Headlines

ಕಾರ್ಕಳ: ಯುವಕನ ಆತ್ಮಹತ್ಯೆ ಪ್ರಕರಣ; ವಿಧಿವಿಜ್ಞಾನ ವಿಶ್ಲೇಷಣೆಗೆ ಮೊಬೈಲ್ ಫೋನ್ ರವಾನೆ

ಉಡುಪಿ, ಅ. 21 : ಕಾರ್ಕಳದ ಬೆಳ್ಮಣ್‌ನ ಲಾಡ್ಜ್‌ನಲ್ಲಿ ಇತ್ತೀಚೆಗೆ ನಡೆದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತನ ಮೊಬೈಲ್ ಫೋನ್ ಅನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. “ತನಿಖಾ ತಂಡವು ಫೋನ್ ದತ್ತಾಂಶ, ಬ್ಯಾಂಕ್ ವಹಿವಾಟುಗಳು ಮತ್ತು ಚಾಟ್ ದಾಖಲೆಗಳ ಆಧಾರದ ಮೇಲೆ ಆರೋಪಿಯನ್ನು ಪ್ರಶ್ನಿಸಿದೆ. ಆರೋಪಿಯ ಡಿಜಿಟಲ್ ಸಾಧನಗಳನ್ನು ಸಹ ಪರಿಶೀಲಿಸಲಾಗಿದೆ. ಇದರ ಜೊತೆಗೆ, ಮೃತನ ಸ್ನೇಹಿತರು, ಸಂಬಂಧಿಕರು ಮತ್ತು ಆಪ್ತರನ್ನೂ ವಿಚಾರಣೆ…

Read More

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಪ್ಪಳ ಶಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ.

ಮಂಜೇಶ್ವರ: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಪ್ಪಳ ಶಾಖೆ ವತಿಯಿಂದ ಎಸ್.ಎ.ಟಿ ಶಾಲೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಶೇಕಡ 60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು. ಝೋನಲ್ ಬಿಸಿನೆಸ್ ಹೆಡ್ ಎಸ್.ಎಫ್. ಎಲ್ ಶ್ರೀಜಿತ್ ಏನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೊ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಅಶ್ವಿನಿ ಎಂ.ಎಲ್ ,ಎಸ್.ಎ.ಟಿ ಶಾಲೆಯ ಮುಖ್ಯೋಪದ್ಯಾನಿ…

Read More

ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಿಬೆಳೆಸಿ ಜೀವನವನ್ನೇ ಸಂಘಟನೆಗೆ ತೈದ ನಾಯಕ ಕೆ. ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರ ಉದ್ಘಾಟನೆ .

ವರ್ಕಾಡಿ ಪಂಚಾಯತಿನ ಕೊಡ್ಲಮೊಗರು ಪಾತೂರು ಗ್ರಾಮದಲ್ಲಿ ಸಿ ಪಿ ಐ ಎಂ ಪಕ್ಷದ ಸಂಘಟನೆಗಾಗಿ ಹಗಲಿರುಳು ಎನ್ನದೆ ದುಡಿದು ತನ್ನ ಜೀವನವನ್ನೇ ಜನರ ಹಿತಕ್ಕಾಗಿ ಮುಡಿಪಾಗಿರಿಸಿ ಹಲವಾರು ವರ್ಷಗಳ ಕಾಲ ಲೋಕಲ್ ಕಮಿಟಿ ಕಾರ್ಯದರ್ಶಿಯಾಗಿದ್ದ ಶ್ರೀಯುತ ಕೆ. ಪಕೀರ ಶೆಟ್ಟಿಗಾರ್ ರ ಸವಿ ನೆನಪಿಗಾಗಿ ಕೊಡ್ಲಮೊಗರು ಲೋಕಲ್ ಕಮಿಟಿಯವರು ಊರ ಪರವೂರ ದಾನಿಗಳ ಸಹಕಾರದಿಂದ ನಿರ್ಮಿಸಿದ ಸ್ಮಾರಕ ಮಂದಿರದ ಉದ್ಘಾಟನಾ ಸಮಾರಂಭವು ಅಕ್ಟೊಬರ್ -19 ರಂದು ನಡೆಯಿತು. ಕೆ . ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರವನ್ನು ಸಿ.ಪಿ….

