98ನೇ ವಯಸ್ಸಿನಲ್ಲೂ ಕನ್ನಡ ಸೇವೆಯ ಜ್ಯೋತಿ: ಹಿರಿಯ ಹೋರಾಟಗಾರ ಅಡೂರು ಉಮೇಶ್ ನ್ಯಾಕ್ಗೆ ಅಭಿಮಾನಿಗಳಿಂದ ಸನ್ಮಾನ
ಕಾಸರಗೋಡು: ಹಿರಿಯ ನ್ಯಾಯವಾದಿ, ಕನ್ನಡ ಹೋರಾಟಗಾರ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರದ ಮುಂಚೂಣಿ ವ್ಯಕ್ತಿತ್ವ ಅಡೂರು ಉಮೇಶ್ ನ್ಯಾಕ್ ಅವರಿಗೆ ಅವರ ಅಭಿಮಾನಿಗಳು ನಿವಾಸಕ್ಕೆ ಭೇಟಿ ನೀಡಿ ಶಾಲು ಹೊದಿಸಿ, ಫಲಪುಷ್ಪ ನೀಡಿ, ಪೇಟ ತೊಡಿಸಿ ಗೌರವ ಸಮರ್ಪಿಸಿದರು. ಹಿರಿಯ ನ್ಯಾಯವಾದಿ ಹಾಗೂ ಹರಿದಾಸ ಮಹಾಬಲ ಶೆಟ್ಟಿ ಮತ್ತು ನಿವೃತ್ತ ಕಸ್ಟಮ್ಸ್ ಅಧಿಕಾರಿ ಶುಭೋದಯ ಕೂಡ್ಲು ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ಸಂಘಟಕ ಹಾಗೂ ಚಲನಚಿತ್ರ ನಿರ್ದೇಶಕ ಕಾಸರಗೋಡು ಚಿನ್ನಾ ಮುಖ್ಯ ಅತಿಥಿಯಾಗಿ…
