Headlines

ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ, ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ದ ಜೀರ್ಣೋದ್ಧಾರದ ವಿಜ್ಞಾಪನ ಪತ್ರ ಬಿಡುಗಡೆ

ಮಂಗಳೂರು : ಶ್ರೀ ದುರ್ಗಾದೇವಿ ಕ್ಷೇತ್ರ, ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರ ದೈವಗಳ ಸಾನಿಧ್ಯ ತೌಡುಗೋಳಿ ಇದರ ಜೀರ್ಣೋದ್ದಾರದ ವಿಜ್ಞಾಪನ ಪತ್ರವನ್ನು ಶ್ರೀ ಕ್ಷೇತ್ರದಲ್ಲಿ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು. ವಿಜ್ಞಾಪನ ಪತ್ರ ಬಿಡುಗಡೆ ಬಳಿಕ ಮಾತನಾಡಿದ ಶ್ರೀ ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ ನಾವೆಲ್ಲರೂ ಒಂದೇ ತಾಯಿ ಮಕ್ಕಳಂತೆ ಈ ಒಂದು ದೇವತಾ ಕಾರ್ಯದಲ್ಲಿ ನಮ್ಮನ್ನು ತೊಡಗಿಸಿಕೊಳ್ಳೋಣ ಎಂದು ಹೇಳಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರದ ಅನುವಂಶಿಕ…

Read More

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಡಿಸಿ ದರ್ಶನ್ ಎಚ್.ವಿ

ಮಂಗಳೂರು: ಮತದಾನವು ಪ್ರತಿಯೊಬ್ಬ ನಾಗರಿಕನ ಪವಿತ್ರ ಹಕ್ಕಾಗಿದ್ದು, ಈ ಹಕ್ಕು ಯಾವುದೇ ತೊಂದರೆಯಾಗದಂತೆ ಎಲ್ಲ ಅರ್ಹ ಮತದಾರರಿಗೆ ತಲುಪಿಸಲು ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಳೆದ ಹಲವು ದಿನಗಳಿಂದ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಗಳು ಮನೆಗಳಿಗೆ ಭೇಟಿ ನೀಡಿದಾಗ…

Read More

ಕನ್ನಡ ಭವನದ ವಿದ್ಯಾರ್ಥಿ-ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಜು. 26ಕ್ಕೆ ಮುಂದೂಡಿಕೆ

ಕಾಸರಗೋಡು:ರಾಮಕ್ಷತ್ರಿಯ ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ನೀಡಲಾಗುವ “ಭರವಸೆಯ ಬೆಳಕು – ಸ್ಟೂಡೆಂಟ್ ಅಚೀವ್‌ಮೆಂಟ್ ಅವಾರ್ಡ್” ಹಾಗೂ ಶಿಕ್ಷಕರಿಗೆ ಪ್ರದಾನ ಮಾಡುವ “ಭರವಸೆಯ ಶಿಕ್ಷಣ ರತ್ನ – ಟೀಚರ್ಸ್ ಅಚೀವ್‌ಮೆಂಟ್ ಅವಾರ್ಡ್ 2026” ಕಾರ್ಯಕ್ರಮವನ್ನು ಜುಲೈ 26ಕ್ಕೆ ಮುಂದೂಡಲಾಗಿದೆ. ಕನ್ನಡ ಭವನ, ಕಾಸರಗೋಡು ವತಿಯಿಂದ ನೀಡಲಾಗುವ ಈ ಪ್ರತಿಭಾ ಪುರಸ್ಕಾರ ಸಮಾರಂಭವು ಈ ಹಿಂದೆ ಪ್ರಕಟಿಸಿದ್ದ ದಿನಾಂಕದ ಬದಲಿಗೆ ಜುಲೈ 26, ಭಾನುವಾರ ನಡೆಯಲಿದೆ ಎಂದು ಕನ್ನಡ ಭವನದ ಸ್ಥಾಪಕ-ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾ…

Read More

ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: ಕರಾವಳಿ ಜಿಲ್ಲೆಗಳಿಗೂ ವಿಸ್ತರಿಸಲು ವಿಹಿಂಪ ಆಗ್ರಹ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಉರ್ವ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ವಲಸಿಗರು ಪತ್ತೆಯಾದ ಹಿನ್ನೆಲೆಯಲ್ಲಿ, ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ವ್ಯಾಪಕ ತಪಾಸಣೆ ಮತ್ತು ಕಾರ್ಯಾಚರಣೆ ನಡೆಸುವಂತೆ ಆದೇಶಿಸಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಕ್ರಮವನ್ನು ವಿಶ್ವ ಹಿಂದೂ ಪರಿಷತ್ (ವಿಹಿಂಪ) ಸ್ವಾಗತಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪುವೆಲ್, ಕರಾವಳಿ ಭಾಗದಲ್ಲಿ…

