Headlines

ಉಡುಪಿ: ಜು. 15ರಂದು ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ, ರಾಷ್ಟ್ರೀಯ ನಾಟಕೋತ್ಸವ

ಉಡುಪಿ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ನವದೆಹಲಿಯ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಆಶ್ರಯದಲ್ಲಿ ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ ಹಾಗೂ ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಟಕೋತ್ಸವ ಜುಲೈ 15ರಂದು ನಡೆಯಲಿದ್ದು, ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.ಉಡುಪಿ ರಂಗಭೂಮಿ ಹಾಗೂ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಸಹಭಾಗಿತ್ವದಲ್ಲಿ ‘ವಂದೇ ಮಾತರಂ’ ಉತ್ಸವ, ಯುವ ರಂಗೋತ್ಸವ ಹಾಗೂ ‘ಸ್ವಾತಂತ್ರ್ಯ ಶರಧಿ’ ಕನ್ನಡ ನಾಟಕ ಪ್ರದರ್ಶನ…

Read More

ಉಡುಪಿ: ಪೊಲೀಸರು ಕಾನೂನು ಪಾಲನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು – ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕ ಅಮಿತ್ ಸಿಂಗ್

ಉಡುಪಿ: ಪೊಲೀಸರು ಸದಾಕಾಲ ತಮ್ಮ ವೃತ್ತಿಯಲ್ಲಿ ಸಂವಿಧಾನವನ್ನು ಎತ್ತಿ ಹಿಡಿಯುವುದರೊಂದಿಗೆ ಕಾನೂನು ಪಾಲನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಅಮಿತ್ ಸಿಂಗ್ ಹೇಳಿದರು. ಅವರು ನಗರದ ಡಿಎ ಆರ್ ಮೈದಾನದಲ್ಲಿ ಉಡುಪಿ ಜಿಲ್ಲಾ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ ವತಿಯಿಂದ ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೇಬಲ್ ಗಳ 14ನೇ ತಂಡದ ನಿರ್ಗಮನ ಪಥ ಸಂಚಲನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು. ಪೊಲೀಸ್ ವೃತ್ತಿಯಲ್ಲಿ…

Read More

ರಾಮಮಂದಿರ ಆರೋಪ: ಪೇಜಾವರ ಶ್ರೀಗಳು ಮೌನ ಯಾಕೆ? – ವಿ.ಎಸ್. ಉಗ್ರಪ್ಪ ಪ್ರಶ್ನೆ

ಉಡುಪಿ: ರಾಮಮಂದಿರಕ್ಕೆ ಸಂಬಂಧಿಸಿದಂತೆ ಕೇಳಿಬಂದಿರುವ ಹಗರಣಗಳ ಆರೋಪಗಳ ಬಗ್ಗೆ ಪೇಜಾವರ ಶ್ರೀಗಳು ಮೌನ ವಹಿಸಿರುವುದು ಏಕೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಪ್ರಶ್ನಿಸಿದರು. ಸೋಮವಾರ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಮ, ಕ್ರೋಧ, ಲೋಭ, ಮೋಹ ತ್ಯಜಿಸಿರುವ ಪೇಜಾವರ ಶ್ರೀಗಳು ರಾಮಮಂದಿರ ಹಗರಣದ ಬಗ್ಗೆ ಯಾಕೆ ಬಾಯಿಬಿಡುತ್ತಿಲ್ಲ? ಈ ಪ್ರಕರಣದಲ್ಲಿ ನಿಮ್ಮ ಪಾತ್ರವೂ ಇದೆಯೇ?” ಎಂದು ಪ್ರಶ್ನಿಸಿದರು. ರಾಮಮಂದಿರಕ್ಕೆ ಸಂಬಂಧಿಸಿದ ಆರೋಪಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೇರ ಹೊಣೆ ಎಂದು…

