Headlines

ಮಂಗಳೂರು ತಾಲೂಕು ಪಂಚಾಯತ್ ತ್ರೈಮಾಸಿಕ ಕೆಡಿಸಿ ಸಭೆ

ಮಂಗಳೂರು : ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಮತ್ತು ಮಲೇರಿಯಾದ ನಿಯಂತ್ರಣಕ್ಕಾಗಿ ಸೊಳ್ಳೆ ಉತ್ಪತ್ತಿಯ ವಾಸದ ಮನೆಗಳಿಗೂ ರಾಜ್ಯ ಆರೋಗ್ಯ ಇಲಾಖೆಯು ದಂಡ ಪ್ರಯೋಗಕ್ಕೆ ಸುತ್ತೋಲೆ ಹೊರಡಿಸಿದೆ. ಜಿಲ್ಲಾಧಿಕಾರಿ ನೇತೃತ್ವದ ಸಭೆಯ ಬಳಿಕ ಈ ಬಗ್ಗೆ ನಿರ್ಧಾರವಾಗಲಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಭಂಡಾರಿ ತಿಳಿಸಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳೂರು ತಾಪಂನ ಸಭಾಂಗಣದಲ್ಲಿ ಪ್ರಥಮ ತ್ರೈಮಾಸಿಕ ಸಭೆಯಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಡೆಂಗ್ಯೂ ಹಾಗೂ…

Read More

ಸೆಪ್ಟೆಂಬರ್ 7 ರಿಂದ 9 ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯುವ ಜನ ಜಾಥ,ಡಿ ವೈ ಎಫ್ ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್

ಮಂಗಳೂರು: ಭಾರತ ಪ್ರಜಾಸತ್ತಾತ್ಮಕ ಯುವ ಜನ ಫೆಡರೇಶನ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ನೀಡಬೇಕೆಂದು ಸರಕಾರಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 7 ರಿಂದ 9 ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯುವ ಜನ ಜಾಥ ನಡೆಯಲಿದೆ ಎಂದು ಡಿ ವೈ ಎಫ್ ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ ಹೇಳಿದರು. ಅವರು ವುಡ್ ಲ್ಯಾಂಡ್ಸ್ ಹೋಟೆಲ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉದ್ಯೋಗ ಸೃಷ್ಟಿಯಾಗಬೇಕಾದರೆ ಮತ್ತು ಸ್ಥಳೀಯರಿಗೆ ಅದರ ಲಾಭ ಸಿಗಬೇಕಾದರೆ,…

Read More

ಎಸ್ ಪಿ ಸಿ ಓಣಂ ತ್ರಿದಿನ ಶಿಬಿರ ಸಂಪನ್ನ.

ಶ್ರೀ ದುರ್ಗಾ ಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕ ದಲ್ಲಿ ಎಸ್ ಪಿ ಸಿ ವಿದ್ಯಾರ್ಥಿಗಳ ಓಣಂ ತ್ರಿದಿನ ಶಿಬಿರದ ಔಪಚಾರಿಕ ಉದ್ಘಾಟನಾ ಸಮಾರಂಭ ಜರಗಿತು.ಪ್ರಸ್ತುತ ಸಭೆಯ ಅಧ್ಯಕ್ಷತೆಯನ್ನು ಪುತ್ತಿಗೆ ಪಂಚಾಯತು ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ ನೆರವೇರಿಸಿ ಮಾತನಾಡುತ್ತಾ ಯೂನಿಟ್ ನಲ್ಲಿರುವ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿ ಶಿಸ್ತಿನಿಂದ ಇತರರಿಗೆ ಮಾದರಿಯಾಗಬೇಕು ಎಂದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬದಿಯಡ್ಕ ಆರಕ್ಷಕ ಠಾಣೆಯ ಎಸ್. ಐ ಯಾಗಿರುವ ಶ್ರೀ ಅಖಿಲ್ ಟಿ ದೀಪ ಬೆಳಗಿಸಿ ಉದ್ಘಾಟಿಸಿ ಎಸ್…

Read More

ಆಟೋ ಚಾಲಕನ ಸುಳ್ಳು ಆರೋಪ . ಕಟ್ಟು ಕಥೆಯ ಹಿಂದಿನ ರಹಸ್ಯ ಬಿಚ್ಚಿಟ್ಟ ಪೊಲೀಸರು.

