Headlines

14 ಬಾರಿ ವಾರಂಟ್ ಹೊರಡಿಸಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ

ಮಂಗಳೂರು: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ, ನ್ಯಾಯಾಲಯದಿಂದ 14 ಬಾರಿ ದಸ್ತಗಿರಿ ವಾರೆಂಟ್ ಹೊರಡಿಸಿದ್ದರೂ, ವಿಳಾಸ ಬದಲಾಯಿಸಿ ಬಂಧನಕ್ಕೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ ನಿವಾಸಿ ಚಂದ್ರಶೇಖರ್ ಲಿಂಗರಾಜ್ ಬೋವಿ (26) ಬಂಧಿತ ಆರೋಪಿ. ಕಂಕನಾಡಿ ನಗರ ಠಾಣೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈತ ನ್ಯಾಯಾಲಯದಿಂದ ಜಾಮೀನು ಪಡೆದು, ಒಂದೂವರೆ ವರ್ಷದಿಂದ ತಲೆ ಮರೆಸಿಕೊಂಡಿದ್ದ. ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 14 ಬಾರಿ ದಸ್ತಗಿರಿ…

Read More

ಎಸ್‌ಐಆರ್ ಪರಿಷ್ಕರಣೆ: ದಕ್ಷಿಣ ಕನ್ನಡದ ಮತದಾರರಿಗೆ ಜಿಲ್ಲಾಧಿಕಾರಿ ದರ್ಶನ್ ತುರ್ತು ಮನವಿ

ಮಂಗಳೂರ: ಚುನಾವಣಾ ಆಯೋಗದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸುವಂತೆ ದ. ಕ ಜಿಲ್ಲಾಧಿಕಾರಿ ದರ್ಶನ್ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 18,03,766 ಮತದಾರರಿದ್ದು, ಅವರ ಪೈಕಿ 17,75,811 (98.45%) ಮಂದಿಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ತೆರಳಿ ಎನ್ಯೂಮರೇಷನ್ ಫಾರಂಗಳನ್ನು ವಿತರಿಸಿದ್ದಾರೆ. ಆದರೆ, ಇದುವರೆಗೆ ಕೇವಲ 2,13,939 (11.86%) ಮತದಾರರು ಮಾತ್ರ ಭರ್ತಿ ಮಾಡಿದ ಫಾರಂಗಳನ್ನು ಹಿಂತಿರುಗಿಸಿದ್ದಾರೆ…

Read More

ಉಪ್ಪಳದಲ್ಲಿ 132ನೇ ಉಚಿತ ಫುಟ್ ಫಾಲ್ಸ್ ಥೆರಪಿ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

ಉಪ್ಪಳ : ಶ್ರೀ ಅಯ್ಯಪ್ಪ ಸೇವಾ ಸಮಿತಿ, ಅಯ್ಯಪ್ಪ ಮಂದಿರ ಉಪ್ಪಳ ಹಾಗೂ ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್, ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 132ನೇ ಉಚಿತ ಫುಟ್ ಫಾಲ್ಸ್ ಥೆರಪಿ ಶಿಬಿರವು ಯಶಸ್ವಿಯಾಗಿ ಮುಂದುವರಿಯುತ್ತಿದೆ. ಜುಲೈ 2 ರಂದು ಆರಂಭಗೊಂಡ ಉಪ್ಪಳದ ಅಯ್ಯಪ್ಪ ಮಂದಿರದ ಸಭಾಂಗಣದಲ್ಲಿ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆದ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ಥೆರಪಿಯ ಪ್ರಯೋಜನ ಪಡೆದರು. ತರುವಾಯ ಇಂದು ಮಾಹಿತಿ…

Read More

ಲಯನ್ಸ್ ಜಿಲ್ಲೆ 317D ವತಿಯಿಂದ 10 ಮಂದಿಗೆ ಕೃತಕ ಕಾಲು ವಿತರಣೆ

ಮಂಗಳೂರು: ಲಯನ್ಸ್ ಜಿಲ್ಲೆ 317D ವತಿಯಿಂದ ಹತ್ತು ಫಲಾನುಭವಿಗಳಿಗೆ ಸುಮಾರು ₹3 ಲಕ್ಷ ಮೌಲ್ಯದ ಕೃತಕ ಕಾಲುಗಳನ್ನು ವಿತರಿಸಲಾಯಿತು. ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ್ ಶೆಣೈ ಅವರು ಫಲಾನುಭವಿಗಳಿಗೆ ಕೃತಕ ಕಾಲುಗಳನ್ನು ವಿತರಿಸಿ ಶುಭ ಹಾರೈಸಿದರು. ಸಮಾಜಸೇವೆಯ ಅಂಗವಾಗಿ ಲಯನ್ಸ್ ಸಂಸ್ಥೆ ಅಗತ್ಯವಿರುವವರಿಗೆ ಕೃತಕ ಅಂಗಗಳನ್ನು ಒದಗಿಸುವ ಮೂಲಕ ಅವರ ಬದುಕಿಗೆ ಹೊಸ ಆಶಾಕಿರಣ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಲಿಂಬ್ ಸೆಂಟರ್‌ನ ನಿರ್ದೇಶಕರೂ ಖ್ಯಾತ ಎಲುಬು ತಜ್ಞರೂ…

