ಕ್ರೀಡೆಗಳು ಮನೋಸ್ಥೈರ್ಯ ಹಾಗೂ ಶಾರೀರಿಕ ದೃಢತೆಯನ್ನು ಹೆಚ್ಚಿಸುತ್ತದೆ : ಶ್ರೀನಿವಾಸ್ ರಾವ್

ಆನೆಕಲ್ಲು: ” ಕ್ರೀಡೆಗಳು ಮಾನಸಿಕ ಸ್ಥೈರ್ಯದೊಂದಿಗೆ ಶಾರೀರಿಕ ದೃಢತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ.ಆದ್ದರಿಂದ ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಕ್ರೀಡಾ ತರಬೇತಿ ಉತ್ತಮ ರೀತಿಯಲ್ಲಿ ಸಿಗುವಂತಾಗಬೇಕು” ಎಂದು ಎ ಯು ಪಿ ಶಾಲೆ ಬಾಕ್ರಬೈಲ್ ನ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ರಾವ್ ತಿಳಿಸಿದರು.ಅವರು ಎ.ಯು.ಪಿ ಶಾಲೆ ಆನೆಕಲ್ಲಿನಲ್ಲಿ ಜರಗಿದ ಶಾಲಾ ಮಟ್ಟದ ಕ್ರೀಡೋತ್ಸವನ್ನು ಉದ್ಘಾಟಿಸಿ ಮಾತನಾಡಿದರು. ಹಳೆ ವಿದ್ಯಾರ್ಥಿ ಕುಮಾರಿ ಹರಿಣಾಕ್ಷಿ ಟೀಚರ್ ಮಾತನಾಡಿ ,”ಕ್ರೀಡೆಗಳು ಮಾನಸಿಕ ಒತ್ತಡವನ್ನು ನಿಯಂತ್ರಿಸುವುದರೊಂದಿಗೆ ಉತ್ತಮ ಆರೋಗ್ಯವನ್ನು ನೀಡುತ್ತದೆ.ಆದುದರಿಂದ ಶಾಲಾ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ…

Read More

ಕುದ್ರೋಳಿ ದಸರಾ ಅದ್ದೂರಿ ಶಾರದಾ ಮೆರವಣಿಗೆ ಅಕ್ಟೋಬರ್ ೨ ಕ್ಕೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ ಅ. 2ರಂದು ಅದ್ದೂರಿಯಾಗಿ ನಡೆಯಲಿದೆ . ಈಗಾಗಲೇ ಶೋಭಾಯಾತ್ರೆ ಗೆ ಪೂರ್ವ ಸಿದ್ದತೆಗಳು ನಡೆಸಲಾಗಿದೆ ಎನ್ನಲಾಗಿದೆ . ಸಂಜೆ 4ರಿಂದ ಶ್ರೀ ಶಾರದಾಂಬೆಯ ಶೋಭಾಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಡಲಿದೆ. ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ನಗರದಲ್ಲಿ ಸಾಗಿಬರಲಿದೆ. ಕುದ್ರೋಳಿ ಕ್ಷೇತ್ರದಿಂದ ಹೊರಟು ಕಂಬಾರ…

Read More

ಕಾಸರಗೋಡು: ಡಿವೈಎಫ್‌ಐ ಸಕ್ರಿಯ ನಾಯಕಿ , ಯುವ ವಕೀಲೆ ಆತ್ಮಹತ್ಯೆಗೆ ಶರಣು …. !

ಕಾಸರಗೋಡು: ಡಿವೈಎಫ್‌ಐ ನಾಯಕಿ ಹಾಗು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಹೇಳುವಂತೆ , ಅವರು ತಮ್ಮ ಕಚೇರಿಯೊಳಗಿನ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಂಜೆಯಿಂದ ಅವರಿಗೆ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕುಟುಂಬ ಸದಸ್ಯರು ಅವರ ಕಚೇರಿಗೆ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡುಕೊಂಡರು. ಅವರು ಪೊಲೀಸರಿಗೆ ಮಾಹಿತಿ…