Read More

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷ: ಎಸ್‌ಡಿಪಿಐ ಆರೋಪ

ಮಂಗಳೂರು: ಕೇಂದ್ರ ಚುನಾವಣಾ ಆಯೋಗವು 2025ರ ಜೂನ್‌ನಲ್ಲಿ ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳಿದ್ದು, ಮತದಾರರು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಶ್ರಫ್ ಅಡ್ಡೂರು ಆರೋಪಿಸಿದರು. ನಗರದ ಎಸ್‌ಡಿಪಿಐ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯನ್ನು ಮೊದಲಿಗೆ 2025ರ ಜೂನ್ 26ರಂದು ಬಿಹಾರದಲ್ಲಿ ಜಾರಿಗೊಳಿಸಲಾಗಿತ್ತು. ಅಲ್ಲಿ ಹಲವು ಗೊಂದಲಗಳು ಉಂಟಾದ ಹಿನ್ನೆಲೆಯಲ್ಲಿ ಸುಪ್ರೀಂ…

Read More

ಬೆಂಗಳೂರಿನಲ್ಲಿ ಕಾಸರಗೋಡು ಸಮ್ಮೇಳನ- ಕಾಸರಗೋಡು ಕರ್ನಾಟಕ ಉತ್ಸವಕ್ಕೆ ಸಿದ್ಧತೆ

ಗಡಿನಾಡು ಕಾಸರಗೋಡು ಪ್ರದೇಶದ ಕನ್ನಡ ಭಾಷೆ, ಸಾಹಿತ್ಯ, ಶಿಕ್ಷಣ, ಸಂಸ್ಕೃತಿ, ಇತಿಹಾಸವನ್ನು ಸಂರಕ್ಷಿಸಿ ಉಳಿಸಿ ಬೆಳೆಸುವ ಕುರಿತು ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಹಾಗೂ ಸಾಧಕರೊಂದಿಗೆ ಸಂವಾದ ಚರ್ಚೆ ನಡೆಸಿ ಕಾಸರಗೋಡು ಕನ್ನಡಿಗರ ಉದ್ಯೋಗ, ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳು,ಉಪ ಮುಖ್ಯಮಂತ್ರಿಗಳು ಸಚಿವರು, ರಾಜ್ಯದ ವಿವಿಧ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು ಸರ್ವ ಪಕ್ಷದ ನಾಯಕರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಬೆಂಗಳೂರು,ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು,ಕರ್ನಾಟಕ…

Read More

ಮಂಗಳೂರಿನಿಂದ ಭಾರತ ಗೌರವ ವಿಶೇಷ ಪ್ರವಾಸಿ ರೈಲು, ವಿಮಾನ ಪ್ರವಾಸ ಪ್ಯಾಕೇಜ್‌ಗಳು: ಐಆರ್‌ಸಿಟಿಸಿ

ಮಂಗಳೂರು:ಭಾರತೀಯ ರೈಲ್ವೆ ಕೇಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಮಂಗಳೂರಿನಿಂದ ಹೊರಡುವ ‘ಭಾರತ ಗೌರವ’ ವಿಶೇಷ ಪ್ರವಾಸಿ ರೈಲು ಹಾಗೂ ದೇಶೀಯ ವಿಶೇಷ ವಿಮಾನ ಪ್ರವಾಸ ಪ್ಯಾಕೇಜ್‌ಗಳನ್ನು ಪ್ರಕಟಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಐಆರ್‌ಸಿಟಿಸಿ ಜಂಟಿ ಜನರಲ್ ಮ್ಯಾನೇಜರ್ (ಟೂರಿಸಂ) ಸ್ಯಾಮ್ ಜೋಸೆಫ್ ಪಿ. ಈ ಕುರಿತು ಮಾಹಿತಿ ನೀಡಿ, ಓಣಂ ರಜಾ ಪ್ರಯುಕ್ತ ಆಯೋಜಿಸಲಾಗಿರುವ ‘ಅಹಮದಾಬಾದ್ ಸಹಿತ ಗೋಲ್ಡನ್ ಟ್ರಯಾಂಗಲ್ ಭಾರತ ಗೌರವ ವಿಶೇಷ ಪ್ರವಾಸಿ ರೈಲು’ ಆಗಸ್ಟ್ 22, ರಂದು ಮಂಗಳೂರಿನ ಮೂಲಕ…