Read More

ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪುತ್ತೂರು: ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಶೋಕ ಜನ-ಮನ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಅಶೋಕ್ ಅವರು ಕಾಂಗ್ರೆಸ್ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ಪ್ರತಿ ವರ್ಷ ವಸ್ತ್ರದಾನ ಮಾಡುವ ಕಾರ್ಯವನ್ನು 13 ವರ್ಷಗಳಿಂದ ಮಾಡ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಇತರರಿಗೆ ಅವರು ಸ್ಫೂರ್ತಿಯಾಗಲಿ…

Read More

ಸೌತ್ ಕೆನರಾ ಫೊಟೋಗ್ರಾಫರ್ ಅಸೋಸಿಯೇಷನ್ ನಿಂದ ಹಿರಿಯರ ಅನಾಥಶ್ರಮದಲ್ಲಿ ದೀಪಾವಳಿ ಸಂಭ್ರಮ

ಮಂಗಳೂರು 20: ಸೌತ್ ಕೆನರಾ ಫೊಟೋಗ್ರಾಫರ್ ಅಸೋಸಿಯೇಷನ್ , ದಕ್ಷಿಣ ಕನ್ನಡ ಜಿಲ್ಲೆ – ಉಡುಪಿ ಜಿಲ್ಲೆ, ಮಂಗಳೂರು ವಲಯದ ವತಿಯಿಂದರಜತ ಸಂಭ್ರಮ 2025-26 ಅಂಗವಾಗಿ ಲಲಿತಾ ಗೀತಾ ಅನಾಥಶ್ರಮದಲ್ಲಿ ಹಿರಿಯರ ಜೊತೆ ದೀಪಾವಳಿ ಹಬ್ಬದ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಿಕರ್ಣಕಟ್ಟೆಯ ಬಳಿಯ ಲಲಿತಾ ಗೀತಾ ಅನಾಥಶ್ರಮ ಸಂಸ್ಥೆಯು ಸುಮಾರು 4 ವರ್ಷಗಳಿಂದ ನಿರಾಶ್ರಿತರಿಗೆ ಆಶ್ರಯ ನೀಡುತ್ತಿದೆ. ಈ ಸಂಸ್ಥೆಯ ಮುಖ್ಯಸ್ಥೆಯಾದ ಗೀತಾ ಅವರು ಮೂರು ನಿರಾಶ್ರಿತರಿಂದ ಸರಿಪಳ್ಳ ಪರಿಸರದಲ್ಲಿ ಆರಂಭ ಮಾಡಿದ ಈ ಅನಾಥಶ್ರಮ, ಈಗ…

Read More

ಪುತ್ತೂರಿನಲ್ಲಿ ಸಿದ್ದರಾಮಯ್ಯ ಪಾಲ್ಗೊಂಡ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು,11ಕ್ಕೂ ಹೆಚ್ಚು ಮಂದಿ ಅಸ್ವಸ್ಥ .

ಪುತ್ತೂರು : ಪುತ್ತೂರಿನಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಅಶೋಕ ಜನಮನ ಕಾರ್ಯಕ್ರಮ ನಡೆದಿತ್ತು .ಈ ಕಾರ್ಯಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು, ಉಂಟಾಗಿದ್ದು 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು ಇದರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ. ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾಗಿದ್ದು ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಅಸ್ವಸ್ಥರಾಗಿದ್ದರೆಂದು ತಿಳಿದುಬಂದಿದೆ ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದ್ದು ಕುಡಿಯಲು ನೀರು…

Read More

ಗೂಡುದೀಪ ಅಳವಡಿಸುವ ವೇಳೆ ವಿದ್ಯುತ್ ಶಾಕ್ ತಗುಲಿ ಮೃತ ಪಟ್ಟ ಕುಂಬಳೆಯ ಯುವಕ

ಕುಂಬಳೆ: ದೀಪಾವಳಿ ಅಂಗವಾಗಿ ಮನೆಯ ಚಾವಡಿಯಲ್ಲಿ ಗೂಡು ದೀಪ ಅಳವಡಿಸುವ ವೇಳೆ ವಿದ್ಯುತ್ ಶಾಕ್ ತಗುಲಿ, ಯುವಕನೋರ್ವ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ನಿಧನರಾದ ಘಟನೆ ನಿನ್ನೆ ರಾತ್ರಿ ಕುಂಬಳೆ ಬಳಿಯ ಪುತ್ತಿಗೆಯಲ್ಲಿ ನಡೆದಿದೆ. ಪುತ್ತಿಗೆ ನಿವಾಸಿ ಬಡಗಿ ವೃತ್ತಿ ಮಾಡುತ್ತಿರುವ ನಾಗೇಶ್ ಆಚಾರ್ಯ – ಹೇಮಲತಾ ದಂಪತಿ ಪುತ್ರ ರಾಜೇಶ್ ಆಚಾರ್ಯ (37) ಮೃತಪಟ್ಟ ಯುವಕನಾಗಿದ್ದಾನೆ. ಮರದ ಕೆತ್ತನೆ ಕೆಲಸ ಮಾಡುತ್ತಿರುವ ರಾಜೇಶ್ ಆಚಾರ್ಯರು ದೀಪಾವಳಿ ಅಂಗವಾಗಿ ಕೆಲಸ ಮುಗಿಸಿ ಮನೆಗೆ…

