Headlines

98ನೇ ವಯಸ್ಸಿನಲ್ಲೂ ಕನ್ನಡ ಸೇವೆಯ ಜ್ಯೋತಿ: ಹಿರಿಯ ಹೋರಾಟಗಾರ ಅಡೂರು ಉಮೇಶ್ ನ್ಯಾಕ್‌ಗೆ ಅಭಿಮಾನಿಗಳಿಂದ ಸನ್ಮಾನ

ಕಾಸರಗೋಡು: ಹಿರಿಯ ನ್ಯಾಯವಾದಿ, ಕನ್ನಡ ಹೋರಾಟಗಾರ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರದ ಮುಂಚೂಣಿ ವ್ಯಕ್ತಿತ್ವ ಅಡೂರು ಉಮೇಶ್ ನ್ಯಾಕ್ ಅವರಿಗೆ ಅವರ ಅಭಿಮಾನಿಗಳು ನಿವಾಸಕ್ಕೆ ಭೇಟಿ ನೀಡಿ ಶಾಲು ಹೊದಿಸಿ, ಫಲಪುಷ್ಪ ನೀಡಿ, ಪೇಟ ತೊಡಿಸಿ ಗೌರವ ಸಮರ್ಪಿಸಿದರು. ಹಿರಿಯ ನ್ಯಾಯವಾದಿ ಹಾಗೂ ಹರಿದಾಸ ಮಹಾಬಲ ಶೆಟ್ಟಿ ಮತ್ತು ನಿವೃತ್ತ ಕಸ್ಟಮ್ಸ್ ಅಧಿಕಾರಿ ಶುಭೋದಯ ಕೂಡ್ಲು ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ಸಂಘಟಕ ಹಾಗೂ ಚಲನಚಿತ್ರ ನಿರ್ದೇಶಕ ಕಾಸರಗೋಡು ಚಿನ್ನಾ ಮುಖ್ಯ ಅತಿಥಿಯಾಗಿ…

Read More

ಬಿಸಿರೋಡಿನಲ್ಲಿ ಹಾವಿನ ಸಾವಿನ ನೆಪದಲ್ಲಿ ಹಣ ಸಂಗ್ರಹ ಯತ್ನ? ಅನುಮಾನಗೊಂಡ ಸಾರ್ವಜನಿಕರು, ಸ್ಥಳ ತೆರವುಗೊಳಿಸಿದ ಪೊಲೀಸರು

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿಸಿರೋಡು ಸರ್ಕಲ್ ಸಮೀಪ ರಸ್ತೆ ಬದಿಯಲ್ಲಿ ಮೃತಪಟ್ಟ ಹಾವಿನ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲು ಐವರು ಅಪರಿಚಿತರು ಮುಂದಾಗಿದ್ದರೆಂಬ ಘಟನೆ ಸೋಮವಾರ ಗಮನ ಸೆಳೆಯಿತು. ಘಟನೆಯು ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸ್ಥಳೀಯರ ಮಾಹಿತಿ ಪ್ರಕಾರ, ತಮ್ಮನ್ನು ಮೂಡುಶೆಡ್ಡೆ ನಿವಾಸಿಗಳು ಎಂದು ಪರಿಚಯಿಸಿಕೊಂಡಿದ್ದ ಕೆಲವರು, ಜೆಸಿಬಿ ಕಾಮಗಾರಿ ವೇಳೆ ಹಾವು ಸಾವನ್ನಪ್ಪಿದೆ ಎಂದು ಹೇಳಿಕೊಂಡು, ಬಿಳಿ ಬಟ್ಟೆಯಲ್ಲಿ ಹಾವನ್ನು ಇರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದರು ಎನ್ನಲಾಗಿದೆ….

