ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಗಮ

ಸೂರಂಬೈಲು: ಸರ್ಕಾರಿ ಪ್ರೌಢಶಾಲೆ ಸೂರಂಬೈಲು ವತಿಯಿಂದ ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ‘ಹಳೇ ವಿದ್ಯಾರ್ಥಿ ಸಂಗಮ’ ಹೆಸರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ತಮ್ಮ ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕಲಿದ್ದಾರೆ. ಜೊತೆಗೆ ಶಾಲೆಯೊಂದಿಗೆ ತಮ್ಮ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 20ರಂದು ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಶಾಲಾ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು…

Read More

ಉದ್ಯಾವರ ಸರ್ಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

ಉದ್ಯಾವರ: ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಉದ್ಯಾವರ್ ಸರ್ಕಾರಿ ಪ್ರೌಢಶಾಲೆಯ 2026–27ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಉತ್ಸಾಹಭರಿತ ಚಾಲನೆ ದೊರೆಯಿತು. ಸೆಪ್ಟೆಂಬರ್ 18 ಮತ್ತು 19ರಂದು ನಡೆಯಲಿರುವ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಶುಕ್ರವಾರ ಬೆಳಿಗ್ಗೆ 9.30ಕ್ಕೆ ಶಾಲಾ ಆವರಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೀಬಾ ಬಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು. PTA ಅಧ್ಯಕ್ಷ ರಹೀಂ ಪುಚ್ಚತ್ತ್‌ವಯಲ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಕಾರ್ಯದರ್ಶಿ ಜಯರಾಜ್ ಸರ್ ಸ್ವಾಗತಿಸಿದರು….

Read More

ಶ್ರೀಮತಿ ಪುಷ್ಪ ಪ್ರಸಾದ್ ಉಡುಪಿಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026.ಕ್ಕೆ ಆಯ್ಕೆ

ಕಾಸರಗೋಡು : 11.10.2026 ಭಾನುವಾರದಿಂದ 20.10.2026ರ ವರೆಗೆ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಸಾರಥ್ಯದಲ್ಲಿ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ “2026.ರ ಅಂಗವಾಗಿ 18.10.2026 ಭಾನುವಾರ ಬೆಳಿಗ್ಗಿನ 11 ಗಂಟೆಯಿಂದ ಉದ್ಘಾಟನೆ ಗೊಳ್ಳುವ “ಕಾಸರಗೋಡು ದಸರಾ ಕವಿ ಸಮ್ಮೇಳನ “ದಲ್ಲಿ ಶ್ರೀಮತಿ ಪುಷ್ಪ ಪ್ರಸಾದ್ ಉಡುಪಿ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ “ನೀಡಿ ಗೌರವಿಸಲಾಗುವದು. ಸಾಹಿತ್ಯ ಸಂಘಟಕ, ಬಿ. ಶ್ರೀನಿವಾಸ್…

Read More

ಗಣೇಶೋತ್ಸವ ಮೆರವಣಿಗೆಗೆ ಆಟೋ ಚಾಲಕರಿಂದ ತಂಪು ಪಾನೀಯ ಸೇವೆ

ಮಂಜೇಶ್ವರ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಂಜೇಶ್ವರ ಇದರ 46ನೇ ವರ್ಷದ ಗಣೇಶೋತ್ಸವದ ಜಲಸ್ಥಂಭನ ಮೆರವಣಿಗೆ ಮಂಜೇಶ್ವರ ತಲುಪಿದ ಸಂದರ್ಭದಲ್ಲಿ ಮಾನವೀಯತೆ ಹಾಗೂ ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ನಡೆಯಿತು. ಮಂಜೇಶ್ವರ ರೈಲ್ವೆ ನಿಲ್ದಾಣದ ಸಮೀಪದ ಆಟೋ ಚಾಲಕರ ಸಂಘದ ವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಂಪು ಪಾನೀಯ ವಿತರಿಸಲಾಯಿತು. ಸುಮಾರು 2 ಸಾವಿರಕ್ಕೂ ಅಧಿಕ ಗ್ಲಾಸ್ ಪಾನೀಯ ವಿತರಿಸಿ ಆಟೋ ಚಾಲಕರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು. ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರು ಹಾಗೂ ಸಾರ್ವಜನಿಕರಿಗೆ ಯಾವುದೇ ಭೇದಭಾವವಿಲ್ಲದೆ ಪಾನೀಯ ವಿತರಿಸುವ…

Read More

ಖ್ಯಾತ ಸಾಹಿತಿ, ಕವಿ ಸತ್ಯವತಿ ಭಟ್ ಕೊಳಚಪ್ಪು ದಕ್ಷಿಣ ಕನ್ನಡ ಜಿಲ್ಲೆ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026.ಕ್ಕೆ ಆಯ್ಕೆ

ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಸಾಹಿತಿ ಹಾಗೂ ಕವಿ ಸತ್ಯವತಿ ಭಟ್ ಕೊಳಚಪ್ಪು ಅವರಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ನೀಡಿ ಗೌರವಿಸಲು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ ನಡೆಯಲಿದೆ. ಉತ್ಸವದ ಅಂಗವಾಗಿ ಅಕ್ಟೋಬರ್ 18ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಸತ್ಯವತಿ ಭಟ್ ಕೊಳಚಪ್ಪು ಅವರಿಗೆ ಕವಿ ಶ್ರೇಷ್ಠ…

Read More

ಚಿತ್ರಾಪುರದ ಅಂಗಳದಿಂದ ದಾದಾಸಾಹೇಬ್ ಫಾಲ್ಕೆ ಗೌರವದವರೆಗೆ…ಭಟ್ಕಳದ ನೆಲದ ಹೆಮ್ಮೆಯ ಅನಂತ ನಾಗ್ ಅವರ ಅಪೂರ್ವ ಕಲಾಯಾನ