Read More

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ; ಸ್ಲ್ಯಾಬ್‌ಗೆ ತೂತು ಕೊರೆದ ಕಳ್ಳರು

ಬಂಟ್ವಾಳ: ಇಲ್ಲಿನ ತಾಲೂಕಿನ ಫರಂಗಿಪೇಟೆಯ ಮಿನೇಜಸ್ ಪ್ಲಾಜಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನದ ಯತ್ನ ನಡೆದಿರುವ ಶಂಕಾಸ್ಪದ ಘಟನೆ ಬೆಳಕಿಗೆ ಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬ್ಯಾಂಕ್ ಶಾಖೆಯ ಮೇಲ್ಭಾಗದಲ್ಲಿರುವ ಕೊಠಡಿಯ ಸ್ಲ್ಯಾಬ್‌ಗೆ ತೂತು (ರಂಧ್ರ) ಕೊರೆದು ಒಳಗಡೆ ನುಗ್ಗಲು ದುಷ್ಕರ್ಮಿಗಳು ಯತ್ನಿಸಿರುವುದು ಪತ್ತೆಯಾಗಿದೆ. ಆದರೆ, ಬ್ಯಾಂಕ್‌ನಿಂದ ಯಾವುದೇ ನಗದು ಅಥವಾ ಇತರೆ ಬೆಲೆಬಾಳುವ ವಸ್ತುಗಳು ಕಳವಾಗಿರುವ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ:ವಿಷಯ ತಿಳಿಯುತ್ತಿದ್ದಂತೆ ದಕ್ಷಿಣ…

Read More

ಸೇವಾ ಸಪ್ತಾಹ ಅಂಗವಾಗಿ ಗೋಶಾಲೆಗೆ ಹಸಿ ಹುಲ್ಲು ವಿತರಣೆ

ಬಂಟ್ವಾಳ: ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳದ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದೂ ಪರಿಷದ್–ಭಜರಂಗದಳ ಕುಂಟಲಪಲ್ಕೆ ಘಟಕ, ಬಂಟ್ವಾಳ ಪ್ರಖಂಡದ ವತಿಯಿಂದ ಗೋಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಶೇಷ “ಗೋವಿಗಾಗಿ ಮೇವು” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಭಾಗವಾಗಿ ಒಂದು ಪಿಕಪ್ ತುಂಬ ಹಸಿ ಹುಲ್ಲನ್ನು ಪಜೀರು ಗೋಶಾಲೆಗೆ ಹಸ್ತಾಂತರಿಸಲಾಯಿತು. ಗೋಸೇವೆಯನ್ನು ಸಮಾಜದ ಪ್ರತಿಯೊಬ್ಬರೂ ತಮ್ಮ ಕರ್ತವ್ಯವೆಂದು ಪರಿಗಣಿಸಬೇಕು ಎಂಬ ಸಂದೇಶದೊಂದಿಗೆ ಈ ಸೇವಾ ಕಾರ್ಯವನ್ನು ಆಯೋಜಿಸಲಾಗಿದ್ದು, ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಪ್ರಖಂಡದ ಅಧ್ಯಕ್ಷ ಪ್ರಸಾದ್…

Read More

ಮಂಜೇಶ್ವರದಲ್ಲಿ ಹಲಸಿನ ಸಂಭ್ರಮ: ಮೂರು ದಿನಗಳ ಮೇಳಕ್ಕೆ ಜನಸಾಗರ, ಯಶಸ್ವಿಯಾಗಿ ತೆರೆ

ಮಂಜೇಶ್ವರ: ಸಪ್ತ ಭಾಷಾ ಸಂಗಮ ಭೂಮಿ ಮಂಜೇಶ್ವರದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾದ ಮೂರು ದಿನಗಳ ‘ಹಲಸು ಹಣ್ಣಿನ ಮೇಳ’ ಭಾನುವಾರ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಜುಲೈ 10ರಿಂದ 12ರವರೆಗೆ ನಡೆದ ಮೇಳಕ್ಕೆ ಸಾವಿರಾರು ಮಂದಿ ಆಗಮಿಸಿ ಹಲಸಿನ ವೈವಿಧ್ಯಮಯ ತಳಿಗಳು, ಖಾದ್ಯಗಳು ಹಾಗೂ ಕೃಷಿ ಉತ್ಪನ್ನಗಳನ್ನು ವೀಕ್ಷಿಸಿ ಖರೀದಿಸುವ ಮೂಲಕ ಮೇಳವನ್ನು ಯಶಸ್ವಿಗೊಳಿಸಿದರು. ಮಂಜೇಶ್ವರ ಮೆಜೆಸ್ಟಿಕ್ ಮ್ಯಾನರ್ (ಕಲಾ ಸ್ಪರ್ಶಂ) ಸಭಾಂಗಣದಲ್ಲಿ ನಡೆದ ಮೇಳವನ್ನು ಮಂಜೇಶ್ವರ ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷೆ ಜೀನ್ ಲವಿನಾ ಮೊಂತೆರೋ ಉದ್ಘಾಟಿಸಿದ್ದರು….

