ಮಾಧವಿ ಅಪಘಾತ ಸಾವಿಗೆ ಹೆದ್ದಾರಿ ಪ್ರಾಧಿಕಾರವೇ ಕಾರಣ – ಬಿಕೆ ಇಮ್ಮಿಯಾಜ್
ಮಂಗಳೂರು: ನಂತೂರಿನಿಂದ ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ಸಂಪೂರ್ಣ ಅಯೋಗ್ಯವಾಗಿದೆ ಹೆದ್ದಾರಿ ಪೂರ್ತಿ ಬೃಹತ್ ಗುಂಡಿಗಳು ನಿರ್ಮಾಣಗೊಂಡಿದೆ. ದ್ವಿಚಕ್ರ ವಾಹನ ಸವಾರರು ದಿನನಿತ್ಯ ಅಪಘಾತಕ್ಕೊಳಗಾಗಿ ಸಾವಿಗೀಡಾಗುತ್ತಿದ್ದಾರೆ .ಹೆದ್ದಾರಿ ಪ್ರಾಧಿಕಾರ ಮತ್ತು ನಮ್ಮ ಜನಪ್ರತಿನಿದಿನಗಳು ಗಾಢ ನಿದ್ರೆಯಲ್ಲಿದ್ದಾರೆ ಎಂದು ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷ ಬಿ.ಕೆ ಇಮಿಯಾಜ್ ಹೇಳಿದರು. ಅವರು ಇಂದು ಕುಳೂರು ಜಂಕ್ಷನ್ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೆದ್ದಾರಿ ಗುಂಡಿಯಿಂದಾಗಿ ಅಪಘಾತಾಕ್ಕೊಳಗಾಗಿ ಸಾವನ್ನಪ್ಪಿದ ಮಾಧವಿ ಕುಟುಂಬಕ್ಕೆ ಗರಿಷ್ಠ ಪರಿಹಾರಕ್ಕೆ ಒತ್ತಾಯಿಸಿ, ಹೆದ್ದಾರಿ ಗುಂಡಿ…
