ಬಂಟ್ವಾಳ: ಗ್ಯಾಸ್ ಪಂಪ್ನಲ್ಲಿ ಹೆಚ್ಚುವರಿ ದರ ಆರೋಪ – ರಿಕ್ಷಾ ಚಾಲಕರಿಂದ ಮತ್ತೆ ಪ್ರತಿಭಟನೆ
ಬಂಟ್ವಾಳ: ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆ ರಿಕ್ಷಾ ಚಾಲಕರು ಗ್ಯಾಸ್ ಪಂಪ್ ಎದುರು ಸತತ ಎರಡನೇ ಬಾರಿ ಪ್ರತಿಭಟನೆ ನಡೆಸಿದ ಘಟನೆ ತಲಪಾಡಿ, ಬಿಸಿರೋಡು ಪ್ರದೇಶದಲ್ಲಿ ನಡೆದಿದೆ. ತಲಪಾಡಿಯಲ್ಲಿರುವ ಅಟೋ ಗ್ಯಾಸ್ ಪಂಪ್ನಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ದುಪ್ಪಟ್ಟು ಹಣವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಚಾಲಕರು ಆರೋಪಿಸಿದ್ದಾರೆ. ಇದಲ್ಲದೆ, ಪಂಪ್ ಸಿಬ್ಬಂದಿ ದರ್ಪದ ಮಾತುಗಳಿಂದ ಬೆದರಿಸುವುದೂ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದೇ ವಿಚಾರವಾಗಿ ಕೆಲವು ದಿನಗಳ ಹಿಂದೆಯೂ ಇದೇ…