ಆಟೋ ಚಾಲಕನ ಮೇಲೆ ರವಿವಾರ ರಾತ್ರಿ ಮಂಗಳೂರಿನ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರು ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಕಟಣೆಯಲ್ಲಿಂದು ತಿಳಿಸಿದ್ದಾರೆ. ರಿಕ್ಷಾ ಚಾಲಕ ಬಶೀರ್ ಎಂಬುವವರು ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂಬ ಆರೋಪದಲ್ಲಿ ಅಪರಿಚಿತ ತಂಡವೊಂದು ತನ್ನ ಹಲ್ಲೆ ನಡೆಸಿರುವುದಾಗಿ ಪೊಲೀಸ್ ದೂರು ನೀಡಿದ್ದರು.ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದಾಗ…

Read More

ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ, ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿವಿಧ ಕ್ರೀಡಾ – ಸಾಂಸ್ಕೃತಿಕ ಕಾರ್ಯಕ್ರಮ

ಮಂಜೇಶ್ವರ : ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಕೇರಳ ಗಡಿ ಪ್ರದೇಶದಲ್ಲಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿವಿಧ ಕ್ರೀಡಾ – ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಶಾಲಾ ಪ್ರಾಂಶುಪಾಲ ಅಬ್ದುಲ್ ಖಾದರ್ ಚಾಲನೆ ನೀಡಿದರು. ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವನೆ, ದೈಹಿಕ ಆರೋಗ್ಯ ಮತ್ತು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ದಿನಾಚರಣೆಯಲ್ಲಿ ಕ್ರೀಡಾ ಸ್ಪರ್ಧೆಗಳು, ವ್ಯಾಯಾಮ, ಓಟ, ವಾಲಿಬಾಲ್ ಮೊದಲಾದ ಹಲವು ಕ್ರೀಡಾ ಪಂದ್ಯಾವಳಿಗಳು ನಡೆಯಿತು. ವಿದ್ಯಾರ್ಥಿಗಳೊಂದಿಗೆ ಶಿಕ್ಷಕರೂ ಕೆಲವು ಮನರಂಜನಾ ಆಟಗಳಲ್ಲಿ ಪಾಲ್ಗೊಂಡು…

Read More

ರೈಲು ಹಳಿ ದಾಟುತ್ತಿರುವ ಮಧ್ಯೆ ,ರೈಲು ಡಿಕ್ಕಿ ಹೊಡೆದು-ವ್ಯಕ್ತಿ ಸಾವು

ಮಂಜೇಶ್ವರ : ಕಾಸರಗೋಡು ಭಾಗದಿಂದ ಮಂಗಳೂರು ಭಾಗಕ್ಕೆ ತೆರಳುತಿದ್ದ ಎಗ್ಮೋರ್ ರೈಲಿನಲ್ಲಿ ಮಂಜೇಶ್ವರ ರೈಲ್ವೇ ನಿಲ್ದಾಣದಲ್ಲಿ ಬಂದಿಳಿದ ವ್ಯಕ್ತಿಯೊಬ್ಬರು ರೈಲು ಹಳಿ ದಾಟುತ್ತಿರುವ ಮಧ್ಯೆ ಮಂಗಳೂರು ಭಾಗದಿಂದ ಕಾಸರಗೋಡು ಭಾಗಕ್ಕೆ ತೆರಳುತ್ತಿದ್ದ ಮಾವೇಲಿ ರೈಲು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ 5.40 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ತಮಿಳ್ನಾಡು ನಿವಾಸಿ ನಜ್ಮುದ್ಧೀನ್ ಕಾದರ್ ಬಾಚಾ (71) ಸಾವನ್ನಪ್ಪಿದ ದುರ್ದೈವಿ.ರೈಲ್ವೇ ಪೊಲೀಸರು ಹಾಗೂ ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ಶವದ ಮಹಜರು ನಡೆಸಿ ಡಿಕ್ಕಿಯ…

Read More

ಕೇರಳ ವ್ಯಾಪಾರಿ ಏಕೋಪನ ಸಮಿತಿ ,ಮಂಜೇಶ್ವರ ಘಟಕದ ವಾರ್ಷಿಕ ಸಭೆ

ಮಂಜೇಶ್ವರ : ಕೇರಳ ವ್ಯಾಪಾರಿ ಏಕೋಪನ ಸಮತಿ ಇದರ ಮಂಜೇಶ್ವರ ಘಟಕದ ವಾರ್ಷಿಕ ಸಭೆ ಮಂಜೇಶ್ವರ ವ್ಯಾಪಾರಿ ಭವಣದಲ್ಲಿ ಜರಗಿತು.ಸಂಘಟನೆಯ ಅಧ್ಯಕ್ಷ ಬಶೀರ್ ಕನಿಲರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಸಂಘಟನೆಯ ಜಿಲ್ಲಾಧ್ಯಕ್ಷ ಆಹ್ಮದ್ ಶೆರೀಫ್ ಉದ್ಘಾಟಿಸಿದರು. ಸಮಾರಂಭದಲ್ಲಿ ಮರಣ ಹೊಂದಿದ ವ್ಯಾಪಾರಿಗಳ ಕುಟುಂಬಗಳಿಗೆ 4ಲಕ್ಷ ರೂಪಾಯಿಯಂತೆ ಎರಡು ಕುಟುಂಬಗಳಿಗಿರುವ ಧನ ಸಹಾಯವನ್ನು ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ವಿತರಣೆ ನಡೆಸಿದರು. ಜಿಲ್ಲಾ ವ್ಯಾಪಾರಿ ಭವನ ಕಟ್ಟಡ ಸಹಾಯಾರ್ಥ ಹಮ್ಮಿ ಕೊಳ್ಳಲಾದ ಲಕ್ಕಿ ಕೂಪನ್ ಡ್ರಾ…

