಳೆ ನಿಗೂಢ ಸಾವು: ಕಳ್ಳತನ ಯತ್ನದ ವೇಳೆ ಕೊಲೆ ಶಂಕೆ

ಮಂಜೇಶ್ವರ : ಬದಿಯಡ್ಕ ಠಾಣಾ ವ್ಯಾಪ್ತಿಯ ಕುಂದ್ಲಾಜೆಯ ಅಜಿಲ ಪ್ರದೇಶದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧ ಮಹಿಳೆಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪುಷ್ಪಾವತಿ (67) ಸಾವನ್ನಪ್ಪಿದ ದುರ್ದೈವಿ. ಮನೆಯ ಮಲಗುವ ಕೋಣೆಯಲ್ಲಿ ಅವರ ಶವ ಪತ್ತೆಯಾಗಿದ್ದು, ಕೋಣೆಯೊಳಗೆ ಎಳೆದಾಟ ಹಾಗೂ ಹೊಡೆದಾಟ ನಡೆದಿರುವ ಸ್ಪಷ್ಟ ಕುರುಹುಗಳು ಕಂಡುಬಂದಿವೆ. ವೃದ್ಧೆಯ ಕೊರಳಲ್ಲಿದ್ದ ಕರಿಮಣಿ ಸರ ಕಾಣೆಯಾಗಿದ್ದು, ಮುಖದ ಮೇಲೆ ಉಗುರಿನಿಂದ ಪರಚಿದ ಗಾಯಗಳಿರುವುದು ಅನುಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಇದು ಸಹಜ ಸಾವು ಅಲ್ಲ, ಕೊಲೆ ಪ್ರಕರಣವಾಗಿರಬಹುದೆಂಬ ಶಂಕೆ…

Read More

ಜ.26ರಂದು ಸಂತೆಕಟ್ಟೆ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದಲ್ಲಿ ಬಾಲ ಯುಗ್ಮ ಭರತನಾಟ್ಯ

ಉಡುಪಿ ಅಮ್ಮುಂಜೆಯ ಶ್ರೀ ಭ್ರಾಮರಿ ನಾಟ್ಯಾಲಯದ ರಜತ ಸಂಭ್ರಮದ ಪ್ರಯುಕ್ತ ಬಾಲ ಪ್ರತಿಭೆಗಳಿಂದ ಭರತ ನಾಟ್ಯ ` ಬಾಲ ಯುಗ್ಮ ನೃತ್ಯ ‘ ಕಾರ್ಯಕ್ರಮ ಜ.26ರಂದು ಸಂತೆಕಟ್ಟೆ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಸಂಜೆ 5 ಗಂಟೆಯಿಂದ ನಡೆಯಲಿದೆ.ಈ ಬಗ್ಗೆ ಸಂಸ್ಥೆಯ ವಿದ್ವಾನ್ ಕೆ.ಭವಾನಿಶಂಕರ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಕಾರ್ಯಕ್ರಮವನ್ನು ಕೆಮ್ಮಣ್ಣು ಪಡುಕುದ್ರು ಶ್ರೀಗಣಪತಿ ಮಠದ ಅರ್ಚಕ ನೆಂಪು ಶ್ರೀಧರ ಭಟ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಿದ್ದಕಟ್ಟೆಯ ನಾಟ್ಯಾಯನ ಕಲಾ ಅಕಾಡೆಮಿಯ ನಿರ್ದೇಶಕ ವಿದ್ವಾನ್…

Read More

ಹಸಿರು ಕ್ಯಾಂಪಸ್ ಮತ್ತು ಪರಿಸರ ಸುಸ್ಥಿರತೆಯಲ್ಲಿ ಮಂಗಳೂರು ವಿವಿಗೆ ಭಾರತದಲ್ಲೇ 3ನೇ ಸ್ಥಾನ …. !

ಮಂಗಳೂರು:ಗ್ರೀನ್ ಮೆಟ್ರಿಕ್ ಶ್ರೇಯಾಂಕವು ಹಸಿರು ಕ್ಯಾಂಪಸ್ ಮತ್ತು ಪರಿಸರ ಸುಸ್ಥಿರತೆಯನ್ನು ಆಧರಿಸಿ ಇಂಡೋನೇಷ್ಯಾ ವಿವಿ ಬಿಡುಗಡೆ ಮಾಡಿದ ಯುಐ ಗ್ರೀನ್ ಮೆಟ್ರಿಕ್ ವರ್ಲ್ಡ್ ಯುನಿವರ್ಸಿಟಿ ರಾಂಕ್ ನಲ್ಲಿ ಮಂಗಳೂರು ವಿ. ವಿ 2025 ನೇ ಸಾಲಿನಲ್ಲಿ ದೇಶದಲ್ಲೇ 3ನೇ ಅತ್ಯಂತ ಸುಸ್ಥಿರ ವಿಶ್ವವಿದ್ಯಾನಿಲಯ ಸ್ಥಾನ ಹಾಗೂ ಜಗತ್ತಿನಲ್ಲಿ 127ನೇ ಸ್ಥಾನವನ್ನು ಪಡೆಯುವ ಮೂಲಕ ವಿಶೇಷ ಮನ್ನಣೆಯನ್ನು ಪಡೆದಿದೆ . ಭಾರತದ 100 ವಿಶ್ವವಿದ್ಯಾನಿಲಯಗಳು ವಿಶ್ವಾದ್ಯಂತ 105 ದೇಶಗಳಲ್ಲಿ 1745 ಸಂಸ್ಥೆಗಳು ಈ ಶ್ರೇಯಾಂಕದಲ್ಲಿ ಭಾಗವಹಿಸಿದ್ದವು.ಮಂಗಳೂರು ವಿಶ್ವವಿದ್ಯಾನಿಲಯವು ವ್ಯವಸ್ಥೆ…

Read More

ಜನವರಿ 18ರಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವ 2026 ಸಮಾರಂಭ… !

ಮಂಗಳೂರು:ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವ 2026 ಸಮಾರಂಭವು ಜನವರಿ 18ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ ತಿಳಿಸಿದರು .ಅವರು ನಗರದ ಖಾಸಗಿ ಹೋಟೆಲ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಮಾರ್ಗದರ್ಶನದಲ್ಲಿ 1912 ರಲ್ಲಿ ಕುದ್ರೋಳಿಯಲ್ಲಿ ಸ್ಥಾಪಿತವಾದ ಬಿಲ್ಲವರ ಹಿರಿತನದ ಮಾತೃ ಸಂಸ್ಥೆಯಾಗಿದೆ. ಪ್ರಸ್ತುತ ಯುವ ಸಮುದಾಯವನ್ನು ಸಂಘಟಿಸುವ ದ್ಯೇಯದೊಂದಿಗೆ ಪ್ರಪಥಮ ಜಾಗತಿಕ…

Read More
error: Content is protected !!