Headlines

ಜನನಿ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವೀರ ನಗರ ಅಡ್ಕ ಇದರ 29 ನೇ ವಾರ್ಷಿಕ ಗಣೇಶ ಚತುರ್ಥಿ

ಜನನಿ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವೀರ ನಗರ ಅಡ್ಕ ಇದರ 29 ನೇ ವಾರ್ಷಿಕ ಗಣೇಶ ಚತುರ್ಥಿಯ ಪ್ರಯುಕ್ತ ನಡೆದಂತ ವಿವಿಧ ಆಟೋಟ ಸ್ಪರ್ಧೆ ಹಾಗೂ ಧಾರ್ಮಿಕ ಸಭೆ ಶ್ರೀ ನಾಗ ರಕ್ತೇಶ್ವರಿ ಗುಳಿಗಜ್ಜ ಕೊರಗಜ್ಜ ಸಾನಿಧ್ಯ ವೀರನಗರ ಅಡ್ಕ ಇಲ್ಲಿ ವಿವಿಧ ಸಾಂಸ್ಕೃತಿಕ ಧಾರ್ಮಿಕ ಹಾಗೂ ಆಟೋಟ ಸ್ಪರ್ಧೆಗಳೊಂದಿಗೆ ನಡೆಯಿತು.ಬೆಳಗ್ಗೆ 7 ಗಂಟೆಗೆ ಗಣಹೋಮ ನಡೆಯಿತು. ಯುವಕರ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ವಿನಾಯಕ ಹೇರೂರು ,ಧ್ವಿತೀಯ ಸ್ಥಾನ PFC ಪರೆಂಕಿಲ .ಮಹಿಳೆಯರ ಹಗ್ಗಜಗ್ಗಾಟದಲ್ಲಿ ಪ್ರಥಮ…

Read More

ಉಪ್ಪಳ ಸೊಂಕಾಲಿನ ಮನೆಯಿಂದ ಗಾಂಜಾ ವಶಪಡಿಸಿಕೊಂಡ ಪ್ರಕರಣ-ಇನ್ನೋರ್ವ ಆರೋಪಿ ಬಂಧನ.

ಮಂಜೇಶ್ವರ: ಉಪ್ಪಳ ಸೊಂಕಾಲಿನ ಮನೆಯಿಂದ 33.5 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಇನ್ನೊಬ್ಬ ಆರೋಪಿ ಕೂಡಾ ಬಂಧನಕ್ಕೊಳಗಾಗಿದ್ದಾನೆ. ಉಪ್ಪಳ ಕುಕ್ಕಾರಿನ ಟಿಪ್ಪರ್ ಹಮೀದ್ (32) ಬಂಧಿತ ಆರೋಪಿ. ಈತನನ್ನು ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸುತ್ತಿದ್ದಾರೆ. ಜೂನ್ 1ರಂದು ಈ ಪ್ರಕರಣ ಬೆಳಕಿಗೆ ಬಂದಿತ್ತು. ಉಪ್ಪಳ ಸೊಂಕಾಲಿನ ಎ. ಅಶೋಕ್ (45) ಅವರ ಮನೆಯಲ್ಲಿ, ಹಾಸಿಗೆಯ ಕೆಳಭಾಗದಲ್ಲಿದ್ದ ಚೀಲಗಳಲ್ಲಿ ಗಾಂಜಾ ಪತ್ತೆಯಾಗಿತ್ತು. ಅಶೋಕರನ್ನು ವಿಚಾರಿಸಿದಾಗ ಹಮೀದ್ ಸಹಪ್ರತಿಯಾಗಿರುವುದು ಸ್ಪಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮಾನಸಿಕ ಸ್ಥೈರ್ಯ ಹಾಗೂ ಉನ್ನತ ವಿದ್ಯಾಭ್ಯಾಸದಿಂದ ಸಮಾಜ ಉನ್ನತಿಗೆ ಸಾಧ್ಯ : ಅಶೋಕ್ ಕೊಡ್ಲಮೊಗರು