Read More

ಲೋಕ ಅದಾಲತ್‌ನಲ್ಲಿ ಮರು ಒಂದಾದ ದಂಪತಿ: ರಾಜಿ ಸಂಧಾನದಿಂದ ಅಂತ್ಯಗೊಂಡ ವಿಚ್ಛೇದನ ಪ್ರಕರಣ

ಬಂಟ್ವಾಳ: ದಾಂಪತ್ಯ ಜೀವನದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯದಿಂದ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಯೊಂದು, ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನಡೆದ ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿ ಹೊಸ ಜೀವನ ಆರಂಭಿಸಲು ನಿರ್ಧರಿಸಿದ ಹೃದಯಸ್ಪರ್ಶಿ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ.ಪಿ. ಅವರ ನೇತೃತ್ವದಲ್ಲಿ ಸಂಧಾನ ಪ್ರಕ್ರಿಯೆ ನಡೆಯಿತು. ದೀರ್ಘಕಾಲದಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಕೌಟುಂಬಿಕ ವಿವಾದವನ್ನು ಉಭಯ ಪಕ್ಷಗಳ ಅಭಿಪ್ರಾಯ…

Read More

ಹುಡುಗಿಯ ಮದುವೆ ವಿಚಾರಕ್ಕೆ ಸಂಬಂಧಿಸಿದ ಗಲಾಟೆ: ದೂರು–ಪ್ರತಿದೂರು ದಾಖಲು

ಕಡಬ: ಹುಡುಗಿಯೊಬ್ಬಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯ ಹಿನ್ನೆಲೆಯಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಡಬ ನಿವಾಸಿ ಮೋನಿಷ್ (21) ಅವರು ನೀಡಿದ ದೂರಿನ ಪ್ರಕಾರ, ಜು.10ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಡಬ ಗ್ರಾಮದ ಕಾಲೇಜು ರಸ್ತೆ ಜಂಕ್ಷನ್ ಬಳಿ ಶರತ್, ದೀಪಕ್ ಹಾಗೂ ವಿಶ್ವನಾಥ ಅವರು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ…

Read More

ಈಜುಕೊಳದ ಮೋಜು : ಪೋಷಕರಿಗೆ ಪ್ರಾಣ ಸಂಕಟ: ಮಂಜೇಶ್ವರದಲ್ಲಿ ಅಪಾಯಕಾರಿ ಈಜು ಪ್ರದರ್ಶನ : ಘಟನಾ ಸ್ಥಳಕ್ಕೆ ಪೋಲೀಸರಿಂದ ದಾಳಿ

ಮಂಜೇಶ್ವರ: ಮಳೆಗಾಲದ ಆಗಮನದೊಂದಿಗೆ ಜಲಾಶಯಗಳು, ಕೆರೆಗಳು ತುಂಬಿ ತುಳುಕುತ್ತಿದ್ದು, ಇದು ಮಕ್ಕಳ ಪಾಲಿಗೆ ‘ಜಲಕ್ರೀಡೆ’ಯ ಮೋಜಿನ ತಾಣವಾಗಿದ್ದರೆ, ಪೋಷಕರಿಗೆ ಮಾತ್ರ ಜೀವ ಕೈಯಲ್ಲಿ ಹಿಡಿದು ಕೂರುವ ಆತಂಕದ ದಿನಗಳಾಗಿವೆ. ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಚಲಿಕೆ, ಇಡಿಯ ಪಾಪಿಲ ಹಾಗೂ ಗೋವಿಂದ ಪೈ ಡ್ಯಾಂ ಪ್ರದೇಶಗಳಲ್ಲಿ ಅಪಾಯಕಾರಿ ರೀತಿಯಲ್ಲಿ ಈಜು ಪ್ರದರ್ಶನ ನಡೆಯುತ್ತಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ​ಯಾವುದೇ ಮುನ್ನೆಚ್ಚರಿಕೆ ಇಲ್ಲದೆ, ಪೋಷಕರಿಗೆ ಸುಳಿವನ್ನೂ ನೀಡದೆ ಮಕ್ಕಳು ಗುಂಪು ಗುಂಪಾಗಿ ಈ ಕೆರೆಗಳ ಬಳಿಗೆ ತೆರಳುತ್ತಿದ್ದಾರೆ. ಅತಿ…