Read More

ರಾಹುಲ್ ಗಾಂಧಿ ವಿರುದ್ಧ ಕೊಲೆ ಬೆದರಿಕೆ-ರಣಹೇಡಿ ಬಿಜೆಪಿ – ಸಿಪಿಎಂ ಸಖ್ಯ ಬಹಿರಂಗ – ಕಾಂಗ್ರೆಸ್

ಮಂಜೇಶ್ವರ: ಲೋಕಸಭೆಯ ವಿಪಕ್ಷ ನಾಯಕ ಶ್ರೀ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹಾರಿಸುವುದಾಗಿ ಚಾನೆಲ್ ಚರ್ಚೆಯಲ್ಲಿ ಬಹಿರಂಗ ಬೆದರಿಕೆಯೊಡ್ಡಿದ ಬಿಜೆಪಿಯ ಕೇರಳ ವಕ್ತಾರನ ವಿರುದ್ಧ ಪಿಣರಾಯಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪಿಣರಾಯಿ ವಿಜಯನ್ ಹಾಗೂ ಕುಟುಂಬದ ಸಹಸ್ರ ಭಾನಗಡಿಗಳನ್ನು ಮುಚ್ಚಿ ಹಾಕಲು ಕೇಂದ್ರದ ಮೋದಿ ಸರ್ಕಾರ ಕೈ ಜೋಡಿಸಿದ ಕಾರಣ ಇಲ್ಲಿ ಪಿಣರಾಯಿ ಗೃಹ ಇಲಾಖೆಯನ್ನು ಸಂಘಿಗಳ ಕೈಗೊಪ್ಪಿಸಿದ್ದಾರೆ.ರಾಹುಲ್ ಗಾಂಧಿಯವರ ನಿರ್ಭೀತ ಹೋರಾಟಗಳು ಬಿಜೆಪಿಯ ನಿದ್ದೆಗೆಡಿಸಿವೆ. ಚಾನೆಲ್ ಚರ್ಚೆಯಲ್ಲಿ ಬಿಜೆಪಿ ವಕ್ತಾರ ಪಿಂಟು ಮಹಾದೇವ ಎಂಬ…

Read More

ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ

ಮಂಗಳೂರು :ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಕಳೆದ 4 ವರ್ಷಗಳ ಹಿಂದೆ ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಂಡಿದ್ದರೂ, ಇನ್ನು ಅದನ್ನು ಸಾರ್ವಜನಿಕರಿಗೆ ಬಿಟ್ಟುಕೊಡದೇ ಇದ್ದು ಇಲ್ಲಿ ನೀರು ತುಂಬಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿದ ಬಗ್ಗೆ ದೂರುಗಳು ಇದ್ದರೂ ರೈಲ್ವೆ ಇಲಾಖೆಯವರು ಸಾರ್ವಜನಿಕ ಉಪಯೋಗಕ್ಕೆ ಬಿಟ್ಟುಕೊಡದೇ ಇರುವುದನ್ನು ಖಂಡಿಸಿ ಮಂಗಳೂರು ದಕ್ಷಿಣ ಬ್ಲಾಕ್…

Read More

ಕೃಷಿಕ ಧೂಮಪ್ಪ ಬೆಳ್ಚಡ ನಿಧನ -ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಸಂತಾಪ

ಮಂಜೇಶ್ವರ : ವರ್ಕಾಡಿ ಕೊಡ್ಲಮೊಗರು ಪಜ್ವ ಸಂಕಪ್ಪ ಬೆಳ್ಚಡ ಹಾಗೂ ಕಲ್ಯಾಣಿ ಅವರ ಪುತ್ರ (೬೯) ಧೂಮಪ್ಪ ಬೆಳ್ಚಡ ಕೃಷಿ ಕ 30-09-2025 ರಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಪಾರ್ವತಿ ಮಕ್ಕಳಾದ ಸುಕುಮಾರ್ ಪಜ್ವ ಚಂದ್ರಶೇಖರ ಪಜ್ವ ಸಹೋದರರಾದ ಪದ್ಮನಾಭ ಪಜ್ವ ದಾಮೋದರ ಪಜ್ವ ಸಹೋದರಿಯಾರಾದ ಗಿರಿಜಾ. ಸೀತಾಮ್ಮ. ಹೇಮಾವತಿ ದೇವಕಿ. ಅವರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರುಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯ ಸಂಸ್ಕಾರ…

Read More

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು.

ಬೆಂಗಳೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಂಗಳವಾರ ಖರ್ಗೆ ಅವರು ಉತ್ಸಾಹದಿಂದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. 83 ರ ಹರೆಯದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗಾಗಿ ದಾಖಲಿಸಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಕೆಂಪು ಕಲ್ಲಿನ ಸಮಸ್ಯೆಗೆ ಮುಕ್ತಿ ಸಿಕ್ಕಿದೆ – ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ.

ಪುತ್ತೂರು:ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು.ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ.ಹೊಸ ಲೈಸನ್ಸ್ ಹಾಗೂ ಲೈಸನ್ಸ್‌ಗಳ ನವೀಕರಣವೂ ಮಾಡಲಾಗುತ್ತಿದೆ.ಇನ್ನು ಮುಂದೆ ಯಾರು ಕೂಡ ಲೈಸನ್ಸ್ ಪಡೆದು ಕೆಂಪು ಕಲ್ಲಿನ ವ್ಯವಹಾರ ನಡೆಸಬಹುದು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ಹೇಳಿದರು. ಕೆಂಪು ಕಲ್ಲಿನ ಸಮಸ್ಯೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿದ ನಂತರ ಕೆಂಪು ಕಲ್ಲು ತೆಗೆಯುವವರ ಸಂಘಗಳ ಸದಸ್ಯರ ಸಭೆಯನ್ನು ಕರೆದಾಗ…

Read More

ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2025 ರ ಕಿರೀಟ.

ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2025 ಸೀಸನ್-4 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡವು ಪ್ರತಿಷ್ಠಿತ ಪಿಲಿಪರ್ಬ- 2025 ರ ಕಿರೀಟ ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ತಂಡ…

Read More

ಉಚ್ಚಿಲ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಉಡುಪಿ: ಪಡುಬಿದ್ರಿ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್‌ ಸವಾರನ ಗುರುತು ಪತ್ತೆ ಇನ್ನೂ ಪತ್ತೆಯಾಗಿಲ್ಲ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು…

Read More
error: Content is protected !!