ಪೈವಳಿಕೆ:”ಮಾನಸಿಕ ಸ್ಥೆರ್ಯ ಅಚಲವಾದಗ ದಲಿತರು ಬಲಿತರಾಗುತ್ತಾರೆ. ಮುಂದಿನ ಜನಾಂಗವನ್ನು ಉನ್ನತ ವಿದ್ಯಾಭ್ಯಾಸವೆಂಬ ಅಸ್ತ್ರದಿಂದ ಬಲಿಷ್ಠವಾಗಿ ಕಟ್ಟಲು ಸಂಘಟನೆ ಅಡಿಪಾಯವನ್ನು ಹಾಕಬೇಕಿದೆ. ಪ್ರಸ್ತುತ ಸಮಾಜದೊಂದಿಗೆ ಸ್ಪರ್ಧಾತ್ಮಕವಾಗಿ ಸೆಟೆದು ನಿಲ್ಲಬೇಕು. ಡಾ. ಬಿ.ಆರ್ ಅಂಬೇಡ್ಕರರ ಆಶಯಗಳನ್ನು ಮುಖ್ಯ ಭೂಮಿಕೆಯಾಗಿ ಸ್ವೀಕರಿಸಿ ಮೂಲ ನಿವಾಸಿಗಳ ಧ್ವನಿ ಮಾರ್ಧನಿಸಲಿ” ಎಂದು ರಂಗಕರ್ಮಿ,ಚಿಣ್ಣರ ಚಿಲುಮೆ ಸಂಘಟಕ ಸಮಿತಿ ಕಾಸರಗೋಡು ಇದರ ನಿರ್ದೇಶಕರಾದ ಶಿಕ್ಷಕ ಅಶೋಕ್ ಕೊಡ್ಲಮೊಗರು ತಿಳಿಸಿದರು. ಅವರು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ಮತ್ತು ಗ್ರಾಮೀಣ ಆಶ್ರಮ ಪೆರ್ನಾಲು ಉಡುಪಿ…

Read More

ಗೋಹತ್ಯೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ. ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಹಿಂದುತ್ವ ಸಂಘಟನೆಯ ಮುಖಂಡನ ವಿರುದ್ಧ ಪ್ರಕರಣ ದಾಖಲು.

ಗೋಹತ್ಯೆಯನ್ನು ಖಂಡಿಸಿ ಗೋ ಮಾತಾ ಸಂರಕ್ಷಣಾ ಚಳವಳಿ ಪೆರ್ನೆ ಇದರ ವತಿಯಿಂದ ಗೋ ಹತ್ಯೆಯನ್ನು ಖಂಡಿಸಿ ಸೆ.6ರಂದು ದಕ್ಷಿಣ ಕನ್ನಡ ಜಿಲ್ಲೆಯ ಪೆರ್ನೆ ಗ್ರಾಮದ ಕಡಂಬುವಿನ ಕಾರ್ಲ ರಾಮದ್ವಾರದ ಬಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಹಿಂದುತ್ವ ಸಂಘಟನೆಯ ಮುಖಂಡ ಗಣರಾಜ್ ಭಟ್ ಕೆದಿಲ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರತಿಭಟನೆಯಲ್ಲಿ ಮಾತನಾಡಿದ ಗಣರಾಜ್ ಭಟ್ ಕೆದಿಲ ಸ್ಥಳೀಯವಾಗಿ ಧಾರ್ಮಿಕ, ಸಮುದಾಯಿಕವಾಗಿ ದ್ವೇಷ ಭಾವನೆ ಹುಟ್ಟಿಸುವ ಉದ್ದೇಶದಿಂದ ಗುಂಪು ಗುಂಪುಗಳ,…

