Headlines

ಮಂಗಳೂರಿನಲ್ಲಿ ಸಿರಿಧಾನ್ಯ ಆಹಾರ ಹಬ್ಬ – 2025

ಮಂಗಳೂರು: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, “ಸಿರಿಧಾನ್ಯ ಆಹಾರ ಹಬ್ಬ ನವೆಂಬರ್ 1 ಮತ್ತು 2. 2025 ರಂದು ಮಂಗಳೂರು ನಗರದ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಮ್ ಜ್ಯೂಬಿಲಿ ಆಡಿಟೋರಿಯಂ, ಸೆಂಟ್ ಆಗ್ನೆಸ್ ಕಾಲೇಜು ಸಮೀಪ, ಬೆಂದೂರ್ವೆಲ್‌ನಲ್ಲಿ ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಉತ್ಸವದ ಸಡಗರದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಇದರ ಅಧ್ಯಕ್ಷರಾದ ಭಾಸ್ಕರ್ ರೈ ಕಟ್ಟಾ ತಿಳಿಸಿದರು . ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಆರೋಗ್ಯಕರ ಜೀವನಶೈಲಿಗೆ ಉತ್ತೇಜನ ನೀಡುವ ಮತ್ತು ಸಿರಿಧಾನ್ಯ ಉತ್ಪಾದನೆ ಮಾಡುವ…

Read More

ಸ್ವೀಕರ್ ಖಾದರ್ ಭ್ರಷ್ಟಾಚಾರದಿಂದ ಸಭಾಪತಿ ಸ್ಥಾನಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಿದ್ದಾರೆ ; ಶಾಸಕ ಡಾ.ವೈ. ಭರತ್ ಶೆಟ್ಟಿ ಆಕ್ರೋಶ

ಮಂಗಳೂರು: ವಿಧಾನಸಭೆಯ ಸಭಾಧ್ಯಕ್ಷರ ಕಚೇರಿಯಲ್ಲಿ ಆಡಳಿತಾತ್ಮಕ ಸುಧಾರಣೆಯ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರ ನಡೆದಿದ್ದಲ್ಲದೆ ಇದಕ್ಕಾಗಿ ದುಂದುವೆಚ್ಚ ಮಾಡಲಾಗಿದೆ. ಈ ಬಗ್ಗೆ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಒತ್ತಾಯಿಸಿದರು . ಅವರು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ವಿಧಾನಸಭೆಯ ಆಡಳಿತವು ಆಡಳಿತಾತ್ಮಕ ಸುಧಾರಣೆ ಹೆಸರಿನಲ್ಲಿ ಭಾರೀ ಅವ್ಯವಹಾರಗಳನ್ನು ನಡೆಸಿದೆ ಎಂಬ ಸಂಶಯಗಳು ಮತ್ತು…

Read More

2011-12ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಣ ಸರಕಾರ ಕೂಡಲೇ ನೀಡಲಿ ; ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಬಿ ಆರ್

ಮಂಗಳೂರು ; ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಕರ್ನಾಟಕ ಇವರ ವತಿಯಿಂದ ನಿವೃತ್ತಿಯಾದ 20, 000ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಕಾಯ್ದೆ 1972ರ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಗ್ರಾಚ್ಯುಟಿ ಹಣವನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಅನಿರ್ದಿಷ್ಟವಾವಧಿ ಮುಷ್ಕರವನ್ನುಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನವೆಂಬರ್ ೬ ರಂದು ನಡೆಸಲಾಗುವುದೆಂದು ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರಾದ ಜಯಲಕ್ಷ್ಮಿ ಬಿ ಆರ್ ತಿಳಿಸಿದರು . ಅವರು…

Read More

ಕೆಂಪುಕಲ್ಲಿನ ಪೂರೈಕೆದಾರರು ಹಾಕುವ ದುಪ್ಪಟ್ಟು ದರವನ್ನು ಸರಕಾರ ನಿಯಂತ್ರಣಕ್ಕೆ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಂಗಳೂರು ಆಗ್ರಹ .