Read More

ಅಕ್ರಮ ವಲಸಿಗರನ್ನು ಗಡಿಪಾರು ಮಾಡುವುದು ಕೇಂದ್ರದ ಜವಾಬ್ದಾರಿ: ಐವನ್ ಡಿ’ಸೋಜಾ

ಮಂಗಳೂರು:ಬಾಂಗ್ಲಾದೇಶಿ ಅಕ್ರಮ ನುಸುಳುಕೋರರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ದೇಶದಿಂದ ಹೊರಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆರೋಪಿಸಿದರು.ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಇತಿಹಾಸ ಹಾಗೂ ಅಂಕಿ-ಅಂಶಗಳ ಆಧಾರದ ಮೇಲೆ ಮಾತನಾಡಬೇಕು ಎಂದು ಆಗ್ರಹಿಸಿದರು. ಕೇಂದ್ರದಲ್ಲಿ ಬಿಜೆಪಿ ಹಲವು ವರ್ಷಗಳಿಂದ ಅಧಿಕಾರದಲ್ಲಿದ್ದರೂ ದೇಶದಿಂದ ಎಷ್ಟು ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂಬುದರ ಕುರಿತು ಶ್ವೇತಪತ್ರ ಪ್ರಕಟಿಸಬೇಕು….

Read More

ಮಂಗಳೂರು ಲಿಫ್ಟ್ ದುರಂತ: ಮೃತ ಕಾರ್ಮಿಕ ನೌಫಾಲ್ ಕುಟುಂಬಕ್ಕೆ ₹15 ಲಕ್ಷ ಪರಿಹಾರ

ಮಂಗಳೂರು: ನಗರದ ಕುಂಟಿಕಾನದಲ್ಲಿರುವ ಇನ್‌ಸ್ಟಾಮಾರ್ಟ್ ಸರಬರಾಜು ಕೇಂದ್ರದಲ್ಲಿ ಲಿಫ್ಟ್ ದುರಂತದಲ್ಲಿ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಪೂಂಜಕೆರೆ ನಿವಾಸಿ, 28 ವರ್ಷದ ಕಾರ್ಮಿಕ ನೌಫಾಲ್ ಅವರ ಕುಟುಂಬಕ್ಕೆ ಕಂಪೆನಿಯು ₹15 ಲಕ್ಷ ಪರಿಹಾರ ನೀಡಿದೆ. ಈ ಕುರಿತು ಎಸ್.ಡಿ.ಟಿ.ಯು (ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್) ಮಂಗಳೂರು ನಗರ ಜಿಲ್ಲಾ ಸಮಿತಿ ಪ್ರಕಟಣೆ ಹೊರಡಿಸಿದ್ದು, ಘಟನೆ ನಡೆದ ದಿನದಿಂದಲೇ ಮೃತ ಕಾರ್ಮಿಕನ ಕುಟುಂಬಕ್ಕೆ ನ್ಯಾಯ ಒದಗಿಸುವ ಉದ್ದೇಶದಿಂದ ನಿರಂತರ ಹೋರಾಟ ನಡೆಸಲಾಗಿತ್ತು ಎಂದು ತಿಳಿಸಿದೆ. ಈ ಸಂಬಂಧ…

Read More

​ವಿಶ್ವ ಜನಸಂಖ್ಯಾ ದಿನ: ಜಾಗೃತಿ ಕಾರ್ಯಕ್ರಮ

ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಮೆಮೋರಿಯಲ್ ಸರ್ಕಾರಿ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನದ ಜಿಲ್ಲಾ ಮಟ್ಟದ ಉದ್ಘಾಟನಾ ಸಮಾರಂಭ ನಡೆಯಿತು. ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಯು.ಕೆ. ಸೈಫುಲ್ಲ ತಂಗಳ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಅಧ್ಯಕ್ಷತೆ ವಹಿಸಿದ್ದರು. ​ಈ ವರ್ಷದ ವಿಶ್ವ ಜನಸಂಖ್ಯಾ ದಿನದ ಧ್ಯೇಯವಾಕ್ಯ ‘ಪ್ರಸವಗಳ ನಡುವೆ ಸಮರ್ಪಕ ಅಂತರವು ತಾಯಿ ಮತ್ತು ಶಿಶುವಿನ ಆರೋಗ್ಯಕ್ಕೆ ಅಗತ್ಯ’ ಎಂಬುದಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌.ಸಿ.ಎಚ್ ಅಧಿಕಾರಿ ಡಾ. ಸಂತೋಷ್ ಬಿ….

Read More
error: Content is protected !!