ಎಸ್ಎಸ್ಎಲ್ಸಿ, ಪ್ಲಸ್ ಟು ಟಾಪರ್ಗಳಿಗೆ ಶ್ರೀವಾಣಿ ವಿಜಯ ಪ್ರೌಢಶಾಲೆಯಲ್ಲಿ ಸನ್ಮಾನ
ಮಂಜೇಶ್ವರ : ಕೊಡ್ಲಮೊಗರು ಶ್ರೀವಾಣಿ ವಿಜಯ ಪ್ರೌಢಶಾಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ನಡೆದ ಕಾರ್ಯಕ್ರಮದಲ್ಲಿ, ಪ್ಲಸ್ ಟು ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಹರ್ಷಾದ್ ವರ್ಕಾಡಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕೆ.ಎಂ. ಅಶ್ರಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ರಾಜ್ಮೋಹನ್ ಉಣ್ಣಿತ್ತಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಕಳೆದ ಪರೀಕ್ಷೆಯಲ್ಲಿ…