Read More

ಓಲೈಕೆ ರಾಜಕಾರಣವೇ ಕಾಂಗ್ರೆಸ್ಸಿನ ಬ್ರದರ್ಸ್’ಗಳ ಅಟ್ಟಹಾಸಕ್ಕೆ ಕಾರಣ:- ಶಾಸಕ ಕಾಮತ್

ಮಂಡ್ಯದ ಮದ್ದೂರಿನ ಗಣೇಶ ವಿಸರ್ಜನೆಯ ಮೆರವಣಿಗೆಯ ಮೇಲೆ ಮತಾಂಧ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ನಡೆದಿದ್ದು ಇದು ರಾಜ್ಯ ಸರ್ಕಾರದ ಒಂದು ಕೋಮಿನ ತುಷ್ಟೀಕರಣದ ಪರಮಾವಧಿ ಹಾಗೂ ಹಿಂದೂ ವಿರೋಧಿ ನೀತಿಯ ಫಲವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಲ್ಲು ತೂರಾಟದಲ್ಲಿ ಮಹಿಳೆಯರು ಹಾಗೂ ಪೊಲೀಸರು ಸಹ ತೀವ್ರವಾಗಿ ಗಾಯಗೊಂಡಿರುವ ಘಟನೆ ಅತ್ಯಂತ ಆತಂಕಕಾರಿಯಾಗಿದೆ. ಈ ಕೃತ್ಯವನ್ನು ಪ್ರತಿಭಟಿಸಿದ ಹಿಂದೂಗಳ ಮೇಲೆಯೇ ಲಾಠಿಚಾರ್ಜ್ ನಡೆಸಿ ಹಿಂದೂಗಳನ್ನು ಸದೆಬಡಿಯುವ ಹುನ್ನಾರ ನಡೆಸಿರುವ ಕಾಂಗ್ರೆಸ್…

Read More

ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಪ್ರಶಸ್ತಿ

ಮಂಗಳೂರು: ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾ ಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಅಸೋಶಿಯನ್ ನ ಪುರುಷ ಮತ್ತು ಮಹಿಳಾ ತಂಡಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಎರಡು ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣಕನ್ನಡ ಜಿಲ್ಲೆಯ ಹ್ಯಾಂಡ್ ಬಾಲ್ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಸಂಸ್ಥೆಯ ಅಧ್ಯಕ್ಷರು ಮತ್ತು ಕರ್ನಾಟಕ ಹ್ಯಾಂಡ್ ಬಾಲ್ ಸಂಸ್ಥೆಯ ಉಪಾಧ್ಯಕ್ಷರಾದ ಡಾ ಆರ್…

Read More

ಮಂಜೇಶ್ವರ : ಕುಂಬಳೆ ಆರಿಕ್ಕಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗ ನಿರ್ಮಿಸುತ್ತಿರುವ ಟೋಲ್‌ಬೂತ್ ವಿರುದ್ಧ ಆಕ್ಷನ್‌ ಸಮಿತಿಯ ಬೃಹತ್ ಜನ ಆಂದೋಲನ ಮೆರವಣಿಗೆಯಲ್ಲಿ ಸಂಘರ್ಷ

ಮಂಜೇಶ್ವರ : ಕುಂಬಳೆ ಆರಿಕ್ಕಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗ ನಿರ್ಮಿಸುತ್ತಿರುವ ಟೋಲ್‌ಬೂತ್ ವಿರುದ್ಧ ಆಕ್ಷನ್‌ ಸಮಿತಿಯ ಬೃಹತ್ ಜನಆಂದೋಲನ ಮೆರವಣಿಗೆಯಲ್ಲಿ ಸಂಘರ್ಷ. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಕುಂಬಳೆ ಜಂಕ್ಷನ್ ನಿಂದ ಆರಂಭಗೊಂಡು ಟೋಲ್‌ಗೇಟ್ ಬಳಿಗೆ ತಲುಪುತಿದ್ದಂತೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಜಟಾಪಟಿ ನಡೆಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲಾಗದ ಹಿನ್ನೆಲೆಯಲ್ಲಿ ಪೊಲೀಸರು ಜಲಪೀರಂಗಿ ಪ್ರಯೋಗಿಸಿದರು. ಉದ್ರಿಕ್ತರಾದ ಪ್ರತಿಭಟನಾ ನಿರತರು ಹೆದ್ದಾರಿ ಪ್ರಾಧಿಕಾರದ ಅನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿದರು.ಸಾವಿರಾರು ಜನರು ಪಾಲ್ಗೊಂಡ…