Read More

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತು – ಅಧಿಕಾರ ದುರುಪಯೋಗ ಆರೋಪಕ್ಕೆ ರಾಜ್ಯಪಾಲರ ಕಠಿಣ ಕ್ರಮ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಆದೇಶ ಹೊರಡಿಸಿದ್ದಾರೆ. ತಮ್ಮ ಇಬ್ಬರು ಪುತ್ರಿಯರು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ನೇಮಕವಾಗಲು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ತನಿಖೆಗೆ ಶಿಫಾರಸು ಮಾಡಿರುವ ರಾಜ್ಯಪಾಲರು, ವಿಚಾರವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ. ಮುಂದಿನ ಆದೇಶದವರೆಗೆ ಆಯೋಗದ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ…

Read More

ಕುಡಾಲ್ಡ ಜವ್ವನೆರ್ ವಾಟ್ಸಾಪ್ ಗ್ರೂಪಿನ ಆಶ್ರಯದಲ್ಲಿ ವಿದ್ಯಾಜ್ಯೋತಿ ಪ್ರತಿಭೋತ್ಸವ 2026

ಕುಡಾಲ್ಡ ಜವ್ವಣೆರ್ ವಾಟ್ಸಾಪ್ ಗ್ರೂಪಿನ ಆಶ್ರಯದಲ್ಲಿ ವಿದ್ಯಾಜ್ಯೋತಿ ಪ್ರತಿಭೋತ್ಸವ ಕಾರ್ಯಕ್ರಮವು ಗ್ರೂಪಿನ ಅಧ್ಯಕ್ಷರಾದ ಕುಡಾಲುಗುತ್ತು ಶ್ರೀ ಗಣೇಶ್ ರೈ ಮುಂಬಯಿಯವರ ಅಧ್ಯಕ್ಷತೆಯಲ್ಲಿ ಪೆರ್ಮುದೆಯ BPP ALP ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಸರಗೋಡು ಜಿಲ್ಲಾ ಪಂಚಾಯತು ಸದಸ್ಯರಾದ ಶ್ರೀ ಸೋಮಶೇಖರ J.S ನೆರವೇರಿಸಿ ಮಾತನಾಡಿ ಸಾಮಾಜಿಕ ಜಾಲತಾಣದ ಮೂಲಕ ವಾಟ್ಸಾಪ್ ಗ್ರೂಪಿನ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಅಂಗಡಿ ಮೊಗರು ಸೇವಾ ಸಹಕಾರಿ ಬೇಂಕಿನ ಪೆರ್ಮುದೆ ಶಾಖೆಯ ಮೇನೆಜರ್ ಶ್ರೀರಾಮಚಂದ್ರ M ಶಿವಗಿರಿ, ಮುಂಬಯಿ ಉದ್ಯಮಿ…

Read More

ಪುರುಷರಕಟ್ಟೆ ಘಟನೆ: ಸಂತ್ರಸ್ತ ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ, ನ್ಯಾಯಕ್ಕೆ ಆಗ್ರಹ

ಪುತ್ತೂರು ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಪ್ರಮುಖರು ಭೇಟಿ ನೀಡಿ, ಪೋಷಕರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಲಾಯಿತು.ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ ಘಟನೆಯನ್ನು ಕೇವಲ ‘ತಪ್ಪು ಗ್ರಹಿಕೆ’ ಎಂದು ಬಿಂಬಿಸಿ, ಆರೋಪಿಗಳನ್ನು ರಕ್ಷಿಸಲು ನಡೆಯುತ್ತಿರುವ ರಾಜಕೀಯ ಸಂಧಾನದ ಪ್ರಯತ್ನವು ಸರಿಯಲ್ಲ. ಈ ಘಟನೆಯ ಕುರಿತು ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಯುವತಿಗೆ ಸೂಕ್ತ ನ್ಯಾಯ…

