ಮಂಜೇಶ್ವರದಲ್ಲಿ ಚುನಾವಣಾ ಕಹಳೆ: ಬಿಜೆಪಿ ಪರ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅಬ್ಬರದ ಪ್ರಚಾರ
ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಗಡಿಭಾಗದ ಪ್ರತಿಷ್ಠಿತ ಕ್ಷೇತ್ರವಾದ ಮಂಜೇಶ್ವರದಲ್ಲಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಗೆಲುವಿಗಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಇಂದು ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿದರು. ಕ್ಷೇತ್ರದಾದ್ಯಂತ ಸಂಚರಿಸಿದ ಶಾಸಕ ವೇದವ್ಯಾಸ ಕಾಮತ್ ಅವರು, ಮಂಜೇಶ್ವರದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಮದನಂತೇಶ್ವರ ದೇವಸ್ಥಾನ ಹಾಗೂ ಕೀರ್ತೇಶ್ವರ…