Read More

ಹಾರ್ಮುಝ್ ಜಲಸಂಧಿಯಲ್ಲಿ ಟ್ಯಾಂಕರ್‌ಗಳ ಮೇಲೆ ಕ್ಷಿಪಣಿ ದಾಳಿ: ಓರ್ವ ಭಾರತೀಯ ನಾವಿಕ ಸಾವು, 8 ಮಂದಿಗೆ ಗಾಯ

ನವದೆಹಲಿ, ಜುಲೈ 14: ಹಾರ್ಮುಝ್ ಜಲಸಂಧಿಯಲ್ಲಿ ಯುಎಇ ಧ್ವಜ ಹೊಂದಿದ್ದ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದು, ಆರು ಭಾರತೀಯರು ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಯುಎಇ ರಕ್ಷಣಾ ಸಚಿವಾಲಯ ತಿಳಿಸಿದೆ. ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಹಾರ್ಮುಝ್ ಜಲಸಂಧಿಯ ನಿಯಂತ್ರಣ ಕುರಿತ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ ಈ ದಾಳಿ ನಡೆದಿದೆ. ಯುಎಇ ರಕ್ಷಣಾ ಸಚಿವಾಲಯದ ಪ್ರಕಾರ, ಒಮಾನ್ ಸಮುದ್ರ ವ್ಯಾಪ್ತಿಯ ಹಾರ್ಮುಝ್…

Read More

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಶಾಹುಲ್ ಹಮೀದ್ ಬಂಧನ

ಮಂಗಳೂರು, ಜುಲೈ 14: ಮಂಗಳೂರಿನ ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಒಟ್ಟು ಆರು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಶಾಹುಲ್ ಹಮೀದ್ ಎಂಬಾತನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಮೂರು ಪ್ರಮುಖ ಪ್ರಕರಣಗಳಲ್ಲಿ ನ್ಯಾಯಾಲಯ ಈಗಾಗಲೇ ದಸ್ತಗಿರಿ ವಾರಂಟ್ ಜಾರಿಗೊಳಿಸಿತ್ತು. ಶಾಹುಲ್ ಹಮೀದ್ ವಿರುದ್ಧ ಅಪಹರಣ, ಸುಲಿಗೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ…

Read More

ಬುರ್ಖಾ ಧರಿಸಿ ತಲೆಮರೆಸಿಕೊಂಡಿದ್ದ ಸರಣಿ ಪ್ರಕರಣಗಳ ಆರೋಪಿ ಬಂಧನ

ಮಂಗಳೂರು, ಜುಲೈ 14: ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಆರೋಪಿಯಾಗಿದ್ದ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಪೊಲೀಸರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಇಮ್ರಾನ್ ಅಲಿಯಾಸ್ ‘ಸುರ್ಮೋ’ ಇಮ್ರಾನ್ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಸೇರಿದಂತೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು…

Read More

ಸಾರ್ವಜನಿಕರ ಬೇಡಿಕೆಗೆ ಮಣಿದು ಫೂಟ್ ಪಲ್ಸ್ ಥೆರಪಿ ಶಿಬಿರ ಜುಲೈ 18ರವರೆಗೆ

ಉಪ್ಪಳ, ಜುಲೈ 14: ಶ್ರೀ ಅಯ್ಯಪ್ಪ ಸೇವಾ ಸಮಿತಿ, ಅಯ್ಯಪ್ಪ ಮಂದಿರ ಉಪ್ಪಳದ ಆಶ್ರಯದಲ್ಲಿ ನಡೆಯುತ್ತಿರುವ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಅವಧಿಯನ್ನು ಜುಲೈ 18, 2026ರ ಶನಿವಾರದವರೆಗೆ ವಿಸ್ತರಿಸಲಾಗಿದೆ. ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ದಿನದಿಂದ ದಿನಕ್ಕೆ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹೆಚ್ಚಿನ ಜನರಿಗೆ ಈ ಸೇವೆಯ ಪ್ರಯೋಜನ ದೊರೆಯುವ ಉದ್ದೇಶದಿಂದ ಅವಧಿ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ. ಆಸಕ್ತ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉಚಿತ…

