‘ ಟೈಮ್ ಪಾಸ್’ ಕನ್ನಡ ಚಲನಚಿತ್ರ ಅಕ್ಟೋಬರ್ 17 ರಂದು ‌ಕರ್ನಾಟಕದಾದ್ಯಂತ ಬಿಡುಗಡೆ.

ಶ್ರೀ ಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ, ಎಂ.ಹೆಚ್‌.ಕೃಷ್ಣಮೂರ್ತಿ ನಿರ್ಮಾಣದ ಇಮ್ರಾನ್ ಪಾಷಾ, ವೈಸಿರಿ ಕೆ.ಗೌಡ, ರಕ್ಷಾರಾಮ್ ನಟನೆಯ’ ಟೈಮ್ ಪಾಸ್’ ಕನ್ನಡ ಚಲನಚಿತ್ರ ಇದೇ ಬರುವ ಅಕ್ಟೋಬರ್ 17 ರಂದು ‌ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕರಾದ ಚೇತನ್ ಜೋಡಿದಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . `ಟೈಮ್ ಪಾಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಂಡು ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗಷ್ಟೇ ಈ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಅದರ ಬಗ್ಗೆಯೂ…

Read More

ಶಿಕ್ಷಕರ ಕಾರ್ಯಚಟುವಟಿಕೆಗಳಿಗೆ, ಅವರ ಸಂಘಗಳ ಸಭೆಗಳಿಗೆ ತಮ್ಮ ಕಚೇರಿಯನ್ನು ನೀಡುವುದಾಗಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಭರವಸೆ

ಮಂಗಳೂರು :ಶಿಕ್ಷಕರ ಕಾರ್ಯಚಟುವಟಿಕೆಗಳಿಗೆ, ಅವರ ಸಂಘಗಳ ಸಭೆಗಳಿಗೆ ತಮ್ಮ ಕಚೇರಿಯನ್ನು ನೀಡುವುದಾಗಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಭರವಸೆ ನೀಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಮಹಾನಗರ ಪಾಲಿಕೆ ಕಟ್ಟಡದ ಮೊದಲ ಮಹಡಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರ ಕಚೇರಿ ಗುರುವಾರದಂದು ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು. ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಸೇರಿದಂತೆ ಅನೇಕ ಗಣ್ಯರು ಕಚೇರಿ ಉದ್ಘಾಟನೆ ಸಂದರ್ಭ ಉಪಸ್ಥಿತರಿದ್ದು ಶುಭ ಹಾರೈಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಭೋಜೇಗೌಡ ಅವರು ತಾನು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದರಿಂದ ಶಿಕ್ಷಕರ…

Read More

ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ-ಮಂಜುನಾಥ್ ಭಂಡಾರಿ

ಮಂಗಳೂರು: ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್ ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಪ್ರಶ್ನೆ ಮಾಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ,…

Read More

ಕೊಲ್ಲಮೊಗ್ರು ಪಂಚಾಯತ್‌ ನಲ್ಲಿ ಕಳ್ಳರು ಯಾರು? ಅಂಗಡಿ ಮುಂಗಟ್ಟು ಬಂದ್ – ಗ್ರಾಮಸ್ಥರಿಂದ ಮುತ್ತಿಗೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿನ ಸೊತ್ತುಗಳನ್ನು ಅಲ್ಲಿನ ಗುಮಾಸ್ತನೇ ಕಳವು ಮಾಡಿದ್ದರೂ ಆತನ ವಿರುದ್ಧ ಪಂಚಾಯತ್ ಸೂಕ್ತ ಕ್ರಮ ಜರುಗಿಸಿಲ್ಲ, ಪಂಚಾಯತ್ ಸಿಸಿ ಟಿವಿ ಅಳವಡಿಸಿ ಜನರ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಅದನ್ನು ವಾಟ್ಸ್ಯಾಪ್‌ನಲ್ಲಿ ಹರಿಯಬಿಡಲಾಗುತ್ತದೆ‌ ಎಂದು ಆರೋಪಿಸಿದ ಗ್ರಾಮಸ್ಥರು ಗುರುವಾರ ಬೆಳಗ್ಗೆ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ಸಿಸಿ ಟಿವಿ ಪರಿಕರ, ಸೌಂಡ್ ಸಿಸ್ಟಮ್‌ ಗಳನ್ನು ಖಾಸಗಿ…