Read More

ಬಾಯಿ ತೆರೆದಿದೆ ಡ್ರೈನೇಜ್ ಗುಂಡಿ, ಜನರು ಸಂಕಷ್ಟದಲ್ಲಿ

ಕೆಪಿಟಿ ಕಾಲೇಜು ಬಳಿಯ ಶರಬತ್ ಕಟ್ಟೆಯ ಬಸ್ ನಿಲ್ದಾಣದ ಬಳಿಇರುವ ಡ್ರೈನೇಜ್ ಗುಂಡಿಯೊಂದು ಬಾಯಿ ತೆರೆದು ಅಪಾಯಕ್ಕೆ ಆಸ್ಪದವನ್ನು ನೀಡುತ್ತಾ ಇದೆ . ಈ ಮಾರ್ಗವಾಗಿ ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚಾರವನ್ನು ನಡೆಸುತ್ತೆ . ಮಳೆಗಾಲದಂತಹ ಈ ವಿಷಮ ಕಾಲದಲ್ಲೂ ಈ ರೀತಿಯಾಗಿ ಬಾಯಿ ತೆರೆದು ನಿಂತ ಗುಂಡಿಯ ಸಮೀಪವಾಗಿ ಯಾರಾದರೂ ಪಾದಚಾರಿಗಳು ಅಥವಾ ವಾಹನ ಸವಾರರು ಹೋದರಂತೂ ಆಕಸ್ಮಿಕ ಅಪಘಾತಕ್ಕೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿದೆ . ಸ್ಥಳೀಯ ಅಧಿಕಾರಿಗಳು ಈ ಬಗ್ಗೆ ಮುತುರ್ವರ್ಜಿಯನ್ನು ವಹಿಸಬೇಕು…

Read More

ಮಾದಕ ವಸ್ತುವಾದ ಎಂಡಿಎಂಎ ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೋಲೀಸರ ಬಲೆಗೆ

ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಫಝಲ್ ಹುಸೇನ್(33) ಮತ್ತು ನೌಶಾದ್(32) ಬಂಧಿತರು. ಇವರಿಂದ 15 ಗ್ರಾಂ ಎಂಡಿಎಂಎ, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ 95,500/-ರೂಪಾಯಿ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು ಪಡಿಸಿಕೊಂಡು, ಆರೋಪಿಗಳ ವಿರುದ್ಧ…

Read More

ನಿರ್ಲಜ್ಜ ಓಟ್ ಚೋರತನದಿಂದ ಪ್ರಜಾಪ್ರಭುತ್ವ ಬುಡಮೇಲು-ಕಾಂಗ್ರೆಸ್.

ಶತಾಯಗತಾಯ ಅಧಿಕಾರ ಉಳಿಸಿಕೊಳ್ಳುವ ಧಾವಂತದಲ್ಲಿ ಬಿಜೆಪಿಯು ನಿರ್ಲಜ್ಜವಾಗಿ ಓಟ್ ಕಳ್ಳತನ ನಡೆಸಿದ್ದು ಜಗಜ್ಜಾಹೀರಾಗಿದೆ. ಒಂದೆಡೆ ಲಕ್ಷಾಂತರ ನಕಲಿ ಮತದಾರರ ಸೇರ್ಪಡೆಗೊಳಿಸಿ ತಮ್ಮ ಓಟ್ ಗಳ ಸಂಖ್ಯೆ ಹೆಚ್ಚಿಸುವುದು ಹಾಗೂ ಅರ್ಹ ಮತದಾರರನ್ನು ಅಂತಿಮ ಮತದಾರ ಪಟ್ಟಿಯಿಂದ ಹೊರತು ಪಡಿಸಿ ವಿಪಕ್ಷಗಳ ಬಲ ಕುಗ್ಗಿಸುವುದು ಮುಂತಾದ ವಾಮ ಮಾರ್ಗಗಳ ಮೂಲಕ ಆಡಳಿತವನ್ನು ಕದಿಯಲಾಗಿದೆ. ಇದಕ್ಕೆ ಚುನಾವಣಾ ಆಯೋಗವೂ ಕೈ ಜೋಡಿಸಿದ್ದು ವಿಪರ್ಯಾಸ. ಬಿಜೆಪಿಯಿಂದ ಮಾಸಿಕ ಚಂದಾ ಪಡೆಯುವ ಮಾನಗೇಡಿ ಮಡಿಲ ಮಾಧ್ಯಮಗಳು ಎಲ್ಲವನ್ನು ಕಂಡೂ ಕಾಣದಂತೆ ಜಾಣ ಕುರುಡುತನ…

Read More
error: Content is protected !!