Read More

ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ “ಪೋಷಕರಿಗಾಗಿ ವಿಶೇಷ ಕಾರ್ಯಕ್ರಮ”

ಮಂಜೇಶ್ವರ: ಕಾಸರಗೋಡು ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಸರಾಗಿರುವ ಹೊಸಂಗಡಿಯ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪೋಷಕರ ಪಾತ್ರವನ್ನು ಒತ್ತಿ ಹಿಡಿಯುವ ಉದ್ದೇಶದಿಂದ “ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದಲ್ಲಿ ಶಾಲೆಯು “ಪೋಷಕರಿಗಾಗಿ ವಿಶೇಷ ಕಾರ್ಯಕ್ರಮ”ವನ್ನು ಶಾಲೆಯ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಶಾಲೆಯ ಪ್ರಾಂಶುಪಾಲ ಅಬ್ದುಲ್ ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಂಜತ್ತೂರು ದಾರುಸ್ಸಲಾಂ ಮಸೀದಿಯ ಖತೀಬ್ ಮೊಹಮ್ಮದಲಿ ಸಲಫಿ ಅವರು ಮುಖ್ಯ ಉಪನ್ಯಾಸಕವಾಗಿ…

Read More

ಮನೆ ಮೇಲೆ ಬೃಹತ್ ಗಾತ್ರದ ತೆಂಗಿನ ಮರ ಬಿದ್ದು ಹಾನಿ: ಸ್ಥಳಕ್ಕೆ ಶಾಸಕರ ಭೇಟಿ .

ಸುರತ್ಕಲ್ ಸಮೀಪದ ಕುಚಿಗುಡ್ಡೆ ಸಮೀಪ ಮನೆಯೊಂದರ ಮೇಲೆ ಬೃಹತ್ ತೆಂಗಿನ ಮರ ಬಿದ್ದು ಮನೆಯ ಮೇಲ್ಚಾವಣಿ ಎರಡು ಹೋಳಾದ ಘಟನೆ ನಡೆದಿದ್ದು, ಶಾಸಕರಾದ ಡಾ. ಭರತ್ ಶೆಟ್ಟಿ ವೈ ಭೇಟಿ ನೀಡಿ ಹಾನಿಗೀಡಾದ ಮನೆ ಪರಿಶೀಲನೆ ನಡೆಸಿದರು.ಹಾನಿಗೀಡಾದ ಮನೆಗೆ ಭೇಟಿ ನೀಡಿದ ಶಾಸಕರು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಪ್ರಕೃತಿ ವಿಕೋಪದಡಿ ಮನೆಯ ಪುನರ್ ನಿರ್ಮಾಣಕ್ಕೆ ಬೇಕಾದ ಪರಿಹಾರ ಒದಗಿಸುವಂತೆ ಸೂಚಿನೆ ನೀಡಿದರು. ಈ ಸಂದರ್ಭ, ನಿಕಟಪೂರ್ವ ಪಾಲಿಕೆಯ ಸದಸ್ಯೆ ನಯನ ಆರ್ ಕೋಟ್ಯಾನ್, ರಾಘವೇಂದ್ರ ಶೆಣೈ, ದಿನಕರ…

Read More

ಆಟೋ ಚಾಲಕನ ಮೇಲೆ ಸಂಚಾರಿ ಪೊಲೀಸರ ದರ್ಪ; ಪುತ್ತೂರಿನಲ್ಲಿ ಆಟೋ ಚಾಲಕರ ಯೂನಿಯನ್ ಪ್ರತಿಭಟನೆ .

ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆಗೆ ಸಂಬಂಧಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಇಬ್ಬರು ಸಂಚಾರಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು…

Read More
error: Content is protected !!