Read More

​ಯೂಟ್ಯೂಬರ್ ‘ತೊಪ್ಪಿ’ ಅಲಿಯಾಸ್ ಮುಹಮ್ಮದ್ ನಿಹಾಲ್‌ನ ಚಾನೆಲ್ ಬಂದ್

ಕಾಸರಗೋಡು/ ಕೊಚ್ಚಿ :​ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ದೃಶ್ಯಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜನಪ್ರಿಯ ಯೂಟ್ಯೂಬರ್ ‘ತೊಪ್ಪಿ’ ಅಲಿಯಾಸ್ ಮುಹಮ್ಮದ್ ನಿಹಾಲ್‌ನ ಚಾನೆಲ್ ಅನ್ನು ಯೂಟ್ಯೂಬ್ ಸಂಸ್ಥೆ ಡಿಲೀಟ್ ಮಾಡಿದೆ. ಆಲುವ ಸೈಬರ್ ಪೊಲೀಸ್ ನೀಡಿದ ವರದಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ​ಅಡ್ವಕೇಟ್ ಶ್ರೀಜಿತ್ ಪೆರುಮನ ಅವರ ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿದ್ದು, ನೋಟಿಸ್ ನೀಡಿದ್ದರೂ ನಿಹಾಲ್ ವಿಚಾರಣೆಗೆ ಹಾಜರಾಗಿಲ್ಲ. ಈತ ಎಂಡಿಎಂಎ ಸೇವನೆ, ಅಶ್ಲೀಲ ಪ್ರಸಾರ, ಪೋಕ್ಸೋ ಪ್ರಕರಣ ಮತ್ತು ಅಪ್ರಾಪ್ತ ಬಾಲಕಿಯರ ಲೈಂಗಿಕ…

Read More

ಕಾಸರಗೋಡಿನಲ್ಲಿ ಬಾಲಗೋಕುಲ ವಾರ್ಷಿಕ ಮಹಾಸಭೆಗೆ ಚಾಲನೆ

ಕಾಸರಗೋಡು: ಬಾಲಗೋಕುಲ ವಾರ್ಷಿಕ ಮಹಾಸಭೆಗೆ ಕಾಸರಗೋಡಿನಲ್ಲಿ ಭಾನುವಾರ ಚಾಲನೆ ದೊರೆಯಿತು. ಕೇಂದ್ರ ಸಚಿವ ಶ್ರೀಪಾದ್ ಯಶೋ ನಾಯಕ್ ಮಹಾಸಭೆಯನ್ನು ಉದ್ಘಾಟಿಸಿದರು. ಉತ್ತರ ಕೇರಳ ರಾಜ್ಯಾಧ್ಯಕ್ಷ ಎಂ. ಸತ್ಯನ್ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಿ. ಸದಾನಂದನ್ ಮಾಸ್ಟರ್, ಸಂಸದರು ಭಾಗವಹಿಸಿದರು. ಕೊಂಡೆಯೂರು ನಿತ್ಯಾನಂದ ಯೋಗಾಶ್ರಮದ ಸ್ವಾಮಿ ಯೋಗಾನಂದ ಸರಸ್ವತಿ ಆಶೀರ್ವಚನ ನೀಡಿದರು. ಬಾಲಗೋಕುಲಂ ರಾಜ್ಯಾಧ್ಯಕ್ಷ ಆರ್. ಪ್ರಸನ್ನಕುಮಾರ್ ಮುಖ್ಯ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ವರ್ಕಿಂಗ್ ಚೇರ್ಮನ್ ನಿವೃತ್ತ ಎಸ್‌ಪಿ ಹರಿಶ್ಚಂದ್ರ ನಾಯಕ್, ಬಾಲಸಾಹಿತಿ ಪ್ರಕಾಶನ ಚೇರ್ಮನ್…

Read More
error: Content is protected !!