Read More

ಮಂಜೇಶ್ವರ: ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿತ – ವಿದ್ಯಾರ್ಥಿಗಳು ಪವಾಡಸದೃಶ ಪಾರು

ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಕುಂಜತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಭಾರೀ ಒಂದು ದುರಂತ ತಪ್ಪಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಶಾಲೆಯ ಎರಡನೇ ತರಗತಿಯ ಮೇಲ್ಛಾವಣಿ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಪಾಠಕ್ಕೆ ತಡವಾಗಿ ಬಂದ ವಿದ್ಯಾರ್ಥಿಗಳು ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನೆ ಬೆಳಿಗ್ಗೆ 8.45ರ ಸುಮಾರಿಗೆ ಸಂಭವಿಸಿದೆ. ಅಪಘಾತದ ಹೊತ್ತಿನಲ್ಲಿ ವಿದ್ಯಾರ್ಥಿಗಳು ತರಗತಿ ಕೊಠಡಿಗೆ ಇನ್ನೂ ತಲುಪಿರಲಿಲ್ಲ. ಒಂದು ವೇಳೆ ವಿದ್ಯಾರ್ಥಿಗಳು ಆಗಲೇ ತರಗತಿಯಲ್ಲಿ ಹಾಜರಿದ್ದರೆ, ಭಾರೀ ದುರಂತ ತಪ್ಪಿಸಿಕೊಳ್ಳಲಾಗುತ್ತಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಸಮಯದಲ್ಲಿ, ಶಾಲೆಯ…

Read More

ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ

ಮಂಗಳೂರು: ಶೃಂಗೇರಿ ಶಾರದಾ ಪೀಠದ ವೈಭವ, ವೀಣೆಯ ನುಡಿಸುತ್ತಾ ಮುಗುಳ್ನಗುವ ಕಂದಮ್ಮಗಳು, ಕೈಯೊಲು ತಾವರೆ, ಪುಸ್ತಿಕೆಗಳಿಂದ ಶೋಭಿಸುವ ವಿದ್ಯಾಧಿದೇವತೆ. ಈ ಮಧ್ಯೆ ನವರೂಪಗಳಲ್ಲಿ ಶೋಭಿಸುವ ನವದುರ್ಗೆಯರು. ಇದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆಯ ಝಲಕ್.ಪಿ.ಕೆ.ಲೋಹಿತ್ ಸ್ಮರಣಾರ್ಥ ಪಿ.ಕೆ ದೂಜ ಪೂಜಾರಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಆಭರಣ ಜುವೆಲರ್ಸ್ ಮತ್ತು ಅದಿರಾ ಪ್ರಾಪರ್ಟಿಸ್ ಸಹಕಾರದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನೂರಾರು ಮಂದಿ…

Read More

ಕಾಸರಗೋಡು ದಸರಾ ಸಾಹಿತ್ಯ ವೈಭವ…..!

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಾಂಸ್ಕೃತಿಕ ಘಟಕ, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡು ಇದರ ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025 ಕಾರ್ಯಕ್ರಮದ ಅಂಗವಾಗಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಕೀರ್ತನಾ ಪ್ರತಿಷ್ಠಾನ ಮುಜುಂಗಾವು ಇದರ ಆಶ್ರಯದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರ ಬಗ್ಗೆ ಗಾನಗಂಗೆ ಕೃತಿ ರಚಿಸಿದ…

Read More

ಕಲ್ಕೂರ ಪ್ರತಿಷ್ಠಾನದ ರೂವಾರಿ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ರೀಗೆ “ಕಾಸರಗೋಡು ದಸರಾ ಸಾಧಕ ಸನ್ಮಾನ