ಅಭಿವೃದ್ಧಿಯ ಪಥಕ್ಕೆ ಕಟ್ಟದ ನಿರ್ಮಾಣ ಕ್ಷೇತ್ರವು ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ . ಆದರೆ ಕಳೆದ 4 ತಿಂಗಳಿಂದ ತಲೆದೋರಿದ ಕೆಂಪು ಕಲ್ಲಿನ ಅಭಾವವನ್ನು ಸರ್ಕಾರ ನಿವರಿಸಿದೆ . ಆದರೆ ಕೆಂಪುಕಲ್ಲಿನ ಪೂರೈಕೆದಾರರು ಹಿಂದಿಗಿಂತ ಹೆಚ್ಚಿನ ದುಪ್ಪಟ್ಟು ದರವನ್ನು ಪಡೆಯುತ್ತಿದ್ದು ಇದರಿಂದ ಗುತ್ತಿಗೆದಾರರಾದ ನಮಗೆ ನಾವು ನಿರ್ಧಿಷ್ಟ ಮೊತ್ತಕ್ಕೆ ಒಪ್ಪಿಕೊಂಡ ಕಟ್ಟಡ ಒಳಗಾಗುವ ಭೀತಿಯನ್ನು ಕಾಮಗಾರಿಗಳನ್ನು ನಿರ್ವಹಿಸಲು ಸಾಧ್ಯವಾಗದೆ ನಷ್ಟವನ್ನು ಅನುಭವಿಸುತ್ತಿದ್ದೇವೆ ಎಂದು ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಂಗಳೂರು ಇದರ ಅಧ್ಯಕ್ಷರಾದ ಮಹಾಬಲ ಕೊಟ್ಟಾರಿ ತಿಳಿಸಿದರು…

Read More

30,000 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಅಮೆಝಾನ್.

ಹೊಸದಿಲ್ಲಿ : ಟೆಕ್ ದೈತ್ಯಸಂಸ್ಥೆ ಅಮೆಝಾನ್ 30,000 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ. 2022ರ ಕೊನೆಯಲ್ಲಿ 27,000 ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ಅಮೆಝಾನ್ ಮಾಡುತ್ತಿರುವ ಅತಿದೊಡ್ಡ ಉದ್ಯೋಗ ಕಡಿತ ಇದಾಗಿದೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಮಂಗಳವಾರದಿಂದ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ಅಮೆಝಾನ್‌ ಕಂಪೆನಿ ಯೋಜನೆ ರೂಪಿಸಿದೆ. ಇದು ಅಮೆಝಾನ್‌ನ ಒಟ್ಟು 15.5 ಲಕ್ಷ ಉದ್ಯೋಗಿಗಳಿಗೆ ಹೋಲಿಸಿದರೆ ಸಣ್ಣ ಪ್ರಮಾಣದ್ದಾದರೂ, ಕಂಪೆನಿಯ ಸುಮಾರು 3.5 ಲಕ್ಷ ಕಾರ್ಪೊರೇಟ್ ಉದ್ಯೋಗಿಗಳಲ್ಲಿ ಶೇ. 10ರಷ್ಟು ಭಾಗವನ್ನು ಪ್ರತಿನಿಧಿಸುತ್ತದೆ. ರಾಯಿಟರ್ಸ್ ಪ್ರಕಾರ,…

Read More

ಕುಂಬಳೆ ಅನಂತಪುರ ಕೈಗಾರಿಕಾ ಪ್ರಾಂಗಣದ ಡೆಕೋರ್ ಪ್ಯಾನೆಲ್ ಇಂಡಸ್ಟ್ರೀಸ್ ನಲ್ಲಿ ಬಾಯ್ಲರ್ ಸ್ಟೋಟ .ಓರ್ವ ಸಾವು, ಹಲವರಿಗೆ ಗಾಯ.