Read More

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಭೇಟಿ: ಪಂಚಾಮೃತ ಮಹಾಭಿಷೇಕ ಸೇವೆ ಸಲ್ಲಿಕೆ

ಸುಬ್ರಹ್ಮಣ್ಯ: ರಾಜ್ಯ ಸರ್ಕಾರದ ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಅವರು ಸೋಮವಾರ (ಜುಲೈ 13) ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರಕ್ಕೆ ಆಗಮಿಸಿದ ಮಾಜಿ ಸಚಿವರನ್ನು ದೇವಸ್ಥಾನದ ವತಿಯಿಂದ ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ದೇವರ ದರ್ಶನ ಪಡೆದ ರೇವಣ್ಣ ಅವರು, ಸ್ವಾಮಿಗೆ ನಡೆದ ಪಂಚಾಮೃತ ಮಹಾಭಿಷೇಕ ಸೇವೆಯಲ್ಲಿ ಪಾಲ್ಗೊಂಡರು. ಮಹಾಮಂಗಳಾರತಿ ವೀಕ್ಷಿಸಿ, ತೀರ್ಥಪ್ರಸಾದ ಸ್ವೀಕರಿಸಿದ ನಂತರ…

Read More

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವುದು ವಿಷಯದ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ

ಬೆಂಗಳೂರು:ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ ಕೇಂದ್ರ (CeG), ಕರ್ನಾಟಕದ ಸೈಬರ್ ಭದ್ರತಾ ಉತ್ಕೃಷ್ಟತಾ ಕೇಂದ್ರ (CySecK) ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗದ ಸಹಯೋಗದೊಂದಿಗೆ ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ರಾಜ್ಯ ದತ್ತಾಂಶಕ್ಕಾಗಿ ಸೈಬರ್ ಭದ್ರತಾ ಚೌಕಟ್ಟನ್ನು ಬಲಪಡಿಸುವುದು ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಮಹತ್ವದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ​ಕರ್ನಾಟಕದ ಡಿಜಿಟಲ್ ಆಡಳಿತ ವ್ಯವಸ್ಥೆಯಲ್ಲಿ ಸೈಬ‌ರ್ ಭದ್ರತೆಯನ್ನು ಬಲಪಡಿಸುವ ಕಾರ್ಯತಂತ್ರಗಳ ಕುರಿತು ಚರ್ಚಿಸಲು 30ಕ್ಕೂ ಹೆಚ್ಚು ಇಲಾಖೆಗಳು, ನಿಗಮಗಳು,…

Read More

ಇಂಗ್ಲಿಷ್ ಚಾನೆಲ್ ಈಜಿದ ಮಂಗಳೂರಿನ ಮೊದಲ ವ್ಯಕ್ತಿ: ಸಾಧನೆಯ ಯಶೋಗಾಥೆ ಹಂಚಿಕೊಂಡ ಡಾ. ಗುರುಪ್ರಸಾದ್ ಭಟ್

ಮಂಗಳೂರು:ವಿಶ್ವದ ಅತ್ಯಂತ ಸವಾಲಿನ ಸಮುದ್ರ ಮಾರ್ಗಗಳಲ್ಲಿ ಒಂದಾದ ಇಂಗ್ಲಿಷ್ ಚಾನೆಲ್ ಅನ್ನು ಆರು ಸದಸ್ಯರ ರಿಲೇ ತಂಡದೊಂದಿಗೆ ಜುಲೈ 3ರಂದು ಯಶಸ್ವಿಯಾಗಿ ಈಜಿದ ಮಂಗಳೂರಿನ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಖ್ಯಾತ ಈಜುಪಟು ಡಾ. ಗುರುಪ್ರಸಾದ್ ಭಟ್, ತಮ್ಮ ಸಾಧನೆಯ ಅನುಭವವನ್ನು ಸೋಮವಾರ ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡರು. ಇಂಗ್ಲಿಷ್ ಚಾನೆಲ್ ಈಜು ವಿಶ್ವದ ಅತ್ಯಂತ ಕಠಿಣ ಸಾಹಸಗಳಲ್ಲಿ ಒಂದಾಗಿದೆ. 13ರಿಂದ 14 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆ ತಾಪಮಾನ, ಅಟ್ಲಾಂಟಿಕ್ ಮಹಾಸಾಗರ ಮತ್ತು ಉತ್ತರ…

Read More
error: Content is protected !!