Read More

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಅಕ್ರ 115/2018 ಕಲಂ 504, 354(a) ಐಪಿಸಿ ಪ್ರಕರಣದಲ್ಲಿನ ಆರೋಪಿ ರವಿಂದ್ರ ಬಿ.ಎನ್ ಎಂಬವರು ಸುಮಾರು 7 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಹೀಗಾಗಿ LPC No 04/2023 ರಂತೆ ವಾರೆಂಟ್ ಹೊರಡಿಸಿದ್ದು LPC ವಾರೆಂಟ್ ಆಸಾಮಿಯಾದ ರವೀಂದ್ರ ಎಂಬಾತ ನನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯ್ತು.

Read More

ಬೃಹತ್ ಜನಾಗ್ರಹ ಸಭೆಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸಿ:- ಶಾಸಕ ಕಾಮತ್

ಕಾನೂನಿನ ನೆಪದಲ್ಲಿ ತುಳುನಾಡಿನ ಸಾಂಸ್ಕೃತಿಕ ಹಾಗೂ ಹಿಂದೂ ಧಾರ್ಮಿಕ ಆಚರಣೆಗಳಿಗೆ ತಡೆಯೊಡ್ಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷದ್ ಹಾಗೂ ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆಯುವ ಬೃಹತ್ ಜನಾಗ್ರಹ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಮನವಿ ಮಾಡಿದರು. ಕಳೆದ ಕೆಲವಾರು ದಿನಗಳಿಂದ ಹಿಂದೂ ಹಬ್ಬ ಹರಿದಿನಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಪೊಲೀಸರ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸುವುದು,…

Read More

“ಅನುಭವಿ ಮತ್ತು ವಂಶಪಾರಂಪರಿಕ ವೈದ್ಯರು’ಗಳನ್ನು “ನಕಲಿ” ವೈದ್ಯರೆಂದು ಕೆರೆದು ಕಾನೂನು ದಬ್ಬಾಳಿಕೆ ಮಾಡುತ್ತಿದೆ. -ಬಿ.ಎಸ್ ಚಂದ್ರು

ಮಂಗಳೂರು: ದೇಶದಲ್ಲಿಯೇ ಕರ್ನಾಟಕ ಸರ್ಕಾರ ಮಾತ್ರ ಕರ್ನಾಟಕ ಖಾಸಗಿ ವೈದ್ಯಕೀಯ ಅಧಿನಿಯಮ 2007 ಮತ್ತು ತಿದ್ದುಪಡಿಗಳನ್ನು ಜಾರಿಗೆ ತಂದು ರಾಜ್ಯದಲ್ಲಿ ಸರ್ಕಾರದ ಫಲಪೇಕ್ಷೆಯಿಲ್ಲದೆ, ಜನ ಸಾಮಾನ್ಯರಿಗೆ ಅತಿ ಕಡಿಮೆ ವೆಚ್ಚದಲ್ಲಿ ಸೇವೆ ನೀಡುತ್ತಿರುವ “ಅನುಭವಿ ಮತ್ತು ವಂಶಪಾರಂಪರಿಕ ವೈದ್ಯರು’ಗಳನ್ನು “ನಕಲಿ” ವೈದ್ಯರೆಂದು ಕೆರೆದು ಕಾನೂನು ಕಠಣಗೊಳಿಸಿ ಅವರ ಬದುಕಿನ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಸಂಸ್ಥೆಯ ಪ್ರಧಾನ ಸಂಯೋಜಕರಾದ ಬಿ.ಎಸ್ ಚಂದ್ರು ಖಂಡಿಸಿದರು . ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕರ್ನಾಟಕ ರಾಜ್ಯ…

Read More
error: Content is protected !!