ಮಂಜೇಶ್ವರ : ಕುಂಬಳೆ ಅನಂತಪುರ ಕೈಗಾರಿಕಾ ಪ್ರಾಂಗಣದ ಡೆಕೋರ್ ಪ್ಯಾನೆಲ್ ಇಂಡಸ್ಟ್ರೀಸ್ ನಲ್ಲಿ ಬಾಯ್ಲರ್ ಸ್ಟೋಟಗೊಂಡು ಸಂಭವಿಸಿದ ದುರಂತದಲ್ಲಿ ಒಬ್ಬ ಘಟನಾ ಸ್ಥಳದಲ್ಲೇ ಸಾವನ್ನಪ್ಪಿ 16 ಮಂದಿ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಪರಿಸರದ ಮನೆ, ಕಾರ್ಖಾನೆಗಳಿಗೆ ಛಿದ್ರಗೊಂಡ ಕಲ್ಲುಗಳು ರಟ್ಟಿದ್ದಲ್ಲದೇ, ಸ್ಫೋಟದ ಕಂಪನಕ್ಕೆ ಅನಂತಪುರ ಕ್ಷೇತ್ರ ಪರಿಸರವೇ ಕಂಪಿಸಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸಹಾಯದಿಂದ ಗಾಯಾಳುಗಳನ್ನು…

Read More

4ನೇ ವರ್ಷದ “ದುಬೈ ಗಡಿನಾಡ ಉತ್ಸವ-2025”

ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಜಂಟಿಯಾಗಿ ಆಯೋಜಿಸಿದ್ದ ನಾಲ್ಕನೇ ವರ್ಷದ “ದುಬೈ ಗಡಿನಾಡ ಉತ್ಸವ-2025” ಕಾರ್ಯಕ್ರಮವು ಇತ್ತೀಚೆಗೆ ನಗರದ ಊದು ಮೇಥಾದ ಗ್ಲೆಂಡೇಲ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಜಾನಪದ ಪರಿಷತ್ ಮಂಗಳೂರಿನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೋಡಿಯಲ್ ಬೈಲ್ ರವರು ಯಕ್ಷಗಾನದ ಚೆಂಡೆ ಬಾರಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ…

Read More

ನಾಗರಕಟ್ಟೆ ಶ್ರೀ ಶಾರದಾ ಭಜನಾಶ್ರಮದಿಂದ ಶೃಂಗೇರಿ ಗುರುಪಾದಪೂಜೆ -ಅನುಗ್ರಹ ಪ್ರಾಪ್ತಿ

ರಾಮಕ್ಷತ್ರಿಯ ಸಮಾಜದ ಪರಮಪೂಜ್ಯ ಗುರುದೇವ ಶ್ರೀ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿಗಳವರಿಂದ ಕಾಸರಗೋಡು ಕೋಟೆಯ ಪೂರ್ವ ಭಾಗದಲ್ಲಿನ ನಾಗರಕಟ್ಟೆ ಯಲ್ಲಿ ಸಮಾಜದ ಏಳಿಗೆಗಾಗಿ ಸ್ಥಾಪಿಸಿದ “ಶ್ರೀ ಶಾರದಾ ಭಜನಾಶ್ರಮ ” ಇದರ ಜೀರ್ಣೋದ್ದಾರ, ನೂತನ ನಾಗರಕಟ್ಟೆ, ರಕ್ತೇಶ್ವರಿ ಕಟ್ಟೆ ಪುನರ್ ನಿರ್ಮಾಣ ಹಾಗೂ ಡಿಸೆಂಬರ್ ತಿಂಗಳ ನಾಲ್ಕು, ಐದನೇ ತಾರೀಕಿಗೆ ನಡೆಯುವ ಬ್ರಹ್ಮ ಕಲಶ ಪ್ರಯುಕ್ತ, ಶೃಂಗೇರಿ ಜಗದ್ಗುರು ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾ ಸ್ವಾಮೀಜಿ ಗಳಿಗೆ ಪಾದಪೂಜೆ, ವಸ್ತ್ರ ಸಂಹಿತೆಯೊಂದಿಗೆ ನೀಡಿ ಪರಮ…

Read More

ಇತಿಹಾಸ ಪ್ರಸಿದ್ಧ ಮಂಜೇಶ್ವರ ಕನಿಲ ಶ್ರೀ ಭಗವತಿ ಕ್ಷೇತ್ರಕ್ಕೆ ಭೇಟಿ ಕೊಟ್ಟ ಕೊಡುಗೈ ದಾನಿ ಅಸ್ತ್ರ ಗ್ರೂಪ್ CEO ಕೆ.ಎಸ್ ಲಂಚುಲಾಲ್ .

ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ನವೀಕರಣ ಕೆಲಸಗಳು ಬರದಿಂದ ಸಾಗುತ್ತಿದ್ದು ಇಂದು ಕೊಡುಗೈ ದಾನಿ , ಬಡವರ ಬಂಧು ಅಸ್ತ್ರ ಗ್ರೂಪ್ ನ ಸಿ ಇ ಓ ಲಂಚುಲಾಲ್ ಕೆ. ಎಸ್ ಅವರು ಕ್ಷೇತ್ರಕ್ಕೆ ಭೇಟಿ ಕೊಟ್ಟರು. ಬರದಿಂದ ಸಾಗುವ ಜೀರ್ಣೋದ್ದಾರ ಕೆಲಸವನ್ನು ವೀಕ್ಷಿಸಿ ರೂಪುರೇಷೆ ನೋಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಜೀರ್ಣೋದ್ದಾರ ಸಮಿತಿ ಹಾಗೂ ಆಡಳಿತ ಸಮಿತಿಯಿಂದ ಲಂಚುಲಾಲ್ ರವರಿಗೆ ಕಿರು ಗೌರವಾರ್ಪಣೆಯನ್ನು ಸಮರ್ಪಿಸಿದರು. ಈ ಸಂದರ್ಭ ಮಾತನಾಡಿದ ಲಂಚುಲಾಲ್ ರವರು ..ಮೊದಲು…

Read More

ಮಂಜೇಶ್ವರದ ದಿವ್ಯಾಂಗಿ ಲಾಟರಿ ವ್ಯಾಪಾರಿಗೆ ದ್ವಿಚಕ್ರ ವಾಹನ ಹಸ್ತಾಂತರಿಸಿದ ಅಸ್ತ್ರ ಗ್ರೂಪಿನ ಸಿ ಇ ಓ ಲಂಚುಲಾಲ್.

ಮಂಜೇಶ್ವರದ ಹೊಸಂಗಡಿಯಲ್ಲಿ ಲಾಟರಿ ಮಾರಾಟ ಮಾಡಿ ಜೀವನ ನಿರ್ವಹಿಸುತ್ತಿರುವ ದಿವ್ಯಾಂಗಿ ರೋಹಿತ್ ಹೊಸಂಗಡಿ ಯವರಿಗೆ ಲಂಚುಲಾಲ್ ಅವರು ತಮ್ಮ ಪ್ರಾಣಾಸ್ತ್ರ ಚಾರಿಟೇಬಲ್ ಟ್ರಸ್ಟ್ ಮೂಲಕ ದ್ವಿಚಕ್ರ ವಾಹನವನ್ನು ಕನಿಲ ಶ್ರೀ ಭಗವತಿ ಕ್ಷೇತ್ರದ ವಠಾರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶ್ರೀ ಕ್ಷೇತ್ರದ ಕಾರ್ನವರ ಮೂಲಕ ನೀಡಿದರು. ಮಂಜೇಶ್ವರ ಪಿಲಿಗೊಬ್ಬು ನಡೆಯುವ ಸಂದರ್ಭದಲ್ಲಿ ರೋಹಿತ್ ಅವರ ಬಗ್ಗೆ ಲಂಚುಲಾಲ್ ಅವರಿಗೆ ತಿಳಿಸಲಾಗಿತ್ತು. ಅಂದೇ ನೀಡಿದ ವಾಗ್ದಾನದಂತೆ ಇಂದು ಈ ದ್ವಿಚಕ್ರ ವಾಹನವನ್ನು ಹಸ್ತಾಂತರಿಸಲಾಗಿದೆ. ಮಂಜೇಶ್ವರ ಪಿಲಿಗೊಬ್ಬು ವೇದಿಕೆಯಲ್ಲಿ ಸಾಂಕೇತಿಕವಾಗಿ…

Read More
error: Content is protected !!