ಕನ್ನಡ ಚಿತ್ರರಂಗದ ಸಹಜ ಅಭಿನಯದ ಹಿರಿಯ ಕಲಾವಿದ ಶ್ರೀ ಅನಂತ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿರುವುದು ಕನ್ನಡಿಗರಿಗಷ್ಟೇ ಅಲ್ಲ, ಉತ್ತರ ಕನ್ನಡದ ಕಲಾಭಿಮಾನಿಗಳಿಗೂ ಹೆಮ್ಮೆಯ ಹಾಗೂ ಸಂತಸದ ಕ್ಷಣ. ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗುತ್ತಿದೆ. ಈ ಸಂದರ್ಭದಲ್ಲಿ ಭಟ್ಕಳ, ಚಿತ್ರಾಪುರ, ಶಿರಾಲಿ ಹಾಗೂ ಮಲ್ಲಾಪುರದ ನೆಲದೊಂದಿಗೆ ಅನಂತ ನಾಗ್ ಅವರಿಗಿರುವ ಆಪ್ತ ನಂಟು ವಿಶೇಷವಾಗಿ ನೆನಪಾಗುತ್ತದೆ.ಚಿತ್ರಾಪುರದ ಮಣ್ಣಿನಲ್ಲಿ ಅರಳಿದ…

Read More

ಮಂಜೇಶ್ವರದಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆ ಕಾಂಗ್ರೆಸ್ ಸಮಿತಿಯಿಂದ ಆತ್ಮೀಯ ಸ್ವಾಗತ

​ಮಂಜೇಶ್ವರ: ಗಣೇಶೋತ್ಸವದ ಅಂಗವಾಗಿ ವಿಸರ್ಜನೆಗಾಗಿ ಸಮುದ್ರದತ್ತ ತೆರಳುತ್ತಿದ್ದ ಭಕ್ತಾದಿಗಳ ಶೋಭಾಯಾತ್ರೆಗೆ ಮಂಜೇಶ್ವರ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆತ್ಮೀಯ ಸ್ವಾಗತ ಕೋರಿ, ಸಿಹಿ ಪಾನೀಯ ವಿತರಿಸಲಾಯಿತು. ನಾಡಿನ ಸೌಹಾರ್ದತೆ, ಸಹೋದರತೆ ಹಾಗೂ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ​ಜಾತಿ-ಮತ ಭೇದವಿಲ್ಲದೆ ಪ್ರತಿಯೊಬ್ಬರೂ ಒಂದಾಗಿ ಆಚರಿಸುವ ಇಂತಹ ಹಬ್ಬಗಳು ನಮ್ಮ ಒಗ್ಗಟ್ಟು ಮತ್ತು ಸಾಮಾಜಿಕ ಐಕ್ಯತೆಯ ಸಂಕೇತವಾಗಿವೆ ಎಂದು ಸಂಘಟಕರು ತಿಳಿಸಿದರು. ಈ ಸ್ವಾಗತ ಕಾರ್ಯಕ್ರಮದಲ್ಲಿ ಮಂಜೇಶ್ವರದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ…

Read More

ಮಂಜೇಶ್ವರದಲ್ಲಿ ವೈಭವದ ಗಣೇಶೋತ್ಸವ: ಮಹಾಗಣಪತಿ ಜಲಸ್ಥಂಭನ ಮೆರವಣಿಗೆ

ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ 46ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಮಹಾಗಣಪತಿ ದೇವರ ಜಲಸ್ಥಂಭನ ಮೆರವಣಿಗೆ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ಗಣಹೋಮ , ಭಜನೆ ಹಾಗೂ ವಿಶೇಷ ಸಂಗೀತ ಸ್ವರ ಸಂಗಮ ಕಾರ್ಯಕ್ರಮ ,ಧಾರ್ಮಿಕ ವಿಧಿವಿಧಾನಗಳ ಬಳಿಕ ಮಹಾಗಣಪತಿ ದೇವರ ವಿಗ್ರಹವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮೆರವಣಿಗೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣಪತಿಯ ನಾಮಸ್ಮರಣೆ ಮಾಡಿದರು. ಪಂಚವಾದ್ಯ , ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾ ಪ್ರದರ್ಶನಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿದ್ದವು. ಮಾರ್ಗದುದ್ದಕ್ಕೂ ಭಕ್ತರು…

Read More

ಅಬ್ದುಲ್ ರಹ್ಮಾನ್ ಕೊಲೆ ಕೇಸ್: ಆರೋಪಿಗಳಿಗೆ ಜಾಮೀನು ವಿರೋಧಿಸಿ SDPI ಪ್ರತಿಭಟನೆ

ಮಂಗಳೂರು: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಖಂಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ನಾಯಕರು, ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ವಿರೋಧಿಸಿದರು. ಈ ವೇಳೆ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಎಸ್‌ಡಿಪಿಐನ ಕೆಲ ನಾಯಕರು ಹಾಗೂ…

Read More

ಮಂಗಳೂರಲ್ಲಿ ಐತಿಹಾಸಿಕ ಕ್ಯಾಬಿನೆಟ್ ಮೀಟಿಂಗ್: ಕರಾವಳಿಗೆ ಭರ್ಜರಿ ಘೋಷಣೆಗಳ ನಿರೀಕ್ಷೆ

ಮಂಗಳೂರು, ದಕ್ಷಿಣ ಕನ್ನಡ:ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಪಡೀಲಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದ ಪ್ರಜಾಸೌಧದ ಎರಡನೇ ಮಹಡಿಯಲ್ಲಿ ಸಚಿವ ಸಂಪುಟ ಸಭೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ ಸುಮಾರು 11 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. ತುಳು…

Read More
error: Content is protected !!