ಕನ್ನಡ ಭವನ ಕಾಸರಗೋಡು ಸಂಸ್ಥಾಪಕ ಡಾ. ವಾಮನ್ ರಾವ್ ಬೇಕಲ್ ಸಾರತ್ಯದ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025. ವೇದಿಕೆಯಲ್ಲಿ ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ರೂವಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಸುದೀರ್ಘ ಕಲಾವದಿಯ ಅಧ್ಯಕ್ಷ ರಾಗಿದ್ದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಇವರ ಜೀವಮಾನದ ಸರ್ವತೋಮುಖ ಕನ್ನಡ ಸೇವೆ, ಧಾರ್ಮಿಕ ಸೇವೆ, ಸಾಮಾಜಿಕ ಸೇವೆಯನ್ನು, ಸಾಧನೆಯನ್ನು ಪರಿಗಣಿಸಿ “ಕಾಸರಗೋಡು ದಸರಾ ಸಾಧಕ ಪ್ರಶಸ್ತಿ 2025.ನೀಡಿ ಗೌರವಿಸಲಾಯಿತು. ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನ -ಸಾಂಸ್ಕೃತಿಕ ಘಟಕ ಅಧ್ಯಕ್ಷ…

Read More

ನೆಕ್ಸ್ಟ್‌ಜೆನ್ ಸ್ಕಿಲ್ ಕಾನ್ಕ್ಲೇವ್ – 2025ರಲ್ಲಿ ಶ್ರೀನಿವಾಸ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ8 ಪ್ರಶಸ್ತಿ ಪಡೆದು ಸಾಧನೆ

[5:22 am, 24/9/2025] Reporter Girish Mangalore: ಮಂಗಳೂರು: ವಲಚ್ಚಿಲ್‌ನ ಶ್ರೀನಿವಾಸ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಪ್ರತಿಷ್ಠಿತ ನೆಕ್ಸ್ಟ್‌ಜೆನ್ ಸ್ಕಿಲ್ ಕಾನ್ಕ್ಲೇವ್ – 2025ರಲ್ಲಿ ಅನೇಕ ಆಲ್-ಇಂಡಿಯಾ ಟಾಪ್ 5 ಪ್ರಶಸ್ತಿಗಳನ್ನು ಗಳಿಸಿದೆ. ಈ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವು ಸೆಪ್ಟೆಂಬರ್ 17ರಿಂದ 19ರವರೆಗೆ ಶಿಮ್ಲಾದ ಈಸ್ಟ್ ಬೋರ್ಣ್ ರೆಸಾರ್ಟ್‌ನಲ್ಲಿ ನಡೆಯಿತು. ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳು, ಅಕಾಡೆಮಿಷಿಯನ್ನರು, ಉದ್ಯಮ ತಜ್ಞರು ಹಾಗೂ ನೀತಿ ರೂಪಕರು ಒಂದೇ ವೇದಿಕೆಯಲ್ಲಿ ಸೇರಿ ಕೌಶಲ್ಯಾಭಿವೃದ್ಧಿ, ಕೃತಕ ಬುದ್ಧಿಮತ್ತೆ ಹಾಗೂ ಕೈಗಾರಿಕಾ ಹೊಂದಾಣಿಕೆಯ…

Read More

ಬಡ ವರ್ಗದ ಪಾಲಿಗೆ ವರವಾದ 2.0 ಜಿ ಎಸ್ ಟಿ

ಮಂಗಳೂರು: ಐತಿಹಾಸಿಕ 2.0 ಜಿ ಎಸ್ ಟಿ ಭಾರತದಾದಂತ್ಯ ಜಾರಿಗೆ ಬಂದಿದ್ದು ಇದು ಜನ ಸಾಮಾನ್ಯರಲ್ಲಿ ಸಾಕಷ್ಟು ಉಳಿತ್ತಾಯ ಮಾಡುವ ಕಾರಣ ಇದನ್ನು ಉಳಿತಾಯದ ಉತ್ಸವವಾಗಿ ಭಜತ್ ಉತ್ಸವವಾಗಿ ಬಿಜೆಪಿ ಮುಖಂಡರು ಕಾರ್ಯಕರ್ತರು ದೇಶದಾದಂತ್ಯ ಆಚರಿಸ್ತಾ ಇದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಜಿ ಎಸ್ ಟಿ ಯನ್ನು ಸರಳೀಕರಣ ಮಾಡಲಾಗಿದ್ದು ಇದರಿಂದ ಸಾಕಷ್ಟು ಉಳಿತ್ತಾಯವಾಗುವ…

Read More
error: Content is protected !!