Read More

₹64 ಕೋಟಿ ವೆಚ್ಚದ ಸುಲ್ತಾನ್ ಬತ್ತೇರಿ–ತಣ್ಣೀರುಬಾವಿ ಬೋ ಸ್ಟಿಂಗ್ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಸಿದ್ಧ

ಮಂಗಳೂರು, ಜುಲೈ 14: ಮಂಗಳೂರಿನ ಸುಲ್ತಾನ್ ಬತ್ತೇರಿ ಮತ್ತು ತಣ್ಣೀರುಬಾವಿಯನ್ನು ಸಂಪರ್ಕಿಸುವ ₹64 ಕೋಟಿ ವೆಚ್ಚದ ಅತ್ಯಾಧುನಿಕ ಬೋ ಸ್ಟಿಂಗ್ ಮಾದರಿಯ ಸೇತುವೆ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಎಲ್ಲವೂ ಯೋಜನೆಯಂತೆ ನಡೆದರೆ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ. ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಈ ಸೇತುವೆ ನಗರದ ಹೊಸ ಆಕರ್ಷಣೆಯಾಗಿ ರೂಪುಗೊಂಡಿದೆ. ಕರ್ನಾಟಕದಲ್ಲೇ ಮೊದಲ ಬಾರಿಗೆ ನಿರ್ಮಾಣವಾಗುತ್ತಿರುವ ಬೋ ಸ್ಟಿಂಗ್ ಮಾದರಿಯ ವಾಹನ ಸಂಚಾರ…

Read More

ಮಂಜನಾಡಿ ಭೂಕುಸಿತ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ ಗ್ರಾಮದಲ್ಲಿ ಕಳೆದ ವರ್ಷ ಸಂಭವಿಸಿದ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಕೈಗೆತ್ತಿಕೊಂಡಿದೆ. ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. 2025ರ ಮೇ 30ರಂದು ಮುಂಜಾನೆ ಸಂಭವಿಸಿದ ಭೂಕುಸಿತದಲ್ಲಿ ಜೀವಹಾನಿ ಸಂಭವಿಸಿದ್ದು, ಅಶ್ವಿನಿ ಎಂಬವರು ಗಂಭೀರವಾಗಿ ಗಾಯಗೊಂಡು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗಿದ್ದರು. ಈ ಘಟನೆಯ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಮತ್ತು ಭೂಕುಸಿತದ ನಡುವಿನ ಸಂಬಂಧವನ್ನು ಸ್ವತಂತ್ರವಾಗಿ…

Read More

ಶ್ರೀರಂಗಪಟ್ಟಣದ ಕಾವೇರಿಯಲ್ಲಿ ಗಾನಕೋಗಿಲೆ ಎಸ್. ಜಾನಕಿ ಅಸ್ಥಿ ವಿಸರ್ಜನೆ

ಮಂಡ್ಯ, ಜುಲೈ 14: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ದಿವಂಗತ ಎಸ್. ಜಾನಕಿ ಅವರ ಅಸ್ಥಿಗಳನ್ನು ಮಂಗಳವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಘೋಸಾಯಿ ಘಾಟ್ ಸಮೀಪದ ಪವಿತ್ರ ಕಾವೇರಿ ನದಿಯಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ವಿಸರ್ಜಿಸಲಾಯಿತು. ವೈದಿಕ ಅರ್ಚಕ ರಮೇಶ್ ಶರ್ಮಾ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಎಸ್. ಜಾನಕಿ ಅವರ ಮೊಮ್ಮಗಳು ಅಪ್ಸರಾ ಅವರು ಕುಟುಂಬ ಸದಸ್ಯರ ಸಮ್ಮುಖದಲ್ಲಿ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಪರ ಕ್ರಿಯೆಗಳನ್ನು ನೆರವೇರಿಸಿ ಅಸ್ಥಿ ವಿಸರ್ಜನೆ ಮಾಡಿದರು. ಈ…

Read More
error: Content is protected !!